Homeಮುಖಪುಟರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ ‘ದಲಿತ ಅಲ್ಲ’, ತನ್ನ “ನಿಜವಾದ ಜಾತಿಯ ಗುರುತು” ಪತ್ತೆಯಾಗುತ್ತದೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಊಹಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು. ವರದಿಯನ್ನು ಮೇ.3ರಂದು ತೆಲಂಗಾಣ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ಇದರ ಬೆನ್ನಲ್ಲಿ ಪ್ರಕರಣದ ಮರುತನಿಖೆಗೆ ಕೋರಿ ರೋಹಿತ್ ವೇಮುಲಾ ತಾಯಿ ರಾಧಿಕಾ ವೇಮುಲಾ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದಾರೆ. ವರದಿಯ ಬಗ್ಗೆ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ಈ ಮುಚ್ಚುವಿಕೆಯ ವರದಿಯು ಸುಳ್ಳಿನಿಂದ ಕೂಡಿದೆ ಮತ್ತು ಇದನ್ನು ಕಾನೂನುಬದ್ಧವಾಗಿ ಎದುರಿಸುತ್ತೇವೆ ಎಂದು ರೋಹಿತ್‌ ವೇಮುಲಾ ಕುಟುಂಬ ಹೇಳಿದೆ. ಇದಲ್ಲದೆ ಈ ಕುರಿತು ಹೆಚ್ಚಿನ ತನಿಖೆಗಾಗಿ ಕುಟುಂಬವು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದೆ.

ರೋಹಿತ್ ಅವರ ಸಹೋದರ ರಾಜಾ ವೇಮುಲ ಈ ಬಗ್ಗೆ ಮಾತನಾಡಿದ್ದು, ಇದು ಅತ್ಯಂತ ಆಘಾತಕಾರಿಯಾಗಿದೆ. ಅವರ ಸಂಶೋಧನೆಗಳಿಂದ ನಾವೆಲ್ಲಾ ಎದೆಗುಂದಿದ್ದೇವೆ, ಕುಟುಂಬದ ಎಸ್‌ಸಿ ಸ್ಥಾನಮಾನದ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸಬೇಕು ಮತ್ತು ಈ ವಿಷಯದ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೇವೆ. ಕೆಳ ನ್ಯಾಯಾಲಯದಲ್ಲಿ ಆಕ್ಷೇಪಣೆ ಅರ್ಜಿ ಸಲ್ಲಿಸಲು ತೆಲಂಗಾಣ ಹೈಕೋರ್ಟ್ ಅನುಮತಿ ನೀಡಿದೆ. ಮುಚ್ಚುವಿಕೆಯ ವರದಿಯು “ಸುಳ್ಳಿನಿಂದ ತುಂಬಿದೆ”, ಆತ್ಮಹತ್ಯೆಯ ಹಿಂದಿನ ಕಾರಣಗಳನ್ನು ತನಿಖೆ ಮಾಡುವ ಬದಲು, ಪೊಲೀಸರು ಅವರು ದಲಿತರಲ್ಲ ಎಂದು ಪ್ರಮಾಣೀಕರಿಸುವ ಮೂಲಕ ಪ್ರಕರಣವನ್ನು ಮುಕ್ತಾಯಗೊಳಿಸಿದೆ ಎಂದು ಹೇಳಿದ್ದಾರೆ.

2016ರಲ್ಲಿ ‘ಜಸ್ಟೀಸ್ ಫಾರ್ ವೇಮುಲಾ’ ಅಭಿಯಾನಕ್ಕೆ ಕಾಂಗ್ರೆಸ್ ಬೆಂಬಲ ನೀಡಿತ್ತು.  ಆತ್ಮಹತ್ಯೆಯ ನಂತರ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ನಮ್ಮ ಹೋರಾಟವನ್ನು ಬೆಂಬಲಿಸಿತು ಮತ್ತು ನ್ಯಾಯ ಸಿಗುವವರೆಗೂ ನಮ್ಮ ಬೆಂಬಲಕ್ಕೆ ನಿಲ್ಲುವುದಾಗಿ ಭರವಸೆ ನೀಡಿತು. ಆದರೆ ಅವರ ಪಕ್ಷವು ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ನಾಲ್ಕು ತಿಂಗಳೊಳಗೆ, ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ. ಇದು ಅತ್ಯಂತ ಆಘಾತಕಾರಿಯಾಗಿದೆ ಎಂದು ರಾಜಾ ಹೇಳಿದ್ದಾರೆ.

2016ರಲ್ಲಿ ಸೈಬರಾಬಾದ್ ಪೊಲೀಸರು ರೋಹಿತ್‌ ವೇಮುಲಾ ಜಾತಿ ವಿವರಗಳನ್ನು ಕೋರಿ ಗುಂಟೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ತರುವಾಯ, ಜಿಲ್ಲಾಧಿಕಾರಿಗಳು ಜಾತಿ ಸ್ಥಿತಿಯ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಸ್ಎಲ್ಎ) ಸಮಿತಿಗೆ ಸೂಚಿಸಿದ್ದರು. 2017 ರಲ್ಲಿ ಅವರ ವರದಿಯನ್ನು ಆಧರಿಸಿ, ಜಿಲ್ಲಾಧಿಕಾರಿಗಳು ತಮ್ಮ ವಾದವನ್ನು ಮಂಡಿಸಲು ಕುಟುಂಬಕ್ಕೆ ಸಮನ್ಸ್ ನೀಡಿದ್ದರು. ನಮ್ಮ ಕುಟುಂಬ ಸದಸ್ಯರು ಮತ್ತು ಸ್ಥಳೀಯರು ಸೇರಿದಂತೆ ಸುಮಾರು 15 ಜನರು ಅಂದಿನ ಕಲೆಕ್ಟರ್ ಮುಂದೆ ಹಾಜರಾಗಿದ್ದರು. ಅವರು ಎರಡು ದಿನಗಳ ಕಾಲ ಸುಮಾರು 15 ಗಂಟೆಗಳ ಕಾಲ ನಮ್ಮ ಎಲ್ಲಾ ಹೇಳಿಕೆಗಳನ್ನು ದಾಖಲಿಸಿದರು. ನಂತರ ವರದಿಯನ್ನು ಪರಿಶೀಲನಾ ಸಮಿತಿಗೆ ನೀಡಲಾಯಿತು. ಅಲ್ಲಿ ಅದು ಇನ್ನೂ ಬಾಕಿ ಉಳಿದಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಅಂತಿಮ ವರದಿ ನೀಡದೆ, ಅವರು ಎಸ್‌ಸಿ ಅಲ್ಲ ಎಂದು ಹೇಳಿ ಪೊಲೀಸರು ಪ್ರಕರಣವನ್ನು ಹೇಗೆ ಮುಚ್ಚುತ್ತಾರೆ ಎಂದು ರಾಜಾ ಪ್ರಶ್ನಿಸಿದ್ದಾರೆ.

ರೋಹಿತ್ ವೇಮುಲಾ ಅವರ ಕುಟುಂಬದವರು ವ್ಯಕ್ತಪಡಿಸಿದ ಅನುಮಾನಗಳನ್ನು ಉಲ್ಲೇಖಿಸಿ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ ರವಿ ಗುಪ್ತಾ ಹೇಳಿಕೆಯನ್ನು ನೀಡಿದ್ದು, ಮುಂದಿನ ತನಿಖೆಗೆ ಅನುಮತಿ ನೀಡುವಂತೆ ಮ್ಯಾಜಿಸ್ಟ್ರೇಟ್‌ಗೆ ಮನವಿ ಮಾಡಿ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಮಾದಾಪುರದ ಸಹಾಯಕ ಪೊಲೀಸ್ ಆಯುಕ್ತರಾಗಿದ್ದು, ಕಳೆದ ನವೆಂಬರ್ 2023ರ ಮೊದಲು ಪ್ರಕರಣದ ಅಂತಿಮ ಮುಕ್ತಾಯ ವರದಿಯನ್ನು ಅವರು ನಡೆಸಿದ್ದ ತನಿಖೆಯ ಆಧಾರದ ಮೇಲೆ ಸಿದ್ಧಪಡಿಸಿದ್ದಾರೆ ಎಂದು ಡಿಜಿಪಿ ಹೇಳಿದ್ದಾರೆ.

ಇದನ್ನು ಓದಿ: ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...