Homeಕರ್ನಾಟಕಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

- Advertisement -
- Advertisement -

ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ‌, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿತ್ತು. ಇದೀಗ ಅವರ ಮೇಲೆ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿರುವ ಸರಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕ ಸರಕಾರದ ಸಲಹಾ ಮಂಡಳಿಯು ”ಆತನನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ”ʼ ಎಂದು ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪುನೀತ್ ಕೆರೆಹಳ್ಳಿ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ, ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ರಾಮನಗರ ಜಿಲ್ಲೆಯ ಸಾತನೂರು ಬಳಿ ನಡೆದಿದ್ದ ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು. ಹೀಗೆ ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಸರ್ಕಾರದ ಆದೇಶ:

ಗೂಂಡಾ ಕಾಯ್ದೆಯಡಿ‌ ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟು ವರದಿ ನೀಡಿತ್ತು. ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿ, ಪುನೀತ್ ಬಂಧನಮುಕ್ತಗೊಳಿಸುವಂತೆ ಸೂಚಿಸಿದೆ.

ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಕಾಂಗ್ರೆಸ್ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಡಿವೈಎಫ್‌ ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ”ಪುನೀತ್ ಕೆರೇಹಳ್ಳಿ ಬಿಡುಗಡೆ ಪ್ರಕರಣ ರಾಜ್ಯ ಕಾಂಗ್ರೆಸ್ ಸರಕಾರದ ಜಾತ್ಯಾತೀತತೆ ನಿಲುವಿನ ಮೇಲಿನ ಬದ್ದತೆಯನ್ನು ಪ್ರಶ್ನಾರ್ಹಗೊಳಿಸಿದೆ. ಸರಕಾರದ, ಮುಖ್ಯಮಂತ್ರಿಗಳ ಸಲಹಾ ಮಂಡಳಿ, ಸರಕಾರದ ಪ್ರಧಾನ ಅಧಿಕಾರಿಗಳು ಕೋಮುವಾದಿಗಳ ಹಿಡಿತದಲ್ಲಿ ಇದ್ದಂತಿದೆ. ಇದ್ರಿಸ್ ಪಾಷಾ, ಫಾಝಿಲ್ ಕೊಲೆ ಪ್ರಕರಣಗಳ ಮುಂದುವರಿದ ತನಿಖೆ ನಡೆಸುವ ಬದಲಿಗೆ ಕೋಮುವಾದಿ ಅಪರಾಧಿಗಳಿಗೆ ಜಾಮೀನು ಕೊಡಿಸಲು ಸರಕಾರ ಹೆಚ್ಚು ಆಸಕ್ತವಾಗಿರುವಂತಿದೆ. ಚೈತ್ರ ಕುಂದಾಪುರ ಪ್ರಕರಣವನ್ನೂ ಆಳ ತನಿಖೆಗೆ ಸರಕಾರ ಮನಸ್ಸು ಮಾಡುವುದು ಅನುಮಾನಾಸ್ಪದ” ಎಂದು ಬರೆದುಕೊಂಡಿದ್ದಾರೆ.

ಪುನೀತ್ ಕೆರೆಹಳ್ಳಿ ಬಿಡುಗಡೆ ಸರ್ಕಾರದ ನಡೆ ಖಂಡನೀಯ: ವೆಲ್ಫೆರ್ ಪಾರ್ಟಿ

ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಕರ್ನಾಟಕ ಸರಕಾರದ ಸಲಹಾ ಮಂಡಳಿ ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ. ಇದು ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವೇಕ್ತಪಡಿಸಿದ್ದಾರೆ.

ಹಲವಾರು ಸಮಾಜ ಘಾತುಕ ಕೊಲೆ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿ ಸರಕಾರಕ್ಕೆ ಅಲ್ಪಸಂಖ್ಯಾತರಿಗೆ ಬಹರಂಗ ಸವಾಲು ನೀಡಿದಂತಹಾ ಓರ್ವ ಆರೋಪಿಯ ರಕ್ಷಣೆಗೆ ಸರಕಾರವೇ ಇಳಿದಿರುವುದು ಅಕ್ಷಮ್ಯ. ಈತನ ಮೇಲೆ ವಿವಿಧ ಠಾಣೆಗಳಲ್ಲಿ ಎಂಟ್ಹತ್ತು ಪ್ರಕರಣಗಳಿದ್ದು ಇತ್ತೀಚೆಗೆ ಮಂಡ್ಯದ ಇದ್ರೀಸ್ ಪಾಷಾ ಹತ್ಯೆಯ ಆರೋಪವೂ ಇದ್ದು ಈತನ ಬಿಡುಗಡೆಗೆ ಸರಕಾರದ ಸಲಹಾ ಮಂಡಳಿ ಸಹಕರಿಸಿರುವುದು ಅನ್ಯಾಯದ ನಡೆಯಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮತ್ತು ತನ್ನ ಸರಕಾರ ರಚನೆಯ ನಂತರ ದಿನವೂ ಅಲ್ಪ ಸಂಖ್ಯಾತರಿಗೆ ರಕ್ಷಣೆ ಮತ್ತು ಕೋಮುವಾದಿಗಳಿಗೆ ಸಮಾಜದಲ್ಲಿ ದ್ವೇಶ ಹರಡುವಂತಹವರಿಗೆ ಕಠಿಣ ಶಿಕ್ಷೆ ಕೊಡುವಂತಹಾ ಭಾಷಣಗಳನ್ನು ಪತ್ರಿಕಾ ಹೇಳಿಕೆಗಳನ್ನು ನಿರಂತರ ಹೇಳುತ್ತಾ ಬರುತ್ತಿರುವಾಗ ಸರಕಾರದ ಈ ನಡೆ ಅದಕ್ಕೆ ತದ್ವಿರುದ್ದವಾಗಿದೆ. ಆದ್ದರಿಂದ ಕಾಂಗ್ರೆಸ್ ಸರಕಾರದ ಬಾಷಣ ಪತ್ರಿಕಾ ಹೇಳಿಕೆಗಳು ಕೇವಲ ಕಾಗದಗಳಿಗೆ ಸೀಮಿತವಾಗದೆ ಸರಿಯಾದ ರೀತಿಯಲ್ಲಿ ಅನುಷ್ಟಾನಕ್ಕೆ ಬರಬೇಕಾಗಿದೆ. ಸರಕಾರದ ಈ ನಡೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ಘಟಕ ತೀವ್ರವಾಗಿ ಖಂಡಿಸುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...