HomeUncategorizedಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಈಶಾನ್ಯ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ಕಲಹಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಕುಕಿ ಸಮುದಾಯದ ನಾಯಕರ ವೇದಿಕೆ (ಐಟಿಎಲ್‌ಎಫ್) ಆರೋಪಿಸಿದೆ.

ರಾಜ್ಯದಲ್ಲಿ ಸಂಘರ್ಷಕ್ಕೆ ಕಾರಣರಾಗಿದ್ದ ಎರಡು ಸಮುದಾಯಗಳಾದ ಮೈತೈ ಮತ್ತು ಕುಕಿಗಳು ದೀರ್ಘಕಾಲದಿಂದ ಒಟ್ಟಿಗೆ ವಾಸಿಸುತ್ತಿದ್ದರು. 2017ಕ್ಕಿಂತ ಮೊದಲು ಬೇರೆ ಸರಕಾರ ಇದ್ದಾಗ ರಾಜ್ಯದಲ್ಲಿ ಎರಡು ಸಮುದಾಯಗಳ ನಡುವೆ ಯಾಕೆ ಗಲಭೆ, ಹಿಂಸಾಚಾರ ನಡೆದಿಲ್ಲ ಎಂದು ಐಟಿಎಲ್‌ಎಫ್ ಪ್ರಶ್ನಿಸಿದೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನಾಗ್ಪುರದಲ್ಲಿ ಆರ್‌ಎಸ್‌ಎಸ್‌ನ ದಸರಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಮಣಿಪುರ ಸಂಘರ್ಷಕ್ಕೆ ಉತ್ತೇಜನ ನೀಡಿದವರು ಯಾರು? ಎಂದು ಪ್ರಶ್ನಿಸಿದ್ದರು.

ಮೈತೈಗಳು ಮುಖ್ಯವಾಗಿ ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದರೆ, ಕುಕಿಗಳು ಬೆಟ್ಟ ಪ್ರದೇಶಗಳ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಾರತೀಯ ಅರಣ್ಯ ಕಾಯಿದೆ 1927ರ ಅಡಿಯಲ್ಲಿ ಮೀಸಲು ಮತ್ತು ರಕ್ಷಿತ ಅರಣ್ಯಗಳಿಗೆ ಸಂಬಂಧಿಸಿದಂತೆ 1966 ರ ಸರ್ಕಾರದ ಅಧಿಸೂಚನೆಯನ್ನು 2023ರಲ್ಲಿ ಇದ್ದಕ್ಕಿದ್ದಂತೆ ಏಕೆ ಜಾರಿಗೆ ತರಲಾಯಿತು? ಎಂದು ಐಟಿಎಲ್‌ಎಫ್ ಪ್ರಶ್ನಿಸಿದೆ.

ಮಣಿಪುರದಲ್ಲಿಆದಿವಾಸಿಗಳನ್ನು ಮೀಸಲು ಅರಣ್ಯ ಪ್ರದೇಶಗಳಿಂದ ಹೊರ ಕಳುಹಿಸಲು ರಾಜ್ಯ ಸರ್ಕಾರವು ನಡೆಸುತ್ತಿರುವ ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯಿತು. ಕಳೆದ ಕೆಲವು ವರ್ಷಗಳಲ್ಲಿ ಮಣಿಪುರದಲ್ಲಿ ಸಂವಿಧಾನದ ಅಡಿಯಲ್ಲಿ ಬುಡಕಟ್ಟು ಜನಾಂಗದವರು ನೀಡಲ್ಪಟ್ಟ ಹಕ್ಕುಗಳ ಮೇಲೆ ಹೆಚ್ಚು ಸಂಘಟಿತ ದಾಳಿ ನಡೆದಿದೆ ಐಟಿಎಲ್ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಮೇ.3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ 180ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಮಹಿಳೆಯರ ಬೆತ್ತಲೆ ಮೆರವಣಿಗೆ, ನೂರಾರು ಮನೆಗಳ ಧ್ವಂಸ ಸೇರಿ ಭಯಾನಕ ಕೃತ್ಯಗಳೇ ನಡೆದು ಹೋಗಿದೆ.

ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟು ಮೈತೈ ಸಮುದಾಯದವರಿದ್ದಾರೆ ಮತ್ತು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದ ನಾಗಾಗಳು ಮತ್ತು ಕುಕಿಗಳು ಶೇಕಡಾ 40ರಷ್ಟಿದ್ದು, ಬೆಟ್ಟ ಪ್ರದೇಶದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಇದನ್ನು ಓದಿ; ಚೆನ್ನೈ: ರೈಲು ಹರಿದು ಕರ್ನಾಟಕದ ಮೂವರು ಬಾಲಕರು ಮೃತ್ಯು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...