Homeಮುಖಪುಟರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ.

- Advertisement -
- Advertisement -

| ಜಿ.ಆರ್.ವಿದ್ಯಾರಣ್ಯ |

ಭಾರತೀಯ ರಿಜರ್ವ್ ಬ್ಯಾಂಕ್ ಇಂದು ತನ್ನ ಹಣಕಾಸು ನೀತಿಯ ಅಡಿಯಲ್ಲಿ  ಮರುಖರೀದಿ (ರಿಪೊ) ದರವನ್ನು 25  ಅಂಕದಷ್ಟು (ಅಂದರೆ ¼%) ಕಡಿತಗೊಳಿಸಿದೆ. ಇದರಿಂದ ನೆನೆಗುದಿಗೆ ಬಿದ್ದಿರುವ ದೇಶದ ಆರ್ಥಿಕ ಪ್ರಗತಿಯ ಬಂಡಿ ಮತ್ತೆ ಹೆದ್ದಾರಿ ಹಿಡಿಯಬಹುದೆಂಬ ಆಶಯ ವ್ಯಕ್ತಪಡಿಸಿದೆ. ಭಾರತೀಯ ರಿಜರ್ವ್ ಬ್ಯಾಂಕ್  ಈ ವರ್ಷ ಆಗಲೇ ರಿಪೊ ದರವನ್ನು ಎರಡು ಬಾರಿ (ಫಬ್ರುವರಿ ಮತ್ತು ಏಪ್ರಿಲ್ ತಿಂಗಳಲ್ಲಿ) ¼% ಕಡಿಮೆ ಮಾಡಿದೆ. ಕಡಿತದಿಂದ ಬ್ಯಾಂಕುಗಳಿಗೆ ಉಪಯೋಗಿಸಲು ಕಡಿಮೆ ದರದಲ್ಲಿ ಹಣವೇನೋ ಲಭಿಸುತ್ತದೆ. ಕಡಿತದಿಂದ ಸಾಮಾನ್ಯವಾಗಿ ಎಲ್ಲಾ ರೀತಿಯ ಸಾಲದ ಮೇಲಿನ ಬಡ್ಡಿದರವೂ ಕಡಿಮೆಯಾಗಬೇಕು. ಆದರೆ ಕೇವಲ ಕಾಲು ಪ್ರತಿಶತ ಈ ಬಾರಿಯ ಇಳಿತದ ಲಾಭವನ್ನು ಬ್ಯಾಂಕುಗಳು ತನ್ನ ಗ್ರಾಹಕರಿಗೆ ಹಸ್ತಾಂತರಿಸುವುದು ಸಂದೇಹ.

ಸುಮಾರು ಎಲ್ಲಾ ಬ್ಯಾಂಕುಗಳು ತಾವೇ ಸ್ವತಃ ಸಂಕಷ್ಟದಲ್ಲಿರುವಾಗ ತಮ್ಮ ಲಾಭಾಂಶ ಹೆಚ್ಚಿಸಿಕೊಳ್ಳುವತ್ತ ಅವರ ಗಮನ ಇರುತ್ತದೇ ವಿನಃ ಜನಸಾಮಾನ್ಯರ ಸಾಲಕ್ಕೆ ಬಡ್ಡಿದರ ಕಡಿಮೆ ಮಾಡುವುದು ಅವರ ಪ್ರಾಥಮಿಕತೆ ಆಗುವುದಿಲ್ಲ. ಹಣ ಸುಲಭವಾಗಿ ದೊರೆತ ಮಾತ್ರಕ್ಕೆ ಜನರು ಸಾಲ ಪಡೆದು ಹೊಸ ಉದ್ಯೋಗ ಪ್ರಾರಂಭಿಸುತ್ತಾರೆ ಅಥವಾ ಅವರ ಈಗಿರುವ ವಹಿವಾಟನ್ನು ವಿಸ್ತರಿಸಿಕೊಳ್ಳುತ್ತಾರೆ, ಅದರಿಂದ ದೇಶದ ಆರ್ಥಿಕ ಪ್ರಗತಿ ವೇಗ ಹಿಡಿಯುತ್ತದೆ, ಜನರಿಗೆ ಹೆಚ್ಚಿನ ಉದ್ಯೋಗವಾಕಾಶ ದೊರೆಯುತ್ತದೆ ಎಂದು ನಂಬಿದರೆ ಅದು ಶೇಖ್ ಮೊಹಮ್ಮದನ ಕನಸು.

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ. ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯತ್ತಿರುವ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸುತ್ತಿವೆ. ಭಾರತದ ಆರ್ಥಿಕತೆ ಔದ್ಯೋಗಿಕ ಕ್ಷೇತ್ರದ ಶಕ್ತಿಯಿಂದ ಮೇಲೇರುತ್ತಿಲ್ಲ, ಅದು ಮೇಲೇರುತ್ತಿರುವುದು ಕೇವಲ ಸೇವಾ ಕ್ಷೇತ್ರದ ಬಲದ ಮೇಲೆ. ಕೃಷಿ ವಲಯ 15% ಕೊಡುಗೆ ನೀಡಿದರೆ ಔದ್ಯೋಗಿಕ ಕ್ಷೇತ್ರದ ಕಾಣಿಕೆ 30% ಸಹ ಇಲ್ಲ.

ನಿರುದ್ಯೋಗ ಸಮಸ್ಯೆ ಸೇವಾ ಕ್ಷೇತ್ರಕ್ಕೆ ಬಲವಾದ ಅಡ್ಡಗಲ್ಲು. ಹಣ ಹೂಡಿಕೆ ಸ್ತರ ಸತತವಾಗಿ ಕಡಿಮೆಯಾಗುತ್ತಿದೆ. ಸರಕಾರದ ಖರ್ಚು ಹೆಚ್ಚುತ್ತಿದೆ. ಆಂತರಿಕ ವ್ಯಯ ಶಕ್ತಿ ಕಡಿಮೆಯಾಗುತ್ತಿದೆ. ಭಾರತಕ್ಕಿಂತ ಚೀನಾ ದೇಶದ ಜಿಡಿಪಿ ವೃದ್ಧಿ ದರ 2018-19ರಲ್ಲಿ ಸ್ವಲ್ಪ ಕಡಿಮೆ ಇದ್ದರೂ ಸಹ, ಅದರ ಗಾತ್ರ ಅಗಾಧವಾದದು. ಚೀನಾ ದೇಶ ಪ್ರತಿ ವರ್ಷ ಒಂದು ಆಸ್ಟ್ರೇಲಿಯಾದಷ್ಟು ಆರ್ಥಿಕ ಶಕ್ತಿಯನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಸಾಮರ್ಥ್ಯ ಇಟ್ಟುಕೊಂಡಿದೆ, ಆದರೆ ಕಳೆದ ವರ್ಷ ಅದು ಸೃಷ್ಟಿಸಿದ ಹೊಸ ಉದ್ಯೋಗವಕಾಶ ಕೇವಲ 1.2 ಕೋಟಿ. ಚೀನಾ ದೇಶದ ಕಾಲು ಭಾಗದಷ್ಟು ಶಕ್ತಿ ಇರುವ ಭಾರತ ಪ್ರತಿವರ್ಷ ಎರಡು ಕೋಟಿ ಹೊಸ ಉದ್ಯೋಗ ಎಲ್ಲಿಂದ ಸೃಷ್ಟಿಸಬಲ್ಲದೋ ಆ ದೇವರೇ ಬಲ್ಲ.

ಬ್ಯಾಂಕಿನಿಂದ ದೊಡ್ಡ ಮೊತ್ತದ ಸಾಲ ಪಡೆದ ಹಲವಾರು ದೊಡ್ಡ ಉದ್ಯೋಗಪತಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಸಣ್ಣ ಪುಟ್ಟ ಸಾಲ ಪಡೆದ ಬಡವರು ಯಾರಿಗೆ ಮತ್ತು ಎಷ್ಟರ ಮಟ್ಟಿಗೆ ಕೆಲಸ ಕೊಡಬಲ್ಲರೋ ತಿಳಿಯದು. ಈಗಾಗಲೇ ಸಾಲದ ಭಾರಕ್ಕೆ ಸಿಲುಕಿರುವ ಜನರು ಆದಷ್ಟು ಬೇಗ ಋಣಮುಕ್ತವಾಗುವದನ್ನು ಚಿಂತಿಸುತ್ತಾರೆಯೇ ವಿನಃ ಹೊಸ ಸಾಲಕ್ಕೆ ಬ್ಯಾಂಕಿನ ಮುಂದೆ ಮರುದಿನ ಸರದಿಯಲ್ಲಿ ನಿಲ್ಲುವುದಿಲ್ಲ.

ಜನರ ಬ್ಯಾಂಕ್ ಠೇವಣಿ ಹಣಕ್ಕೆ ದರ ಕಡಿಮೆಯಾಗಿ, ನಿತ್ಯೋಪಯೋಗಿ ವಸ್ತುಗಳ ಬೆಲೆ ಸತತವಾಗಿ ಮೇಲೇರುತ್ತಿದ್ದರೆ ಜನರು ಹಣ ಠೇವಣಿ ಇಟ್ಟು ಪ್ರಯೋಜನವಿಲ್ಲ. ಖರ್ಚು ಮಾಡೋಣ ಎಂದು ಮುಂದಾದರೆ ಹಣದ ಮೌಲ್ಯ ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಉಬ್ಬರ ಮೇಲೇರುವ ಭೀತಿಯೂ ಇರುತ್ತದೆ. ಒಟ್ಟಿನಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ಮಾಡುತ್ತಿರುವ ದರ ಕಡಿತ-ಏರಿಕೆ ಪ್ರಯೋಗಗಳು ಆರ್ಥಿಕ ಪ್ರಚೋದನೆ ನೀಡಲಿ, ದೇಶ ಮುಂದೆ ಸಾಗಲಿ ಎಂದು ಆಶಿಸೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...