Homeಮುಖಪುಟರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ ‘ದಲಿತ ಅಲ್ಲ’, ತನ್ನ “ನಿಜವಾದ ಜಾತಿಯ ಗುರುತು” ಪತ್ತೆಯಾಗುತ್ತದೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಊಹಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು. ವರದಿಯನ್ನು ಮೇ.3ರಂದು ತೆಲಂಗಾಣ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ಇದರ ಬೆನ್ನಲ್ಲಿ ಪ್ರಕರಣದ ಮರುತನಿಖೆಗೆ ಕೋರಿ ರೋಹಿತ್ ವೇಮುಲಾ ತಾಯಿ ರಾಧಿಕಾ ವೇಮುಲಾ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದಾರೆ. ವರದಿಯ ಬಗ್ಗೆ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ಈ ಮುಚ್ಚುವಿಕೆಯ ವರದಿಯು ಸುಳ್ಳಿನಿಂದ ಕೂಡಿದೆ ಮತ್ತು ಇದನ್ನು ಕಾನೂನುಬದ್ಧವಾಗಿ ಎದುರಿಸುತ್ತೇವೆ ಎಂದು ರೋಹಿತ್‌ ವೇಮುಲಾ ಕುಟುಂಬ ಹೇಳಿದೆ. ಇದಲ್ಲದೆ ಈ ಕುರಿತು ಹೆಚ್ಚಿನ ತನಿಖೆಗಾಗಿ ಕುಟುಂಬವು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದೆ.

ರೋಹಿತ್ ಅವರ ಸಹೋದರ ರಾಜಾ ವೇಮುಲ ಈ ಬಗ್ಗೆ ಮಾತನಾಡಿದ್ದು, ಇದು ಅತ್ಯಂತ ಆಘಾತಕಾರಿಯಾಗಿದೆ. ಅವರ ಸಂಶೋಧನೆಗಳಿಂದ ನಾವೆಲ್ಲಾ ಎದೆಗುಂದಿದ್ದೇವೆ, ಕುಟುಂಬದ ಎಸ್‌ಸಿ ಸ್ಥಾನಮಾನದ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸಬೇಕು ಮತ್ತು ಈ ವಿಷಯದ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೇವೆ. ಕೆಳ ನ್ಯಾಯಾಲಯದಲ್ಲಿ ಆಕ್ಷೇಪಣೆ ಅರ್ಜಿ ಸಲ್ಲಿಸಲು ತೆಲಂಗಾಣ ಹೈಕೋರ್ಟ್ ಅನುಮತಿ ನೀಡಿದೆ. ಮುಚ್ಚುವಿಕೆಯ ವರದಿಯು “ಸುಳ್ಳಿನಿಂದ ತುಂಬಿದೆ”, ಆತ್ಮಹತ್ಯೆಯ ಹಿಂದಿನ ಕಾರಣಗಳನ್ನು ತನಿಖೆ ಮಾಡುವ ಬದಲು, ಪೊಲೀಸರು ಅವರು ದಲಿತರಲ್ಲ ಎಂದು ಪ್ರಮಾಣೀಕರಿಸುವ ಮೂಲಕ ಪ್ರಕರಣವನ್ನು ಮುಕ್ತಾಯಗೊಳಿಸಿದೆ ಎಂದು ಹೇಳಿದ್ದಾರೆ.

2016ರಲ್ಲಿ ‘ಜಸ್ಟೀಸ್ ಫಾರ್ ವೇಮುಲಾ’ ಅಭಿಯಾನಕ್ಕೆ ಕಾಂಗ್ರೆಸ್ ಬೆಂಬಲ ನೀಡಿತ್ತು.  ಆತ್ಮಹತ್ಯೆಯ ನಂತರ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ನಮ್ಮ ಹೋರಾಟವನ್ನು ಬೆಂಬಲಿಸಿತು ಮತ್ತು ನ್ಯಾಯ ಸಿಗುವವರೆಗೂ ನಮ್ಮ ಬೆಂಬಲಕ್ಕೆ ನಿಲ್ಲುವುದಾಗಿ ಭರವಸೆ ನೀಡಿತು. ಆದರೆ ಅವರ ಪಕ್ಷವು ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ನಾಲ್ಕು ತಿಂಗಳೊಳಗೆ, ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ. ಇದು ಅತ್ಯಂತ ಆಘಾತಕಾರಿಯಾಗಿದೆ ಎಂದು ರಾಜಾ ಹೇಳಿದ್ದಾರೆ.

2016ರಲ್ಲಿ ಸೈಬರಾಬಾದ್ ಪೊಲೀಸರು ರೋಹಿತ್‌ ವೇಮುಲಾ ಜಾತಿ ವಿವರಗಳನ್ನು ಕೋರಿ ಗುಂಟೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ತರುವಾಯ, ಜಿಲ್ಲಾಧಿಕಾರಿಗಳು ಜಾತಿ ಸ್ಥಿತಿಯ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಸ್ಎಲ್ಎ) ಸಮಿತಿಗೆ ಸೂಚಿಸಿದ್ದರು. 2017 ರಲ್ಲಿ ಅವರ ವರದಿಯನ್ನು ಆಧರಿಸಿ, ಜಿಲ್ಲಾಧಿಕಾರಿಗಳು ತಮ್ಮ ವಾದವನ್ನು ಮಂಡಿಸಲು ಕುಟುಂಬಕ್ಕೆ ಸಮನ್ಸ್ ನೀಡಿದ್ದರು. ನಮ್ಮ ಕುಟುಂಬ ಸದಸ್ಯರು ಮತ್ತು ಸ್ಥಳೀಯರು ಸೇರಿದಂತೆ ಸುಮಾರು 15 ಜನರು ಅಂದಿನ ಕಲೆಕ್ಟರ್ ಮುಂದೆ ಹಾಜರಾಗಿದ್ದರು. ಅವರು ಎರಡು ದಿನಗಳ ಕಾಲ ಸುಮಾರು 15 ಗಂಟೆಗಳ ಕಾಲ ನಮ್ಮ ಎಲ್ಲಾ ಹೇಳಿಕೆಗಳನ್ನು ದಾಖಲಿಸಿದರು. ನಂತರ ವರದಿಯನ್ನು ಪರಿಶೀಲನಾ ಸಮಿತಿಗೆ ನೀಡಲಾಯಿತು. ಅಲ್ಲಿ ಅದು ಇನ್ನೂ ಬಾಕಿ ಉಳಿದಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಅಂತಿಮ ವರದಿ ನೀಡದೆ, ಅವರು ಎಸ್‌ಸಿ ಅಲ್ಲ ಎಂದು ಹೇಳಿ ಪೊಲೀಸರು ಪ್ರಕರಣವನ್ನು ಹೇಗೆ ಮುಚ್ಚುತ್ತಾರೆ ಎಂದು ರಾಜಾ ಪ್ರಶ್ನಿಸಿದ್ದಾರೆ.

ರೋಹಿತ್ ವೇಮುಲಾ ಅವರ ಕುಟುಂಬದವರು ವ್ಯಕ್ತಪಡಿಸಿದ ಅನುಮಾನಗಳನ್ನು ಉಲ್ಲೇಖಿಸಿ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ ರವಿ ಗುಪ್ತಾ ಹೇಳಿಕೆಯನ್ನು ನೀಡಿದ್ದು, ಮುಂದಿನ ತನಿಖೆಗೆ ಅನುಮತಿ ನೀಡುವಂತೆ ಮ್ಯಾಜಿಸ್ಟ್ರೇಟ್‌ಗೆ ಮನವಿ ಮಾಡಿ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಮಾದಾಪುರದ ಸಹಾಯಕ ಪೊಲೀಸ್ ಆಯುಕ್ತರಾಗಿದ್ದು, ಕಳೆದ ನವೆಂಬರ್ 2023ರ ಮೊದಲು ಪ್ರಕರಣದ ಅಂತಿಮ ಮುಕ್ತಾಯ ವರದಿಯನ್ನು ಅವರು ನಡೆಸಿದ್ದ ತನಿಖೆಯ ಆಧಾರದ ಮೇಲೆ ಸಿದ್ಧಪಡಿಸಿದ್ದಾರೆ ಎಂದು ಡಿಜಿಪಿ ಹೇಳಿದ್ದಾರೆ.

ಇದನ್ನು ಓದಿ: ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...