Homeಮುಖಪುಟಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

- Advertisement -
- Advertisement -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ ಮಗ ಸಿದ್ಧಾರ್ಥ ಗಾಡ್ಗೀಳ್ ಗುರುವಾರ (ಜನವರಿ 8, 2026) ಮಾಹಿತಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ತಂಡಕ್ಕೆ ಅಧ್ಯಕ್ಷತೆ ವಹಿಸಿದ್ದಕ್ಕೆ ಹೆಚ್ಚು ಪ್ರಸಿದ್ಧರಾಗಿದ್ದ ಮಾಧವ ಗಾಡ್ಗೀಳ್, ಭಾರತದ ಪ್ರಮುಖ ಪರಿಸರ ಚಿಂತಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದರು. ಅವರು ಪರಿಸರ ಸಂರಕ್ಷಣೆಗೆ ಸ್ಥಳೀಯ ಸಮುದಾಯಗಳನ್ನು ಕೇಂದ್ರ ಬಿಂದುವಾಗಿಟ್ಟುಕೊಂಡ ವಿಧಾನವನ್ನು ಬಲವಾಗಿ ಪ್ರತಿಪಾದಿಸುತ್ತಿದ್ದರು.

2010ರಲ್ಲಿ, ಕೇಂದ್ರ ಸರ್ಕಾರ ಗಾಡ್ಗೀಳ್ ಅವರನ್ನು ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿಯ (WGEEP) ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಈ ಸಮಿತಿ ಗಾಡ್ಗೀಳ್ ಆಯೋಗ ಎಂದೇ ಪ್ರಸಿದ್ದಿ ಪಡೆದಿತ್ತು.

ಪರಿಸರ ವಿಜ್ಞಾನದ ದೃಷ್ಟಿಯಿಂದ ದುರ್ಬಲವಾಗಿರುವ ಪಶ್ಚಿಮ ಘಟ್ಟಗಳಲ್ಲಿ ಕಟ್ಟುನಿಟ್ಟಿನ ಪರಿಸರ ಸುರಕ್ಷತೆಯನ್ನು ಕಾಯ್ದುಕೊಳ್ಳುವಂತೆ ಸಮಿತಿಯ ವರದಿಯು ಕರೆ ನೀಡಿತ್ತು. ಈ ವರದಿಯು ಆರು ರಾಜ್ಯಗಳಲ್ಲಿ ತೀವ್ರ ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿತ್ತು.

2024ರಲ್ಲಿ ಡಾ. ಗಾಡ್ಗೀಳ್ ಅವರಿಗೆ, ಪರಿಸರ ವಿಜ್ಞಾನ ಮತ್ತು ಸಮುದಾಯ ನೇತೃತ್ವದ ಸಂರಕ್ಷಣೆಗೆ ಅವರ ಜೀವಮಾನದ ಕೊಡುಗೆಯನ್ನು ಗುರುತಿಸಿ ವಿಶ್ವಸಂಸ್ಥೆಯು ಪರಿಸರ ಕಾರ್ಯಕ್ರಮದ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2024ರ ಸಮೂಹದ ಆರು ಪ್ರಶಸ್ತಿ ವಿಜೇತರಲ್ಲಿ ಗಾಡ್ಗೀಳ್ ಅವರು ಒಬ್ಬರು.

ಪರಿಸರ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಅವರಿಗೆ ವೋಲ್ವೋ ಪರಿಸರ ಪ್ರಶಸ್ತಿ, ಪರಿಸರ ಸಾಧನೆಗಾಗಿ ಟೈಲರ್ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಕೂಡ ಗಾಡ್ಗೀಳ್ ಅವರಿಗೆ ಲಭಿಸಿದ್ದವು. 1981ರಲ್ಲಿ ಪದ್ಮಶ್ರೀ ಮತ್ತು 2006ರಲ್ಲಿ ಪದ್ಮಭೂಷಣ ಪ್ರಶಸ್ತಿಗಳನ್ನು ಗಾಡ್ಗೀಳ್ ಪಡೆದಿದ್ದರು. 

ಗಾಡ್ಗೀಳ್ ಅವರು ಭಾರತದ ಮೊಟ್ಟ ಮೊದಲ ಜೈವಿಕ ಮೀಸಲು ಪ್ರದೇಶವಾಗಿ (ಬಯೋಸ್ಫಿಯರ್ ರಿಸರ್ವ್) ನೀಲಗಿರಿ ಅರಣ್ಯ ಪ್ರದೇಶವನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಶ್ಚಿಮ ಘಟ್ಟಗಳಲ್ಲಿ ಕಾಲ್ನಡಿಗೆಯಲ್ಲಿ ಸುತ್ತಿ, ಅಲ್ಲಿನ ಆದಿವಾಸಿ ಮತ್ತು ಅರಣ್ಯ ನಿವಾಸಿ ಸಮುದಾಯಗಳೊಂದಿಗೆ ಬೆರೆತು, ಅವರ ಪವಿತ್ರ ಕಾಡುಗಳಲ್ಲಿ ವಾಸಿಸುತ್ತಾ ಪರಿಸರದ ಬಗ್ಗೆ ಆಳವಾದ ಅಧ್ಯಯನವನ್ನು ಗಾಡ್ಗೀಳ್ ಅವರು ಮಾಡಿದ್ದರು. ಈ ಮೂಲಕ ಅರಣ್ಯ ಸಂರಕ್ಷಣೆಗೆ ಮೂಲ ಅಥವಾ ಸ್ಥಳೀಯ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು, ಅವರ ಹಕ್ಕುಗಳನ್ನು ರಕ್ಷಿಸುವುದು ಮುಖ್ಯ ಎಂದು ಗಾಡ್ಗೀಳ್ ಕಂಡುಕೊಂಡಿದ್ದರು.

ಪ್ರಧಾನ ಮಂತ್ರಿಯವರ ವೈಜ್ಞಾನಿಕ ಸಲಹಾ ಮಂಡಳಿ ಸೇರಿದಂತೆ ಹಲವಾರು ಸರ್ಕಾರಿ ಸಂಸ್ಥೆಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಗಾಡ್ಗೀಳ್ ಅವರು, ಭಾರತದ ಜೈವಿಕ ವೈವಿಧ್ಯತೆ ಕಾಯ್ದೆಯ ಪ್ರಮುಖ ಶಿಲ್ಪಿಗಳಲ್ಲಿ ಒಬ್ಬರಾಗಿದ್ದರು ಮತ್ತು ಅರಣ್ಯ ಹಕ್ಕುಗಳ ಕಾಯ್ದೆಯ ಅನುಷ್ಠಾನಕ್ಕೆ ಕೊಡುಗೆ ನೀಡಿದ್ದರು.

ಗಾಡ್ಗೀಳ್ ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನ ಕೇಂದ್ರದ ಸ್ಥಾಪಕರೂ ಹೌದು, ಈ ಕೇಂದ್ರವು ದೇಶದ ಪ್ರಮುಖ ಪರಿಸರ ಸಂಶೋಧನಾ ಕೇಂದ್ರಗಳಲ್ಲಿ ಒಂದಾಗಿ ರೂಪುಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...