Homeಮುಖಪುಟಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಡಾ.ಕೆ.ಸುಧಾಕರ್​ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ದರು. ಅರ್ಧ ಲೀಟರ್ ಹಾಲು ಯಾರಿಗೆ ಬೇಕು ಹೇಳಿ?

- Advertisement -
- Advertisement -

ಬಡವರು ತಿನ್ನುವ ಅನ್ನ ಕಡಿತ ಮಾಡಿ, ಹೊಟ್ಟೆ ಮೇಲೆ ಹೊಡೆದರು. ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿದ್ದರಿಂದ ಕರ್ನಾಟಕದ ವಿಧಾನಸಭೆ ಚುನಾವಣೆ ಸೋತೆವು ಎಂದು ಹೊನ್ನಾಳಿಯ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅಭಿಪ್ರಾಯಪಟ್ಟಿದ್ದಾರೆ.

ಕೇವಲ ರೇಣುಕಾಚಾರ್ಯ ಒಬ್ಬರು ಮಾತ್ರ ಸೋತಿಲ್ಲ. ಇಡೀ ಬಿಜೆಪಿಗೆ ಹೀನಾಯ ಸೋಲಾಗಿದೆ. ಸರ್ಕಾರದ ತಪ್ಪು ನಿರ್ಧಾರಗಳಿಂದ ಸೋಲು ಕಂಡಿದ್ದೇವೆ ಎಂದು ಬಿಜೆಪಿ ಸೋಲಿಗೆ ಎಂಟು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ.

ನಮ್ಮ ಸರ್ಕಾರ ಎನ್‌ಪಿಎಸ್‌ ನೌಕರರ ಮನವಿ ಸ್ವೀಕರಿಸಲಿಲ್ಲ. ಅವರು ಬಂದು ನನ್ನನ್ನು ಭೇಟಿ ಮಾಡಿದ್ದರು. ನಾನು ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಅವರೆಲ್ಲರೂ ಬಿಜೆಪಿ ವಿರುದ್ಧ ಸಿಡಿದೆದ್ದರು.

ಒಳಮೀಸಲಾತಿ ಕೊಡಬ್ಯಾಡ್ರಿ ಅಂತ ಹೇಳಿದ್ದೆ. ಆದರೂ ಚುನಾವಣೆಗೆ ಮುಂಚೆ ಒಳಮೀಸಲಾತಿ ಘೋಷಣೆ ಮಾಡಿದರು. ಅದು ಬೇಕಿರಲಿಲ್ಲ, ಮೀಸಲಾತಿಗೆ ಕೈಹಾಕಿದರು. ಹಾಗಾಗಿ ನಮಗೆ ಉಲ್ಟಾ ಹೊಡೆಯಿತು.

ಹಿರಿಯ ನಾಯಕರಾದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿದ್ರು. ಹಾಗಾಗಿ ನಮಗೆ ಮುಳುವಾಯಿತು.

ಅಷ್ಟು ಮಾತ್ರವಲ್ಲದೇ 70 ಜನರಿಗೆ ಟಿಕೆಟ್ ತಪ್ಪಿಸಿದರು. ಜಗದೀಶ್ ಶೆಟ್ಟರ್, ಈಶ್ವರಪ್ಪನವರಿಗೆ ಟಿಕೆಟ್ ಕೊಡಲಿಲ್ಲ. ಇದು ನಮ್ಮ ಸೋಲಿಗೆ ಕಾರಣವಾಯಿತು. ಜಗದೀಶ್ ಶೆಟ್ಟರ್ ಸೋತಿರಬಹುದು. ಆದರೆ ಬಿಜೆಪಿಗೆ ಪೆಟ್ಟಾಗಿದೆ. ಉತ್ತರ ಕರ್ನಾಟಕದಲ್ಲಿ ಬಹಳಷ್ಟು ಜನ ಬಿಜೆಪಿ ವಿರುದ್ಧ ತಿರುಗಿಬಿದ್ದರು.

ಈಶ್ವರಪ್ಪನವರು ಕುರುಬ ಸಮಾಜದ ಏಕೈಕ ಬಿಜೆಪಿ ನಾಯಕರಾಗಿದ್ದರು. ಅವರಿಗೂ ಟಿಕೆಟ್ ಕೊಡದೇ ತಪ್ಪು ಮಾಡಲಾಯಿತು.

ಕಾಂಗ್ರೆಸ್‌ನವರು ಭರವಸೆಗಳನ್ನು ನೀಡಿದರು. ಆದರೆ ನಮ್ಮಲ್ಲಿ ಸುಧಾಕರ್‌ನನ್ನು ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಯಿತು. ಬಹಳ ಜನ ಹಿರಿಯರಿದ್ರು ಸಹ ಕಡೆಗಣಿಸಲಾಯಿತು. ಡಾ.ಕೆ.ಸುಧಾಕರ್​ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ದರು. ಅರ್ಧ ಲೀಟರ್ ಹಾಲು ಯಾರಿಗೆ ಬೇಕು ಹೇಳಿ ಎಂದು ರೇಣುಕಾಚಾರ್ಯ ಪ್ರಶ್ನಿಸಿದರು.

ನಮ್ಮ ರಾಜ್ಯದ ಅಧ್ಯಕ್ಷರು ಅರ್ಥ ಮಾಡಿಕೊಳ್ಳಲಿಲ್ಲ. ಗೊಂದಲಕಾರಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಈಗಲೂ ರಾಜೀನಾಮೆ ಕೊಡ್ತಿವಿ ಅಂತಾರೆ, ಇಲ್ಲ ಅಂತಾರೆ. ಇದೆಲ್ಲವೂ ಬಿಜೆಪಿ ಸೋಲಿಗೆ ಕಾರಣ ಎಂದು ಅವರು ವಿವರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಲು ನಾನು ಸಮರ್ಥನಿದ್ದೀನಿ. ಶಾಸಕನಾಗಿ, ಸಚಿವನಾಗಿ ಅನುಭವ ಇದೆ. ಅದರೆ ಒತ್ತಡ ಮಾಡೋದಿಲ್ಲ. ಸೋಮಣ್ಣ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಕೇಳಿದ್ದು ನನಗೆ ಗೊತ್ತಿಲ್ಲ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಕಡೆ ನನಗೆ ಎಂಪಿ ಚುನಾವಣೆಗೆ ಸ್ಪರ್ಧೆ ಮಾಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಒತ್ತಡ ಹೆಚ್ಚಾದ ಕಾರಣ ನಾನು ಕೂಡ ದಾವಣಗೆರೆ ಎಂಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಆದರೆ ಯಡಿಯೂರಪ್ಪನವರು ಜಿ.ಎಂ ಸಿದ್ದೇಶ್ವರ್ ಗೆ ಎಂಪಿ ಟಿಕೆಟ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ನಾನು ಕೂಡ ಎಂಪಿ ಚುನಾವಣೆಯ ಪ್ರಬಲ ಅಕಾಂಕ್ಷಿ. ಹಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಜೈಲಿಗೆ ಕಳುಹಿಸಿದರು. ಮಾಡಾಳ್ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ಗೆ ಟಿಕೆಟ್ ಕೊಡಬೇಕಿತ್ತು, ಅಲ್ಲಿ ಕೂಡ ತಪ್ಪು ಮಾಡಿದ್ರು. ಈಗ ನನಗೆ ಟಿಕೆಟ್ ಕೊಡದಿದ್ದರೆ ಮತ್ತೆ ತಪ್ಪಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...