Homeಮುಖಪುಟರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ.

- Advertisement -
- Advertisement -

| ಜಿ.ಆರ್.ವಿದ್ಯಾರಣ್ಯ |

ಭಾರತೀಯ ರಿಜರ್ವ್ ಬ್ಯಾಂಕ್ ಇಂದು ತನ್ನ ಹಣಕಾಸು ನೀತಿಯ ಅಡಿಯಲ್ಲಿ  ಮರುಖರೀದಿ (ರಿಪೊ) ದರವನ್ನು 25  ಅಂಕದಷ್ಟು (ಅಂದರೆ ¼%) ಕಡಿತಗೊಳಿಸಿದೆ. ಇದರಿಂದ ನೆನೆಗುದಿಗೆ ಬಿದ್ದಿರುವ ದೇಶದ ಆರ್ಥಿಕ ಪ್ರಗತಿಯ ಬಂಡಿ ಮತ್ತೆ ಹೆದ್ದಾರಿ ಹಿಡಿಯಬಹುದೆಂಬ ಆಶಯ ವ್ಯಕ್ತಪಡಿಸಿದೆ. ಭಾರತೀಯ ರಿಜರ್ವ್ ಬ್ಯಾಂಕ್  ಈ ವರ್ಷ ಆಗಲೇ ರಿಪೊ ದರವನ್ನು ಎರಡು ಬಾರಿ (ಫಬ್ರುವರಿ ಮತ್ತು ಏಪ್ರಿಲ್ ತಿಂಗಳಲ್ಲಿ) ¼% ಕಡಿಮೆ ಮಾಡಿದೆ. ಕಡಿತದಿಂದ ಬ್ಯಾಂಕುಗಳಿಗೆ ಉಪಯೋಗಿಸಲು ಕಡಿಮೆ ದರದಲ್ಲಿ ಹಣವೇನೋ ಲಭಿಸುತ್ತದೆ. ಕಡಿತದಿಂದ ಸಾಮಾನ್ಯವಾಗಿ ಎಲ್ಲಾ ರೀತಿಯ ಸಾಲದ ಮೇಲಿನ ಬಡ್ಡಿದರವೂ ಕಡಿಮೆಯಾಗಬೇಕು. ಆದರೆ ಕೇವಲ ಕಾಲು ಪ್ರತಿಶತ ಈ ಬಾರಿಯ ಇಳಿತದ ಲಾಭವನ್ನು ಬ್ಯಾಂಕುಗಳು ತನ್ನ ಗ್ರಾಹಕರಿಗೆ ಹಸ್ತಾಂತರಿಸುವುದು ಸಂದೇಹ.

ಸುಮಾರು ಎಲ್ಲಾ ಬ್ಯಾಂಕುಗಳು ತಾವೇ ಸ್ವತಃ ಸಂಕಷ್ಟದಲ್ಲಿರುವಾಗ ತಮ್ಮ ಲಾಭಾಂಶ ಹೆಚ್ಚಿಸಿಕೊಳ್ಳುವತ್ತ ಅವರ ಗಮನ ಇರುತ್ತದೇ ವಿನಃ ಜನಸಾಮಾನ್ಯರ ಸಾಲಕ್ಕೆ ಬಡ್ಡಿದರ ಕಡಿಮೆ ಮಾಡುವುದು ಅವರ ಪ್ರಾಥಮಿಕತೆ ಆಗುವುದಿಲ್ಲ. ಹಣ ಸುಲಭವಾಗಿ ದೊರೆತ ಮಾತ್ರಕ್ಕೆ ಜನರು ಸಾಲ ಪಡೆದು ಹೊಸ ಉದ್ಯೋಗ ಪ್ರಾರಂಭಿಸುತ್ತಾರೆ ಅಥವಾ ಅವರ ಈಗಿರುವ ವಹಿವಾಟನ್ನು ವಿಸ್ತರಿಸಿಕೊಳ್ಳುತ್ತಾರೆ, ಅದರಿಂದ ದೇಶದ ಆರ್ಥಿಕ ಪ್ರಗತಿ ವೇಗ ಹಿಡಿಯುತ್ತದೆ, ಜನರಿಗೆ ಹೆಚ್ಚಿನ ಉದ್ಯೋಗವಾಕಾಶ ದೊರೆಯುತ್ತದೆ ಎಂದು ನಂಬಿದರೆ ಅದು ಶೇಖ್ ಮೊಹಮ್ಮದನ ಕನಸು.

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ. ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯತ್ತಿರುವ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸುತ್ತಿವೆ. ಭಾರತದ ಆರ್ಥಿಕತೆ ಔದ್ಯೋಗಿಕ ಕ್ಷೇತ್ರದ ಶಕ್ತಿಯಿಂದ ಮೇಲೇರುತ್ತಿಲ್ಲ, ಅದು ಮೇಲೇರುತ್ತಿರುವುದು ಕೇವಲ ಸೇವಾ ಕ್ಷೇತ್ರದ ಬಲದ ಮೇಲೆ. ಕೃಷಿ ವಲಯ 15% ಕೊಡುಗೆ ನೀಡಿದರೆ ಔದ್ಯೋಗಿಕ ಕ್ಷೇತ್ರದ ಕಾಣಿಕೆ 30% ಸಹ ಇಲ್ಲ.

ನಿರುದ್ಯೋಗ ಸಮಸ್ಯೆ ಸೇವಾ ಕ್ಷೇತ್ರಕ್ಕೆ ಬಲವಾದ ಅಡ್ಡಗಲ್ಲು. ಹಣ ಹೂಡಿಕೆ ಸ್ತರ ಸತತವಾಗಿ ಕಡಿಮೆಯಾಗುತ್ತಿದೆ. ಸರಕಾರದ ಖರ್ಚು ಹೆಚ್ಚುತ್ತಿದೆ. ಆಂತರಿಕ ವ್ಯಯ ಶಕ್ತಿ ಕಡಿಮೆಯಾಗುತ್ತಿದೆ. ಭಾರತಕ್ಕಿಂತ ಚೀನಾ ದೇಶದ ಜಿಡಿಪಿ ವೃದ್ಧಿ ದರ 2018-19ರಲ್ಲಿ ಸ್ವಲ್ಪ ಕಡಿಮೆ ಇದ್ದರೂ ಸಹ, ಅದರ ಗಾತ್ರ ಅಗಾಧವಾದದು. ಚೀನಾ ದೇಶ ಪ್ರತಿ ವರ್ಷ ಒಂದು ಆಸ್ಟ್ರೇಲಿಯಾದಷ್ಟು ಆರ್ಥಿಕ ಶಕ್ತಿಯನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಸಾಮರ್ಥ್ಯ ಇಟ್ಟುಕೊಂಡಿದೆ, ಆದರೆ ಕಳೆದ ವರ್ಷ ಅದು ಸೃಷ್ಟಿಸಿದ ಹೊಸ ಉದ್ಯೋಗವಕಾಶ ಕೇವಲ 1.2 ಕೋಟಿ. ಚೀನಾ ದೇಶದ ಕಾಲು ಭಾಗದಷ್ಟು ಶಕ್ತಿ ಇರುವ ಭಾರತ ಪ್ರತಿವರ್ಷ ಎರಡು ಕೋಟಿ ಹೊಸ ಉದ್ಯೋಗ ಎಲ್ಲಿಂದ ಸೃಷ್ಟಿಸಬಲ್ಲದೋ ಆ ದೇವರೇ ಬಲ್ಲ.

ಬ್ಯಾಂಕಿನಿಂದ ದೊಡ್ಡ ಮೊತ್ತದ ಸಾಲ ಪಡೆದ ಹಲವಾರು ದೊಡ್ಡ ಉದ್ಯೋಗಪತಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಸಣ್ಣ ಪುಟ್ಟ ಸಾಲ ಪಡೆದ ಬಡವರು ಯಾರಿಗೆ ಮತ್ತು ಎಷ್ಟರ ಮಟ್ಟಿಗೆ ಕೆಲಸ ಕೊಡಬಲ್ಲರೋ ತಿಳಿಯದು. ಈಗಾಗಲೇ ಸಾಲದ ಭಾರಕ್ಕೆ ಸಿಲುಕಿರುವ ಜನರು ಆದಷ್ಟು ಬೇಗ ಋಣಮುಕ್ತವಾಗುವದನ್ನು ಚಿಂತಿಸುತ್ತಾರೆಯೇ ವಿನಃ ಹೊಸ ಸಾಲಕ್ಕೆ ಬ್ಯಾಂಕಿನ ಮುಂದೆ ಮರುದಿನ ಸರದಿಯಲ್ಲಿ ನಿಲ್ಲುವುದಿಲ್ಲ.

ಜನರ ಬ್ಯಾಂಕ್ ಠೇವಣಿ ಹಣಕ್ಕೆ ದರ ಕಡಿಮೆಯಾಗಿ, ನಿತ್ಯೋಪಯೋಗಿ ವಸ್ತುಗಳ ಬೆಲೆ ಸತತವಾಗಿ ಮೇಲೇರುತ್ತಿದ್ದರೆ ಜನರು ಹಣ ಠೇವಣಿ ಇಟ್ಟು ಪ್ರಯೋಜನವಿಲ್ಲ. ಖರ್ಚು ಮಾಡೋಣ ಎಂದು ಮುಂದಾದರೆ ಹಣದ ಮೌಲ್ಯ ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಉಬ್ಬರ ಮೇಲೇರುವ ಭೀತಿಯೂ ಇರುತ್ತದೆ. ಒಟ್ಟಿನಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ಮಾಡುತ್ತಿರುವ ದರ ಕಡಿತ-ಏರಿಕೆ ಪ್ರಯೋಗಗಳು ಆರ್ಥಿಕ ಪ್ರಚೋದನೆ ನೀಡಲಿ, ದೇಶ ಮುಂದೆ ಸಾಗಲಿ ಎಂದು ಆಶಿಸೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...