Homeಮುಖಪುಟಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

ಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

- Advertisement -
- Advertisement -

’ನ್ಯಾಯಪಥ’ 18 ಮೇ 2022ರ ಸಂಚಿಕೆಯಲ್ಲಿ ಡಾ. ರಮೇಶ.ವಿ ರವರ ’ರಾಷ್ಟ್ರೀಯತೆ ಮತ್ತು ಕನ್ನಡದ ಅಸ್ಮಿತೆ’ (ಇಲ್ಲಿ ಓದಿ) ಎಂಬ ಲೇಖನ ಭಾಷಾ ವಿಜ್ಞಾನದ ನೆಲೆಯಲ್ಲಿ ಒಳ್ಳೆಯ ಬರಹವಾಗಿದೆ. ಇಂಡೋ ಆರ್ಯನ್ ಭಾಷೆಗಳು ಹಾಗು ದ್ರಾವಿಡ ಭಾಷೆಗಳು ಕಾಲಕ್ರಮದಲ್ಲಿ ಹೇಗೆ ಕವಲೊಡೆದು ಬೆಳೆದವು ಎಂಬುದನ್ನು ಸುಪ್ರೀಂಕೋರ್ಟು ಒಳಗೊಂಡಂತೆ ಸದ್ಯ ನಮ್ಮ ರಾಷ್ಟ್ರದ ಹಿಂದಿ ರಾಜಕಾರಣ ದ್ರಾವಿಡ ಭಾಷೆಗಳ ಬುಡಕ್ಕೆ ಬಿಸಿನೀರು ಚೆಲ್ಲುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ, ಸೌಮ್ಯವಾಗಿ ವಿಸ್ತರಿಸಿ, ಬಿಡಿಸಿ ಹೇಳಿದ್ದಾರೆ.

ನಾನೀಗ ರಮೇಶ ಅವರೊಂದಿಗೆ ಕೂಡಿಕೊಂಡು ಕೊಂಚ ಗಟ್ಟಿಯಾಗಿ ಹೇಳಬೇಕಾದ ಮಾತೊಂದಿದೆ. ಅದೇನೆಂದರೆ ಕೂಸು ಅಳದಿದ್ದರೆ ಯಾವ ತಾಯಿಯೂ ಹಾಲೂಡಿಸುವುದಿಲ್ಲವಷ್ಟೆ? ಹಾಗೆ ಯಾವುದೇ ಭಾಷಾ ಸಮುದಾಯವು ಸಹ ಕೂಡುರಾಷ್ಟ್ರದ ರಾಜ್ಯಾಂಗಬದ್ಧ ತನ್ನ ಹಕ್ಕನ್ನು ಚಲಾಯಿಸದಿದ್ದರೆ, ಪಾರ್ಲಿಮೆಂಟಿನಲ್ಲಿ ನಿಂತು ಗಟ್ಟಿಯಾಗಿ ಮಾತನಾಡಿ ಪ್ರಶ್ನಿಸದಿದ್ದರೆ ಇದು ಪ್ರಜಾತಂತ್ರ ಅನ್ನಿಸಿಕೊಳ್ಳುವುದೆ? ಇಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರಕವಿ ಕುವೆಂಪು ಕಳೆದ ಶತಮಾನದ ಮೂರನೆ ದಶಕದಿಂದ ಬಿಟ್ಟೂಬಿಡದಂತೆ ಒಂದೇಸಮನೆ ’ಕನ್ನಡ ಅಸ್ಮಿತೆ’ಯ ಬಗ್ಗೆ ಕವನ ಬರೆದಿದ್ದಾರೆ; ಭಾಷಣ ಮಾಡಿದ್ದಾರೆ, ಸಂದರ್ಶನದಲ್ಲಿ ಹೇಳಿದ್ದಾರೆ. ಕುವೆಂಪು ಅವರ ವೈಜ್ಞಾನಿಕ ದೃಷ್ಟಿ, ವೈಚಾರಿಕ ತಿಳಿವು, ಒಕ್ಕೂಟರಾಷ್ಟ್ರದ ನಿಲುವು ಅಖಂಡ ಎಂಬುದನ್ನು ಹೆಚ್ಚು ವಿಸ್ತರಿಸಬೇಕಾಗಿಲ್ಲ. 1928ರಲ್ಲಿ ಅವರು ಇನ್ನೂ 24ರ ಹರೆಯದ ಕಾಲೇಜು ವಿದ್ಯಾರ್ಥಿ. ಕನ್ನಡದ ಅಸ್ಮಿತೆಯನ್ನು ಕುರಿತು ಆಗಲೇ ಚಿಂತನಮಂಥನ ನಡೆಸಿದ್ದಾರೆ. ಆಗ ಬರೆದದ್ದು ’ಭಾರತ ಜನನಿಗೆ’ ಎಂಬ ಕವನ. ಅಲ್ಲಿಂದ ಮೊದಲುಗೊಂಡು ’ಜಯಹೇ ಕರ್ನಾಟಕ ಮಾತೆ (1928), ಸಾಯುತಿದೆ ನಿಮ್ಮ ನುಡಿ ಓ ಕನ್ನಡದ ಕಂದರಿರ (1935), ಕಂದ ಕನ್ನಡನಿವನು ಕೈಬಿಡದಿರಮ್ಮಾ (1938), ಮೆಟ್ಟುವ ನೆಲ ಅದು ಕರ್ನಾಟಕ (1949), ಕರ್ನಾಟಕ ಮಂತ್ರದೀಕ್ಷೆ (1949), ಕನ್ನಡ ಡಿಂಡಿಮ(1960), ಸಾಕು ಈ ಬಲಾತ್ಕಾರ(1963), ಬಲಾತ್ಕಾರದ ಭಾಷಾ ತ್ರಿಶೂಲ(1963)’ ಹೀಗೆ ಕುವೆಂಪು ಕನ್ನಡ ತಾಯಿಯ ಸೇವೆಯ ಮಾಡಲು ಜೀವಮಾನ ಪರ್ಯಂತ ಹಾತೊರೆದರು; ಬರೆದರು, ಮಾತಾಡಿ ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿದರು. ಸಂಸ್ಕೃತ, ಹಿಂದಿ, ಇಂಗ್ಲಿಷ್ ಯಜಮಾನ್ಯದ ’ಕೊಲ್ವಮುನ್ನ ಸೊಲ್ಲಡಗಿಸುವ ಹುನ್ನಾರ’ವನ್ನು ಕಂಡು ಮರುಗಿದರು;

ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ
ಹೊರನುಡಿಯ ಹೊರೆಯಿಂದ ಕುಸಿದು ಕುಗ್ಗಿ!
ರಾಜನುಡಿಯೆಂದೊಂದು, ರಾಷ್ಟ್ರನುಡಿಯೆಂದೊಂದು,
ದೇವನುಡಿಯೆಂದೊಂದು ಹತ್ತಿ ಜಗ್ಗಿ

ಎಂದು ಎಚ್ಚರಿಸಿದರು. ಆದರೆ ಇವತ್ತಿಗೂ ಕನ್ನಡಿಗರು ಎಚ್ಚರಗೊಳ್ಳಲಾಗಿಲ್ಲ. ಇಂಗ್ಲಿಷ್, ಹಿಂದಿ, ಸಂಸ್ಕೃತದ ಹೊರೆ ಕನ್ನಡದ ಮಕ್ಕಳಿಗೆ ತಪ್ಪಿಲ್ಲ. ’ಕರ್ನಾಟಕ ಎಂಬುದು ಬರಿಯ ಹೆಸರೆ ಮಣ್ಣಿಗೆ?’ ಎಂದು ಕೇಳಲಾಗಿಲ್ಲ! ಸ್ವಾತಂತ್ರ್ಯವೂ ಬಂತು; ಸ್ವರಾಜ್ಯವೂ ಆಯಿತು; ಭಾಷಾವಾರು ಪ್ರಾಂತ್ಯಗಳೂ ಉದಯವಾದವು; ’ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ ಎಂದು ಕವಿಗಳು, ಗಮಕಿಗಳು ಹಾಡಿ ದಣಿದರು. ಆದರೆ ಚೆಲುವ ಕನ್ನಡ ನಾಡು ಎಲ್ಲಿ? ಎಲ್ಲವೂ ಜಾತಿಯಲ್ಲಿ, ಸ್ವಜನಪಕ್ಷಪಾತದಲ್ಲಿ, ಭ್ರಷ್ಟಾಚಾರದಲ್ಲಿ, ಮಂತ್ರಿ ಮಹೋದಯರ ಕುರ್ಚಿ ಹರಾಜಿನಲ್ಲಿ, ಹೈಕಮಾಂಡ್ ಎದುರು ಡೊಗ್ಗು ಸಲಾಮು ಹೊಡೆಯುವಲ್ಲಿ ಕನ್ನಡ, ಕರ್ನಾಟಕ, ಕನ್ನಡಿಗರ ಅಸ್ಮಿತೆಯೇ ಮರೆತು ಹೋಗುತ್ತಿದೆ. ’ಮಾತು ಮರೆತ’ ಜನಾಂಗ ಬದುಕಿದ್ದರೂ ಸತ್ತಂತೆ ತಾನೆ? ’ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ’ ಎಂದು ಸತ್ತಂತಿರುವ ಕನ್ನಡಿಗರನ್ನು ಬಡಿದೆಬ್ಬಿಸುವ ದಾತಾರರೇ ಈಗ ಇಲ್ಲ. ನೆರೆಯ ತಮಿಳರು ನಾಡು-ನುಡಿಯ ’ಅಸ್ಮಿತೆ’ಗೆ ಕುಂದು ಬಂದಾಗಲೆಲ್ಲಾ ದಂಗೆಯೆದ್ದು ದ್ರಾವಿಡತನವನ್ನು ಮೆರೆದಿದ್ದಾರೆ. ಕನ್ನಡಿಗರರಿಗೆ ಆ ಭಾಷಾಭಿಮಾನವಾಗಲೀ, ಸ್ವಾಭಿಮಾನವಾಗಲೀ ಇಲ್ಲ. ಲಾಗಾಯ್ತಿನಿಂದ ಒಬ್ಬ ಮಂತ್ರಿಯನ್ನು ಕೈಬಿಡುವುದಕ್ಕೂ ಇನ್ನೊಬ್ಬರನ್ನು
ಸೇರಿಸಿಕೊಳ್ಳುವುದಕ್ಕೂ ಸಹ ಮುಖ್ಯಮಂತ್ರಿಯವರು ದೆಹಲಿ ದರ್ಬಾರ್‌ಗೆ ಹೋಗಿ ಹೈಕಮಾಂಡಿನ ಬಾಗಿಲು ಕಾಯುವ ಪರಿಸ್ಥಿತಿ ಉದ್ಭವಿಸಿದೆ. ಇದಕ್ಕೆಲ್ಲಾ ಕಾರಣ ಕರ್ನಾಟಕದ ಶಾಸಕರು, ಸಂಸದರು ಮತ್ತು ರಾಜ್ಯಸರ್ಕಾರದ ದೌರ್ಬಲ್ಯ. ಬಗ್ಗಿದಷ್ಟೂ ಉತ್ತರದವರ ಪಾರುಪತ್ಯ ಎದ್ದು ಕಾಣುತ್ತದೆ. ಹಾಗಾದರೆ ಏನು ಮಾಡಬೇಕು?

ಏನು ಮಾಡಬೇಕು ಎಂಬುದನ್ನು ಕುವೆಂಪು 1965ರಲ್ಲೇ ’ರಾಷ್ಟ್ರಕವಿ ಪ್ರಶಸ್ತಿ’ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಹೀಗೆ ಹೇಳಿದ್ದಾರೆ: “ಮಹನೀಯರೆ, ಕೊನೆಯದಾಗಿ ಅಧಿಕೃತ ಶಾಸನಕರ್ತರಾದ ನಿಮ್ಮಲ್ಲಿ ಅನಧಿಕೃತ ಶಾಸನಕರ್ತನಾದ ನನ್ನ ಒಂದು ಅಹವಾಲು; ಅದು ಇಂಗ್ಲಿಷ್ ಭಾಷೆಗೂ ಶಿಕ್ಷಣ ಮಾಧ್ಯಮಕ್ಕೂ ಸಂಬಂಧಪಟ್ಟಿದ್ದು. ವಿವರಕ್ಕಾಗಲಿ ವಾದಕ್ಕಾಗಲಿ ಜಿಜ್ಞಾಸೆಗಾಗಲಿ ನಾನೀಗ ಕೈ ಹಾಕುವುದಿಲ್ಲ. ಅದು ತತ್ಸಮಯ ಸಾಧ್ಯವು ಅಲ್ಲ; ಅದಕ್ಕಿಲ್ಲಿ ಕಾಲಾವಕಾಶವೂ ಇಲ್ಲ. ತಮ್ಮ ಗಮನವನ್ನು ಅತ್ತಕಡೆ ಎಳೆದು, ಅದು ತಮ್ಮ ಶೀಘ್ರ ಪರಿಶೀಲನೆಗೂ ಇತ್ಯರ್ಥಕ್ಕೂ ಒಳಗಾಗುವಂತೆ ಮಾಡುವುದೆ ನನ್ನ ಸದ್ಯ ಪ್ರಯತ್ನದ ಮುಖ್ಯ ಉದ್ದೇಶ. ಆ ವಿಚಾರವಾಗಿ ನಮ್ಮ ರಾಷ್ಟ್ರಪಿತನಾದಿಯಾಗಿ ಸಾವಿರಾರು ದೇಶಭಕ್ತರೂ ನೂರಾರು ಸ್ವದೇಶೀಯ ಮತ್ತು ವಿದೇಶೀಯ ವಿದ್ಯಾತಜ್ಞರೂ ಹೇಳಿದ್ದಾರೆ, ಮಾತನಾಡಿದ್ದಾರೆ, ಬರೆದಿದ್ದಾರೆ. ಹೊತ್ತಗೆಗಳನ್ನೆ ಪ್ರಕಟಿಸಿಯೂ ಇದ್ದಾರೆ. ಆದರೆ ನಮ್ಮ ದೇಶದ ಪ್ರಚ್ಛನ್ನ ಶತ್ರುಗಳಾದ ಸ್ವಾರ್ಥಸಾಧಕ ಪಟ್ಟಭದ್ರ ಹಿತಾಸಕ್ತ ಪ್ರತಿಗಾಮಿ ಶಕ್ತಿಗಳು, ಮಕ್ಕಳಿಗೆ ಹಾಲುಣಿಸುವ ನೆವದಿಂದ ಅವರನ್ನು ಕೊಲ್ಲುತ್ತಿದ್ದ ಭಾಗವತ ಪುರಾಣದ ಪೂತನಿಯಂತೆ, ಬಲಾತ್ಕಾರದ ಇಂಗ್ಲಿಷ್ ಭಾಷೆಯಿಂದಲೂ ಇಂಗ್ಲಿಷ್ ಮಾಧ್ಯಮದಿಂದಲೂ ವರ್ಷವರ್ಷವೂ ಪರೀಕ್ಷೆಯ ಜಿಲೊಟಿನ್ನಿಗೆ ಕೋಟ್ಯಾಂತರ ಬಾಲಕರ ಮತ್ತು ತರುಣರ ತಲೆಗಳನ್ನು ಬಲಿಕೊಡುತ್ತಿದ್ದಾರೆ. ಆ ನಷ್ಟದ ಪರಿಮಾಣವನ್ನು ಊಹಿಸಲೂ ಸಾಧ್ಯವಿಲ್ಲ. ಬಹುಶಃ ಸರಿಯಾಗಿ ಲೆಕ್ಕ ಹಾಕಿದರೆ, ನಾಲ್ಕಾರು ಪಂಚವಾರ್ಷಿಕ ಯೋಜನೆಗಳ ಮೊತ್ತವೆ ಆದರೂ ಆಗಬಹುದೇನೊ!”

“ಇಂಗ್ಲಿಷ್ ಭಾಷೆ ಬಲಾತ್ಕಾರದ ಸ್ಥಾನದಿಂದ ಐಚ್ಛಿಕ ಸ್ಥಾನಕ್ಕೆ ನಿಯಂತ್ರಣಗೊಳ್ಳದಿದ್ದರೆ, ಇಂಗ್ಲಿಷ್ ಶಿಕ್ಷಣ ಮಾಧ್ಯಮ ತೊಲಗಿ ಪ್ರಾದೇಶಿಕ ಭಾಷೆಗೆ ಆ ಸ್ಥಾನ ಲಭಿಸದಿದ್ದರೆ, ನಮ್ಮ ದೇಶ ಹತ್ತೇ ವರ್ಷಗಳಲ್ಲಿ ಸಾಧಿಸಬೇಕಾದುದನ್ನು ಇನ್ನೊಂದು ನೂರು ವರ್ಷಗಳಲ್ಲಿಯೂ ಸಾಧಿಸಲಾರದೆ ನಿತ್ಯ ರೋಗಿಯಂತಿರಬೇಕಾಗುತ್ತದೆ.”

ಇಂದಿಗೂ ಪರಿಸ್ಥಿತಿ ಕುವೆಂಪು ಅಂದು ಹೇಳಿದ ಹಾಗೇ ಇದೆ. ಬದಲಾಗಿರುವುದೇನೆಂದರೆ ಇಂಗ್ಲಿಷಿನ ಸ್ಥಾನಕ್ಕೆ ಹಿಂದಿಯನ್ನು ತರಲಾಗುತ್ತಿದೆ ಅಷ್ಟೇ! ಇದು ವಿದ್ಯಾರ್ಥಿಗಳ, ರೈತರ, ದಲಿತರ ಮಕ್ಕಳ ದನಿಯನ್ನು ಹತ್ತಿಕ್ಕುತ್ತದೆ. ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡುವುದಿಲ್ಲ! ಮುಖ್ಯ ನಮ್ಮ ಜನಪ್ರತಿನಿಧಿಗಳು ಹೈಕಮಾಂಡ್ ಹೇಳಿದ ಮಾತಿಗೆಲ್ಲಾ ’ಕೌಲೆ ಬಸವಣ್ಣನಂತೆ ತಲೆ ಹಾಕದೆ’ ಲೋಕಸಭೆಯಲ್ಲಿ ವಿಧಾನಸಭೆಯಲ್ಲಿ ಎದ್ದುನಿಂತು ಪ್ರಾದೇಶಿಕ ಭಾಷೆಗಳ ಪರವಾಗಿ ದನಿ ಎತ್ತಬೇಕು. ಬಂಗಾಳಿ, ತಮಿಳು ಮುಂತಾದ ಭಾಷೆಗಳಂತೆ ಕನ್ನಡದ ’ಅಸ್ಮಿತೆ’ಯನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು. ಇಲ್ಲವಾದರೆ ಕನ್ನಡ ಭಾಷೆಯೊಂದಿಗೆ ಕನ್ನಡ ಜನಾಂಗವೂ ಕಣ್ಮರೆಯಾಗುವ ಕಾಲ ದೂರವಿಲ್ಲ! ಈ ನಿಟ್ಟಿನಲ್ಲಿ ನಮ್ಮ ಮಾಧ್ಯಮಗಳ ಜವಾಬ್ದಾರಿ ಎಷ್ಟಿದೆಯೆಂಬುದನ್ನು ಒತ್ತಿ ಹೇಳಬೇಕಾಗಿಲ್ಲ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...