Homeಕರ್ನಾಟಕರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್...

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ನಟರಾದ ದರ್ಶನ್‌, ಪವಿತ್ರಾಗೌಡ ಸೇರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ಏಳು ಮಂದಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ (ಜ.24) ನೋಟಿಸ್ ಜಾರಿ ಮಾಡಿದ್ದು, ಜಾಮೀನು ರದ್ದತಿಗೆ ನಿರಾಕರಿಸಿದೆ ಎಂದು ವರದಿಯಾಗಿದೆ.

ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್‌ ಮಹದೇವನ್‌ ಅವರ ವಿಭಾಗೀಯ ಪೀಠ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ನಾಲ್ಕು ವಾರಗಳಲ್ಲಿ ತಮ್ಮ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಅವರು “ರೇಣುಕಾಸ್ವಾಮಿ ಕೊಲೆಯು ಆಘಾತಕಾರಿ ಪ್ರಕರಣವಾಗಿದ್ದು, ಹೈಕೋರ್ಟ್‌ ಇಡೀ ಪ್ರಕರಣವನ್ನು ಮರೆಮಾಚಲು ಪ್ರಯತ್ನಿಸಿದೆ. ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿದೆ. ದರ್ಶನ್‌ಗೆ ಪವಿತ್ರಾಗೌಡ ಗೆಳತಿ ಎಂಬ ಕಾರಣಕ್ಕಾಗಿ..” ಎಂದು ವಾದ ಮಂಡಿಸಿದ್ದಾರೆ.

ಆಗ ನ್ಯಾ. ಪರ್ದಿವಾಲಾ ಅವರು “ಜಾಮೀನು ರದ್ದುಪಡಿಸಬೇಕು ಎಂದು ಕೇಳುತ್ತಿದ್ದೀರಾ?” ಎಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಲೂಥ್ರಾ ಅವರು “ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ. ಹೈಕೋರ್ಟ್‌ ಯಾವುದನ್ನೂ ಪರಿಗಣಿಸಿಲ್ಲ. ಪ್ರಕರಣದಲ್ಲಿನ ಸಹ ಆರೋಪಿಗಳು ಹೈಕೋರ್ಟ್‌ನ ಈ ತೀರ್ಮಾನಗಳನ್ನು ಆಧಾರವಾಗಿಸಿಕೊಂಡು ಜಾಮೀನು ಪಡೆಯಲು ಅನುಮತಿಸಬಾರದು. ಹೈಕೋರ್ಟ್‌ನ ತೀರ್ಮಾನಗಳು ಸಮಸ್ಯಾತ್ಮಕವಾಗಿದೆ” ಎಂದಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆಗೂ ಮುನ್ನ  ಮಾತನಾಡಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ್, “ನಾವು ನಮ್ಮ ಕೆಲಸ ಮಾಡಿದ್ದೇವೆ. ಪೊಲೀಸರು ವಕೀಲರ ಮೂಲಕ ಸುಪ್ರೀಂ ಕೋರ್ಟ್‌ಗೆ ಸಂಬಂಧಿತ ದಾಖಲೆಗಳು ಮತ್ತು ಸಾಮಗ್ರಿಗಳನ್ನು ಸಲ್ಲಿಸಿದ್ದಾರೆ. ಪೊಲೀಸರ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ತೀರ್ಪು ಏನಾಗುತ್ತದೆ ಎಂಬುದನ್ನು ನಾವು ನೋಡುತ್ತೇವೆ. ನಂತರ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಐವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರು ಆರೋಪಿಗಳ ಬಂಧನಕ್ಕೆ ನಿರ್ದಿಷ್ಟ ಆಧಾರಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿದ್ದರು. ಪ್ರಬೀರ್ ಪುರ್ಕಾಯಸ್ಥ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಉಲ್ಲೇಖಿಸಿದ್ದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಆರೋಪಿಗಳ ಬಂಧನದ ಆಧಾರಗಳು ಮತ್ತು ಕಾರಣಗಳ ನಡುವಿನ ವ್ಯತ್ಯಾಸವನ್ನು ಒತ್ತಿ ಹೇಳಿದ್ದರು.

ಹೈಕೋರ್ಟ್ ಜಾಮೀನು ಆದೇಶವನ್ನು ಪ್ರಶ್ನಿಸಿ ಜನವರಿ 6 ರಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆರಂಭದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ದರ್ಶನ್ ಅವರಿಗೆ ಹೈಕೋರ್ಟ್ ಮಧ್ಯಂತರ ವೈದ್ಯಕೀಯ ಜಾಮೀನು ನೀಡಿತ್ತು. ನಂತರ ಅದನ್ನು ನಿಯಮಿತ (ರೆಗ್ಯುಲರ್)  ಜಾಮೀನು ಆಗಿ ಪರಿವರ್ತಿಸಿತ್ತು.

ಇದನ್ನೂ ಓದಿ : ಬೆಳಗಾವಿ| ಗ್ರಾಮ ತೊರೆಯುವಂತೆ ದಲಿತ ವ್ಯಕ್ತಿ ಕುಟುಂಬಕ್ಕೆ ಒತ್ತಡ ಹಾಕಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...