Homeಕರೋನಾ ತಲ್ಲಣಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

ಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

"ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ"

- Advertisement -
- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟವರಿಗೆ ಅಧಿಕ ರಕ್ತದೊತ್ತಡ ಸಮಸ್ಯೆ ಇತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ನವೆಂಬರ್ 10 ರವರೆಗೆ ಕರ್ನಾಟಕದಲ್ಲಿ ದಾಖಲಾದ 11,430 ಕೋವಿಡ್ ಸಾವುಗಳಲ್ಲಿ 5,572 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 4,167 ಜನರಿಗೆ ಮಧುಮೇಹವಿರುವುದು ವರದಿಯಲ್ಲಿ ತಿಳಿದುಬಂದಿದೆ.

ಈ ರೀತಿಯ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಈಗಾಗಲೇ ಕೊರೊನಾ, ನ್ಯುಮೋನಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳಿಂದ ಉಂಟಾಗಿರುವ ಭೀತಿಯನ್ನು ಹೆಚ್ಚಿಸುತ್ತಿವೆ ಎಂದು ವೈದ್ಯರು ಹೇಳಿದ್ದಾರೆ. ಮಂಗಳವಾರ, ಮೃತಪಟ್ಟ 20 ಕೊರೊನಾ ರೋಗಿಗಳಲ್ಲಿ 11 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 10 ಮಂದಿ ಮಧುಮೇಹ ರೋಗಿಗಳಾಗಿದ್ದರು. ಕೊರೊನಾ ಕಾರಣದಿಂದಾಗಿ ನ್ಯುಮೋನಿಯಾ ಮತ್ತೆ ವಿಶ್ವದಾದ್ಯಂತ ಹೆಚ್ಚಾಗುತ್ತಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

“ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ” ಎಂದು ರಾಮಯ್ಯ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ.ಪ್ರಸನ್ನ ಕುಮಾರ್ ಟಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಮರೆತ ಜನರಿಂದ ದೀಪಾವಳಿ ಶಾಪಿಂಗ್‌ ಫುಲ್ ಜೋರು!

ಮಧುಮೇಹಿಗಳಂತೆ ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಅಧಿಕ ರಕ್ತದೊತ್ತಡ, ದೀರ್ಘಕಾಲದ ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು ಕೊರೊನಾ ನ್ಯುಮೋನಿಯಾಕ್ಕೆ ಹೆಚ್ಚು ಒಳಗಾಗುತ್ತಾರೆ. ನ್ಯುಮೋನಿಯಾವನ್ನು ತಡೆಗಟ್ಟಲು ಈ ರೋಗಗಳನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ ಎಂದು ವಿಕ್ರಮ್ ಆಸ್ಪತ್ರೆಯ ಸಲಹೆಗಾರ ಹೃದಯರೋಗ ತಜ್ಞ ಡಾ.ವಾಸುನೇತ್ರ ಕಾಸರಗೋಡ್ ತಿಳಿಸಿದ್ದಾರೆ.

ಇಂತಹ ರೋಗಿಗಳನ್ನು ಆಸ್ಪತ್ರೆಗಳಿಗೆ ಸೇರಿಸುವಲ್ಲಿ ವಿಳಂಬ ಮಾಡುವುದು ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಸರಿಯಾದ ಚಿಕಿತ್ಸೆ ಪಡೆದರೆ ಗುಣವಾಗುತ್ತಾರೆ. “91 ವರ್ಷ ವಯಸ್ಸಿನ ಮಧುಮೇಹ ಮತ್ತು ಕೋವಿಡ್ ನ್ಯುಮೋನಿಯಾ ಇದ್ದ ರೋಗಿ ಕೂಡ ಚಿಕಿತ್ಸೆ ಪಡೆದು ಚೆನ್ನಾಗಿ ಚೇತರಿಸಿಕೊಂಡಿರುವುದನ್ನು ನಾವು ನೋಡಿದ್ದೇವೆ” ಎಂದು ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ ಮೈಸೂರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...