Homeಮುಖಪುಟಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

- Advertisement -
- Advertisement -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ ಮಗ ಸಿದ್ಧಾರ್ಥ ಗಾಡ್ಗೀಳ್ ಗುರುವಾರ (ಜನವರಿ 8, 2026) ಮಾಹಿತಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ತಂಡಕ್ಕೆ ಅಧ್ಯಕ್ಷತೆ ವಹಿಸಿದ್ದಕ್ಕೆ ಹೆಚ್ಚು ಪ್ರಸಿದ್ಧರಾಗಿದ್ದ ಮಾಧವ ಗಾಡ್ಗೀಳ್, ಭಾರತದ ಪ್ರಮುಖ ಪರಿಸರ ಚಿಂತಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದರು. ಅವರು ಪರಿಸರ ಸಂರಕ್ಷಣೆಗೆ ಸ್ಥಳೀಯ ಸಮುದಾಯಗಳನ್ನು ಕೇಂದ್ರ ಬಿಂದುವಾಗಿಟ್ಟುಕೊಂಡ ವಿಧಾನವನ್ನು ಬಲವಾಗಿ ಪ್ರತಿಪಾದಿಸುತ್ತಿದ್ದರು.

2010ರಲ್ಲಿ, ಕೇಂದ್ರ ಸರ್ಕಾರ ಗಾಡ್ಗೀಳ್ ಅವರನ್ನು ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿಯ (WGEEP) ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಈ ಸಮಿತಿ ಗಾಡ್ಗೀಳ್ ಆಯೋಗ ಎಂದೇ ಪ್ರಸಿದ್ದಿ ಪಡೆದಿತ್ತು.

ಪರಿಸರ ವಿಜ್ಞಾನದ ದೃಷ್ಟಿಯಿಂದ ದುರ್ಬಲವಾಗಿರುವ ಪಶ್ಚಿಮ ಘಟ್ಟಗಳಲ್ಲಿ ಕಟ್ಟುನಿಟ್ಟಿನ ಪರಿಸರ ಸುರಕ್ಷತೆಯನ್ನು ಕಾಯ್ದುಕೊಳ್ಳುವಂತೆ ಸಮಿತಿಯ ವರದಿಯು ಕರೆ ನೀಡಿತ್ತು. ಈ ವರದಿಯು ಆರು ರಾಜ್ಯಗಳಲ್ಲಿ ತೀವ್ರ ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿತ್ತು.

2024ರಲ್ಲಿ ಡಾ. ಗಾಡ್ಗೀಳ್ ಅವರಿಗೆ, ಪರಿಸರ ವಿಜ್ಞಾನ ಮತ್ತು ಸಮುದಾಯ ನೇತೃತ್ವದ ಸಂರಕ್ಷಣೆಗೆ ಅವರ ಜೀವಮಾನದ ಕೊಡುಗೆಯನ್ನು ಗುರುತಿಸಿ ವಿಶ್ವಸಂಸ್ಥೆಯು ಪರಿಸರ ಕಾರ್ಯಕ್ರಮದ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2024ರ ಸಮೂಹದ ಆರು ಪ್ರಶಸ್ತಿ ವಿಜೇತರಲ್ಲಿ ಗಾಡ್ಗೀಳ್ ಅವರು ಒಬ್ಬರು.

ಪರಿಸರ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಅವರಿಗೆ ವೋಲ್ವೋ ಪರಿಸರ ಪ್ರಶಸ್ತಿ, ಪರಿಸರ ಸಾಧನೆಗಾಗಿ ಟೈಲರ್ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಕೂಡ ಗಾಡ್ಗೀಳ್ ಅವರಿಗೆ ಲಭಿಸಿದ್ದವು. 1981ರಲ್ಲಿ ಪದ್ಮಶ್ರೀ ಮತ್ತು 2006ರಲ್ಲಿ ಪದ್ಮಭೂಷಣ ಪ್ರಶಸ್ತಿಗಳನ್ನು ಗಾಡ್ಗೀಳ್ ಪಡೆದಿದ್ದರು. 

ಗಾಡ್ಗೀಳ್ ಅವರು ಭಾರತದ ಮೊಟ್ಟ ಮೊದಲ ಜೈವಿಕ ಮೀಸಲು ಪ್ರದೇಶವಾಗಿ (ಬಯೋಸ್ಫಿಯರ್ ರಿಸರ್ವ್) ನೀಲಗಿರಿ ಅರಣ್ಯ ಪ್ರದೇಶವನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಶ್ಚಿಮ ಘಟ್ಟಗಳಲ್ಲಿ ಕಾಲ್ನಡಿಗೆಯಲ್ಲಿ ಸುತ್ತಿ, ಅಲ್ಲಿನ ಆದಿವಾಸಿ ಮತ್ತು ಅರಣ್ಯ ನಿವಾಸಿ ಸಮುದಾಯಗಳೊಂದಿಗೆ ಬೆರೆತು, ಅವರ ಪವಿತ್ರ ಕಾಡುಗಳಲ್ಲಿ ವಾಸಿಸುತ್ತಾ ಪರಿಸರದ ಬಗ್ಗೆ ಆಳವಾದ ಅಧ್ಯಯನವನ್ನು ಗಾಡ್ಗೀಳ್ ಅವರು ಮಾಡಿದ್ದರು. ಈ ಮೂಲಕ ಅರಣ್ಯ ಸಂರಕ್ಷಣೆಗೆ ಮೂಲ ಅಥವಾ ಸ್ಥಳೀಯ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು, ಅವರ ಹಕ್ಕುಗಳನ್ನು ರಕ್ಷಿಸುವುದು ಮುಖ್ಯ ಎಂದು ಗಾಡ್ಗೀಳ್ ಕಂಡುಕೊಂಡಿದ್ದರು.

ಪ್ರಧಾನ ಮಂತ್ರಿಯವರ ವೈಜ್ಞಾನಿಕ ಸಲಹಾ ಮಂಡಳಿ ಸೇರಿದಂತೆ ಹಲವಾರು ಸರ್ಕಾರಿ ಸಂಸ್ಥೆಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಗಾಡ್ಗೀಳ್ ಅವರು, ಭಾರತದ ಜೈವಿಕ ವೈವಿಧ್ಯತೆ ಕಾಯ್ದೆಯ ಪ್ರಮುಖ ಶಿಲ್ಪಿಗಳಲ್ಲಿ ಒಬ್ಬರಾಗಿದ್ದರು ಮತ್ತು ಅರಣ್ಯ ಹಕ್ಕುಗಳ ಕಾಯ್ದೆಯ ಅನುಷ್ಠಾನಕ್ಕೆ ಕೊಡುಗೆ ನೀಡಿದ್ದರು.

ಗಾಡ್ಗೀಳ್ ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನ ಕೇಂದ್ರದ ಸ್ಥಾಪಕರೂ ಹೌದು, ಈ ಕೇಂದ್ರವು ದೇಶದ ಪ್ರಮುಖ ಪರಿಸರ ಸಂಶೋಧನಾ ಕೇಂದ್ರಗಳಲ್ಲಿ ಒಂದಾಗಿ ರೂಪುಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...