Homeರಾಷ್ಟ್ರೀಯಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

- Advertisement -
- Advertisement -

2018 ರಲ್ಲಿ ಮಾಡಿದ್ದ ಟ್ವೀಟ್ ವಿಚಾರವಾಗಿ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರಿಗೆ ನ್ಯಾಯಾಲಯವು ಶನಿವಾರ ಜಾಮೀನು ನಿರಾಕರಿಸಿದ್ದು, ಅವರನ್ನು ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಸೋಮವಾರದಂದು ಬಂಧನಕ್ಕೆ ಒಳಗಾಗಿದ್ದ ಅವರನ್ನು ಐದು ದಿನಗಳ ಕಸ್ಟಡಿಯಲ್ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಲಾಗಿತ್ತು. ಕಸ್ಟಡಿಯಲ್ ವಿಚಾರಣೆ ಅವಧಿಯ ನಂತರ ದೆಹಲಿ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮುಂದಕ್ಕೆ ಕಸ್ಟಡಿಯಲ್ ವಿಚಾರಣೆಯ ಅಗತ್ಯವಿಲ್ಲ, ಆದರೆ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಕೋರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಚಾರಣೆಯ ಸಂದರ್ಭದಲ್ಲಿ, ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಕ್ರಿಮಿನಲ್ ಪಿತೂರಿ ಮತ್ತು ಸಾಕ್ಷ್ಯ ನಾಶದ ಹೊಸ ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ ಅದರ ಜೊತೆಗೆ ಎಫ್‌ಸಿಆರ್‌ಎ ಅಥವಾ ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯ ಸೆಕ್ಷನ್ 35 ರ ಹೊಸ ಪ್ರಕರಣಗಳನ್ನು ಕೂಡ ಜುಬೇರ್‌ ವಿರುದ್ಧ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಕ್ರಿಮಿನಲ್ ಪಿತೂರಿ ಮತ್ತು ಸಾಕ್ಷ್ಯ ನಾಶದ ಆರೋಪಗಳ ಜೊತೆಗೆ ಎಫ್‌ಐಆರ್‌‌ನಲ್ಲಿ ಎಫ್‌ಸಿಆರ್‌ಎ ಸೆಕ್ಷನ್ 35 ಅನ್ನೂ ಸೇರಿಸಲಾಗಿದೆ” ಎಂದು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ. ಎಫ್‌ಐಆರ್‌ಗೆ ಕ್ರಿಮಿನಲ್ ಪಿತೂರಿಯನ್ನು ಸೇರಿಸಿದರೆ, ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತನಿಖೆಗೆ ಮುಂದಾಗುವ ಸಾಧ್ಯತೆಯಿದೆ.

ಪಾಕಿಸ್ತಾನ, ಸಿರಿಯಾ ಮತ್ತು ಇತರ ದೇಶಗಳಿಂದ ರೋಜರ್‌ಪೇ ಪಾವತಿ ಮೂಲಕ ಜುಬೇರ್ ಹಣವನ್ನು ಸ್ವೀಕರಿಸಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿಕೊಂಡಿದ್ದು, ಇದಕ್ಕೆ ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

“ಅವರು ತಮ್ಮ ಫೋನ್‌ನೊಂದಿಗೆ ವಿಶೇಷ ಸೆಲ್‌ನ ಕಚೇರಿಗೆ ಬಂದರು. ಅದನ್ನು ವಿಶ್ಲೇಷಿಸಿದಾಗ, ಅವರು ಆ ದಿನಕ್ಕೂ ಮೊದಲು ಬೇರೆ ಸಿಮ್ ಬಳಸುತ್ತಿರುವುದು ಕಂಡುಬಂದಿದೆ. ಪೊಲೀಸರ ನೋಟಿಸ್ ಪಡೆದ ದಿನ ಅವರು ಅದನ್ನು ತೆಗೆದು ಹೊಸ ಮೊಬೈಲ್‌ಗೆ ಹಾಕಿದ್ದಾರೆ. ದಯವಿಟ್ಟು ಈ ವ್ಯಕ್ತಿ ಎಷ್ಟು ಬುದ್ಧಿವಂತ ಎಂದು ನೋಡಿ” ಎಂದು ಹೇಳಿದ ಅವರು ಜುಬೇರ್‌ ಅವರನ್ನು ಮತ್ತಷ್ಟು ಕಸ್ಟಡಿಗೆ ಕೋರಿದ್ದಾರೆ.

ಜುಬೇರ್ ಅವರ ವಕೀಲರು ತಮ್ಮ ಕಕ್ಷಿದಾರು ಪೊಲೀಸರ ತನಿಖೆಗೆ ಅಗತ್ಯವಿಲ್ಲ ಎಂದು ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿ, “ಅವರು ನನ್ನ(ಜುಬೇರ್‌) ಉಪಸ್ಥಿತಿಯನ್ನು ಭದ್ರಪಡಿಸಿಕೊಳ್ಳಲು ಬಯಸುತ್ತಿದ್ದಾರೆ, ಆದರೆ ನಾನು ಯಾವುದೇ ಭಯೋತ್ಪಾದಕನಲ್ಲ” ಎಂದು ವಕೀಲರು ಹೇಳಿದ್ದಾರೆ.

ಮೊಹಮ್ಮದ್ ಜುಬೇರ್ ಅವರನ್ನು ಜೂನ್ 27 ರಂದು ದೆಹಲಿ ಪೊಲೀಸರು ತಮ್ಮ ಟ್ವೀಟ್‌ಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಿದ್ದರು. ಅದೇ ದಿನ ವಿಚಾರಣಾ ನ್ಯಾಯಾಲಯವು ಅವರನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಿತ್ತು.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಮಾತನಾಡಿದ್ದ ಬಿಜೆಪಿಯ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಹೇಳಿಕೆಗಳ ವೀಡಿಯೊವನ್ನು ಎತ್ತಿತೋರಿಸಿದ ಕೆಲವೇ ದಿನಗಳಲ್ಲಿ ಜುಬೇರ್ ಅವರನ್ನು ಬಂಧಿಸಲಾಗಿದೆ. ಆದರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಟ್ವಿಟರ್ ಬಳಕೆದಾರರು ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....