Homeಮುಖಪುಟರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ.

- Advertisement -
- Advertisement -

| ಜಿ.ಆರ್.ವಿದ್ಯಾರಣ್ಯ |

ಭಾರತೀಯ ರಿಜರ್ವ್ ಬ್ಯಾಂಕ್ ಇಂದು ತನ್ನ ಹಣಕಾಸು ನೀತಿಯ ಅಡಿಯಲ್ಲಿ  ಮರುಖರೀದಿ (ರಿಪೊ) ದರವನ್ನು 25  ಅಂಕದಷ್ಟು (ಅಂದರೆ ¼%) ಕಡಿತಗೊಳಿಸಿದೆ. ಇದರಿಂದ ನೆನೆಗುದಿಗೆ ಬಿದ್ದಿರುವ ದೇಶದ ಆರ್ಥಿಕ ಪ್ರಗತಿಯ ಬಂಡಿ ಮತ್ತೆ ಹೆದ್ದಾರಿ ಹಿಡಿಯಬಹುದೆಂಬ ಆಶಯ ವ್ಯಕ್ತಪಡಿಸಿದೆ. ಭಾರತೀಯ ರಿಜರ್ವ್ ಬ್ಯಾಂಕ್  ಈ ವರ್ಷ ಆಗಲೇ ರಿಪೊ ದರವನ್ನು ಎರಡು ಬಾರಿ (ಫಬ್ರುವರಿ ಮತ್ತು ಏಪ್ರಿಲ್ ತಿಂಗಳಲ್ಲಿ) ¼% ಕಡಿಮೆ ಮಾಡಿದೆ. ಕಡಿತದಿಂದ ಬ್ಯಾಂಕುಗಳಿಗೆ ಉಪಯೋಗಿಸಲು ಕಡಿಮೆ ದರದಲ್ಲಿ ಹಣವೇನೋ ಲಭಿಸುತ್ತದೆ. ಕಡಿತದಿಂದ ಸಾಮಾನ್ಯವಾಗಿ ಎಲ್ಲಾ ರೀತಿಯ ಸಾಲದ ಮೇಲಿನ ಬಡ್ಡಿದರವೂ ಕಡಿಮೆಯಾಗಬೇಕು. ಆದರೆ ಕೇವಲ ಕಾಲು ಪ್ರತಿಶತ ಈ ಬಾರಿಯ ಇಳಿತದ ಲಾಭವನ್ನು ಬ್ಯಾಂಕುಗಳು ತನ್ನ ಗ್ರಾಹಕರಿಗೆ ಹಸ್ತಾಂತರಿಸುವುದು ಸಂದೇಹ.

ಸುಮಾರು ಎಲ್ಲಾ ಬ್ಯಾಂಕುಗಳು ತಾವೇ ಸ್ವತಃ ಸಂಕಷ್ಟದಲ್ಲಿರುವಾಗ ತಮ್ಮ ಲಾಭಾಂಶ ಹೆಚ್ಚಿಸಿಕೊಳ್ಳುವತ್ತ ಅವರ ಗಮನ ಇರುತ್ತದೇ ವಿನಃ ಜನಸಾಮಾನ್ಯರ ಸಾಲಕ್ಕೆ ಬಡ್ಡಿದರ ಕಡಿಮೆ ಮಾಡುವುದು ಅವರ ಪ್ರಾಥಮಿಕತೆ ಆಗುವುದಿಲ್ಲ. ಹಣ ಸುಲಭವಾಗಿ ದೊರೆತ ಮಾತ್ರಕ್ಕೆ ಜನರು ಸಾಲ ಪಡೆದು ಹೊಸ ಉದ್ಯೋಗ ಪ್ರಾರಂಭಿಸುತ್ತಾರೆ ಅಥವಾ ಅವರ ಈಗಿರುವ ವಹಿವಾಟನ್ನು ವಿಸ್ತರಿಸಿಕೊಳ್ಳುತ್ತಾರೆ, ಅದರಿಂದ ದೇಶದ ಆರ್ಥಿಕ ಪ್ರಗತಿ ವೇಗ ಹಿಡಿಯುತ್ತದೆ, ಜನರಿಗೆ ಹೆಚ್ಚಿನ ಉದ್ಯೋಗವಾಕಾಶ ದೊರೆಯುತ್ತದೆ ಎಂದು ನಂಬಿದರೆ ಅದು ಶೇಖ್ ಮೊಹಮ್ಮದನ ಕನಸು.

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ. ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯತ್ತಿರುವ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸುತ್ತಿವೆ. ಭಾರತದ ಆರ್ಥಿಕತೆ ಔದ್ಯೋಗಿಕ ಕ್ಷೇತ್ರದ ಶಕ್ತಿಯಿಂದ ಮೇಲೇರುತ್ತಿಲ್ಲ, ಅದು ಮೇಲೇರುತ್ತಿರುವುದು ಕೇವಲ ಸೇವಾ ಕ್ಷೇತ್ರದ ಬಲದ ಮೇಲೆ. ಕೃಷಿ ವಲಯ 15% ಕೊಡುಗೆ ನೀಡಿದರೆ ಔದ್ಯೋಗಿಕ ಕ್ಷೇತ್ರದ ಕಾಣಿಕೆ 30% ಸಹ ಇಲ್ಲ.

ನಿರುದ್ಯೋಗ ಸಮಸ್ಯೆ ಸೇವಾ ಕ್ಷೇತ್ರಕ್ಕೆ ಬಲವಾದ ಅಡ್ಡಗಲ್ಲು. ಹಣ ಹೂಡಿಕೆ ಸ್ತರ ಸತತವಾಗಿ ಕಡಿಮೆಯಾಗುತ್ತಿದೆ. ಸರಕಾರದ ಖರ್ಚು ಹೆಚ್ಚುತ್ತಿದೆ. ಆಂತರಿಕ ವ್ಯಯ ಶಕ್ತಿ ಕಡಿಮೆಯಾಗುತ್ತಿದೆ. ಭಾರತಕ್ಕಿಂತ ಚೀನಾ ದೇಶದ ಜಿಡಿಪಿ ವೃದ್ಧಿ ದರ 2018-19ರಲ್ಲಿ ಸ್ವಲ್ಪ ಕಡಿಮೆ ಇದ್ದರೂ ಸಹ, ಅದರ ಗಾತ್ರ ಅಗಾಧವಾದದು. ಚೀನಾ ದೇಶ ಪ್ರತಿ ವರ್ಷ ಒಂದು ಆಸ್ಟ್ರೇಲಿಯಾದಷ್ಟು ಆರ್ಥಿಕ ಶಕ್ತಿಯನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಸಾಮರ್ಥ್ಯ ಇಟ್ಟುಕೊಂಡಿದೆ, ಆದರೆ ಕಳೆದ ವರ್ಷ ಅದು ಸೃಷ್ಟಿಸಿದ ಹೊಸ ಉದ್ಯೋಗವಕಾಶ ಕೇವಲ 1.2 ಕೋಟಿ. ಚೀನಾ ದೇಶದ ಕಾಲು ಭಾಗದಷ್ಟು ಶಕ್ತಿ ಇರುವ ಭಾರತ ಪ್ರತಿವರ್ಷ ಎರಡು ಕೋಟಿ ಹೊಸ ಉದ್ಯೋಗ ಎಲ್ಲಿಂದ ಸೃಷ್ಟಿಸಬಲ್ಲದೋ ಆ ದೇವರೇ ಬಲ್ಲ.

ಬ್ಯಾಂಕಿನಿಂದ ದೊಡ್ಡ ಮೊತ್ತದ ಸಾಲ ಪಡೆದ ಹಲವಾರು ದೊಡ್ಡ ಉದ್ಯೋಗಪತಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಸಣ್ಣ ಪುಟ್ಟ ಸಾಲ ಪಡೆದ ಬಡವರು ಯಾರಿಗೆ ಮತ್ತು ಎಷ್ಟರ ಮಟ್ಟಿಗೆ ಕೆಲಸ ಕೊಡಬಲ್ಲರೋ ತಿಳಿಯದು. ಈಗಾಗಲೇ ಸಾಲದ ಭಾರಕ್ಕೆ ಸಿಲುಕಿರುವ ಜನರು ಆದಷ್ಟು ಬೇಗ ಋಣಮುಕ್ತವಾಗುವದನ್ನು ಚಿಂತಿಸುತ್ತಾರೆಯೇ ವಿನಃ ಹೊಸ ಸಾಲಕ್ಕೆ ಬ್ಯಾಂಕಿನ ಮುಂದೆ ಮರುದಿನ ಸರದಿಯಲ್ಲಿ ನಿಲ್ಲುವುದಿಲ್ಲ.

ಜನರ ಬ್ಯಾಂಕ್ ಠೇವಣಿ ಹಣಕ್ಕೆ ದರ ಕಡಿಮೆಯಾಗಿ, ನಿತ್ಯೋಪಯೋಗಿ ವಸ್ತುಗಳ ಬೆಲೆ ಸತತವಾಗಿ ಮೇಲೇರುತ್ತಿದ್ದರೆ ಜನರು ಹಣ ಠೇವಣಿ ಇಟ್ಟು ಪ್ರಯೋಜನವಿಲ್ಲ. ಖರ್ಚು ಮಾಡೋಣ ಎಂದು ಮುಂದಾದರೆ ಹಣದ ಮೌಲ್ಯ ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಉಬ್ಬರ ಮೇಲೇರುವ ಭೀತಿಯೂ ಇರುತ್ತದೆ. ಒಟ್ಟಿನಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ಮಾಡುತ್ತಿರುವ ದರ ಕಡಿತ-ಏರಿಕೆ ಪ್ರಯೋಗಗಳು ಆರ್ಥಿಕ ಪ್ರಚೋದನೆ ನೀಡಲಿ, ದೇಶ ಮುಂದೆ ಸಾಗಲಿ ಎಂದು ಆಶಿಸೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...