Homeಮುಖಪುಟರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ.

- Advertisement -
- Advertisement -

| ಜಿ.ಆರ್.ವಿದ್ಯಾರಣ್ಯ |

ಭಾರತೀಯ ರಿಜರ್ವ್ ಬ್ಯಾಂಕ್ ಇಂದು ತನ್ನ ಹಣಕಾಸು ನೀತಿಯ ಅಡಿಯಲ್ಲಿ  ಮರುಖರೀದಿ (ರಿಪೊ) ದರವನ್ನು 25  ಅಂಕದಷ್ಟು (ಅಂದರೆ ¼%) ಕಡಿತಗೊಳಿಸಿದೆ. ಇದರಿಂದ ನೆನೆಗುದಿಗೆ ಬಿದ್ದಿರುವ ದೇಶದ ಆರ್ಥಿಕ ಪ್ರಗತಿಯ ಬಂಡಿ ಮತ್ತೆ ಹೆದ್ದಾರಿ ಹಿಡಿಯಬಹುದೆಂಬ ಆಶಯ ವ್ಯಕ್ತಪಡಿಸಿದೆ. ಭಾರತೀಯ ರಿಜರ್ವ್ ಬ್ಯಾಂಕ್  ಈ ವರ್ಷ ಆಗಲೇ ರಿಪೊ ದರವನ್ನು ಎರಡು ಬಾರಿ (ಫಬ್ರುವರಿ ಮತ್ತು ಏಪ್ರಿಲ್ ತಿಂಗಳಲ್ಲಿ) ¼% ಕಡಿಮೆ ಮಾಡಿದೆ. ಕಡಿತದಿಂದ ಬ್ಯಾಂಕುಗಳಿಗೆ ಉಪಯೋಗಿಸಲು ಕಡಿಮೆ ದರದಲ್ಲಿ ಹಣವೇನೋ ಲಭಿಸುತ್ತದೆ. ಕಡಿತದಿಂದ ಸಾಮಾನ್ಯವಾಗಿ ಎಲ್ಲಾ ರೀತಿಯ ಸಾಲದ ಮೇಲಿನ ಬಡ್ಡಿದರವೂ ಕಡಿಮೆಯಾಗಬೇಕು. ಆದರೆ ಕೇವಲ ಕಾಲು ಪ್ರತಿಶತ ಈ ಬಾರಿಯ ಇಳಿತದ ಲಾಭವನ್ನು ಬ್ಯಾಂಕುಗಳು ತನ್ನ ಗ್ರಾಹಕರಿಗೆ ಹಸ್ತಾಂತರಿಸುವುದು ಸಂದೇಹ.

ಸುಮಾರು ಎಲ್ಲಾ ಬ್ಯಾಂಕುಗಳು ತಾವೇ ಸ್ವತಃ ಸಂಕಷ್ಟದಲ್ಲಿರುವಾಗ ತಮ್ಮ ಲಾಭಾಂಶ ಹೆಚ್ಚಿಸಿಕೊಳ್ಳುವತ್ತ ಅವರ ಗಮನ ಇರುತ್ತದೇ ವಿನಃ ಜನಸಾಮಾನ್ಯರ ಸಾಲಕ್ಕೆ ಬಡ್ಡಿದರ ಕಡಿಮೆ ಮಾಡುವುದು ಅವರ ಪ್ರಾಥಮಿಕತೆ ಆಗುವುದಿಲ್ಲ. ಹಣ ಸುಲಭವಾಗಿ ದೊರೆತ ಮಾತ್ರಕ್ಕೆ ಜನರು ಸಾಲ ಪಡೆದು ಹೊಸ ಉದ್ಯೋಗ ಪ್ರಾರಂಭಿಸುತ್ತಾರೆ ಅಥವಾ ಅವರ ಈಗಿರುವ ವಹಿವಾಟನ್ನು ವಿಸ್ತರಿಸಿಕೊಳ್ಳುತ್ತಾರೆ, ಅದರಿಂದ ದೇಶದ ಆರ್ಥಿಕ ಪ್ರಗತಿ ವೇಗ ಹಿಡಿಯುತ್ತದೆ, ಜನರಿಗೆ ಹೆಚ್ಚಿನ ಉದ್ಯೋಗವಾಕಾಶ ದೊರೆಯುತ್ತದೆ ಎಂದು ನಂಬಿದರೆ ಅದು ಶೇಖ್ ಮೊಹಮ್ಮದನ ಕನಸು.

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ. ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯತ್ತಿರುವ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸುತ್ತಿವೆ. ಭಾರತದ ಆರ್ಥಿಕತೆ ಔದ್ಯೋಗಿಕ ಕ್ಷೇತ್ರದ ಶಕ್ತಿಯಿಂದ ಮೇಲೇರುತ್ತಿಲ್ಲ, ಅದು ಮೇಲೇರುತ್ತಿರುವುದು ಕೇವಲ ಸೇವಾ ಕ್ಷೇತ್ರದ ಬಲದ ಮೇಲೆ. ಕೃಷಿ ವಲಯ 15% ಕೊಡುಗೆ ನೀಡಿದರೆ ಔದ್ಯೋಗಿಕ ಕ್ಷೇತ್ರದ ಕಾಣಿಕೆ 30% ಸಹ ಇಲ್ಲ.

ನಿರುದ್ಯೋಗ ಸಮಸ್ಯೆ ಸೇವಾ ಕ್ಷೇತ್ರಕ್ಕೆ ಬಲವಾದ ಅಡ್ಡಗಲ್ಲು. ಹಣ ಹೂಡಿಕೆ ಸ್ತರ ಸತತವಾಗಿ ಕಡಿಮೆಯಾಗುತ್ತಿದೆ. ಸರಕಾರದ ಖರ್ಚು ಹೆಚ್ಚುತ್ತಿದೆ. ಆಂತರಿಕ ವ್ಯಯ ಶಕ್ತಿ ಕಡಿಮೆಯಾಗುತ್ತಿದೆ. ಭಾರತಕ್ಕಿಂತ ಚೀನಾ ದೇಶದ ಜಿಡಿಪಿ ವೃದ್ಧಿ ದರ 2018-19ರಲ್ಲಿ ಸ್ವಲ್ಪ ಕಡಿಮೆ ಇದ್ದರೂ ಸಹ, ಅದರ ಗಾತ್ರ ಅಗಾಧವಾದದು. ಚೀನಾ ದೇಶ ಪ್ರತಿ ವರ್ಷ ಒಂದು ಆಸ್ಟ್ರೇಲಿಯಾದಷ್ಟು ಆರ್ಥಿಕ ಶಕ್ತಿಯನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಸಾಮರ್ಥ್ಯ ಇಟ್ಟುಕೊಂಡಿದೆ, ಆದರೆ ಕಳೆದ ವರ್ಷ ಅದು ಸೃಷ್ಟಿಸಿದ ಹೊಸ ಉದ್ಯೋಗವಕಾಶ ಕೇವಲ 1.2 ಕೋಟಿ. ಚೀನಾ ದೇಶದ ಕಾಲು ಭಾಗದಷ್ಟು ಶಕ್ತಿ ಇರುವ ಭಾರತ ಪ್ರತಿವರ್ಷ ಎರಡು ಕೋಟಿ ಹೊಸ ಉದ್ಯೋಗ ಎಲ್ಲಿಂದ ಸೃಷ್ಟಿಸಬಲ್ಲದೋ ಆ ದೇವರೇ ಬಲ್ಲ.

ಬ್ಯಾಂಕಿನಿಂದ ದೊಡ್ಡ ಮೊತ್ತದ ಸಾಲ ಪಡೆದ ಹಲವಾರು ದೊಡ್ಡ ಉದ್ಯೋಗಪತಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಸಣ್ಣ ಪುಟ್ಟ ಸಾಲ ಪಡೆದ ಬಡವರು ಯಾರಿಗೆ ಮತ್ತು ಎಷ್ಟರ ಮಟ್ಟಿಗೆ ಕೆಲಸ ಕೊಡಬಲ್ಲರೋ ತಿಳಿಯದು. ಈಗಾಗಲೇ ಸಾಲದ ಭಾರಕ್ಕೆ ಸಿಲುಕಿರುವ ಜನರು ಆದಷ್ಟು ಬೇಗ ಋಣಮುಕ್ತವಾಗುವದನ್ನು ಚಿಂತಿಸುತ್ತಾರೆಯೇ ವಿನಃ ಹೊಸ ಸಾಲಕ್ಕೆ ಬ್ಯಾಂಕಿನ ಮುಂದೆ ಮರುದಿನ ಸರದಿಯಲ್ಲಿ ನಿಲ್ಲುವುದಿಲ್ಲ.

ಜನರ ಬ್ಯಾಂಕ್ ಠೇವಣಿ ಹಣಕ್ಕೆ ದರ ಕಡಿಮೆಯಾಗಿ, ನಿತ್ಯೋಪಯೋಗಿ ವಸ್ತುಗಳ ಬೆಲೆ ಸತತವಾಗಿ ಮೇಲೇರುತ್ತಿದ್ದರೆ ಜನರು ಹಣ ಠೇವಣಿ ಇಟ್ಟು ಪ್ರಯೋಜನವಿಲ್ಲ. ಖರ್ಚು ಮಾಡೋಣ ಎಂದು ಮುಂದಾದರೆ ಹಣದ ಮೌಲ್ಯ ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಉಬ್ಬರ ಮೇಲೇರುವ ಭೀತಿಯೂ ಇರುತ್ತದೆ. ಒಟ್ಟಿನಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ಮಾಡುತ್ತಿರುವ ದರ ಕಡಿತ-ಏರಿಕೆ ಪ್ರಯೋಗಗಳು ಆರ್ಥಿಕ ಪ್ರಚೋದನೆ ನೀಡಲಿ, ದೇಶ ಮುಂದೆ ಸಾಗಲಿ ಎಂದು ಆಶಿಸೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...