Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

- Advertisement -
- Advertisement -

ವಿಶ್ವದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದಾರೆ ಎಂದು ಮಂಗಳವಾರ ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದಾಗಿ ಹೇಳಿದ್ದಾರೆ. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ಹೋಗಬೇಕಿತ್ತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಹೇಳಿದ್ದಾರೆ.

ತಾನು ಈಗಾಗಲೇ ಎಲ್ಲಾ ಸಂಬಂಧಿತ ದಾಖಲೆಗಳನ್ನು ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದೇನೆ ಎಂದು ರಾಣಾ ಅಯೂಬ್ ಹೇಳಿದ್ದಾರೆ. ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಜನವರಿ ಮೊದಲನೆ ವಾರವೇ ಕೊನೆಯದು, ಅದರ ನಂತರ ನನಗೆ ಒಂದೇ ಒಂದು ಸಮನ್ಸ್ ಬಂದಿಲ್ಲ. ಇಂದು ನಾನು ವಿದೇಶಕ್ಕೆ ಹೊರಡುವ ಒಂದು ಗಂಟೆ ಮೊದಲು ಸಮನ್ಸ್‌ ಬಂದಿದೆ” ಎಂದು ರಾಣಾ ಅಯ್ಯೂಬ್ ಹೇಳಿದ್ದು, “ಪ್ರತಿ ಸಮನ್ಸ್ ಅನ್ನು ಗೌರವಿಸಿ ದಾಖಲೆಗಳನ್ನು ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.  ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅವರ ವಿದೇಶ ಪ್ರವಾಸವನ್ನು ತಡೆದಿರುವುದನ್ನು ವಿರೋಧಿಸಿ ಮಂಗಳವಾರ ಹಲವಾರು ಪತ್ರಕರ್ತರು ವಲಸೆ (ಇಮಿಗ್ರೇಷನ್‌) ಇಲಾಖೆಯ ಕ್ರಮಗಳನ್ನು ಟೀಕಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಈ ಪ್ರಕರಣ ಸಾಬೀತುಪಡಿಸಿದೆ. ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...