Homeಮುಖಪುಟಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

ಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

- Advertisement -
- Advertisement -

’ನ್ಯಾಯಪಥ’ 18 ಮೇ 2022ರ ಸಂಚಿಕೆಯಲ್ಲಿ ಡಾ. ರಮೇಶ.ವಿ ರವರ ’ರಾಷ್ಟ್ರೀಯತೆ ಮತ್ತು ಕನ್ನಡದ ಅಸ್ಮಿತೆ’ (ಇಲ್ಲಿ ಓದಿ) ಎಂಬ ಲೇಖನ ಭಾಷಾ ವಿಜ್ಞಾನದ ನೆಲೆಯಲ್ಲಿ ಒಳ್ಳೆಯ ಬರಹವಾಗಿದೆ. ಇಂಡೋ ಆರ್ಯನ್ ಭಾಷೆಗಳು ಹಾಗು ದ್ರಾವಿಡ ಭಾಷೆಗಳು ಕಾಲಕ್ರಮದಲ್ಲಿ ಹೇಗೆ ಕವಲೊಡೆದು ಬೆಳೆದವು ಎಂಬುದನ್ನು ಸುಪ್ರೀಂಕೋರ್ಟು ಒಳಗೊಂಡಂತೆ ಸದ್ಯ ನಮ್ಮ ರಾಷ್ಟ್ರದ ಹಿಂದಿ ರಾಜಕಾರಣ ದ್ರಾವಿಡ ಭಾಷೆಗಳ ಬುಡಕ್ಕೆ ಬಿಸಿನೀರು ಚೆಲ್ಲುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ, ಸೌಮ್ಯವಾಗಿ ವಿಸ್ತರಿಸಿ, ಬಿಡಿಸಿ ಹೇಳಿದ್ದಾರೆ.

ನಾನೀಗ ರಮೇಶ ಅವರೊಂದಿಗೆ ಕೂಡಿಕೊಂಡು ಕೊಂಚ ಗಟ್ಟಿಯಾಗಿ ಹೇಳಬೇಕಾದ ಮಾತೊಂದಿದೆ. ಅದೇನೆಂದರೆ ಕೂಸು ಅಳದಿದ್ದರೆ ಯಾವ ತಾಯಿಯೂ ಹಾಲೂಡಿಸುವುದಿಲ್ಲವಷ್ಟೆ? ಹಾಗೆ ಯಾವುದೇ ಭಾಷಾ ಸಮುದಾಯವು ಸಹ ಕೂಡುರಾಷ್ಟ್ರದ ರಾಜ್ಯಾಂಗಬದ್ಧ ತನ್ನ ಹಕ್ಕನ್ನು ಚಲಾಯಿಸದಿದ್ದರೆ, ಪಾರ್ಲಿಮೆಂಟಿನಲ್ಲಿ ನಿಂತು ಗಟ್ಟಿಯಾಗಿ ಮಾತನಾಡಿ ಪ್ರಶ್ನಿಸದಿದ್ದರೆ ಇದು ಪ್ರಜಾತಂತ್ರ ಅನ್ನಿಸಿಕೊಳ್ಳುವುದೆ? ಇಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರಕವಿ ಕುವೆಂಪು ಕಳೆದ ಶತಮಾನದ ಮೂರನೆ ದಶಕದಿಂದ ಬಿಟ್ಟೂಬಿಡದಂತೆ ಒಂದೇಸಮನೆ ’ಕನ್ನಡ ಅಸ್ಮಿತೆ’ಯ ಬಗ್ಗೆ ಕವನ ಬರೆದಿದ್ದಾರೆ; ಭಾಷಣ ಮಾಡಿದ್ದಾರೆ, ಸಂದರ್ಶನದಲ್ಲಿ ಹೇಳಿದ್ದಾರೆ. ಕುವೆಂಪು ಅವರ ವೈಜ್ಞಾನಿಕ ದೃಷ್ಟಿ, ವೈಚಾರಿಕ ತಿಳಿವು, ಒಕ್ಕೂಟರಾಷ್ಟ್ರದ ನಿಲುವು ಅಖಂಡ ಎಂಬುದನ್ನು ಹೆಚ್ಚು ವಿಸ್ತರಿಸಬೇಕಾಗಿಲ್ಲ. 1928ರಲ್ಲಿ ಅವರು ಇನ್ನೂ 24ರ ಹರೆಯದ ಕಾಲೇಜು ವಿದ್ಯಾರ್ಥಿ. ಕನ್ನಡದ ಅಸ್ಮಿತೆಯನ್ನು ಕುರಿತು ಆಗಲೇ ಚಿಂತನಮಂಥನ ನಡೆಸಿದ್ದಾರೆ. ಆಗ ಬರೆದದ್ದು ’ಭಾರತ ಜನನಿಗೆ’ ಎಂಬ ಕವನ. ಅಲ್ಲಿಂದ ಮೊದಲುಗೊಂಡು ’ಜಯಹೇ ಕರ್ನಾಟಕ ಮಾತೆ (1928), ಸಾಯುತಿದೆ ನಿಮ್ಮ ನುಡಿ ಓ ಕನ್ನಡದ ಕಂದರಿರ (1935), ಕಂದ ಕನ್ನಡನಿವನು ಕೈಬಿಡದಿರಮ್ಮಾ (1938), ಮೆಟ್ಟುವ ನೆಲ ಅದು ಕರ್ನಾಟಕ (1949), ಕರ್ನಾಟಕ ಮಂತ್ರದೀಕ್ಷೆ (1949), ಕನ್ನಡ ಡಿಂಡಿಮ(1960), ಸಾಕು ಈ ಬಲಾತ್ಕಾರ(1963), ಬಲಾತ್ಕಾರದ ಭಾಷಾ ತ್ರಿಶೂಲ(1963)’ ಹೀಗೆ ಕುವೆಂಪು ಕನ್ನಡ ತಾಯಿಯ ಸೇವೆಯ ಮಾಡಲು ಜೀವಮಾನ ಪರ್ಯಂತ ಹಾತೊರೆದರು; ಬರೆದರು, ಮಾತಾಡಿ ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿದರು. ಸಂಸ್ಕೃತ, ಹಿಂದಿ, ಇಂಗ್ಲಿಷ್ ಯಜಮಾನ್ಯದ ’ಕೊಲ್ವಮುನ್ನ ಸೊಲ್ಲಡಗಿಸುವ ಹುನ್ನಾರ’ವನ್ನು ಕಂಡು ಮರುಗಿದರು;

ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ
ಹೊರನುಡಿಯ ಹೊರೆಯಿಂದ ಕುಸಿದು ಕುಗ್ಗಿ!
ರಾಜನುಡಿಯೆಂದೊಂದು, ರಾಷ್ಟ್ರನುಡಿಯೆಂದೊಂದು,
ದೇವನುಡಿಯೆಂದೊಂದು ಹತ್ತಿ ಜಗ್ಗಿ

ಎಂದು ಎಚ್ಚರಿಸಿದರು. ಆದರೆ ಇವತ್ತಿಗೂ ಕನ್ನಡಿಗರು ಎಚ್ಚರಗೊಳ್ಳಲಾಗಿಲ್ಲ. ಇಂಗ್ಲಿಷ್, ಹಿಂದಿ, ಸಂಸ್ಕೃತದ ಹೊರೆ ಕನ್ನಡದ ಮಕ್ಕಳಿಗೆ ತಪ್ಪಿಲ್ಲ. ’ಕರ್ನಾಟಕ ಎಂಬುದು ಬರಿಯ ಹೆಸರೆ ಮಣ್ಣಿಗೆ?’ ಎಂದು ಕೇಳಲಾಗಿಲ್ಲ! ಸ್ವಾತಂತ್ರ್ಯವೂ ಬಂತು; ಸ್ವರಾಜ್ಯವೂ ಆಯಿತು; ಭಾಷಾವಾರು ಪ್ರಾಂತ್ಯಗಳೂ ಉದಯವಾದವು; ’ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ ಎಂದು ಕವಿಗಳು, ಗಮಕಿಗಳು ಹಾಡಿ ದಣಿದರು. ಆದರೆ ಚೆಲುವ ಕನ್ನಡ ನಾಡು ಎಲ್ಲಿ? ಎಲ್ಲವೂ ಜಾತಿಯಲ್ಲಿ, ಸ್ವಜನಪಕ್ಷಪಾತದಲ್ಲಿ, ಭ್ರಷ್ಟಾಚಾರದಲ್ಲಿ, ಮಂತ್ರಿ ಮಹೋದಯರ ಕುರ್ಚಿ ಹರಾಜಿನಲ್ಲಿ, ಹೈಕಮಾಂಡ್ ಎದುರು ಡೊಗ್ಗು ಸಲಾಮು ಹೊಡೆಯುವಲ್ಲಿ ಕನ್ನಡ, ಕರ್ನಾಟಕ, ಕನ್ನಡಿಗರ ಅಸ್ಮಿತೆಯೇ ಮರೆತು ಹೋಗುತ್ತಿದೆ. ’ಮಾತು ಮರೆತ’ ಜನಾಂಗ ಬದುಕಿದ್ದರೂ ಸತ್ತಂತೆ ತಾನೆ? ’ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ’ ಎಂದು ಸತ್ತಂತಿರುವ ಕನ್ನಡಿಗರನ್ನು ಬಡಿದೆಬ್ಬಿಸುವ ದಾತಾರರೇ ಈಗ ಇಲ್ಲ. ನೆರೆಯ ತಮಿಳರು ನಾಡು-ನುಡಿಯ ’ಅಸ್ಮಿತೆ’ಗೆ ಕುಂದು ಬಂದಾಗಲೆಲ್ಲಾ ದಂಗೆಯೆದ್ದು ದ್ರಾವಿಡತನವನ್ನು ಮೆರೆದಿದ್ದಾರೆ. ಕನ್ನಡಿಗರರಿಗೆ ಆ ಭಾಷಾಭಿಮಾನವಾಗಲೀ, ಸ್ವಾಭಿಮಾನವಾಗಲೀ ಇಲ್ಲ. ಲಾಗಾಯ್ತಿನಿಂದ ಒಬ್ಬ ಮಂತ್ರಿಯನ್ನು ಕೈಬಿಡುವುದಕ್ಕೂ ಇನ್ನೊಬ್ಬರನ್ನು
ಸೇರಿಸಿಕೊಳ್ಳುವುದಕ್ಕೂ ಸಹ ಮುಖ್ಯಮಂತ್ರಿಯವರು ದೆಹಲಿ ದರ್ಬಾರ್‌ಗೆ ಹೋಗಿ ಹೈಕಮಾಂಡಿನ ಬಾಗಿಲು ಕಾಯುವ ಪರಿಸ್ಥಿತಿ ಉದ್ಭವಿಸಿದೆ. ಇದಕ್ಕೆಲ್ಲಾ ಕಾರಣ ಕರ್ನಾಟಕದ ಶಾಸಕರು, ಸಂಸದರು ಮತ್ತು ರಾಜ್ಯಸರ್ಕಾರದ ದೌರ್ಬಲ್ಯ. ಬಗ್ಗಿದಷ್ಟೂ ಉತ್ತರದವರ ಪಾರುಪತ್ಯ ಎದ್ದು ಕಾಣುತ್ತದೆ. ಹಾಗಾದರೆ ಏನು ಮಾಡಬೇಕು?

ಏನು ಮಾಡಬೇಕು ಎಂಬುದನ್ನು ಕುವೆಂಪು 1965ರಲ್ಲೇ ’ರಾಷ್ಟ್ರಕವಿ ಪ್ರಶಸ್ತಿ’ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಹೀಗೆ ಹೇಳಿದ್ದಾರೆ: “ಮಹನೀಯರೆ, ಕೊನೆಯದಾಗಿ ಅಧಿಕೃತ ಶಾಸನಕರ್ತರಾದ ನಿಮ್ಮಲ್ಲಿ ಅನಧಿಕೃತ ಶಾಸನಕರ್ತನಾದ ನನ್ನ ಒಂದು ಅಹವಾಲು; ಅದು ಇಂಗ್ಲಿಷ್ ಭಾಷೆಗೂ ಶಿಕ್ಷಣ ಮಾಧ್ಯಮಕ್ಕೂ ಸಂಬಂಧಪಟ್ಟಿದ್ದು. ವಿವರಕ್ಕಾಗಲಿ ವಾದಕ್ಕಾಗಲಿ ಜಿಜ್ಞಾಸೆಗಾಗಲಿ ನಾನೀಗ ಕೈ ಹಾಕುವುದಿಲ್ಲ. ಅದು ತತ್ಸಮಯ ಸಾಧ್ಯವು ಅಲ್ಲ; ಅದಕ್ಕಿಲ್ಲಿ ಕಾಲಾವಕಾಶವೂ ಇಲ್ಲ. ತಮ್ಮ ಗಮನವನ್ನು ಅತ್ತಕಡೆ ಎಳೆದು, ಅದು ತಮ್ಮ ಶೀಘ್ರ ಪರಿಶೀಲನೆಗೂ ಇತ್ಯರ್ಥಕ್ಕೂ ಒಳಗಾಗುವಂತೆ ಮಾಡುವುದೆ ನನ್ನ ಸದ್ಯ ಪ್ರಯತ್ನದ ಮುಖ್ಯ ಉದ್ದೇಶ. ಆ ವಿಚಾರವಾಗಿ ನಮ್ಮ ರಾಷ್ಟ್ರಪಿತನಾದಿಯಾಗಿ ಸಾವಿರಾರು ದೇಶಭಕ್ತರೂ ನೂರಾರು ಸ್ವದೇಶೀಯ ಮತ್ತು ವಿದೇಶೀಯ ವಿದ್ಯಾತಜ್ಞರೂ ಹೇಳಿದ್ದಾರೆ, ಮಾತನಾಡಿದ್ದಾರೆ, ಬರೆದಿದ್ದಾರೆ. ಹೊತ್ತಗೆಗಳನ್ನೆ ಪ್ರಕಟಿಸಿಯೂ ಇದ್ದಾರೆ. ಆದರೆ ನಮ್ಮ ದೇಶದ ಪ್ರಚ್ಛನ್ನ ಶತ್ರುಗಳಾದ ಸ್ವಾರ್ಥಸಾಧಕ ಪಟ್ಟಭದ್ರ ಹಿತಾಸಕ್ತ ಪ್ರತಿಗಾಮಿ ಶಕ್ತಿಗಳು, ಮಕ್ಕಳಿಗೆ ಹಾಲುಣಿಸುವ ನೆವದಿಂದ ಅವರನ್ನು ಕೊಲ್ಲುತ್ತಿದ್ದ ಭಾಗವತ ಪುರಾಣದ ಪೂತನಿಯಂತೆ, ಬಲಾತ್ಕಾರದ ಇಂಗ್ಲಿಷ್ ಭಾಷೆಯಿಂದಲೂ ಇಂಗ್ಲಿಷ್ ಮಾಧ್ಯಮದಿಂದಲೂ ವರ್ಷವರ್ಷವೂ ಪರೀಕ್ಷೆಯ ಜಿಲೊಟಿನ್ನಿಗೆ ಕೋಟ್ಯಾಂತರ ಬಾಲಕರ ಮತ್ತು ತರುಣರ ತಲೆಗಳನ್ನು ಬಲಿಕೊಡುತ್ತಿದ್ದಾರೆ. ಆ ನಷ್ಟದ ಪರಿಮಾಣವನ್ನು ಊಹಿಸಲೂ ಸಾಧ್ಯವಿಲ್ಲ. ಬಹುಶಃ ಸರಿಯಾಗಿ ಲೆಕ್ಕ ಹಾಕಿದರೆ, ನಾಲ್ಕಾರು ಪಂಚವಾರ್ಷಿಕ ಯೋಜನೆಗಳ ಮೊತ್ತವೆ ಆದರೂ ಆಗಬಹುದೇನೊ!”

“ಇಂಗ್ಲಿಷ್ ಭಾಷೆ ಬಲಾತ್ಕಾರದ ಸ್ಥಾನದಿಂದ ಐಚ್ಛಿಕ ಸ್ಥಾನಕ್ಕೆ ನಿಯಂತ್ರಣಗೊಳ್ಳದಿದ್ದರೆ, ಇಂಗ್ಲಿಷ್ ಶಿಕ್ಷಣ ಮಾಧ್ಯಮ ತೊಲಗಿ ಪ್ರಾದೇಶಿಕ ಭಾಷೆಗೆ ಆ ಸ್ಥಾನ ಲಭಿಸದಿದ್ದರೆ, ನಮ್ಮ ದೇಶ ಹತ್ತೇ ವರ್ಷಗಳಲ್ಲಿ ಸಾಧಿಸಬೇಕಾದುದನ್ನು ಇನ್ನೊಂದು ನೂರು ವರ್ಷಗಳಲ್ಲಿಯೂ ಸಾಧಿಸಲಾರದೆ ನಿತ್ಯ ರೋಗಿಯಂತಿರಬೇಕಾಗುತ್ತದೆ.”

ಇಂದಿಗೂ ಪರಿಸ್ಥಿತಿ ಕುವೆಂಪು ಅಂದು ಹೇಳಿದ ಹಾಗೇ ಇದೆ. ಬದಲಾಗಿರುವುದೇನೆಂದರೆ ಇಂಗ್ಲಿಷಿನ ಸ್ಥಾನಕ್ಕೆ ಹಿಂದಿಯನ್ನು ತರಲಾಗುತ್ತಿದೆ ಅಷ್ಟೇ! ಇದು ವಿದ್ಯಾರ್ಥಿಗಳ, ರೈತರ, ದಲಿತರ ಮಕ್ಕಳ ದನಿಯನ್ನು ಹತ್ತಿಕ್ಕುತ್ತದೆ. ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡುವುದಿಲ್ಲ! ಮುಖ್ಯ ನಮ್ಮ ಜನಪ್ರತಿನಿಧಿಗಳು ಹೈಕಮಾಂಡ್ ಹೇಳಿದ ಮಾತಿಗೆಲ್ಲಾ ’ಕೌಲೆ ಬಸವಣ್ಣನಂತೆ ತಲೆ ಹಾಕದೆ’ ಲೋಕಸಭೆಯಲ್ಲಿ ವಿಧಾನಸಭೆಯಲ್ಲಿ ಎದ್ದುನಿಂತು ಪ್ರಾದೇಶಿಕ ಭಾಷೆಗಳ ಪರವಾಗಿ ದನಿ ಎತ್ತಬೇಕು. ಬಂಗಾಳಿ, ತಮಿಳು ಮುಂತಾದ ಭಾಷೆಗಳಂತೆ ಕನ್ನಡದ ’ಅಸ್ಮಿತೆ’ಯನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು. ಇಲ್ಲವಾದರೆ ಕನ್ನಡ ಭಾಷೆಯೊಂದಿಗೆ ಕನ್ನಡ ಜನಾಂಗವೂ ಕಣ್ಮರೆಯಾಗುವ ಕಾಲ ದೂರವಿಲ್ಲ! ಈ ನಿಟ್ಟಿನಲ್ಲಿ ನಮ್ಮ ಮಾಧ್ಯಮಗಳ ಜವಾಬ್ದಾರಿ ಎಷ್ಟಿದೆಯೆಂಬುದನ್ನು ಒತ್ತಿ ಹೇಳಬೇಕಾಗಿಲ್ಲ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...