HomeUncategorizedಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಈಶಾನ್ಯ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ಕಲಹಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಕುಕಿ ಸಮುದಾಯದ ನಾಯಕರ ವೇದಿಕೆ (ಐಟಿಎಲ್‌ಎಫ್) ಆರೋಪಿಸಿದೆ.

ರಾಜ್ಯದಲ್ಲಿ ಸಂಘರ್ಷಕ್ಕೆ ಕಾರಣರಾಗಿದ್ದ ಎರಡು ಸಮುದಾಯಗಳಾದ ಮೈತೈ ಮತ್ತು ಕುಕಿಗಳು ದೀರ್ಘಕಾಲದಿಂದ ಒಟ್ಟಿಗೆ ವಾಸಿಸುತ್ತಿದ್ದರು. 2017ಕ್ಕಿಂತ ಮೊದಲು ಬೇರೆ ಸರಕಾರ ಇದ್ದಾಗ ರಾಜ್ಯದಲ್ಲಿ ಎರಡು ಸಮುದಾಯಗಳ ನಡುವೆ ಯಾಕೆ ಗಲಭೆ, ಹಿಂಸಾಚಾರ ನಡೆದಿಲ್ಲ ಎಂದು ಐಟಿಎಲ್‌ಎಫ್ ಪ್ರಶ್ನಿಸಿದೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನಾಗ್ಪುರದಲ್ಲಿ ಆರ್‌ಎಸ್‌ಎಸ್‌ನ ದಸರಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಮಣಿಪುರ ಸಂಘರ್ಷಕ್ಕೆ ಉತ್ತೇಜನ ನೀಡಿದವರು ಯಾರು? ಎಂದು ಪ್ರಶ್ನಿಸಿದ್ದರು.

ಮೈತೈಗಳು ಮುಖ್ಯವಾಗಿ ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದರೆ, ಕುಕಿಗಳು ಬೆಟ್ಟ ಪ್ರದೇಶಗಳ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಾರತೀಯ ಅರಣ್ಯ ಕಾಯಿದೆ 1927ರ ಅಡಿಯಲ್ಲಿ ಮೀಸಲು ಮತ್ತು ರಕ್ಷಿತ ಅರಣ್ಯಗಳಿಗೆ ಸಂಬಂಧಿಸಿದಂತೆ 1966 ರ ಸರ್ಕಾರದ ಅಧಿಸೂಚನೆಯನ್ನು 2023ರಲ್ಲಿ ಇದ್ದಕ್ಕಿದ್ದಂತೆ ಏಕೆ ಜಾರಿಗೆ ತರಲಾಯಿತು? ಎಂದು ಐಟಿಎಲ್‌ಎಫ್ ಪ್ರಶ್ನಿಸಿದೆ.

ಮಣಿಪುರದಲ್ಲಿಆದಿವಾಸಿಗಳನ್ನು ಮೀಸಲು ಅರಣ್ಯ ಪ್ರದೇಶಗಳಿಂದ ಹೊರ ಕಳುಹಿಸಲು ರಾಜ್ಯ ಸರ್ಕಾರವು ನಡೆಸುತ್ತಿರುವ ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯಿತು. ಕಳೆದ ಕೆಲವು ವರ್ಷಗಳಲ್ಲಿ ಮಣಿಪುರದಲ್ಲಿ ಸಂವಿಧಾನದ ಅಡಿಯಲ್ಲಿ ಬುಡಕಟ್ಟು ಜನಾಂಗದವರು ನೀಡಲ್ಪಟ್ಟ ಹಕ್ಕುಗಳ ಮೇಲೆ ಹೆಚ್ಚು ಸಂಘಟಿತ ದಾಳಿ ನಡೆದಿದೆ ಐಟಿಎಲ್ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಮೇ.3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ 180ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಮಹಿಳೆಯರ ಬೆತ್ತಲೆ ಮೆರವಣಿಗೆ, ನೂರಾರು ಮನೆಗಳ ಧ್ವಂಸ ಸೇರಿ ಭಯಾನಕ ಕೃತ್ಯಗಳೇ ನಡೆದು ಹೋಗಿದೆ.

ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟು ಮೈತೈ ಸಮುದಾಯದವರಿದ್ದಾರೆ ಮತ್ತು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದ ನಾಗಾಗಳು ಮತ್ತು ಕುಕಿಗಳು ಶೇಕಡಾ 40ರಷ್ಟಿದ್ದು, ಬೆಟ್ಟ ಪ್ರದೇಶದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಇದನ್ನು ಓದಿ; ಚೆನ್ನೈ: ರೈಲು ಹರಿದು ಕರ್ನಾಟಕದ ಮೂವರು ಬಾಲಕರು ಮೃತ್ಯು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...