Homeಕರ್ನಾಟಕ‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

- Advertisement -
- Advertisement -

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಮಂಗಳವಾರ ರಾತ್ರಿ ಎಂಟು ಗಂಟೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿಯ ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸಿದ್ದ ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್‌ ಅಧೀಕೃತವಾಗಿ ನೂತನ ಮುಖ್ಯಮಂತ್ರಿಯ ಆಯ್ಕೆಯನ್ನು ಘೋಷಿಸಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಮಧ್ಯೆ ಮಾಜಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಶಾಸಕ ಎಂಪಿ ರೇಣುಕಾಚಾರ್ಯ ಅವರು ಟ್ವಿಟರ್‌ನಲ್ಲಿ “ಕಿಂಗ್ ಮೇಕರ್‌ ಬಿಎಸ್‌ ಯಡಿಯೂರಪ್ಪ” ಎಂದು ಬರೆದಿದ್ದು ಆಶ್ಚರ್ಯಕ್ಕೆ ಕಾರಣವಾಗಿದೆ.

ಯಡಿಯೂರಪ್ಪ ಅವರು ಅಧಿಕಾರಕ್ಕೆ ಏರಿದ ದಿನದಿಂದಲೂ ಪಕ್ಷದೊಳಗೆ ಅವರ ಬಗ್ಗೆ ಅಸಮಾಧಾನಗಳು ಸ್ಪೋಟಗೊಳ್ಳುತ್ತಲೆ ಬಂದಿದೆ. ಹಲವಾರು ಬಿಜೆಪಿ ಶಾಸಕರು ಬಹಿರಂಗವಾಗಿಯೆ ಯಡಿಯೂರಪ್ಪ ಅವರ ವಿರುದ್ದ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಹಲವು ಬಾರಿ ಯಡಿಯೂರಪ್ಪ ರಾಜೀನಾಮೆ ಕೊಟ್ಟೇ ಬಿಟ್ಟರು ಎನ್ನುವಷ್ಟು ಮಟ್ಟಕ್ಕೆ ಕಚ್ಛಾಟಗಳು ನಡೆಯುತ್ತಿದ್ದವು.

ಇದನ್ನೂ ಓದಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ!

ಅದಲ್ಲದೆ ಸೋಮವಾರ ರಾಜೀನಾಮೆ ಘೋಷಿಸಿದ ಭಾಷಣದಲ್ಲೂ ಯಡಿಯೂರಪ್ಪ ಅವರು ಕೇಂದ್ರದ ಬಿಜೆಪಿ ನಾಯಕತ್ವ ತನಗೆ ಮಂತ್ರಿ ಮಂಡಲ ರಚನೆ ಮಾಡದಂತೆ ಎರಡು ತಿಂಗಳು ಸತಾಯಿಸಿದ್ದರ ಬಗ್ಗೆ ಹೇಳಿದ್ದರು. ಸೋಮವಾರದಂದು ರಾಜ್ಯದ ಪ್ರಬಲ ಸಮುದಾಯ ಲಿಂಗಾಯತದ ನಾಯರಾದ ಯಡಿಯೂರಪ್ಪ ಅವರ ರಾಜಕೀಯ ಪರ್ವ ಮುಗೀತು ಎಂದು ಲೆಕ್ಕಾಚಾರಗಳನ್ನು ಮಾಡಲಾಗಿತ್ತು.

ಯಡಿಯೂರಪ್ಪ ಅವರ ರಾಜೀನಾಮೆಗೆ ಮುಂಚೆಯೆ ಬಿಜೆಪಿಯ ಯಡಿಯೂರಪ್ಪ ಅವರ ವಿರೋಧಿ ಬಣದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವರದಿಗಳು ಹರಡಿತ್ತು. ಪ್ರಮುಖವಾಗಿ ಬಿಎಲ್ ಸಂತೋಷ್ ಅವರ ಹೆಸರು ಮುನ್ನಲೆಗೆ ಬಂದಿತ್ತು. ಅಲ್ಲದೆ ನಳಿನ್ ಕುಮಾರ್‌ ಕಟೀಲ್ ಅವರದ್ದು ಎನ್ನಲಾದ ಆಡಿಯೋದಲ್ಲೂ ದೆಹಲಿಯ ಕಡೆಯವರು ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತು. ನಳಿನ್ ಕುಮಾರ್‌ ಕಟೀಲ್ ಬಿಎಸ್‌ವೈ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವುದರಿಂದ ಈ ಹೇಳಿಕೆಗೆ ಬಲ ಬಂದಿತ್ತು.

ಅದಾಗ್ಯೂ, ಎಲ್ಲಾ ಲೆಕ್ಕಾಚಾಗಳನ್ನು ತಲೆಕೆಳಗಾಗಿಸಿ ಮಂಗಳವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಸ್ವತಃ ಯಡಿಯೂರಪ್ಪ ಅವರೇ ಘೋಷಿಸಿದ್ದಾರೆ. ಅಲ್ಲದೆ ಬೊಮ್ಮಾಯಿ ಯಡಿಯೂರಪ್ಪ ಅವರ ಆಪ್ತನೇ ಆಗಿದ್ದು, ಜೊತೆಗೆ ಲಿಂಗಾಯತ ಸಮುದಾಯಕ್ಕೂ ಸೇರಿದವರಾಗಿದ್ದಾರೆ.

ಇದನ್ನೂ ಓದಿ: ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆ‌‌ರ್‌‌. ಅಶೋಕ್, ಶ್ರೀರಾಮುಲು?

ಇಷ್ಟೇ ಅಲ್ಲದೆ ಹೊಸದಾಗಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿರುವ ಆರ್‌. ಅಶೋಕ್ ಮತ್ತು ಗೋವಿಂದ ಕಾರಜೋಳ ಕೂಡಾ ಯಡಿಯೂರಪ್ಪ ಬಣದವರೇ ಆಗಿದ್ದಾರೆ. ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿರುವ ಮತ್ತೊಬ್ಬ ಬಿಜೆಪಿ ನಾಯಕ ಶ್ರೀರಾಮುಲು ಅವರು ಯಡಿಯೂರಪ್ಪ ಅವರ ಬಣದವರು ಅಲ್ಲವಾಗಿದ್ದರೂ, ಯಡಿಯೂರಪ್ಪ ಅವರ ವಿರೋದಿ ಕೂಡಾ ಅಲ್ಲ. ಹೀಗಾಗಿ ಹೊಸ ಮುಖ್ಯಮಂತ್ರಿಯ ರಾಜಕೀಯದಾಟದಲ್ಲಿ ಯಡಿಯೂರಪ್ಪ ಅವರೇ ಮುಖ್ಯಪಾತ್ರ ವಹಿಸಿದ್ದಾರೆ ಎನ್ನಬಹುದು. ಈ ಹೇಳಿಕೆಗೆ ರೇಣುಕಾಚಾರ್ಯ ಅವರ ಟ್ವೀಟ್‌ ಬಲ ನೀಡುತ್ತದೆ.

ಇದನ್ನೂ ಓದಿ: ರಾಜ್ಯಕ್ಕೆ ನೂತನ ಮುಖ್ಯಮಂತ್ರಿ; ಗಣ್ಯರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...