Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

- Advertisement -
- Advertisement -

ವಿಶ್ವದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದಾರೆ ಎಂದು ಮಂಗಳವಾರ ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದಾಗಿ ಹೇಳಿದ್ದಾರೆ. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ಹೋಗಬೇಕಿತ್ತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಹೇಳಿದ್ದಾರೆ.

ತಾನು ಈಗಾಗಲೇ ಎಲ್ಲಾ ಸಂಬಂಧಿತ ದಾಖಲೆಗಳನ್ನು ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದೇನೆ ಎಂದು ರಾಣಾ ಅಯೂಬ್ ಹೇಳಿದ್ದಾರೆ. ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಜನವರಿ ಮೊದಲನೆ ವಾರವೇ ಕೊನೆಯದು, ಅದರ ನಂತರ ನನಗೆ ಒಂದೇ ಒಂದು ಸಮನ್ಸ್ ಬಂದಿಲ್ಲ. ಇಂದು ನಾನು ವಿದೇಶಕ್ಕೆ ಹೊರಡುವ ಒಂದು ಗಂಟೆ ಮೊದಲು ಸಮನ್ಸ್‌ ಬಂದಿದೆ” ಎಂದು ರಾಣಾ ಅಯ್ಯೂಬ್ ಹೇಳಿದ್ದು, “ಪ್ರತಿ ಸಮನ್ಸ್ ಅನ್ನು ಗೌರವಿಸಿ ದಾಖಲೆಗಳನ್ನು ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.  ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅವರ ವಿದೇಶ ಪ್ರವಾಸವನ್ನು ತಡೆದಿರುವುದನ್ನು ವಿರೋಧಿಸಿ ಮಂಗಳವಾರ ಹಲವಾರು ಪತ್ರಕರ್ತರು ವಲಸೆ (ಇಮಿಗ್ರೇಷನ್‌) ಇಲಾಖೆಯ ಕ್ರಮಗಳನ್ನು ಟೀಕಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಈ ಪ್ರಕರಣ ಸಾಬೀತುಪಡಿಸಿದೆ. ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....