Homeಅಂಕಣಗಳುಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

ಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

- Advertisement -
- Advertisement -

ಇತ್ತೀಚಿಗೆ ಕೇಂದ್ರ ಸರ್ಕಾರದ ಕೆಲವು ಮಂತ್ರಿಗಳು ಮತ್ತು ಸರ್ಕಾರದ ಸಂಸ್ಥೆಗಳ ಕೆಲವು ಅಧಿಕಾರಿಗಳ ತಂಡವೊಂದು ಹಲವು ಬಾರಿ ಭೇಟಿಯಾಗಿ, ಮಾಧ್ಯಮಗಳಲ್ಲಿ ಸರ್ಕಾರದ ಪರವಾದ ನರೆಟಿವ್ ತಳ್ಳಲು ಮಾಡಬೇಕಾದ ಕೆಲಸ ಮತ್ತು ಅನುಸರಿಸಬೇಕಾದ ತಂತ್ರಗಳನ್ನು ಚರ್ಚಿಸಿ ಅದನ್ನು ದಾಖಲಿಸಿದ ಟೂಲ್‌ಕಿಟ್ ಒಂದು ಸೋರಿಕೆಯಾಗಿ ಕಾರವಾನ್, ದ ವೈರ್ ಸೇರಿದಂತೆ ಹಲವು ಮಾಧ್ಯಮಗಳು ಸುದ್ದಿ ಮಾಡಿದವು. ಸರ್ಕಾರದ ನೀತಿ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ಪ್ರಚಾರ ಮಾಡುವುದಷ್ಟೇ ಅದರ ಉದ್ದೇಶವಾಗಿದ್ದರೆ ಅಥವಾ ಅದೇ ದಾಖಲೆಯಲ್ಲಿ ಒಂದು ಕಡೆ ಕೇಂದ್ರ ಸಚಿವರೊಬ್ಬರು ಹೇಳುವಂತೆ “ದಾಖಲೆಗಳಿಲ್ಲದೆ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿರುವ ಜನರ ವಿರುದ್ಧ ಮತ್ತು ನಕಲಿ ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ನಾವು ತಂತ್ರಗಳನ್ನು ರೂಪಿಸಿಕೊಳ್ಳಬೇಕು” ಎನ್ನುವದಷ್ಟೇ ಆಗಿದ್ದರೆ ಇದು ಸಮಸ್ಯಾತ್ಮಕವಾಗಿರಬೇಕಿರಲಿಲ್ಲ. ಆದರೆ ಈ ದಾಖಲೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸರ್ಕಾರದ ತಪ್ಪುಗಳನ್ನು ಜನಕ್ಕೆ ತಿಳಿಸುವ, ರಚನಾತ್ಮಕವಲ್ಲದ ಸರ್ಕಾರದ ಕಾರ್ಯಕ್ರಮಗಳನ್ನು ಟೀಕಿಸುವ ಮಾಧ್ಯಮಗಳನ್ನು ಹೇಗೆ ಮಟ್ಟ ಹಾಕಬೇಕು ಎನ್ನುವುದೂ ಚರ್ಚೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವುದು ಆತಂಕಕ್ಕೆ ಎಡೆಮಾಡುತ್ತದಷ್ಟೇ ಅಲ್ಲದೆ, ಈ ಸಭೆಗಳಲ್ಲಿ ಕೆಲವು ಪ್ರತಿಷ್ಠಿತ ಪತ್ರಿಕೆಗಳ ಪತ್ರಕರ್ತರೂ ಭಾಗಿಯಾಗಿರುವುದು, ಭಾರತದ ಮಾಧ್ಯಮ ಸ್ವಾತಂತ್ರ್ಯ ಕುಸಿಯುತ್ತಿದೆ ಎಂಬ ಆರೋಪಕ್ಕೆ ಪುಷ್ಠಿ ನೀಡಿದಂತಾಗಿದೆ.

ಈ ಟೂಲ್‌ಕಿಟ್‌ನ ಕೆಲವು ಸಂಗತಿಗಳನ್ನು ಚರ್ಚಿಸುವುದಕ್ಕೂ ಮೊದಲು ಒಂದು ವಿಷಯ. ಫ್ರೀಡಂ ಹೌಸ್ ಎಂಬ ಒಂದು ಸಂಸ್ಥೆ ಪ್ರತಿ ವರ್ಷ ವಿಶ್ವದೆಲ್ಲೆಡೆ ಹಲವು ದೇಶಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಿ, ಆ ದೇಶದ ಪ್ರಜಾಪ್ರಭುತ್ವದ ಸ್ಟೇಟಸ್ ಎತ್ತ ಸಾಗಿದೆ, ಆ ದೇಶದಲ್ಲಿ ಮುಕ್ತತೆಯ-ಸ್ವಾತಂತ್ರ್ಯದ ವಾತಾವರಣ ಎಷ್ಟಿದೆ ಎಂಬುದನ್ನು ಅಂಕಿಅಂಶಗಳ ಮೂಲಕ ವರದಿ ಬಿಡುಗಡೆ ಮಾಡಿ, ಕ್ರಮಾಂಕ ನೀಡುತ್ತದೆ. ಆ ವರದಿಯಲ್ಲಿ ಭಾರತವನ್ನು ಮುಕ್ತ ದರ್ಜೆಯಿಂದ (ಫ್ರೀ ಸ್ಟೇಟಸ್), ಭಾಗಶಃ ಮುಕ್ತ ದರ್ಜೆಗೆ (ಪಾರ್‍ಟ್ಲಿ ಫ್ರೀ ಸ್ಟೇಟಸ್) ಇಳಿಸಿದೆ. ಕೋವಿಡ್ ಸಮಯದ ಲಾಕ್‌ಡೌನ್‌ನಿಂದ ಉಂಟಾದ ವಲಸೆ, ಎಗ್ಗಿಲ್ಲದೆ ಮುಂದುವರೆಯುತ್ತಿರುವ ಹಿಂದೂ ರಾಷ್ಟ್ರೀಯವಾದ, ವೈರಸ್ ಹಬ್ಬಲು ಮುಸ್ಲಿಮರು ಕಾರಣ ಎಂದು ಮಾಡಿದ ಸುಳ್ಳು ಪ್ರಚಾರ ಇಂತಹ ಕಾರಣಗಳನ್ನೆಲ್ಲಾ ಪಟ್ಟಿ ಮಾಡಿ, ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ ಭಾರತ ಜಾರುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಮೇಲಿನ ವರದಿಗೂ, ಮಾಧ್ಯಮಗಳನ್ನು ಪ್ರಭಾವಿಸುವ ಟೂಲ್‌ಕಿಟ್ ಚರ್ಚೆಯಾದ ಸಮಯಕ್ಕೂ ಸಂಬಂಧ ಇದೆ. ಈ ಟೂಲ್‌ಕಿಟ್ ಚರ್ಚೆ ಆಗಿರುವುದು 2020ರ ಮಧ್ಯ ಭಾಗದಲ್ಲಿಯೇ. ಫ್ರೀಡಂ ಹೌಸ್ ಅವಲೋಕಿಸಿರುವುದು ಕೂಡ 2020ರ ಭಾರತದ ಪರಿಸ್ಥಿತಿಯನ್ನೇ. 14.06.20ರಿಂದ 09.07.20ರ ನಡುವೆ ನಡೆಯುವ ಆರು ಸಭೆಗಳಲ್ಲಿ ಭಾಗವಹಿಸಿರುವ ’ಸಚಿವರ ಗುಂಪು’ ಮುಖ್ತಾರ್ ಅಬ್ಬಾಸ್ ನಖ್ವಿ, ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇರ್, ಎಸ್ ಜೈಶಂಕರ್ ಕ್ಯಾಬಿನೆಟ್ ದರ್ಜೆಯ ಸಚಿವರಾದರೆ, ಕಿರೆನ್ ರಿಜೆಜು, ಹರ್ದೀಪ್ ಸಿಂಗ್ ಪೂರಿ, ಅನುರಾಗ್ ಠಾಕೂರ್, ಬಾಬುಲಾಲ್ ಸುಪ್ರಿಯೋ ರಾಜ್ಯ ದರ್ಜೆ ಸಚಿವರು.

ಒಂದು ಕಡೆ ಸ್ಮೃತಿ ಇರಾನಿಯವರು “ನಾವು ಋಣಾತ್ಮಕ ಮತ್ತು ಧನಾತ್ಮಕ ಪ್ರಭಾವಿಗಳನ್ನು ಗುರುತಿಸಬೇಕು” ಅಂದರೆ, ಮತ್ತೊಂದು ಕಡೆ ಅನುರಾಗ್ ಠಾಕೂರ್ ಅವರು ನಾವು ಇತರ ದೇಶದ ಬಲಪಂಥೀಯ ರಾಜಕೀಯ ಪಕ್ಷಗಳೊಂದಿಗೆ ಜೊತೆಗೂಡಿ ಒಂದು ಸಾಮಾನ್ಯ ನೆಲೆ ಕಂಡುಕೊಳ್ಳಬೇಕು ಎನ್ನುತ್ತಾರೆ. ರವಿಶಂಕರ್ ಪ್ರಸಾದ್ ಅವರು, ತಮ್ಮ ಪಕ್ಷದ ಉನ್ನತ ಸಮಿತಿಯ ಮಾಧ್ಯಮ ಹಸ್ತಕ್ಷೇಪ ದೊಡ್ಡದಾಗಿ ಬೆಳೆಯುತ್ತಿಲ್ಲ ಎನ್ನುತ್ತಾರೆ ಮತ್ತು ಸರ್ಕಾರದ ಪರವಾಗಿ ಬರೆಯಬಲ್ಲ ಅಕಾಡೆಮಿಕ್‌ಗಳು, ವಿಶ್ವವಿದ್ಯಾಲಯದ ಕುಲಪತಿಗಳು, ಮಾಜಿ ಐಎಫ್‌ಎಸ್ ಅಧಿಕಾರಿಗಳನ್ನು ಗುರುತಿಸಬೇಕೆಂದು ಕೂಡ ಸಲಹೆ ನೀಡುತ್ತಾರೆ.

ಮುಂದುವರೆದು, ಇದು ಕೇವಲ ಸಚಿವರ ಗುಂಪಿನ ಚರ್ಚೆ ಮಾತ್ರ ಆಗಿರದೆ, ಆರ್‌ಎಸ್‌ಎಸ್‌ನ ಗುರುಮೂರ್ತಿ, ಪ್ರಸಾರ ಭಾರತಿ ಅಧ್ಯಕ್ಷ ಸೂರ್ಯ ಪ್ರಕಾಶ್ ಮುಂತಾದವರು ಸೇರಿದಂತೆ, ದ ಹಿಂದೂ, ಇಂಡಿಯನ್ ಎಕ್ಸಪ್ರೆಸ್ ಪತ್ರಿಕೆಯಂತಹ ಪತ್ರಕರ್ತರೂ ಕೆಲವು ಸಭೆಗಳಲ್ಲಿ ಭಾಗಿಯಾಗಿರುವುದನ್ನು ದಾಖಲಿಸಲಾಗಿದೆ. ಗುರುಮೂರ್ತಿ ಒಂದು ಕಡೆ ಮಾತನಾಡುತ್ತಾ, ರಿಪಬ್ಲಿಕ್ ಟಿವಿ ವಾಹಿನಿ ಸರ್ಕಾರದ ಬಗ್ಗೆ ಪ್ರಚಾರ ಮಾಡುತ್ತಿದ್ದರೂ, ಅದನ್ನು ಹೊಗಳುಭಟ್ಟ ಎಂದು ಜನರು ಗುರುತಿಸಿದ್ದಾರೆ. ನಮ್ಮ ನರೆಟಿವ್‌ಗಾಗಿ ಪೋಖ್ರಾನ್ ಬೇಕಾಗಿದೆ ಎನ್ನುತ್ತಾರೆ.

ಅಂದರೆ ಮೀಡಿಯಾ ನಿಯಂತ್ರಣದ ಈ ಯೋಜನೆಯ ಹೆಸರನ್ನು ’ಪೋಖ್ರಾನ್ ಎಫೆಕ್ಟ್’ ಎಂದು ಕರೆದಿರುವುದು ಇಲ್ಲಿ ಮುಖ್ಯ. ಇಂದಿರಾಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರುಗಳು ಪ್ರಧಾನಮಂತ್ರಿಯಾಗಿದ್ದಾಗ ಪೋಖ್ರಾನ್‌ನಲ್ಲಿ ನಡೆಸಿದ್ದ ಅಣು ಪರೀಕ್ಷೆ ಅಂದಿನ ಸರ್ಕಾರಗಳಿಗೆ ಭಾರಿ ಜನಪ್ರಿಯತೆ ತಂದುಕೊಟ್ಟಿತ್ತು. ಈಗ ಅದೇ ಹೆಸರಿನಲ್ಲಿ ಮಾಧ್ಯಮಗಳ ಮೂಲಕ ಜನಪ್ರಿಯತೆಯನ್ನು ಕಂಡುಕೊಳ್ಳಲು ಈ ಸರ್ಕಾರ ತಂತ್ರ ರಚಿಸುತ್ತಿದೆ.

ಇವೆಲ್ಲ ತಂತ್ರಗಾರಿಕೆಯ ನಡುವೆಯೂ, ರಿಪಬ್ಲಿಕ್ ಟಿವಿ ಢೋಲು ಹೊಡೆಯುತ್ತಿರುವುದು ಅಷ್ಟು ಮುಖ್ಯವಲ್ಲ ಅನ್ನುವ ಅಭಿಪ್ರಾಯವಾಗಲೀ, ಖಾಸಗಿ ಸಂಸ್ಥೆಯೊಂದರ ಪ್ರತಿನಿಧಿ ಕಾಂಚನ ಗುಪ್ತ ಅನ್ನುವವರು ’ಗೂಗಲ್ ಸಂಸ್ಥೆ ವೈರ್, ಸ್ಕ್ರಾಲ್, ಪ್ರಿಂಟ್, ಹಿಂದೂ ಮಾಧ್ಯಮ ಸಂಸ್ಥೆಗಳ ಸುದ್ದಿಗಳನ್ನು ಪ್ರಚಾರ ಮಾಡುತ್ತದೆ, ಇದಕ್ಕೆ ಕಡಿವಾಣ ಹಾಕಬೇಕು’ ಅನ್ನುವ ಮಾತಾಗಲೀ, ಚುನಾವಣಾ ಸಮಯದಲ್ಲಿ ಪಕ್ಷ ಮಾಧ್ಯಮಗಳನ್ನು ಬಹಳ ಚೆನ್ನಾಗಿ ನಿರ್ವಹಿಸುತ್ತದೆ, ಬೇರೆ ಸಮಯದಲ್ಲಿ ಇದು ಏಕೆ ಸಾಧ್ಯವಿಲ್ಲ ಎಂದು ಅಶೋಕ ಟಂಡನ್ ಕೇಳಿಕೊಳ್ಳುವ ಪ್ರಶ್ನೆಯಾಗಲೀ, ಸಚಿವರು ಮತ್ತು ಅಧಿಕಾರಿಗಳು ಬರೆಯುವ ಓಪ್-ಎಡ್‌ಗಳನ್ನು (ಅಭಿಪ್ರಾಯ ಸೂಚಿಸುವ ಸಂಪಾದಕೀಯ ಲೇಖನಗಳು) ನಿಲ್ಲಿಸಿ, ಅವು ಸಾಂಕ್ರಾಮಿಕವಾಗಿವೆ ಮತ್ತು ಅವನ್ನು ಜನ ಪ್ರಪೋಗಾಂಡ ಎನ್ನುತ್ತಿದ್ದಾರೆ, ಅವುಗಳಿಂದ ಹೆಚ್ಚು ಉಪಯೋಗವಿಲ್ಲ ಎನ್ನುವ ಅಶೋಕ್ ಮಲಿಕ್ ಅವರ ಮಾತುಗಳಾಗಲೀ ಬೇರೆಯದೇ ಕಥೆಯನ್ನು ಹೇಳುತ್ತಿವೆ. ತಾವು ಹತ್ತಾರು ವರ್ಷ ನಡೆಸಿಕೊಂಡು ಬಂದಿರುವ ಪ್ರಪೋಗಾಂಡದ ವಿರುದ್ಧ ಬೆರಳೆಣಿಕೆಯ ಮಾಧ್ಯಮಗಳಾದರೂ ಸತ್ಯದ ಕಥೆಗಳನ್ನು ಹೇಳುತ್ತಿರುವುದರ ಬಗ್ಗೆ ಸರ್ಕಾರ ಆಂತಕಿತಗೊಂಡಿರುವುದಂತೂ ಸ್ಪಷ್ಟವಾಗಿ ಗೋಚರಿಸುತ್ತದೆ.

ಅದೇ ಟೂಲ್‌ಕಿಟ್‌ನಲ್ಲಿ, ಪತ್ರಕರ್ತರನ್ನು ಹಸಿರು (ತಂತಿಯ ಮೇಲೆ ಕುಂತವರು), ಕಪ್ಪು (ವಿರುದ್ಧ ಇರುವವರು), ಬಿಳಿ (ಪರವಾಗಿರುವವರು) ಬಣ್ಣಗಳಿಂದ ಗುರುತಿಸಿ, ಸರ್ಕಾರದ ಪರವಾಗಿ ಇರುವವರನ್ನು ಹೆಚ್ಚು ಪ್ರಮೋಟ್ ಮಾಡಬೇಕು ಎಂದು ಸಲಹೆ ನೀಡುವ ಮಾಜಿ ಪತ್ರಕರ್ತ ನಿತಿನ್ ಗೋಖಲೆ ಅವರ ಮಾತುಗಳು ಇಂದಿನ ಪತ್ರಿಕೋದ್ಯಮದ ಸ್ಥಿತಿಯನ್ನು ನೆನಪಿಸಿದರೂ, ಸರ್ಕಾರ ಇಂತಹ ಸಚಿವರ ಗುಂಪೊಂದನ್ನು ರಚಿಸಿ ಇಷ್ಟು ಗಂಭೀರವಾಗಿ ಆರು ಸುತ್ತಿನ ಚರ್ಚೆ ನಡೆಸಿರುವುದು ಮತ್ತು ನಕಲಿ ಸುದ್ದಿಗಳನ್ನು ಪತ್ತೆಹಚ್ಚಿ ಓದುಗರಿಗೆ ನಿಜ ತಿಳಿಸುವ ತಾಣಗಳಾದ ಆಲ್ಟ್ ನ್ಯೂಸ್‌ನಂತಹ ಮಾಧ್ಯಮಗಳ ಬಗ್ಗೆ ಆತಂಕಿತಗೊಂಡಿರುವುದು, ಇವೆಲ್ಲವೂ ಎಲ್ಲೋ ಮೂಲೆಯಲ್ಲಿ ಚಿಗುರುತ್ತಿರುವ ಭರವಸೆಯನ್ನು ನೆನಪಿಸುತ್ತದೆ.

ಕಳೆ ತೆಗೆಯುವ ನೆಪದಲ್ಲಿ ತೆನೆಯನ್ನೆ ಚಿವುಟುಹಾಕಲು ಹೊರಟಿರುವ ಸರ್ಕಾರದ ಹುನ್ನಾರವನ್ನು ತಡೆಯಲು ಇರುವುದು ಒಂದೇ ದಾರಿ: ಉತ್ತಮ ಪತ್ರಿಕೋದ್ಯಮವನ್ನು ಉಳಿಸುವುದು ಮತ್ತು ಬೆಳೆಸುವುದು ಮತ್ತು ಹೆಚ್ಚೆಚ್ಚು ನೆಲದ ಬಾಷೆಗಳಲ್ಲಿ ಪ್ರಭುತ್ವದ ಸುಳ್ಳು ನರೆಟಿವ್‌ಗಳಿಗೆ ಸೋಲುಣಿಸುವುದು.

ಟೂಲ್‍ಕಿಟ್‍ನ ವರದಿಯನ್ನು ಇಲ್ಲಿ ಓದಿ..

..


ಇದನ್ನೂ ಓದಿ: ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...