Homeಅಂಕಣಗಳುಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

ಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

- Advertisement -
- Advertisement -

ಇತ್ತೀಚಿಗೆ ಕೇಂದ್ರ ಸರ್ಕಾರದ ಕೆಲವು ಮಂತ್ರಿಗಳು ಮತ್ತು ಸರ್ಕಾರದ ಸಂಸ್ಥೆಗಳ ಕೆಲವು ಅಧಿಕಾರಿಗಳ ತಂಡವೊಂದು ಹಲವು ಬಾರಿ ಭೇಟಿಯಾಗಿ, ಮಾಧ್ಯಮಗಳಲ್ಲಿ ಸರ್ಕಾರದ ಪರವಾದ ನರೆಟಿವ್ ತಳ್ಳಲು ಮಾಡಬೇಕಾದ ಕೆಲಸ ಮತ್ತು ಅನುಸರಿಸಬೇಕಾದ ತಂತ್ರಗಳನ್ನು ಚರ್ಚಿಸಿ ಅದನ್ನು ದಾಖಲಿಸಿದ ಟೂಲ್‌ಕಿಟ್ ಒಂದು ಸೋರಿಕೆಯಾಗಿ ಕಾರವಾನ್, ದ ವೈರ್ ಸೇರಿದಂತೆ ಹಲವು ಮಾಧ್ಯಮಗಳು ಸುದ್ದಿ ಮಾಡಿದವು. ಸರ್ಕಾರದ ನೀತಿ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ಪ್ರಚಾರ ಮಾಡುವುದಷ್ಟೇ ಅದರ ಉದ್ದೇಶವಾಗಿದ್ದರೆ ಅಥವಾ ಅದೇ ದಾಖಲೆಯಲ್ಲಿ ಒಂದು ಕಡೆ ಕೇಂದ್ರ ಸಚಿವರೊಬ್ಬರು ಹೇಳುವಂತೆ “ದಾಖಲೆಗಳಿಲ್ಲದೆ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿರುವ ಜನರ ವಿರುದ್ಧ ಮತ್ತು ನಕಲಿ ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ನಾವು ತಂತ್ರಗಳನ್ನು ರೂಪಿಸಿಕೊಳ್ಳಬೇಕು” ಎನ್ನುವದಷ್ಟೇ ಆಗಿದ್ದರೆ ಇದು ಸಮಸ್ಯಾತ್ಮಕವಾಗಿರಬೇಕಿರಲಿಲ್ಲ. ಆದರೆ ಈ ದಾಖಲೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸರ್ಕಾರದ ತಪ್ಪುಗಳನ್ನು ಜನಕ್ಕೆ ತಿಳಿಸುವ, ರಚನಾತ್ಮಕವಲ್ಲದ ಸರ್ಕಾರದ ಕಾರ್ಯಕ್ರಮಗಳನ್ನು ಟೀಕಿಸುವ ಮಾಧ್ಯಮಗಳನ್ನು ಹೇಗೆ ಮಟ್ಟ ಹಾಕಬೇಕು ಎನ್ನುವುದೂ ಚರ್ಚೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವುದು ಆತಂಕಕ್ಕೆ ಎಡೆಮಾಡುತ್ತದಷ್ಟೇ ಅಲ್ಲದೆ, ಈ ಸಭೆಗಳಲ್ಲಿ ಕೆಲವು ಪ್ರತಿಷ್ಠಿತ ಪತ್ರಿಕೆಗಳ ಪತ್ರಕರ್ತರೂ ಭಾಗಿಯಾಗಿರುವುದು, ಭಾರತದ ಮಾಧ್ಯಮ ಸ್ವಾತಂತ್ರ್ಯ ಕುಸಿಯುತ್ತಿದೆ ಎಂಬ ಆರೋಪಕ್ಕೆ ಪುಷ್ಠಿ ನೀಡಿದಂತಾಗಿದೆ.

ಈ ಟೂಲ್‌ಕಿಟ್‌ನ ಕೆಲವು ಸಂಗತಿಗಳನ್ನು ಚರ್ಚಿಸುವುದಕ್ಕೂ ಮೊದಲು ಒಂದು ವಿಷಯ. ಫ್ರೀಡಂ ಹೌಸ್ ಎಂಬ ಒಂದು ಸಂಸ್ಥೆ ಪ್ರತಿ ವರ್ಷ ವಿಶ್ವದೆಲ್ಲೆಡೆ ಹಲವು ದೇಶಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಿ, ಆ ದೇಶದ ಪ್ರಜಾಪ್ರಭುತ್ವದ ಸ್ಟೇಟಸ್ ಎತ್ತ ಸಾಗಿದೆ, ಆ ದೇಶದಲ್ಲಿ ಮುಕ್ತತೆಯ-ಸ್ವಾತಂತ್ರ್ಯದ ವಾತಾವರಣ ಎಷ್ಟಿದೆ ಎಂಬುದನ್ನು ಅಂಕಿಅಂಶಗಳ ಮೂಲಕ ವರದಿ ಬಿಡುಗಡೆ ಮಾಡಿ, ಕ್ರಮಾಂಕ ನೀಡುತ್ತದೆ. ಆ ವರದಿಯಲ್ಲಿ ಭಾರತವನ್ನು ಮುಕ್ತ ದರ್ಜೆಯಿಂದ (ಫ್ರೀ ಸ್ಟೇಟಸ್), ಭಾಗಶಃ ಮುಕ್ತ ದರ್ಜೆಗೆ (ಪಾರ್‍ಟ್ಲಿ ಫ್ರೀ ಸ್ಟೇಟಸ್) ಇಳಿಸಿದೆ. ಕೋವಿಡ್ ಸಮಯದ ಲಾಕ್‌ಡೌನ್‌ನಿಂದ ಉಂಟಾದ ವಲಸೆ, ಎಗ್ಗಿಲ್ಲದೆ ಮುಂದುವರೆಯುತ್ತಿರುವ ಹಿಂದೂ ರಾಷ್ಟ್ರೀಯವಾದ, ವೈರಸ್ ಹಬ್ಬಲು ಮುಸ್ಲಿಮರು ಕಾರಣ ಎಂದು ಮಾಡಿದ ಸುಳ್ಳು ಪ್ರಚಾರ ಇಂತಹ ಕಾರಣಗಳನ್ನೆಲ್ಲಾ ಪಟ್ಟಿ ಮಾಡಿ, ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ ಭಾರತ ಜಾರುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಮೇಲಿನ ವರದಿಗೂ, ಮಾಧ್ಯಮಗಳನ್ನು ಪ್ರಭಾವಿಸುವ ಟೂಲ್‌ಕಿಟ್ ಚರ್ಚೆಯಾದ ಸಮಯಕ್ಕೂ ಸಂಬಂಧ ಇದೆ. ಈ ಟೂಲ್‌ಕಿಟ್ ಚರ್ಚೆ ಆಗಿರುವುದು 2020ರ ಮಧ್ಯ ಭಾಗದಲ್ಲಿಯೇ. ಫ್ರೀಡಂ ಹೌಸ್ ಅವಲೋಕಿಸಿರುವುದು ಕೂಡ 2020ರ ಭಾರತದ ಪರಿಸ್ಥಿತಿಯನ್ನೇ. 14.06.20ರಿಂದ 09.07.20ರ ನಡುವೆ ನಡೆಯುವ ಆರು ಸಭೆಗಳಲ್ಲಿ ಭಾಗವಹಿಸಿರುವ ’ಸಚಿವರ ಗುಂಪು’ ಮುಖ್ತಾರ್ ಅಬ್ಬಾಸ್ ನಖ್ವಿ, ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇರ್, ಎಸ್ ಜೈಶಂಕರ್ ಕ್ಯಾಬಿನೆಟ್ ದರ್ಜೆಯ ಸಚಿವರಾದರೆ, ಕಿರೆನ್ ರಿಜೆಜು, ಹರ್ದೀಪ್ ಸಿಂಗ್ ಪೂರಿ, ಅನುರಾಗ್ ಠಾಕೂರ್, ಬಾಬುಲಾಲ್ ಸುಪ್ರಿಯೋ ರಾಜ್ಯ ದರ್ಜೆ ಸಚಿವರು.

ಒಂದು ಕಡೆ ಸ್ಮೃತಿ ಇರಾನಿಯವರು “ನಾವು ಋಣಾತ್ಮಕ ಮತ್ತು ಧನಾತ್ಮಕ ಪ್ರಭಾವಿಗಳನ್ನು ಗುರುತಿಸಬೇಕು” ಅಂದರೆ, ಮತ್ತೊಂದು ಕಡೆ ಅನುರಾಗ್ ಠಾಕೂರ್ ಅವರು ನಾವು ಇತರ ದೇಶದ ಬಲಪಂಥೀಯ ರಾಜಕೀಯ ಪಕ್ಷಗಳೊಂದಿಗೆ ಜೊತೆಗೂಡಿ ಒಂದು ಸಾಮಾನ್ಯ ನೆಲೆ ಕಂಡುಕೊಳ್ಳಬೇಕು ಎನ್ನುತ್ತಾರೆ. ರವಿಶಂಕರ್ ಪ್ರಸಾದ್ ಅವರು, ತಮ್ಮ ಪಕ್ಷದ ಉನ್ನತ ಸಮಿತಿಯ ಮಾಧ್ಯಮ ಹಸ್ತಕ್ಷೇಪ ದೊಡ್ಡದಾಗಿ ಬೆಳೆಯುತ್ತಿಲ್ಲ ಎನ್ನುತ್ತಾರೆ ಮತ್ತು ಸರ್ಕಾರದ ಪರವಾಗಿ ಬರೆಯಬಲ್ಲ ಅಕಾಡೆಮಿಕ್‌ಗಳು, ವಿಶ್ವವಿದ್ಯಾಲಯದ ಕುಲಪತಿಗಳು, ಮಾಜಿ ಐಎಫ್‌ಎಸ್ ಅಧಿಕಾರಿಗಳನ್ನು ಗುರುತಿಸಬೇಕೆಂದು ಕೂಡ ಸಲಹೆ ನೀಡುತ್ತಾರೆ.

ಮುಂದುವರೆದು, ಇದು ಕೇವಲ ಸಚಿವರ ಗುಂಪಿನ ಚರ್ಚೆ ಮಾತ್ರ ಆಗಿರದೆ, ಆರ್‌ಎಸ್‌ಎಸ್‌ನ ಗುರುಮೂರ್ತಿ, ಪ್ರಸಾರ ಭಾರತಿ ಅಧ್ಯಕ್ಷ ಸೂರ್ಯ ಪ್ರಕಾಶ್ ಮುಂತಾದವರು ಸೇರಿದಂತೆ, ದ ಹಿಂದೂ, ಇಂಡಿಯನ್ ಎಕ್ಸಪ್ರೆಸ್ ಪತ್ರಿಕೆಯಂತಹ ಪತ್ರಕರ್ತರೂ ಕೆಲವು ಸಭೆಗಳಲ್ಲಿ ಭಾಗಿಯಾಗಿರುವುದನ್ನು ದಾಖಲಿಸಲಾಗಿದೆ. ಗುರುಮೂರ್ತಿ ಒಂದು ಕಡೆ ಮಾತನಾಡುತ್ತಾ, ರಿಪಬ್ಲಿಕ್ ಟಿವಿ ವಾಹಿನಿ ಸರ್ಕಾರದ ಬಗ್ಗೆ ಪ್ರಚಾರ ಮಾಡುತ್ತಿದ್ದರೂ, ಅದನ್ನು ಹೊಗಳುಭಟ್ಟ ಎಂದು ಜನರು ಗುರುತಿಸಿದ್ದಾರೆ. ನಮ್ಮ ನರೆಟಿವ್‌ಗಾಗಿ ಪೋಖ್ರಾನ್ ಬೇಕಾಗಿದೆ ಎನ್ನುತ್ತಾರೆ.

ಅಂದರೆ ಮೀಡಿಯಾ ನಿಯಂತ್ರಣದ ಈ ಯೋಜನೆಯ ಹೆಸರನ್ನು ’ಪೋಖ್ರಾನ್ ಎಫೆಕ್ಟ್’ ಎಂದು ಕರೆದಿರುವುದು ಇಲ್ಲಿ ಮುಖ್ಯ. ಇಂದಿರಾಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರುಗಳು ಪ್ರಧಾನಮಂತ್ರಿಯಾಗಿದ್ದಾಗ ಪೋಖ್ರಾನ್‌ನಲ್ಲಿ ನಡೆಸಿದ್ದ ಅಣು ಪರೀಕ್ಷೆ ಅಂದಿನ ಸರ್ಕಾರಗಳಿಗೆ ಭಾರಿ ಜನಪ್ರಿಯತೆ ತಂದುಕೊಟ್ಟಿತ್ತು. ಈಗ ಅದೇ ಹೆಸರಿನಲ್ಲಿ ಮಾಧ್ಯಮಗಳ ಮೂಲಕ ಜನಪ್ರಿಯತೆಯನ್ನು ಕಂಡುಕೊಳ್ಳಲು ಈ ಸರ್ಕಾರ ತಂತ್ರ ರಚಿಸುತ್ತಿದೆ.

ಇವೆಲ್ಲ ತಂತ್ರಗಾರಿಕೆಯ ನಡುವೆಯೂ, ರಿಪಬ್ಲಿಕ್ ಟಿವಿ ಢೋಲು ಹೊಡೆಯುತ್ತಿರುವುದು ಅಷ್ಟು ಮುಖ್ಯವಲ್ಲ ಅನ್ನುವ ಅಭಿಪ್ರಾಯವಾಗಲೀ, ಖಾಸಗಿ ಸಂಸ್ಥೆಯೊಂದರ ಪ್ರತಿನಿಧಿ ಕಾಂಚನ ಗುಪ್ತ ಅನ್ನುವವರು ’ಗೂಗಲ್ ಸಂಸ್ಥೆ ವೈರ್, ಸ್ಕ್ರಾಲ್, ಪ್ರಿಂಟ್, ಹಿಂದೂ ಮಾಧ್ಯಮ ಸಂಸ್ಥೆಗಳ ಸುದ್ದಿಗಳನ್ನು ಪ್ರಚಾರ ಮಾಡುತ್ತದೆ, ಇದಕ್ಕೆ ಕಡಿವಾಣ ಹಾಕಬೇಕು’ ಅನ್ನುವ ಮಾತಾಗಲೀ, ಚುನಾವಣಾ ಸಮಯದಲ್ಲಿ ಪಕ್ಷ ಮಾಧ್ಯಮಗಳನ್ನು ಬಹಳ ಚೆನ್ನಾಗಿ ನಿರ್ವಹಿಸುತ್ತದೆ, ಬೇರೆ ಸಮಯದಲ್ಲಿ ಇದು ಏಕೆ ಸಾಧ್ಯವಿಲ್ಲ ಎಂದು ಅಶೋಕ ಟಂಡನ್ ಕೇಳಿಕೊಳ್ಳುವ ಪ್ರಶ್ನೆಯಾಗಲೀ, ಸಚಿವರು ಮತ್ತು ಅಧಿಕಾರಿಗಳು ಬರೆಯುವ ಓಪ್-ಎಡ್‌ಗಳನ್ನು (ಅಭಿಪ್ರಾಯ ಸೂಚಿಸುವ ಸಂಪಾದಕೀಯ ಲೇಖನಗಳು) ನಿಲ್ಲಿಸಿ, ಅವು ಸಾಂಕ್ರಾಮಿಕವಾಗಿವೆ ಮತ್ತು ಅವನ್ನು ಜನ ಪ್ರಪೋಗಾಂಡ ಎನ್ನುತ್ತಿದ್ದಾರೆ, ಅವುಗಳಿಂದ ಹೆಚ್ಚು ಉಪಯೋಗವಿಲ್ಲ ಎನ್ನುವ ಅಶೋಕ್ ಮಲಿಕ್ ಅವರ ಮಾತುಗಳಾಗಲೀ ಬೇರೆಯದೇ ಕಥೆಯನ್ನು ಹೇಳುತ್ತಿವೆ. ತಾವು ಹತ್ತಾರು ವರ್ಷ ನಡೆಸಿಕೊಂಡು ಬಂದಿರುವ ಪ್ರಪೋಗಾಂಡದ ವಿರುದ್ಧ ಬೆರಳೆಣಿಕೆಯ ಮಾಧ್ಯಮಗಳಾದರೂ ಸತ್ಯದ ಕಥೆಗಳನ್ನು ಹೇಳುತ್ತಿರುವುದರ ಬಗ್ಗೆ ಸರ್ಕಾರ ಆಂತಕಿತಗೊಂಡಿರುವುದಂತೂ ಸ್ಪಷ್ಟವಾಗಿ ಗೋಚರಿಸುತ್ತದೆ.

ಅದೇ ಟೂಲ್‌ಕಿಟ್‌ನಲ್ಲಿ, ಪತ್ರಕರ್ತರನ್ನು ಹಸಿರು (ತಂತಿಯ ಮೇಲೆ ಕುಂತವರು), ಕಪ್ಪು (ವಿರುದ್ಧ ಇರುವವರು), ಬಿಳಿ (ಪರವಾಗಿರುವವರು) ಬಣ್ಣಗಳಿಂದ ಗುರುತಿಸಿ, ಸರ್ಕಾರದ ಪರವಾಗಿ ಇರುವವರನ್ನು ಹೆಚ್ಚು ಪ್ರಮೋಟ್ ಮಾಡಬೇಕು ಎಂದು ಸಲಹೆ ನೀಡುವ ಮಾಜಿ ಪತ್ರಕರ್ತ ನಿತಿನ್ ಗೋಖಲೆ ಅವರ ಮಾತುಗಳು ಇಂದಿನ ಪತ್ರಿಕೋದ್ಯಮದ ಸ್ಥಿತಿಯನ್ನು ನೆನಪಿಸಿದರೂ, ಸರ್ಕಾರ ಇಂತಹ ಸಚಿವರ ಗುಂಪೊಂದನ್ನು ರಚಿಸಿ ಇಷ್ಟು ಗಂಭೀರವಾಗಿ ಆರು ಸುತ್ತಿನ ಚರ್ಚೆ ನಡೆಸಿರುವುದು ಮತ್ತು ನಕಲಿ ಸುದ್ದಿಗಳನ್ನು ಪತ್ತೆಹಚ್ಚಿ ಓದುಗರಿಗೆ ನಿಜ ತಿಳಿಸುವ ತಾಣಗಳಾದ ಆಲ್ಟ್ ನ್ಯೂಸ್‌ನಂತಹ ಮಾಧ್ಯಮಗಳ ಬಗ್ಗೆ ಆತಂಕಿತಗೊಂಡಿರುವುದು, ಇವೆಲ್ಲವೂ ಎಲ್ಲೋ ಮೂಲೆಯಲ್ಲಿ ಚಿಗುರುತ್ತಿರುವ ಭರವಸೆಯನ್ನು ನೆನಪಿಸುತ್ತದೆ.

ಕಳೆ ತೆಗೆಯುವ ನೆಪದಲ್ಲಿ ತೆನೆಯನ್ನೆ ಚಿವುಟುಹಾಕಲು ಹೊರಟಿರುವ ಸರ್ಕಾರದ ಹುನ್ನಾರವನ್ನು ತಡೆಯಲು ಇರುವುದು ಒಂದೇ ದಾರಿ: ಉತ್ತಮ ಪತ್ರಿಕೋದ್ಯಮವನ್ನು ಉಳಿಸುವುದು ಮತ್ತು ಬೆಳೆಸುವುದು ಮತ್ತು ಹೆಚ್ಚೆಚ್ಚು ನೆಲದ ಬಾಷೆಗಳಲ್ಲಿ ಪ್ರಭುತ್ವದ ಸುಳ್ಳು ನರೆಟಿವ್‌ಗಳಿಗೆ ಸೋಲುಣಿಸುವುದು.

ಟೂಲ್‍ಕಿಟ್‍ನ ವರದಿಯನ್ನು ಇಲ್ಲಿ ಓದಿ..

..


ಇದನ್ನೂ ಓದಿ: ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...