Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

- Advertisement -
- Advertisement -

ವಿಶ್ವದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದಾರೆ ಎಂದು ಮಂಗಳವಾರ ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದಾಗಿ ಹೇಳಿದ್ದಾರೆ. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ಹೋಗಬೇಕಿತ್ತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಹೇಳಿದ್ದಾರೆ.

ತಾನು ಈಗಾಗಲೇ ಎಲ್ಲಾ ಸಂಬಂಧಿತ ದಾಖಲೆಗಳನ್ನು ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದೇನೆ ಎಂದು ರಾಣಾ ಅಯೂಬ್ ಹೇಳಿದ್ದಾರೆ. ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಜನವರಿ ಮೊದಲನೆ ವಾರವೇ ಕೊನೆಯದು, ಅದರ ನಂತರ ನನಗೆ ಒಂದೇ ಒಂದು ಸಮನ್ಸ್ ಬಂದಿಲ್ಲ. ಇಂದು ನಾನು ವಿದೇಶಕ್ಕೆ ಹೊರಡುವ ಒಂದು ಗಂಟೆ ಮೊದಲು ಸಮನ್ಸ್‌ ಬಂದಿದೆ” ಎಂದು ರಾಣಾ ಅಯ್ಯೂಬ್ ಹೇಳಿದ್ದು, “ಪ್ರತಿ ಸಮನ್ಸ್ ಅನ್ನು ಗೌರವಿಸಿ ದಾಖಲೆಗಳನ್ನು ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.  ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅವರ ವಿದೇಶ ಪ್ರವಾಸವನ್ನು ತಡೆದಿರುವುದನ್ನು ವಿರೋಧಿಸಿ ಮಂಗಳವಾರ ಹಲವಾರು ಪತ್ರಕರ್ತರು ವಲಸೆ (ಇಮಿಗ್ರೇಷನ್‌) ಇಲಾಖೆಯ ಕ್ರಮಗಳನ್ನು ಟೀಕಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಈ ಪ್ರಕರಣ ಸಾಬೀತುಪಡಿಸಿದೆ. ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...