Homeಕರೋನಾ ತಲ್ಲಣಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

ಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

"ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ"

- Advertisement -
- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟವರಿಗೆ ಅಧಿಕ ರಕ್ತದೊತ್ತಡ ಸಮಸ್ಯೆ ಇತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ನವೆಂಬರ್ 10 ರವರೆಗೆ ಕರ್ನಾಟಕದಲ್ಲಿ ದಾಖಲಾದ 11,430 ಕೋವಿಡ್ ಸಾವುಗಳಲ್ಲಿ 5,572 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 4,167 ಜನರಿಗೆ ಮಧುಮೇಹವಿರುವುದು ವರದಿಯಲ್ಲಿ ತಿಳಿದುಬಂದಿದೆ.

ಈ ರೀತಿಯ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಈಗಾಗಲೇ ಕೊರೊನಾ, ನ್ಯುಮೋನಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳಿಂದ ಉಂಟಾಗಿರುವ ಭೀತಿಯನ್ನು ಹೆಚ್ಚಿಸುತ್ತಿವೆ ಎಂದು ವೈದ್ಯರು ಹೇಳಿದ್ದಾರೆ. ಮಂಗಳವಾರ, ಮೃತಪಟ್ಟ 20 ಕೊರೊನಾ ರೋಗಿಗಳಲ್ಲಿ 11 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 10 ಮಂದಿ ಮಧುಮೇಹ ರೋಗಿಗಳಾಗಿದ್ದರು. ಕೊರೊನಾ ಕಾರಣದಿಂದಾಗಿ ನ್ಯುಮೋನಿಯಾ ಮತ್ತೆ ವಿಶ್ವದಾದ್ಯಂತ ಹೆಚ್ಚಾಗುತ್ತಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

“ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ” ಎಂದು ರಾಮಯ್ಯ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ.ಪ್ರಸನ್ನ ಕುಮಾರ್ ಟಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಮರೆತ ಜನರಿಂದ ದೀಪಾವಳಿ ಶಾಪಿಂಗ್‌ ಫುಲ್ ಜೋರು!

ಮಧುಮೇಹಿಗಳಂತೆ ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಅಧಿಕ ರಕ್ತದೊತ್ತಡ, ದೀರ್ಘಕಾಲದ ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು ಕೊರೊನಾ ನ್ಯುಮೋನಿಯಾಕ್ಕೆ ಹೆಚ್ಚು ಒಳಗಾಗುತ್ತಾರೆ. ನ್ಯುಮೋನಿಯಾವನ್ನು ತಡೆಗಟ್ಟಲು ಈ ರೋಗಗಳನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ ಎಂದು ವಿಕ್ರಮ್ ಆಸ್ಪತ್ರೆಯ ಸಲಹೆಗಾರ ಹೃದಯರೋಗ ತಜ್ಞ ಡಾ.ವಾಸುನೇತ್ರ ಕಾಸರಗೋಡ್ ತಿಳಿಸಿದ್ದಾರೆ.

ಇಂತಹ ರೋಗಿಗಳನ್ನು ಆಸ್ಪತ್ರೆಗಳಿಗೆ ಸೇರಿಸುವಲ್ಲಿ ವಿಳಂಬ ಮಾಡುವುದು ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಸರಿಯಾದ ಚಿಕಿತ್ಸೆ ಪಡೆದರೆ ಗುಣವಾಗುತ್ತಾರೆ. “91 ವರ್ಷ ವಯಸ್ಸಿನ ಮಧುಮೇಹ ಮತ್ತು ಕೋವಿಡ್ ನ್ಯುಮೋನಿಯಾ ಇದ್ದ ರೋಗಿ ಕೂಡ ಚಿಕಿತ್ಸೆ ಪಡೆದು ಚೆನ್ನಾಗಿ ಚೇತರಿಸಿಕೊಂಡಿರುವುದನ್ನು ನಾವು ನೋಡಿದ್ದೇವೆ” ಎಂದು ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ ಮೈಸೂರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....