Homeಮುಖಪುಟರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ.

- Advertisement -
- Advertisement -

| ಜಿ.ಆರ್.ವಿದ್ಯಾರಣ್ಯ |

ಭಾರತೀಯ ರಿಜರ್ವ್ ಬ್ಯಾಂಕ್ ಇಂದು ತನ್ನ ಹಣಕಾಸು ನೀತಿಯ ಅಡಿಯಲ್ಲಿ  ಮರುಖರೀದಿ (ರಿಪೊ) ದರವನ್ನು 25  ಅಂಕದಷ್ಟು (ಅಂದರೆ ¼%) ಕಡಿತಗೊಳಿಸಿದೆ. ಇದರಿಂದ ನೆನೆಗುದಿಗೆ ಬಿದ್ದಿರುವ ದೇಶದ ಆರ್ಥಿಕ ಪ್ರಗತಿಯ ಬಂಡಿ ಮತ್ತೆ ಹೆದ್ದಾರಿ ಹಿಡಿಯಬಹುದೆಂಬ ಆಶಯ ವ್ಯಕ್ತಪಡಿಸಿದೆ. ಭಾರತೀಯ ರಿಜರ್ವ್ ಬ್ಯಾಂಕ್  ಈ ವರ್ಷ ಆಗಲೇ ರಿಪೊ ದರವನ್ನು ಎರಡು ಬಾರಿ (ಫಬ್ರುವರಿ ಮತ್ತು ಏಪ್ರಿಲ್ ತಿಂಗಳಲ್ಲಿ) ¼% ಕಡಿಮೆ ಮಾಡಿದೆ. ಕಡಿತದಿಂದ ಬ್ಯಾಂಕುಗಳಿಗೆ ಉಪಯೋಗಿಸಲು ಕಡಿಮೆ ದರದಲ್ಲಿ ಹಣವೇನೋ ಲಭಿಸುತ್ತದೆ. ಕಡಿತದಿಂದ ಸಾಮಾನ್ಯವಾಗಿ ಎಲ್ಲಾ ರೀತಿಯ ಸಾಲದ ಮೇಲಿನ ಬಡ್ಡಿದರವೂ ಕಡಿಮೆಯಾಗಬೇಕು. ಆದರೆ ಕೇವಲ ಕಾಲು ಪ್ರತಿಶತ ಈ ಬಾರಿಯ ಇಳಿತದ ಲಾಭವನ್ನು ಬ್ಯಾಂಕುಗಳು ತನ್ನ ಗ್ರಾಹಕರಿಗೆ ಹಸ್ತಾಂತರಿಸುವುದು ಸಂದೇಹ.

ಸುಮಾರು ಎಲ್ಲಾ ಬ್ಯಾಂಕುಗಳು ತಾವೇ ಸ್ವತಃ ಸಂಕಷ್ಟದಲ್ಲಿರುವಾಗ ತಮ್ಮ ಲಾಭಾಂಶ ಹೆಚ್ಚಿಸಿಕೊಳ್ಳುವತ್ತ ಅವರ ಗಮನ ಇರುತ್ತದೇ ವಿನಃ ಜನಸಾಮಾನ್ಯರ ಸಾಲಕ್ಕೆ ಬಡ್ಡಿದರ ಕಡಿಮೆ ಮಾಡುವುದು ಅವರ ಪ್ರಾಥಮಿಕತೆ ಆಗುವುದಿಲ್ಲ. ಹಣ ಸುಲಭವಾಗಿ ದೊರೆತ ಮಾತ್ರಕ್ಕೆ ಜನರು ಸಾಲ ಪಡೆದು ಹೊಸ ಉದ್ಯೋಗ ಪ್ರಾರಂಭಿಸುತ್ತಾರೆ ಅಥವಾ ಅವರ ಈಗಿರುವ ವಹಿವಾಟನ್ನು ವಿಸ್ತರಿಸಿಕೊಳ್ಳುತ್ತಾರೆ, ಅದರಿಂದ ದೇಶದ ಆರ್ಥಿಕ ಪ್ರಗತಿ ವೇಗ ಹಿಡಿಯುತ್ತದೆ, ಜನರಿಗೆ ಹೆಚ್ಚಿನ ಉದ್ಯೋಗವಾಕಾಶ ದೊರೆಯುತ್ತದೆ ಎಂದು ನಂಬಿದರೆ ಅದು ಶೇಖ್ ಮೊಹಮ್ಮದನ ಕನಸು.

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ. ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯತ್ತಿರುವ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸುತ್ತಿವೆ. ಭಾರತದ ಆರ್ಥಿಕತೆ ಔದ್ಯೋಗಿಕ ಕ್ಷೇತ್ರದ ಶಕ್ತಿಯಿಂದ ಮೇಲೇರುತ್ತಿಲ್ಲ, ಅದು ಮೇಲೇರುತ್ತಿರುವುದು ಕೇವಲ ಸೇವಾ ಕ್ಷೇತ್ರದ ಬಲದ ಮೇಲೆ. ಕೃಷಿ ವಲಯ 15% ಕೊಡುಗೆ ನೀಡಿದರೆ ಔದ್ಯೋಗಿಕ ಕ್ಷೇತ್ರದ ಕಾಣಿಕೆ 30% ಸಹ ಇಲ್ಲ.

ನಿರುದ್ಯೋಗ ಸಮಸ್ಯೆ ಸೇವಾ ಕ್ಷೇತ್ರಕ್ಕೆ ಬಲವಾದ ಅಡ್ಡಗಲ್ಲು. ಹಣ ಹೂಡಿಕೆ ಸ್ತರ ಸತತವಾಗಿ ಕಡಿಮೆಯಾಗುತ್ತಿದೆ. ಸರಕಾರದ ಖರ್ಚು ಹೆಚ್ಚುತ್ತಿದೆ. ಆಂತರಿಕ ವ್ಯಯ ಶಕ್ತಿ ಕಡಿಮೆಯಾಗುತ್ತಿದೆ. ಭಾರತಕ್ಕಿಂತ ಚೀನಾ ದೇಶದ ಜಿಡಿಪಿ ವೃದ್ಧಿ ದರ 2018-19ರಲ್ಲಿ ಸ್ವಲ್ಪ ಕಡಿಮೆ ಇದ್ದರೂ ಸಹ, ಅದರ ಗಾತ್ರ ಅಗಾಧವಾದದು. ಚೀನಾ ದೇಶ ಪ್ರತಿ ವರ್ಷ ಒಂದು ಆಸ್ಟ್ರೇಲಿಯಾದಷ್ಟು ಆರ್ಥಿಕ ಶಕ್ತಿಯನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಸಾಮರ್ಥ್ಯ ಇಟ್ಟುಕೊಂಡಿದೆ, ಆದರೆ ಕಳೆದ ವರ್ಷ ಅದು ಸೃಷ್ಟಿಸಿದ ಹೊಸ ಉದ್ಯೋಗವಕಾಶ ಕೇವಲ 1.2 ಕೋಟಿ. ಚೀನಾ ದೇಶದ ಕಾಲು ಭಾಗದಷ್ಟು ಶಕ್ತಿ ಇರುವ ಭಾರತ ಪ್ರತಿವರ್ಷ ಎರಡು ಕೋಟಿ ಹೊಸ ಉದ್ಯೋಗ ಎಲ್ಲಿಂದ ಸೃಷ್ಟಿಸಬಲ್ಲದೋ ಆ ದೇವರೇ ಬಲ್ಲ.

ಬ್ಯಾಂಕಿನಿಂದ ದೊಡ್ಡ ಮೊತ್ತದ ಸಾಲ ಪಡೆದ ಹಲವಾರು ದೊಡ್ಡ ಉದ್ಯೋಗಪತಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಸಣ್ಣ ಪುಟ್ಟ ಸಾಲ ಪಡೆದ ಬಡವರು ಯಾರಿಗೆ ಮತ್ತು ಎಷ್ಟರ ಮಟ್ಟಿಗೆ ಕೆಲಸ ಕೊಡಬಲ್ಲರೋ ತಿಳಿಯದು. ಈಗಾಗಲೇ ಸಾಲದ ಭಾರಕ್ಕೆ ಸಿಲುಕಿರುವ ಜನರು ಆದಷ್ಟು ಬೇಗ ಋಣಮುಕ್ತವಾಗುವದನ್ನು ಚಿಂತಿಸುತ್ತಾರೆಯೇ ವಿನಃ ಹೊಸ ಸಾಲಕ್ಕೆ ಬ್ಯಾಂಕಿನ ಮುಂದೆ ಮರುದಿನ ಸರದಿಯಲ್ಲಿ ನಿಲ್ಲುವುದಿಲ್ಲ.

ಜನರ ಬ್ಯಾಂಕ್ ಠೇವಣಿ ಹಣಕ್ಕೆ ದರ ಕಡಿಮೆಯಾಗಿ, ನಿತ್ಯೋಪಯೋಗಿ ವಸ್ತುಗಳ ಬೆಲೆ ಸತತವಾಗಿ ಮೇಲೇರುತ್ತಿದ್ದರೆ ಜನರು ಹಣ ಠೇವಣಿ ಇಟ್ಟು ಪ್ರಯೋಜನವಿಲ್ಲ. ಖರ್ಚು ಮಾಡೋಣ ಎಂದು ಮುಂದಾದರೆ ಹಣದ ಮೌಲ್ಯ ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಉಬ್ಬರ ಮೇಲೇರುವ ಭೀತಿಯೂ ಇರುತ್ತದೆ. ಒಟ್ಟಿನಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ಮಾಡುತ್ತಿರುವ ದರ ಕಡಿತ-ಏರಿಕೆ ಪ್ರಯೋಗಗಳು ಆರ್ಥಿಕ ಪ್ರಚೋದನೆ ನೀಡಲಿ, ದೇಶ ಮುಂದೆ ಸಾಗಲಿ ಎಂದು ಆಶಿಸೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...