Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

- Advertisement -
- Advertisement -

ವಿಶ್ವದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದಾರೆ ಎಂದು ಮಂಗಳವಾರ ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದಾಗಿ ಹೇಳಿದ್ದಾರೆ. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ಹೋಗಬೇಕಿತ್ತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಹೇಳಿದ್ದಾರೆ.

ತಾನು ಈಗಾಗಲೇ ಎಲ್ಲಾ ಸಂಬಂಧಿತ ದಾಖಲೆಗಳನ್ನು ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದೇನೆ ಎಂದು ರಾಣಾ ಅಯೂಬ್ ಹೇಳಿದ್ದಾರೆ. ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಜನವರಿ ಮೊದಲನೆ ವಾರವೇ ಕೊನೆಯದು, ಅದರ ನಂತರ ನನಗೆ ಒಂದೇ ಒಂದು ಸಮನ್ಸ್ ಬಂದಿಲ್ಲ. ಇಂದು ನಾನು ವಿದೇಶಕ್ಕೆ ಹೊರಡುವ ಒಂದು ಗಂಟೆ ಮೊದಲು ಸಮನ್ಸ್‌ ಬಂದಿದೆ” ಎಂದು ರಾಣಾ ಅಯ್ಯೂಬ್ ಹೇಳಿದ್ದು, “ಪ್ರತಿ ಸಮನ್ಸ್ ಅನ್ನು ಗೌರವಿಸಿ ದಾಖಲೆಗಳನ್ನು ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.  ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅವರ ವಿದೇಶ ಪ್ರವಾಸವನ್ನು ತಡೆದಿರುವುದನ್ನು ವಿರೋಧಿಸಿ ಮಂಗಳವಾರ ಹಲವಾರು ಪತ್ರಕರ್ತರು ವಲಸೆ (ಇಮಿಗ್ರೇಷನ್‌) ಇಲಾಖೆಯ ಕ್ರಮಗಳನ್ನು ಟೀಕಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಈ ಪ್ರಕರಣ ಸಾಬೀತುಪಡಿಸಿದೆ. ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...