Homeಮುಖಪುಟರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ.

- Advertisement -
- Advertisement -

| ಜಿ.ಆರ್.ವಿದ್ಯಾರಣ್ಯ |

ಭಾರತೀಯ ರಿಜರ್ವ್ ಬ್ಯಾಂಕ್ ಇಂದು ತನ್ನ ಹಣಕಾಸು ನೀತಿಯ ಅಡಿಯಲ್ಲಿ  ಮರುಖರೀದಿ (ರಿಪೊ) ದರವನ್ನು 25  ಅಂಕದಷ್ಟು (ಅಂದರೆ ¼%) ಕಡಿತಗೊಳಿಸಿದೆ. ಇದರಿಂದ ನೆನೆಗುದಿಗೆ ಬಿದ್ದಿರುವ ದೇಶದ ಆರ್ಥಿಕ ಪ್ರಗತಿಯ ಬಂಡಿ ಮತ್ತೆ ಹೆದ್ದಾರಿ ಹಿಡಿಯಬಹುದೆಂಬ ಆಶಯ ವ್ಯಕ್ತಪಡಿಸಿದೆ. ಭಾರತೀಯ ರಿಜರ್ವ್ ಬ್ಯಾಂಕ್  ಈ ವರ್ಷ ಆಗಲೇ ರಿಪೊ ದರವನ್ನು ಎರಡು ಬಾರಿ (ಫಬ್ರುವರಿ ಮತ್ತು ಏಪ್ರಿಲ್ ತಿಂಗಳಲ್ಲಿ) ¼% ಕಡಿಮೆ ಮಾಡಿದೆ. ಕಡಿತದಿಂದ ಬ್ಯಾಂಕುಗಳಿಗೆ ಉಪಯೋಗಿಸಲು ಕಡಿಮೆ ದರದಲ್ಲಿ ಹಣವೇನೋ ಲಭಿಸುತ್ತದೆ. ಕಡಿತದಿಂದ ಸಾಮಾನ್ಯವಾಗಿ ಎಲ್ಲಾ ರೀತಿಯ ಸಾಲದ ಮೇಲಿನ ಬಡ್ಡಿದರವೂ ಕಡಿಮೆಯಾಗಬೇಕು. ಆದರೆ ಕೇವಲ ಕಾಲು ಪ್ರತಿಶತ ಈ ಬಾರಿಯ ಇಳಿತದ ಲಾಭವನ್ನು ಬ್ಯಾಂಕುಗಳು ತನ್ನ ಗ್ರಾಹಕರಿಗೆ ಹಸ್ತಾಂತರಿಸುವುದು ಸಂದೇಹ.

ಸುಮಾರು ಎಲ್ಲಾ ಬ್ಯಾಂಕುಗಳು ತಾವೇ ಸ್ವತಃ ಸಂಕಷ್ಟದಲ್ಲಿರುವಾಗ ತಮ್ಮ ಲಾಭಾಂಶ ಹೆಚ್ಚಿಸಿಕೊಳ್ಳುವತ್ತ ಅವರ ಗಮನ ಇರುತ್ತದೇ ವಿನಃ ಜನಸಾಮಾನ್ಯರ ಸಾಲಕ್ಕೆ ಬಡ್ಡಿದರ ಕಡಿಮೆ ಮಾಡುವುದು ಅವರ ಪ್ರಾಥಮಿಕತೆ ಆಗುವುದಿಲ್ಲ. ಹಣ ಸುಲಭವಾಗಿ ದೊರೆತ ಮಾತ್ರಕ್ಕೆ ಜನರು ಸಾಲ ಪಡೆದು ಹೊಸ ಉದ್ಯೋಗ ಪ್ರಾರಂಭಿಸುತ್ತಾರೆ ಅಥವಾ ಅವರ ಈಗಿರುವ ವಹಿವಾಟನ್ನು ವಿಸ್ತರಿಸಿಕೊಳ್ಳುತ್ತಾರೆ, ಅದರಿಂದ ದೇಶದ ಆರ್ಥಿಕ ಪ್ರಗತಿ ವೇಗ ಹಿಡಿಯುತ್ತದೆ, ಜನರಿಗೆ ಹೆಚ್ಚಿನ ಉದ್ಯೋಗವಾಕಾಶ ದೊರೆಯುತ್ತದೆ ಎಂದು ನಂಬಿದರೆ ಅದು ಶೇಖ್ ಮೊಹಮ್ಮದನ ಕನಸು.

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ. ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯತ್ತಿರುವ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸುತ್ತಿವೆ. ಭಾರತದ ಆರ್ಥಿಕತೆ ಔದ್ಯೋಗಿಕ ಕ್ಷೇತ್ರದ ಶಕ್ತಿಯಿಂದ ಮೇಲೇರುತ್ತಿಲ್ಲ, ಅದು ಮೇಲೇರುತ್ತಿರುವುದು ಕೇವಲ ಸೇವಾ ಕ್ಷೇತ್ರದ ಬಲದ ಮೇಲೆ. ಕೃಷಿ ವಲಯ 15% ಕೊಡುಗೆ ನೀಡಿದರೆ ಔದ್ಯೋಗಿಕ ಕ್ಷೇತ್ರದ ಕಾಣಿಕೆ 30% ಸಹ ಇಲ್ಲ.

ನಿರುದ್ಯೋಗ ಸಮಸ್ಯೆ ಸೇವಾ ಕ್ಷೇತ್ರಕ್ಕೆ ಬಲವಾದ ಅಡ್ಡಗಲ್ಲು. ಹಣ ಹೂಡಿಕೆ ಸ್ತರ ಸತತವಾಗಿ ಕಡಿಮೆಯಾಗುತ್ತಿದೆ. ಸರಕಾರದ ಖರ್ಚು ಹೆಚ್ಚುತ್ತಿದೆ. ಆಂತರಿಕ ವ್ಯಯ ಶಕ್ತಿ ಕಡಿಮೆಯಾಗುತ್ತಿದೆ. ಭಾರತಕ್ಕಿಂತ ಚೀನಾ ದೇಶದ ಜಿಡಿಪಿ ವೃದ್ಧಿ ದರ 2018-19ರಲ್ಲಿ ಸ್ವಲ್ಪ ಕಡಿಮೆ ಇದ್ದರೂ ಸಹ, ಅದರ ಗಾತ್ರ ಅಗಾಧವಾದದು. ಚೀನಾ ದೇಶ ಪ್ರತಿ ವರ್ಷ ಒಂದು ಆಸ್ಟ್ರೇಲಿಯಾದಷ್ಟು ಆರ್ಥಿಕ ಶಕ್ತಿಯನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಸಾಮರ್ಥ್ಯ ಇಟ್ಟುಕೊಂಡಿದೆ, ಆದರೆ ಕಳೆದ ವರ್ಷ ಅದು ಸೃಷ್ಟಿಸಿದ ಹೊಸ ಉದ್ಯೋಗವಕಾಶ ಕೇವಲ 1.2 ಕೋಟಿ. ಚೀನಾ ದೇಶದ ಕಾಲು ಭಾಗದಷ್ಟು ಶಕ್ತಿ ಇರುವ ಭಾರತ ಪ್ರತಿವರ್ಷ ಎರಡು ಕೋಟಿ ಹೊಸ ಉದ್ಯೋಗ ಎಲ್ಲಿಂದ ಸೃಷ್ಟಿಸಬಲ್ಲದೋ ಆ ದೇವರೇ ಬಲ್ಲ.

ಬ್ಯಾಂಕಿನಿಂದ ದೊಡ್ಡ ಮೊತ್ತದ ಸಾಲ ಪಡೆದ ಹಲವಾರು ದೊಡ್ಡ ಉದ್ಯೋಗಪತಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಸಣ್ಣ ಪುಟ್ಟ ಸಾಲ ಪಡೆದ ಬಡವರು ಯಾರಿಗೆ ಮತ್ತು ಎಷ್ಟರ ಮಟ್ಟಿಗೆ ಕೆಲಸ ಕೊಡಬಲ್ಲರೋ ತಿಳಿಯದು. ಈಗಾಗಲೇ ಸಾಲದ ಭಾರಕ್ಕೆ ಸಿಲುಕಿರುವ ಜನರು ಆದಷ್ಟು ಬೇಗ ಋಣಮುಕ್ತವಾಗುವದನ್ನು ಚಿಂತಿಸುತ್ತಾರೆಯೇ ವಿನಃ ಹೊಸ ಸಾಲಕ್ಕೆ ಬ್ಯಾಂಕಿನ ಮುಂದೆ ಮರುದಿನ ಸರದಿಯಲ್ಲಿ ನಿಲ್ಲುವುದಿಲ್ಲ.

ಜನರ ಬ್ಯಾಂಕ್ ಠೇವಣಿ ಹಣಕ್ಕೆ ದರ ಕಡಿಮೆಯಾಗಿ, ನಿತ್ಯೋಪಯೋಗಿ ವಸ್ತುಗಳ ಬೆಲೆ ಸತತವಾಗಿ ಮೇಲೇರುತ್ತಿದ್ದರೆ ಜನರು ಹಣ ಠೇವಣಿ ಇಟ್ಟು ಪ್ರಯೋಜನವಿಲ್ಲ. ಖರ್ಚು ಮಾಡೋಣ ಎಂದು ಮುಂದಾದರೆ ಹಣದ ಮೌಲ್ಯ ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಉಬ್ಬರ ಮೇಲೇರುವ ಭೀತಿಯೂ ಇರುತ್ತದೆ. ಒಟ್ಟಿನಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ಮಾಡುತ್ತಿರುವ ದರ ಕಡಿತ-ಏರಿಕೆ ಪ್ರಯೋಗಗಳು ಆರ್ಥಿಕ ಪ್ರಚೋದನೆ ನೀಡಲಿ, ದೇಶ ಮುಂದೆ ಸಾಗಲಿ ಎಂದು ಆಶಿಸೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...