Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

- Advertisement -
- Advertisement -

ವಿಶ್ವದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದಾರೆ ಎಂದು ಮಂಗಳವಾರ ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದಾಗಿ ಹೇಳಿದ್ದಾರೆ. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ಹೋಗಬೇಕಿತ್ತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಹೇಳಿದ್ದಾರೆ.

ತಾನು ಈಗಾಗಲೇ ಎಲ್ಲಾ ಸಂಬಂಧಿತ ದಾಖಲೆಗಳನ್ನು ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದೇನೆ ಎಂದು ರಾಣಾ ಅಯೂಬ್ ಹೇಳಿದ್ದಾರೆ. ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಜನವರಿ ಮೊದಲನೆ ವಾರವೇ ಕೊನೆಯದು, ಅದರ ನಂತರ ನನಗೆ ಒಂದೇ ಒಂದು ಸಮನ್ಸ್ ಬಂದಿಲ್ಲ. ಇಂದು ನಾನು ವಿದೇಶಕ್ಕೆ ಹೊರಡುವ ಒಂದು ಗಂಟೆ ಮೊದಲು ಸಮನ್ಸ್‌ ಬಂದಿದೆ” ಎಂದು ರಾಣಾ ಅಯ್ಯೂಬ್ ಹೇಳಿದ್ದು, “ಪ್ರತಿ ಸಮನ್ಸ್ ಅನ್ನು ಗೌರವಿಸಿ ದಾಖಲೆಗಳನ್ನು ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.  ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅವರ ವಿದೇಶ ಪ್ರವಾಸವನ್ನು ತಡೆದಿರುವುದನ್ನು ವಿರೋಧಿಸಿ ಮಂಗಳವಾರ ಹಲವಾರು ಪತ್ರಕರ್ತರು ವಲಸೆ (ಇಮಿಗ್ರೇಷನ್‌) ಇಲಾಖೆಯ ಕ್ರಮಗಳನ್ನು ಟೀಕಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಈ ಪ್ರಕರಣ ಸಾಬೀತುಪಡಿಸಿದೆ. ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...