Homeಕರೋನಾ ತಲ್ಲಣಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

ಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

"ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ"

- Advertisement -
- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟವರಿಗೆ ಅಧಿಕ ರಕ್ತದೊತ್ತಡ ಸಮಸ್ಯೆ ಇತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ನವೆಂಬರ್ 10 ರವರೆಗೆ ಕರ್ನಾಟಕದಲ್ಲಿ ದಾಖಲಾದ 11,430 ಕೋವಿಡ್ ಸಾವುಗಳಲ್ಲಿ 5,572 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 4,167 ಜನರಿಗೆ ಮಧುಮೇಹವಿರುವುದು ವರದಿಯಲ್ಲಿ ತಿಳಿದುಬಂದಿದೆ.

ಈ ರೀತಿಯ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಈಗಾಗಲೇ ಕೊರೊನಾ, ನ್ಯುಮೋನಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳಿಂದ ಉಂಟಾಗಿರುವ ಭೀತಿಯನ್ನು ಹೆಚ್ಚಿಸುತ್ತಿವೆ ಎಂದು ವೈದ್ಯರು ಹೇಳಿದ್ದಾರೆ. ಮಂಗಳವಾರ, ಮೃತಪಟ್ಟ 20 ಕೊರೊನಾ ರೋಗಿಗಳಲ್ಲಿ 11 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 10 ಮಂದಿ ಮಧುಮೇಹ ರೋಗಿಗಳಾಗಿದ್ದರು. ಕೊರೊನಾ ಕಾರಣದಿಂದಾಗಿ ನ್ಯುಮೋನಿಯಾ ಮತ್ತೆ ವಿಶ್ವದಾದ್ಯಂತ ಹೆಚ್ಚಾಗುತ್ತಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

“ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ” ಎಂದು ರಾಮಯ್ಯ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ.ಪ್ರಸನ್ನ ಕುಮಾರ್ ಟಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಮರೆತ ಜನರಿಂದ ದೀಪಾವಳಿ ಶಾಪಿಂಗ್‌ ಫುಲ್ ಜೋರು!

ಮಧುಮೇಹಿಗಳಂತೆ ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಅಧಿಕ ರಕ್ತದೊತ್ತಡ, ದೀರ್ಘಕಾಲದ ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು ಕೊರೊನಾ ನ್ಯುಮೋನಿಯಾಕ್ಕೆ ಹೆಚ್ಚು ಒಳಗಾಗುತ್ತಾರೆ. ನ್ಯುಮೋನಿಯಾವನ್ನು ತಡೆಗಟ್ಟಲು ಈ ರೋಗಗಳನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ ಎಂದು ವಿಕ್ರಮ್ ಆಸ್ಪತ್ರೆಯ ಸಲಹೆಗಾರ ಹೃದಯರೋಗ ತಜ್ಞ ಡಾ.ವಾಸುನೇತ್ರ ಕಾಸರಗೋಡ್ ತಿಳಿಸಿದ್ದಾರೆ.

ಇಂತಹ ರೋಗಿಗಳನ್ನು ಆಸ್ಪತ್ರೆಗಳಿಗೆ ಸೇರಿಸುವಲ್ಲಿ ವಿಳಂಬ ಮಾಡುವುದು ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಸರಿಯಾದ ಚಿಕಿತ್ಸೆ ಪಡೆದರೆ ಗುಣವಾಗುತ್ತಾರೆ. “91 ವರ್ಷ ವಯಸ್ಸಿನ ಮಧುಮೇಹ ಮತ್ತು ಕೋವಿಡ್ ನ್ಯುಮೋನಿಯಾ ಇದ್ದ ರೋಗಿ ಕೂಡ ಚಿಕಿತ್ಸೆ ಪಡೆದು ಚೆನ್ನಾಗಿ ಚೇತರಿಸಿಕೊಂಡಿರುವುದನ್ನು ನಾವು ನೋಡಿದ್ದೇವೆ” ಎಂದು ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ ಮೈಸೂರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...