Homeಮುಖಪುಟಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಡಾ.ಕೆ.ಸುಧಾಕರ್​ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ದರು. ಅರ್ಧ ಲೀಟರ್ ಹಾಲು ಯಾರಿಗೆ ಬೇಕು ಹೇಳಿ?

- Advertisement -
- Advertisement -

ಬಡವರು ತಿನ್ನುವ ಅನ್ನ ಕಡಿತ ಮಾಡಿ, ಹೊಟ್ಟೆ ಮೇಲೆ ಹೊಡೆದರು. ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿದ್ದರಿಂದ ಕರ್ನಾಟಕದ ವಿಧಾನಸಭೆ ಚುನಾವಣೆ ಸೋತೆವು ಎಂದು ಹೊನ್ನಾಳಿಯ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅಭಿಪ್ರಾಯಪಟ್ಟಿದ್ದಾರೆ.

ಕೇವಲ ರೇಣುಕಾಚಾರ್ಯ ಒಬ್ಬರು ಮಾತ್ರ ಸೋತಿಲ್ಲ. ಇಡೀ ಬಿಜೆಪಿಗೆ ಹೀನಾಯ ಸೋಲಾಗಿದೆ. ಸರ್ಕಾರದ ತಪ್ಪು ನಿರ್ಧಾರಗಳಿಂದ ಸೋಲು ಕಂಡಿದ್ದೇವೆ ಎಂದು ಬಿಜೆಪಿ ಸೋಲಿಗೆ ಎಂಟು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ.

ನಮ್ಮ ಸರ್ಕಾರ ಎನ್‌ಪಿಎಸ್‌ ನೌಕರರ ಮನವಿ ಸ್ವೀಕರಿಸಲಿಲ್ಲ. ಅವರು ಬಂದು ನನ್ನನ್ನು ಭೇಟಿ ಮಾಡಿದ್ದರು. ನಾನು ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಅವರೆಲ್ಲರೂ ಬಿಜೆಪಿ ವಿರುದ್ಧ ಸಿಡಿದೆದ್ದರು.

ಒಳಮೀಸಲಾತಿ ಕೊಡಬ್ಯಾಡ್ರಿ ಅಂತ ಹೇಳಿದ್ದೆ. ಆದರೂ ಚುನಾವಣೆಗೆ ಮುಂಚೆ ಒಳಮೀಸಲಾತಿ ಘೋಷಣೆ ಮಾಡಿದರು. ಅದು ಬೇಕಿರಲಿಲ್ಲ, ಮೀಸಲಾತಿಗೆ ಕೈಹಾಕಿದರು. ಹಾಗಾಗಿ ನಮಗೆ ಉಲ್ಟಾ ಹೊಡೆಯಿತು.

ಹಿರಿಯ ನಾಯಕರಾದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿದ್ರು. ಹಾಗಾಗಿ ನಮಗೆ ಮುಳುವಾಯಿತು.

ಅಷ್ಟು ಮಾತ್ರವಲ್ಲದೇ 70 ಜನರಿಗೆ ಟಿಕೆಟ್ ತಪ್ಪಿಸಿದರು. ಜಗದೀಶ್ ಶೆಟ್ಟರ್, ಈಶ್ವರಪ್ಪನವರಿಗೆ ಟಿಕೆಟ್ ಕೊಡಲಿಲ್ಲ. ಇದು ನಮ್ಮ ಸೋಲಿಗೆ ಕಾರಣವಾಯಿತು. ಜಗದೀಶ್ ಶೆಟ್ಟರ್ ಸೋತಿರಬಹುದು. ಆದರೆ ಬಿಜೆಪಿಗೆ ಪೆಟ್ಟಾಗಿದೆ. ಉತ್ತರ ಕರ್ನಾಟಕದಲ್ಲಿ ಬಹಳಷ್ಟು ಜನ ಬಿಜೆಪಿ ವಿರುದ್ಧ ತಿರುಗಿಬಿದ್ದರು.

ಈಶ್ವರಪ್ಪನವರು ಕುರುಬ ಸಮಾಜದ ಏಕೈಕ ಬಿಜೆಪಿ ನಾಯಕರಾಗಿದ್ದರು. ಅವರಿಗೂ ಟಿಕೆಟ್ ಕೊಡದೇ ತಪ್ಪು ಮಾಡಲಾಯಿತು.

ಕಾಂಗ್ರೆಸ್‌ನವರು ಭರವಸೆಗಳನ್ನು ನೀಡಿದರು. ಆದರೆ ನಮ್ಮಲ್ಲಿ ಸುಧಾಕರ್‌ನನ್ನು ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಯಿತು. ಬಹಳ ಜನ ಹಿರಿಯರಿದ್ರು ಸಹ ಕಡೆಗಣಿಸಲಾಯಿತು. ಡಾ.ಕೆ.ಸುಧಾಕರ್​ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ದರು. ಅರ್ಧ ಲೀಟರ್ ಹಾಲು ಯಾರಿಗೆ ಬೇಕು ಹೇಳಿ ಎಂದು ರೇಣುಕಾಚಾರ್ಯ ಪ್ರಶ್ನಿಸಿದರು.

ನಮ್ಮ ರಾಜ್ಯದ ಅಧ್ಯಕ್ಷರು ಅರ್ಥ ಮಾಡಿಕೊಳ್ಳಲಿಲ್ಲ. ಗೊಂದಲಕಾರಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಈಗಲೂ ರಾಜೀನಾಮೆ ಕೊಡ್ತಿವಿ ಅಂತಾರೆ, ಇಲ್ಲ ಅಂತಾರೆ. ಇದೆಲ್ಲವೂ ಬಿಜೆಪಿ ಸೋಲಿಗೆ ಕಾರಣ ಎಂದು ಅವರು ವಿವರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಲು ನಾನು ಸಮರ್ಥನಿದ್ದೀನಿ. ಶಾಸಕನಾಗಿ, ಸಚಿವನಾಗಿ ಅನುಭವ ಇದೆ. ಅದರೆ ಒತ್ತಡ ಮಾಡೋದಿಲ್ಲ. ಸೋಮಣ್ಣ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಕೇಳಿದ್ದು ನನಗೆ ಗೊತ್ತಿಲ್ಲ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಕಡೆ ನನಗೆ ಎಂಪಿ ಚುನಾವಣೆಗೆ ಸ್ಪರ್ಧೆ ಮಾಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಒತ್ತಡ ಹೆಚ್ಚಾದ ಕಾರಣ ನಾನು ಕೂಡ ದಾವಣಗೆರೆ ಎಂಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಆದರೆ ಯಡಿಯೂರಪ್ಪನವರು ಜಿ.ಎಂ ಸಿದ್ದೇಶ್ವರ್ ಗೆ ಎಂಪಿ ಟಿಕೆಟ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ನಾನು ಕೂಡ ಎಂಪಿ ಚುನಾವಣೆಯ ಪ್ರಬಲ ಅಕಾಂಕ್ಷಿ. ಹಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಜೈಲಿಗೆ ಕಳುಹಿಸಿದರು. ಮಾಡಾಳ್ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ಗೆ ಟಿಕೆಟ್ ಕೊಡಬೇಕಿತ್ತು, ಅಲ್ಲಿ ಕೂಡ ತಪ್ಪು ಮಾಡಿದ್ರು. ಈಗ ನನಗೆ ಟಿಕೆಟ್ ಕೊಡದಿದ್ದರೆ ಮತ್ತೆ ತಪ್ಪಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...