Homeಕರ್ನಾಟಕಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

- Advertisement -
- Advertisement -

ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ‌, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿತ್ತು. ಇದೀಗ ಅವರ ಮೇಲೆ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿರುವ ಸರಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕ ಸರಕಾರದ ಸಲಹಾ ಮಂಡಳಿಯು ”ಆತನನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ”ʼ ಎಂದು ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪುನೀತ್ ಕೆರೆಹಳ್ಳಿ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ, ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ರಾಮನಗರ ಜಿಲ್ಲೆಯ ಸಾತನೂರು ಬಳಿ ನಡೆದಿದ್ದ ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು. ಹೀಗೆ ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಸರ್ಕಾರದ ಆದೇಶ:

ಗೂಂಡಾ ಕಾಯ್ದೆಯಡಿ‌ ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟು ವರದಿ ನೀಡಿತ್ತು. ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿ, ಪುನೀತ್ ಬಂಧನಮುಕ್ತಗೊಳಿಸುವಂತೆ ಸೂಚಿಸಿದೆ.

ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಕಾಂಗ್ರೆಸ್ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಡಿವೈಎಫ್‌ ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ”ಪುನೀತ್ ಕೆರೇಹಳ್ಳಿ ಬಿಡುಗಡೆ ಪ್ರಕರಣ ರಾಜ್ಯ ಕಾಂಗ್ರೆಸ್ ಸರಕಾರದ ಜಾತ್ಯಾತೀತತೆ ನಿಲುವಿನ ಮೇಲಿನ ಬದ್ದತೆಯನ್ನು ಪ್ರಶ್ನಾರ್ಹಗೊಳಿಸಿದೆ. ಸರಕಾರದ, ಮುಖ್ಯಮಂತ್ರಿಗಳ ಸಲಹಾ ಮಂಡಳಿ, ಸರಕಾರದ ಪ್ರಧಾನ ಅಧಿಕಾರಿಗಳು ಕೋಮುವಾದಿಗಳ ಹಿಡಿತದಲ್ಲಿ ಇದ್ದಂತಿದೆ. ಇದ್ರಿಸ್ ಪಾಷಾ, ಫಾಝಿಲ್ ಕೊಲೆ ಪ್ರಕರಣಗಳ ಮುಂದುವರಿದ ತನಿಖೆ ನಡೆಸುವ ಬದಲಿಗೆ ಕೋಮುವಾದಿ ಅಪರಾಧಿಗಳಿಗೆ ಜಾಮೀನು ಕೊಡಿಸಲು ಸರಕಾರ ಹೆಚ್ಚು ಆಸಕ್ತವಾಗಿರುವಂತಿದೆ. ಚೈತ್ರ ಕುಂದಾಪುರ ಪ್ರಕರಣವನ್ನೂ ಆಳ ತನಿಖೆಗೆ ಸರಕಾರ ಮನಸ್ಸು ಮಾಡುವುದು ಅನುಮಾನಾಸ್ಪದ” ಎಂದು ಬರೆದುಕೊಂಡಿದ್ದಾರೆ.

ಪುನೀತ್ ಕೆರೆಹಳ್ಳಿ ಬಿಡುಗಡೆ ಸರ್ಕಾರದ ನಡೆ ಖಂಡನೀಯ: ವೆಲ್ಫೆರ್ ಪಾರ್ಟಿ

ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಕರ್ನಾಟಕ ಸರಕಾರದ ಸಲಹಾ ಮಂಡಳಿ ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ. ಇದು ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವೇಕ್ತಪಡಿಸಿದ್ದಾರೆ.

ಹಲವಾರು ಸಮಾಜ ಘಾತುಕ ಕೊಲೆ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿ ಸರಕಾರಕ್ಕೆ ಅಲ್ಪಸಂಖ್ಯಾತರಿಗೆ ಬಹರಂಗ ಸವಾಲು ನೀಡಿದಂತಹಾ ಓರ್ವ ಆರೋಪಿಯ ರಕ್ಷಣೆಗೆ ಸರಕಾರವೇ ಇಳಿದಿರುವುದು ಅಕ್ಷಮ್ಯ. ಈತನ ಮೇಲೆ ವಿವಿಧ ಠಾಣೆಗಳಲ್ಲಿ ಎಂಟ್ಹತ್ತು ಪ್ರಕರಣಗಳಿದ್ದು ಇತ್ತೀಚೆಗೆ ಮಂಡ್ಯದ ಇದ್ರೀಸ್ ಪಾಷಾ ಹತ್ಯೆಯ ಆರೋಪವೂ ಇದ್ದು ಈತನ ಬಿಡುಗಡೆಗೆ ಸರಕಾರದ ಸಲಹಾ ಮಂಡಳಿ ಸಹಕರಿಸಿರುವುದು ಅನ್ಯಾಯದ ನಡೆಯಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮತ್ತು ತನ್ನ ಸರಕಾರ ರಚನೆಯ ನಂತರ ದಿನವೂ ಅಲ್ಪ ಸಂಖ್ಯಾತರಿಗೆ ರಕ್ಷಣೆ ಮತ್ತು ಕೋಮುವಾದಿಗಳಿಗೆ ಸಮಾಜದಲ್ಲಿ ದ್ವೇಶ ಹರಡುವಂತಹವರಿಗೆ ಕಠಿಣ ಶಿಕ್ಷೆ ಕೊಡುವಂತಹಾ ಭಾಷಣಗಳನ್ನು ಪತ್ರಿಕಾ ಹೇಳಿಕೆಗಳನ್ನು ನಿರಂತರ ಹೇಳುತ್ತಾ ಬರುತ್ತಿರುವಾಗ ಸರಕಾರದ ಈ ನಡೆ ಅದಕ್ಕೆ ತದ್ವಿರುದ್ದವಾಗಿದೆ. ಆದ್ದರಿಂದ ಕಾಂಗ್ರೆಸ್ ಸರಕಾರದ ಬಾಷಣ ಪತ್ರಿಕಾ ಹೇಳಿಕೆಗಳು ಕೇವಲ ಕಾಗದಗಳಿಗೆ ಸೀಮಿತವಾಗದೆ ಸರಿಯಾದ ರೀತಿಯಲ್ಲಿ ಅನುಷ್ಟಾನಕ್ಕೆ ಬರಬೇಕಾಗಿದೆ. ಸರಕಾರದ ಈ ನಡೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ಘಟಕ ತೀವ್ರವಾಗಿ ಖಂಡಿಸುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...