Homeಮುಖಪುಟಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ

ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ

- Advertisement -
- Advertisement -

ದೇಶದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ (86) ಅವರು ಬುಧವಾರ ರಾತ್ರಿ ಮುಂಬೈನಲ್ಲಿ ನಿಧರಾಗಿದ್ದಾರೆ.

ರತನ್ ಟಾಟಾ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಸಂಬಂಧ ವದಂತಿಗಳು ಹಬ್ಬಿದಾಗ ಎರಡು ದಿನಗಳ ಹಿಂದೆ ಸ್ವತಃ ಅವರೇ “ನಾನು ಆರೋಗ್ಯವಾಗಿದ್ದೇನೆ” ಎಂದು ಸ್ಪಷ್ಟನೆ ನೀಡಿದ್ದರು.

ಬುಧವಾರ ಬೆಳಿಗ್ಗೆ ಟಾಟಾ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರು 11.30ರ ಸುಮಾರಿಗೆ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ರತನ್ ಟಾಟಾ ಅವರ ನಿಧನದ ಬಗ್ಗೆ ಟಾಟಾ ಸನ್ಸ್ ಸಂಸ್ಥೆಯ ಅಧ್ಯಕ್ಷ ಎನ್‌.ಚಂದ್ರಶೇಖರ್ ಅವರು ಬುಧವಾರ ರಾತ್ರಿ ಹೇಳಿಕೆ ಬಿಡುಗಡೆ ಮಾಡಿದ್ದು, “ಟಾಟಾ ಅವರು ನನಗೆ ಸ್ನೇಹಿತ, ಗುರು ಮತ್ತು ಮಾರ್ಗದರ್ಶಿಯಾಗಿದ್ದರು” ಎಂದು ಸ್ಮರಿಸಿದ್ದಾರೆ.

ರತನ್ ಟಾಟಾ ಅವರು ಸುಮಾರು 20 ವರ್ಷಗಳ ಕಾಲ ಟಾಟಾ ಸನ್ಸ್ ಉದ್ಯಮ ಸಮೂಹವನ್ನು ಮುನ್ನಡೆಸಿದ್ದರು. ವಿವಿಧ ಉದ್ಯಮ ವಲಯಗಳಿಗೆ ದಾಪುಗಾಲಿಟ್ಟು ಸಂಸ್ಥೆ ವಿಶ್ವದಲ್ಲೇ ಹೆಸರುವಾಸಿಯಾಗುವಲ್ಲಿ ರತನ್ ಟಾಟಾ ಪ್ರಮುಖ ಪಾತ್ರ ವಹಿಸಿದ್ದರು.

1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. ಡಿಸೆಂಬರ್ 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ ಗೌರವಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಇದನ್ನೂ ಓದಿ : ತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಕೆ; 10 ಕಾರ್ಮಿಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...