Homeಮುಖಪುಟಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

ಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

- Advertisement -
- Advertisement -

’ನ್ಯಾಯಪಥ’ 18 ಮೇ 2022ರ ಸಂಚಿಕೆಯಲ್ಲಿ ಡಾ. ರಮೇಶ.ವಿ ರವರ ’ರಾಷ್ಟ್ರೀಯತೆ ಮತ್ತು ಕನ್ನಡದ ಅಸ್ಮಿತೆ’ (ಇಲ್ಲಿ ಓದಿ) ಎಂಬ ಲೇಖನ ಭಾಷಾ ವಿಜ್ಞಾನದ ನೆಲೆಯಲ್ಲಿ ಒಳ್ಳೆಯ ಬರಹವಾಗಿದೆ. ಇಂಡೋ ಆರ್ಯನ್ ಭಾಷೆಗಳು ಹಾಗು ದ್ರಾವಿಡ ಭಾಷೆಗಳು ಕಾಲಕ್ರಮದಲ್ಲಿ ಹೇಗೆ ಕವಲೊಡೆದು ಬೆಳೆದವು ಎಂಬುದನ್ನು ಸುಪ್ರೀಂಕೋರ್ಟು ಒಳಗೊಂಡಂತೆ ಸದ್ಯ ನಮ್ಮ ರಾಷ್ಟ್ರದ ಹಿಂದಿ ರಾಜಕಾರಣ ದ್ರಾವಿಡ ಭಾಷೆಗಳ ಬುಡಕ್ಕೆ ಬಿಸಿನೀರು ಚೆಲ್ಲುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ, ಸೌಮ್ಯವಾಗಿ ವಿಸ್ತರಿಸಿ, ಬಿಡಿಸಿ ಹೇಳಿದ್ದಾರೆ.

ನಾನೀಗ ರಮೇಶ ಅವರೊಂದಿಗೆ ಕೂಡಿಕೊಂಡು ಕೊಂಚ ಗಟ್ಟಿಯಾಗಿ ಹೇಳಬೇಕಾದ ಮಾತೊಂದಿದೆ. ಅದೇನೆಂದರೆ ಕೂಸು ಅಳದಿದ್ದರೆ ಯಾವ ತಾಯಿಯೂ ಹಾಲೂಡಿಸುವುದಿಲ್ಲವಷ್ಟೆ? ಹಾಗೆ ಯಾವುದೇ ಭಾಷಾ ಸಮುದಾಯವು ಸಹ ಕೂಡುರಾಷ್ಟ್ರದ ರಾಜ್ಯಾಂಗಬದ್ಧ ತನ್ನ ಹಕ್ಕನ್ನು ಚಲಾಯಿಸದಿದ್ದರೆ, ಪಾರ್ಲಿಮೆಂಟಿನಲ್ಲಿ ನಿಂತು ಗಟ್ಟಿಯಾಗಿ ಮಾತನಾಡಿ ಪ್ರಶ್ನಿಸದಿದ್ದರೆ ಇದು ಪ್ರಜಾತಂತ್ರ ಅನ್ನಿಸಿಕೊಳ್ಳುವುದೆ? ಇಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರಕವಿ ಕುವೆಂಪು ಕಳೆದ ಶತಮಾನದ ಮೂರನೆ ದಶಕದಿಂದ ಬಿಟ್ಟೂಬಿಡದಂತೆ ಒಂದೇಸಮನೆ ’ಕನ್ನಡ ಅಸ್ಮಿತೆ’ಯ ಬಗ್ಗೆ ಕವನ ಬರೆದಿದ್ದಾರೆ; ಭಾಷಣ ಮಾಡಿದ್ದಾರೆ, ಸಂದರ್ಶನದಲ್ಲಿ ಹೇಳಿದ್ದಾರೆ. ಕುವೆಂಪು ಅವರ ವೈಜ್ಞಾನಿಕ ದೃಷ್ಟಿ, ವೈಚಾರಿಕ ತಿಳಿವು, ಒಕ್ಕೂಟರಾಷ್ಟ್ರದ ನಿಲುವು ಅಖಂಡ ಎಂಬುದನ್ನು ಹೆಚ್ಚು ವಿಸ್ತರಿಸಬೇಕಾಗಿಲ್ಲ. 1928ರಲ್ಲಿ ಅವರು ಇನ್ನೂ 24ರ ಹರೆಯದ ಕಾಲೇಜು ವಿದ್ಯಾರ್ಥಿ. ಕನ್ನಡದ ಅಸ್ಮಿತೆಯನ್ನು ಕುರಿತು ಆಗಲೇ ಚಿಂತನಮಂಥನ ನಡೆಸಿದ್ದಾರೆ. ಆಗ ಬರೆದದ್ದು ’ಭಾರತ ಜನನಿಗೆ’ ಎಂಬ ಕವನ. ಅಲ್ಲಿಂದ ಮೊದಲುಗೊಂಡು ’ಜಯಹೇ ಕರ್ನಾಟಕ ಮಾತೆ (1928), ಸಾಯುತಿದೆ ನಿಮ್ಮ ನುಡಿ ಓ ಕನ್ನಡದ ಕಂದರಿರ (1935), ಕಂದ ಕನ್ನಡನಿವನು ಕೈಬಿಡದಿರಮ್ಮಾ (1938), ಮೆಟ್ಟುವ ನೆಲ ಅದು ಕರ್ನಾಟಕ (1949), ಕರ್ನಾಟಕ ಮಂತ್ರದೀಕ್ಷೆ (1949), ಕನ್ನಡ ಡಿಂಡಿಮ(1960), ಸಾಕು ಈ ಬಲಾತ್ಕಾರ(1963), ಬಲಾತ್ಕಾರದ ಭಾಷಾ ತ್ರಿಶೂಲ(1963)’ ಹೀಗೆ ಕುವೆಂಪು ಕನ್ನಡ ತಾಯಿಯ ಸೇವೆಯ ಮಾಡಲು ಜೀವಮಾನ ಪರ್ಯಂತ ಹಾತೊರೆದರು; ಬರೆದರು, ಮಾತಾಡಿ ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿದರು. ಸಂಸ್ಕೃತ, ಹಿಂದಿ, ಇಂಗ್ಲಿಷ್ ಯಜಮಾನ್ಯದ ’ಕೊಲ್ವಮುನ್ನ ಸೊಲ್ಲಡಗಿಸುವ ಹುನ್ನಾರ’ವನ್ನು ಕಂಡು ಮರುಗಿದರು;

ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ
ಹೊರನುಡಿಯ ಹೊರೆಯಿಂದ ಕುಸಿದು ಕುಗ್ಗಿ!
ರಾಜನುಡಿಯೆಂದೊಂದು, ರಾಷ್ಟ್ರನುಡಿಯೆಂದೊಂದು,
ದೇವನುಡಿಯೆಂದೊಂದು ಹತ್ತಿ ಜಗ್ಗಿ

ಎಂದು ಎಚ್ಚರಿಸಿದರು. ಆದರೆ ಇವತ್ತಿಗೂ ಕನ್ನಡಿಗರು ಎಚ್ಚರಗೊಳ್ಳಲಾಗಿಲ್ಲ. ಇಂಗ್ಲಿಷ್, ಹಿಂದಿ, ಸಂಸ್ಕೃತದ ಹೊರೆ ಕನ್ನಡದ ಮಕ್ಕಳಿಗೆ ತಪ್ಪಿಲ್ಲ. ’ಕರ್ನಾಟಕ ಎಂಬುದು ಬರಿಯ ಹೆಸರೆ ಮಣ್ಣಿಗೆ?’ ಎಂದು ಕೇಳಲಾಗಿಲ್ಲ! ಸ್ವಾತಂತ್ರ್ಯವೂ ಬಂತು; ಸ್ವರಾಜ್ಯವೂ ಆಯಿತು; ಭಾಷಾವಾರು ಪ್ರಾಂತ್ಯಗಳೂ ಉದಯವಾದವು; ’ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ ಎಂದು ಕವಿಗಳು, ಗಮಕಿಗಳು ಹಾಡಿ ದಣಿದರು. ಆದರೆ ಚೆಲುವ ಕನ್ನಡ ನಾಡು ಎಲ್ಲಿ? ಎಲ್ಲವೂ ಜಾತಿಯಲ್ಲಿ, ಸ್ವಜನಪಕ್ಷಪಾತದಲ್ಲಿ, ಭ್ರಷ್ಟಾಚಾರದಲ್ಲಿ, ಮಂತ್ರಿ ಮಹೋದಯರ ಕುರ್ಚಿ ಹರಾಜಿನಲ್ಲಿ, ಹೈಕಮಾಂಡ್ ಎದುರು ಡೊಗ್ಗು ಸಲಾಮು ಹೊಡೆಯುವಲ್ಲಿ ಕನ್ನಡ, ಕರ್ನಾಟಕ, ಕನ್ನಡಿಗರ ಅಸ್ಮಿತೆಯೇ ಮರೆತು ಹೋಗುತ್ತಿದೆ. ’ಮಾತು ಮರೆತ’ ಜನಾಂಗ ಬದುಕಿದ್ದರೂ ಸತ್ತಂತೆ ತಾನೆ? ’ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ’ ಎಂದು ಸತ್ತಂತಿರುವ ಕನ್ನಡಿಗರನ್ನು ಬಡಿದೆಬ್ಬಿಸುವ ದಾತಾರರೇ ಈಗ ಇಲ್ಲ. ನೆರೆಯ ತಮಿಳರು ನಾಡು-ನುಡಿಯ ’ಅಸ್ಮಿತೆ’ಗೆ ಕುಂದು ಬಂದಾಗಲೆಲ್ಲಾ ದಂಗೆಯೆದ್ದು ದ್ರಾವಿಡತನವನ್ನು ಮೆರೆದಿದ್ದಾರೆ. ಕನ್ನಡಿಗರರಿಗೆ ಆ ಭಾಷಾಭಿಮಾನವಾಗಲೀ, ಸ್ವಾಭಿಮಾನವಾಗಲೀ ಇಲ್ಲ. ಲಾಗಾಯ್ತಿನಿಂದ ಒಬ್ಬ ಮಂತ್ರಿಯನ್ನು ಕೈಬಿಡುವುದಕ್ಕೂ ಇನ್ನೊಬ್ಬರನ್ನು
ಸೇರಿಸಿಕೊಳ್ಳುವುದಕ್ಕೂ ಸಹ ಮುಖ್ಯಮಂತ್ರಿಯವರು ದೆಹಲಿ ದರ್ಬಾರ್‌ಗೆ ಹೋಗಿ ಹೈಕಮಾಂಡಿನ ಬಾಗಿಲು ಕಾಯುವ ಪರಿಸ್ಥಿತಿ ಉದ್ಭವಿಸಿದೆ. ಇದಕ್ಕೆಲ್ಲಾ ಕಾರಣ ಕರ್ನಾಟಕದ ಶಾಸಕರು, ಸಂಸದರು ಮತ್ತು ರಾಜ್ಯಸರ್ಕಾರದ ದೌರ್ಬಲ್ಯ. ಬಗ್ಗಿದಷ್ಟೂ ಉತ್ತರದವರ ಪಾರುಪತ್ಯ ಎದ್ದು ಕಾಣುತ್ತದೆ. ಹಾಗಾದರೆ ಏನು ಮಾಡಬೇಕು?

ಏನು ಮಾಡಬೇಕು ಎಂಬುದನ್ನು ಕುವೆಂಪು 1965ರಲ್ಲೇ ’ರಾಷ್ಟ್ರಕವಿ ಪ್ರಶಸ್ತಿ’ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಹೀಗೆ ಹೇಳಿದ್ದಾರೆ: “ಮಹನೀಯರೆ, ಕೊನೆಯದಾಗಿ ಅಧಿಕೃತ ಶಾಸನಕರ್ತರಾದ ನಿಮ್ಮಲ್ಲಿ ಅನಧಿಕೃತ ಶಾಸನಕರ್ತನಾದ ನನ್ನ ಒಂದು ಅಹವಾಲು; ಅದು ಇಂಗ್ಲಿಷ್ ಭಾಷೆಗೂ ಶಿಕ್ಷಣ ಮಾಧ್ಯಮಕ್ಕೂ ಸಂಬಂಧಪಟ್ಟಿದ್ದು. ವಿವರಕ್ಕಾಗಲಿ ವಾದಕ್ಕಾಗಲಿ ಜಿಜ್ಞಾಸೆಗಾಗಲಿ ನಾನೀಗ ಕೈ ಹಾಕುವುದಿಲ್ಲ. ಅದು ತತ್ಸಮಯ ಸಾಧ್ಯವು ಅಲ್ಲ; ಅದಕ್ಕಿಲ್ಲಿ ಕಾಲಾವಕಾಶವೂ ಇಲ್ಲ. ತಮ್ಮ ಗಮನವನ್ನು ಅತ್ತಕಡೆ ಎಳೆದು, ಅದು ತಮ್ಮ ಶೀಘ್ರ ಪರಿಶೀಲನೆಗೂ ಇತ್ಯರ್ಥಕ್ಕೂ ಒಳಗಾಗುವಂತೆ ಮಾಡುವುದೆ ನನ್ನ ಸದ್ಯ ಪ್ರಯತ್ನದ ಮುಖ್ಯ ಉದ್ದೇಶ. ಆ ವಿಚಾರವಾಗಿ ನಮ್ಮ ರಾಷ್ಟ್ರಪಿತನಾದಿಯಾಗಿ ಸಾವಿರಾರು ದೇಶಭಕ್ತರೂ ನೂರಾರು ಸ್ವದೇಶೀಯ ಮತ್ತು ವಿದೇಶೀಯ ವಿದ್ಯಾತಜ್ಞರೂ ಹೇಳಿದ್ದಾರೆ, ಮಾತನಾಡಿದ್ದಾರೆ, ಬರೆದಿದ್ದಾರೆ. ಹೊತ್ತಗೆಗಳನ್ನೆ ಪ್ರಕಟಿಸಿಯೂ ಇದ್ದಾರೆ. ಆದರೆ ನಮ್ಮ ದೇಶದ ಪ್ರಚ್ಛನ್ನ ಶತ್ರುಗಳಾದ ಸ್ವಾರ್ಥಸಾಧಕ ಪಟ್ಟಭದ್ರ ಹಿತಾಸಕ್ತ ಪ್ರತಿಗಾಮಿ ಶಕ್ತಿಗಳು, ಮಕ್ಕಳಿಗೆ ಹಾಲುಣಿಸುವ ನೆವದಿಂದ ಅವರನ್ನು ಕೊಲ್ಲುತ್ತಿದ್ದ ಭಾಗವತ ಪುರಾಣದ ಪೂತನಿಯಂತೆ, ಬಲಾತ್ಕಾರದ ಇಂಗ್ಲಿಷ್ ಭಾಷೆಯಿಂದಲೂ ಇಂಗ್ಲಿಷ್ ಮಾಧ್ಯಮದಿಂದಲೂ ವರ್ಷವರ್ಷವೂ ಪರೀಕ್ಷೆಯ ಜಿಲೊಟಿನ್ನಿಗೆ ಕೋಟ್ಯಾಂತರ ಬಾಲಕರ ಮತ್ತು ತರುಣರ ತಲೆಗಳನ್ನು ಬಲಿಕೊಡುತ್ತಿದ್ದಾರೆ. ಆ ನಷ್ಟದ ಪರಿಮಾಣವನ್ನು ಊಹಿಸಲೂ ಸಾಧ್ಯವಿಲ್ಲ. ಬಹುಶಃ ಸರಿಯಾಗಿ ಲೆಕ್ಕ ಹಾಕಿದರೆ, ನಾಲ್ಕಾರು ಪಂಚವಾರ್ಷಿಕ ಯೋಜನೆಗಳ ಮೊತ್ತವೆ ಆದರೂ ಆಗಬಹುದೇನೊ!”

“ಇಂಗ್ಲಿಷ್ ಭಾಷೆ ಬಲಾತ್ಕಾರದ ಸ್ಥಾನದಿಂದ ಐಚ್ಛಿಕ ಸ್ಥಾನಕ್ಕೆ ನಿಯಂತ್ರಣಗೊಳ್ಳದಿದ್ದರೆ, ಇಂಗ್ಲಿಷ್ ಶಿಕ್ಷಣ ಮಾಧ್ಯಮ ತೊಲಗಿ ಪ್ರಾದೇಶಿಕ ಭಾಷೆಗೆ ಆ ಸ್ಥಾನ ಲಭಿಸದಿದ್ದರೆ, ನಮ್ಮ ದೇಶ ಹತ್ತೇ ವರ್ಷಗಳಲ್ಲಿ ಸಾಧಿಸಬೇಕಾದುದನ್ನು ಇನ್ನೊಂದು ನೂರು ವರ್ಷಗಳಲ್ಲಿಯೂ ಸಾಧಿಸಲಾರದೆ ನಿತ್ಯ ರೋಗಿಯಂತಿರಬೇಕಾಗುತ್ತದೆ.”

ಇಂದಿಗೂ ಪರಿಸ್ಥಿತಿ ಕುವೆಂಪು ಅಂದು ಹೇಳಿದ ಹಾಗೇ ಇದೆ. ಬದಲಾಗಿರುವುದೇನೆಂದರೆ ಇಂಗ್ಲಿಷಿನ ಸ್ಥಾನಕ್ಕೆ ಹಿಂದಿಯನ್ನು ತರಲಾಗುತ್ತಿದೆ ಅಷ್ಟೇ! ಇದು ವಿದ್ಯಾರ್ಥಿಗಳ, ರೈತರ, ದಲಿತರ ಮಕ್ಕಳ ದನಿಯನ್ನು ಹತ್ತಿಕ್ಕುತ್ತದೆ. ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡುವುದಿಲ್ಲ! ಮುಖ್ಯ ನಮ್ಮ ಜನಪ್ರತಿನಿಧಿಗಳು ಹೈಕಮಾಂಡ್ ಹೇಳಿದ ಮಾತಿಗೆಲ್ಲಾ ’ಕೌಲೆ ಬಸವಣ್ಣನಂತೆ ತಲೆ ಹಾಕದೆ’ ಲೋಕಸಭೆಯಲ್ಲಿ ವಿಧಾನಸಭೆಯಲ್ಲಿ ಎದ್ದುನಿಂತು ಪ್ರಾದೇಶಿಕ ಭಾಷೆಗಳ ಪರವಾಗಿ ದನಿ ಎತ್ತಬೇಕು. ಬಂಗಾಳಿ, ತಮಿಳು ಮುಂತಾದ ಭಾಷೆಗಳಂತೆ ಕನ್ನಡದ ’ಅಸ್ಮಿತೆ’ಯನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು. ಇಲ್ಲವಾದರೆ ಕನ್ನಡ ಭಾಷೆಯೊಂದಿಗೆ ಕನ್ನಡ ಜನಾಂಗವೂ ಕಣ್ಮರೆಯಾಗುವ ಕಾಲ ದೂರವಿಲ್ಲ! ಈ ನಿಟ್ಟಿನಲ್ಲಿ ನಮ್ಮ ಮಾಧ್ಯಮಗಳ ಜವಾಬ್ದಾರಿ ಎಷ್ಟಿದೆಯೆಂಬುದನ್ನು ಒತ್ತಿ ಹೇಳಬೇಕಾಗಿಲ್ಲ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...