Homeಅಂಕಣಗಳುಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

ಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

- Advertisement -
- Advertisement -

ಇತ್ತೀಚಿಗೆ ಕೇಂದ್ರ ಸರ್ಕಾರದ ಕೆಲವು ಮಂತ್ರಿಗಳು ಮತ್ತು ಸರ್ಕಾರದ ಸಂಸ್ಥೆಗಳ ಕೆಲವು ಅಧಿಕಾರಿಗಳ ತಂಡವೊಂದು ಹಲವು ಬಾರಿ ಭೇಟಿಯಾಗಿ, ಮಾಧ್ಯಮಗಳಲ್ಲಿ ಸರ್ಕಾರದ ಪರವಾದ ನರೆಟಿವ್ ತಳ್ಳಲು ಮಾಡಬೇಕಾದ ಕೆಲಸ ಮತ್ತು ಅನುಸರಿಸಬೇಕಾದ ತಂತ್ರಗಳನ್ನು ಚರ್ಚಿಸಿ ಅದನ್ನು ದಾಖಲಿಸಿದ ಟೂಲ್‌ಕಿಟ್ ಒಂದು ಸೋರಿಕೆಯಾಗಿ ಕಾರವಾನ್, ದ ವೈರ್ ಸೇರಿದಂತೆ ಹಲವು ಮಾಧ್ಯಮಗಳು ಸುದ್ದಿ ಮಾಡಿದವು. ಸರ್ಕಾರದ ನೀತಿ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ಪ್ರಚಾರ ಮಾಡುವುದಷ್ಟೇ ಅದರ ಉದ್ದೇಶವಾಗಿದ್ದರೆ ಅಥವಾ ಅದೇ ದಾಖಲೆಯಲ್ಲಿ ಒಂದು ಕಡೆ ಕೇಂದ್ರ ಸಚಿವರೊಬ್ಬರು ಹೇಳುವಂತೆ “ದಾಖಲೆಗಳಿಲ್ಲದೆ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿರುವ ಜನರ ವಿರುದ್ಧ ಮತ್ತು ನಕಲಿ ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ನಾವು ತಂತ್ರಗಳನ್ನು ರೂಪಿಸಿಕೊಳ್ಳಬೇಕು” ಎನ್ನುವದಷ್ಟೇ ಆಗಿದ್ದರೆ ಇದು ಸಮಸ್ಯಾತ್ಮಕವಾಗಿರಬೇಕಿರಲಿಲ್ಲ. ಆದರೆ ಈ ದಾಖಲೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸರ್ಕಾರದ ತಪ್ಪುಗಳನ್ನು ಜನಕ್ಕೆ ತಿಳಿಸುವ, ರಚನಾತ್ಮಕವಲ್ಲದ ಸರ್ಕಾರದ ಕಾರ್ಯಕ್ರಮಗಳನ್ನು ಟೀಕಿಸುವ ಮಾಧ್ಯಮಗಳನ್ನು ಹೇಗೆ ಮಟ್ಟ ಹಾಕಬೇಕು ಎನ್ನುವುದೂ ಚರ್ಚೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವುದು ಆತಂಕಕ್ಕೆ ಎಡೆಮಾಡುತ್ತದಷ್ಟೇ ಅಲ್ಲದೆ, ಈ ಸಭೆಗಳಲ್ಲಿ ಕೆಲವು ಪ್ರತಿಷ್ಠಿತ ಪತ್ರಿಕೆಗಳ ಪತ್ರಕರ್ತರೂ ಭಾಗಿಯಾಗಿರುವುದು, ಭಾರತದ ಮಾಧ್ಯಮ ಸ್ವಾತಂತ್ರ್ಯ ಕುಸಿಯುತ್ತಿದೆ ಎಂಬ ಆರೋಪಕ್ಕೆ ಪುಷ್ಠಿ ನೀಡಿದಂತಾಗಿದೆ.

ಈ ಟೂಲ್‌ಕಿಟ್‌ನ ಕೆಲವು ಸಂಗತಿಗಳನ್ನು ಚರ್ಚಿಸುವುದಕ್ಕೂ ಮೊದಲು ಒಂದು ವಿಷಯ. ಫ್ರೀಡಂ ಹೌಸ್ ಎಂಬ ಒಂದು ಸಂಸ್ಥೆ ಪ್ರತಿ ವರ್ಷ ವಿಶ್ವದೆಲ್ಲೆಡೆ ಹಲವು ದೇಶಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಿ, ಆ ದೇಶದ ಪ್ರಜಾಪ್ರಭುತ್ವದ ಸ್ಟೇಟಸ್ ಎತ್ತ ಸಾಗಿದೆ, ಆ ದೇಶದಲ್ಲಿ ಮುಕ್ತತೆಯ-ಸ್ವಾತಂತ್ರ್ಯದ ವಾತಾವರಣ ಎಷ್ಟಿದೆ ಎಂಬುದನ್ನು ಅಂಕಿಅಂಶಗಳ ಮೂಲಕ ವರದಿ ಬಿಡುಗಡೆ ಮಾಡಿ, ಕ್ರಮಾಂಕ ನೀಡುತ್ತದೆ. ಆ ವರದಿಯಲ್ಲಿ ಭಾರತವನ್ನು ಮುಕ್ತ ದರ್ಜೆಯಿಂದ (ಫ್ರೀ ಸ್ಟೇಟಸ್), ಭಾಗಶಃ ಮುಕ್ತ ದರ್ಜೆಗೆ (ಪಾರ್‍ಟ್ಲಿ ಫ್ರೀ ಸ್ಟೇಟಸ್) ಇಳಿಸಿದೆ. ಕೋವಿಡ್ ಸಮಯದ ಲಾಕ್‌ಡೌನ್‌ನಿಂದ ಉಂಟಾದ ವಲಸೆ, ಎಗ್ಗಿಲ್ಲದೆ ಮುಂದುವರೆಯುತ್ತಿರುವ ಹಿಂದೂ ರಾಷ್ಟ್ರೀಯವಾದ, ವೈರಸ್ ಹಬ್ಬಲು ಮುಸ್ಲಿಮರು ಕಾರಣ ಎಂದು ಮಾಡಿದ ಸುಳ್ಳು ಪ್ರಚಾರ ಇಂತಹ ಕಾರಣಗಳನ್ನೆಲ್ಲಾ ಪಟ್ಟಿ ಮಾಡಿ, ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ ಭಾರತ ಜಾರುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಮೇಲಿನ ವರದಿಗೂ, ಮಾಧ್ಯಮಗಳನ್ನು ಪ್ರಭಾವಿಸುವ ಟೂಲ್‌ಕಿಟ್ ಚರ್ಚೆಯಾದ ಸಮಯಕ್ಕೂ ಸಂಬಂಧ ಇದೆ. ಈ ಟೂಲ್‌ಕಿಟ್ ಚರ್ಚೆ ಆಗಿರುವುದು 2020ರ ಮಧ್ಯ ಭಾಗದಲ್ಲಿಯೇ. ಫ್ರೀಡಂ ಹೌಸ್ ಅವಲೋಕಿಸಿರುವುದು ಕೂಡ 2020ರ ಭಾರತದ ಪರಿಸ್ಥಿತಿಯನ್ನೇ. 14.06.20ರಿಂದ 09.07.20ರ ನಡುವೆ ನಡೆಯುವ ಆರು ಸಭೆಗಳಲ್ಲಿ ಭಾಗವಹಿಸಿರುವ ’ಸಚಿವರ ಗುಂಪು’ ಮುಖ್ತಾರ್ ಅಬ್ಬಾಸ್ ನಖ್ವಿ, ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇರ್, ಎಸ್ ಜೈಶಂಕರ್ ಕ್ಯಾಬಿನೆಟ್ ದರ್ಜೆಯ ಸಚಿವರಾದರೆ, ಕಿರೆನ್ ರಿಜೆಜು, ಹರ್ದೀಪ್ ಸಿಂಗ್ ಪೂರಿ, ಅನುರಾಗ್ ಠಾಕೂರ್, ಬಾಬುಲಾಲ್ ಸುಪ್ರಿಯೋ ರಾಜ್ಯ ದರ್ಜೆ ಸಚಿವರು.

ಒಂದು ಕಡೆ ಸ್ಮೃತಿ ಇರಾನಿಯವರು “ನಾವು ಋಣಾತ್ಮಕ ಮತ್ತು ಧನಾತ್ಮಕ ಪ್ರಭಾವಿಗಳನ್ನು ಗುರುತಿಸಬೇಕು” ಅಂದರೆ, ಮತ್ತೊಂದು ಕಡೆ ಅನುರಾಗ್ ಠಾಕೂರ್ ಅವರು ನಾವು ಇತರ ದೇಶದ ಬಲಪಂಥೀಯ ರಾಜಕೀಯ ಪಕ್ಷಗಳೊಂದಿಗೆ ಜೊತೆಗೂಡಿ ಒಂದು ಸಾಮಾನ್ಯ ನೆಲೆ ಕಂಡುಕೊಳ್ಳಬೇಕು ಎನ್ನುತ್ತಾರೆ. ರವಿಶಂಕರ್ ಪ್ರಸಾದ್ ಅವರು, ತಮ್ಮ ಪಕ್ಷದ ಉನ್ನತ ಸಮಿತಿಯ ಮಾಧ್ಯಮ ಹಸ್ತಕ್ಷೇಪ ದೊಡ್ಡದಾಗಿ ಬೆಳೆಯುತ್ತಿಲ್ಲ ಎನ್ನುತ್ತಾರೆ ಮತ್ತು ಸರ್ಕಾರದ ಪರವಾಗಿ ಬರೆಯಬಲ್ಲ ಅಕಾಡೆಮಿಕ್‌ಗಳು, ವಿಶ್ವವಿದ್ಯಾಲಯದ ಕುಲಪತಿಗಳು, ಮಾಜಿ ಐಎಫ್‌ಎಸ್ ಅಧಿಕಾರಿಗಳನ್ನು ಗುರುತಿಸಬೇಕೆಂದು ಕೂಡ ಸಲಹೆ ನೀಡುತ್ತಾರೆ.

ಮುಂದುವರೆದು, ಇದು ಕೇವಲ ಸಚಿವರ ಗುಂಪಿನ ಚರ್ಚೆ ಮಾತ್ರ ಆಗಿರದೆ, ಆರ್‌ಎಸ್‌ಎಸ್‌ನ ಗುರುಮೂರ್ತಿ, ಪ್ರಸಾರ ಭಾರತಿ ಅಧ್ಯಕ್ಷ ಸೂರ್ಯ ಪ್ರಕಾಶ್ ಮುಂತಾದವರು ಸೇರಿದಂತೆ, ದ ಹಿಂದೂ, ಇಂಡಿಯನ್ ಎಕ್ಸಪ್ರೆಸ್ ಪತ್ರಿಕೆಯಂತಹ ಪತ್ರಕರ್ತರೂ ಕೆಲವು ಸಭೆಗಳಲ್ಲಿ ಭಾಗಿಯಾಗಿರುವುದನ್ನು ದಾಖಲಿಸಲಾಗಿದೆ. ಗುರುಮೂರ್ತಿ ಒಂದು ಕಡೆ ಮಾತನಾಡುತ್ತಾ, ರಿಪಬ್ಲಿಕ್ ಟಿವಿ ವಾಹಿನಿ ಸರ್ಕಾರದ ಬಗ್ಗೆ ಪ್ರಚಾರ ಮಾಡುತ್ತಿದ್ದರೂ, ಅದನ್ನು ಹೊಗಳುಭಟ್ಟ ಎಂದು ಜನರು ಗುರುತಿಸಿದ್ದಾರೆ. ನಮ್ಮ ನರೆಟಿವ್‌ಗಾಗಿ ಪೋಖ್ರಾನ್ ಬೇಕಾಗಿದೆ ಎನ್ನುತ್ತಾರೆ.

ಅಂದರೆ ಮೀಡಿಯಾ ನಿಯಂತ್ರಣದ ಈ ಯೋಜನೆಯ ಹೆಸರನ್ನು ’ಪೋಖ್ರಾನ್ ಎಫೆಕ್ಟ್’ ಎಂದು ಕರೆದಿರುವುದು ಇಲ್ಲಿ ಮುಖ್ಯ. ಇಂದಿರಾಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರುಗಳು ಪ್ರಧಾನಮಂತ್ರಿಯಾಗಿದ್ದಾಗ ಪೋಖ್ರಾನ್‌ನಲ್ಲಿ ನಡೆಸಿದ್ದ ಅಣು ಪರೀಕ್ಷೆ ಅಂದಿನ ಸರ್ಕಾರಗಳಿಗೆ ಭಾರಿ ಜನಪ್ರಿಯತೆ ತಂದುಕೊಟ್ಟಿತ್ತು. ಈಗ ಅದೇ ಹೆಸರಿನಲ್ಲಿ ಮಾಧ್ಯಮಗಳ ಮೂಲಕ ಜನಪ್ರಿಯತೆಯನ್ನು ಕಂಡುಕೊಳ್ಳಲು ಈ ಸರ್ಕಾರ ತಂತ್ರ ರಚಿಸುತ್ತಿದೆ.

ಇವೆಲ್ಲ ತಂತ್ರಗಾರಿಕೆಯ ನಡುವೆಯೂ, ರಿಪಬ್ಲಿಕ್ ಟಿವಿ ಢೋಲು ಹೊಡೆಯುತ್ತಿರುವುದು ಅಷ್ಟು ಮುಖ್ಯವಲ್ಲ ಅನ್ನುವ ಅಭಿಪ್ರಾಯವಾಗಲೀ, ಖಾಸಗಿ ಸಂಸ್ಥೆಯೊಂದರ ಪ್ರತಿನಿಧಿ ಕಾಂಚನ ಗುಪ್ತ ಅನ್ನುವವರು ’ಗೂಗಲ್ ಸಂಸ್ಥೆ ವೈರ್, ಸ್ಕ್ರಾಲ್, ಪ್ರಿಂಟ್, ಹಿಂದೂ ಮಾಧ್ಯಮ ಸಂಸ್ಥೆಗಳ ಸುದ್ದಿಗಳನ್ನು ಪ್ರಚಾರ ಮಾಡುತ್ತದೆ, ಇದಕ್ಕೆ ಕಡಿವಾಣ ಹಾಕಬೇಕು’ ಅನ್ನುವ ಮಾತಾಗಲೀ, ಚುನಾವಣಾ ಸಮಯದಲ್ಲಿ ಪಕ್ಷ ಮಾಧ್ಯಮಗಳನ್ನು ಬಹಳ ಚೆನ್ನಾಗಿ ನಿರ್ವಹಿಸುತ್ತದೆ, ಬೇರೆ ಸಮಯದಲ್ಲಿ ಇದು ಏಕೆ ಸಾಧ್ಯವಿಲ್ಲ ಎಂದು ಅಶೋಕ ಟಂಡನ್ ಕೇಳಿಕೊಳ್ಳುವ ಪ್ರಶ್ನೆಯಾಗಲೀ, ಸಚಿವರು ಮತ್ತು ಅಧಿಕಾರಿಗಳು ಬರೆಯುವ ಓಪ್-ಎಡ್‌ಗಳನ್ನು (ಅಭಿಪ್ರಾಯ ಸೂಚಿಸುವ ಸಂಪಾದಕೀಯ ಲೇಖನಗಳು) ನಿಲ್ಲಿಸಿ, ಅವು ಸಾಂಕ್ರಾಮಿಕವಾಗಿವೆ ಮತ್ತು ಅವನ್ನು ಜನ ಪ್ರಪೋಗಾಂಡ ಎನ್ನುತ್ತಿದ್ದಾರೆ, ಅವುಗಳಿಂದ ಹೆಚ್ಚು ಉಪಯೋಗವಿಲ್ಲ ಎನ್ನುವ ಅಶೋಕ್ ಮಲಿಕ್ ಅವರ ಮಾತುಗಳಾಗಲೀ ಬೇರೆಯದೇ ಕಥೆಯನ್ನು ಹೇಳುತ್ತಿವೆ. ತಾವು ಹತ್ತಾರು ವರ್ಷ ನಡೆಸಿಕೊಂಡು ಬಂದಿರುವ ಪ್ರಪೋಗಾಂಡದ ವಿರುದ್ಧ ಬೆರಳೆಣಿಕೆಯ ಮಾಧ್ಯಮಗಳಾದರೂ ಸತ್ಯದ ಕಥೆಗಳನ್ನು ಹೇಳುತ್ತಿರುವುದರ ಬಗ್ಗೆ ಸರ್ಕಾರ ಆಂತಕಿತಗೊಂಡಿರುವುದಂತೂ ಸ್ಪಷ್ಟವಾಗಿ ಗೋಚರಿಸುತ್ತದೆ.

ಅದೇ ಟೂಲ್‌ಕಿಟ್‌ನಲ್ಲಿ, ಪತ್ರಕರ್ತರನ್ನು ಹಸಿರು (ತಂತಿಯ ಮೇಲೆ ಕುಂತವರು), ಕಪ್ಪು (ವಿರುದ್ಧ ಇರುವವರು), ಬಿಳಿ (ಪರವಾಗಿರುವವರು) ಬಣ್ಣಗಳಿಂದ ಗುರುತಿಸಿ, ಸರ್ಕಾರದ ಪರವಾಗಿ ಇರುವವರನ್ನು ಹೆಚ್ಚು ಪ್ರಮೋಟ್ ಮಾಡಬೇಕು ಎಂದು ಸಲಹೆ ನೀಡುವ ಮಾಜಿ ಪತ್ರಕರ್ತ ನಿತಿನ್ ಗೋಖಲೆ ಅವರ ಮಾತುಗಳು ಇಂದಿನ ಪತ್ರಿಕೋದ್ಯಮದ ಸ್ಥಿತಿಯನ್ನು ನೆನಪಿಸಿದರೂ, ಸರ್ಕಾರ ಇಂತಹ ಸಚಿವರ ಗುಂಪೊಂದನ್ನು ರಚಿಸಿ ಇಷ್ಟು ಗಂಭೀರವಾಗಿ ಆರು ಸುತ್ತಿನ ಚರ್ಚೆ ನಡೆಸಿರುವುದು ಮತ್ತು ನಕಲಿ ಸುದ್ದಿಗಳನ್ನು ಪತ್ತೆಹಚ್ಚಿ ಓದುಗರಿಗೆ ನಿಜ ತಿಳಿಸುವ ತಾಣಗಳಾದ ಆಲ್ಟ್ ನ್ಯೂಸ್‌ನಂತಹ ಮಾಧ್ಯಮಗಳ ಬಗ್ಗೆ ಆತಂಕಿತಗೊಂಡಿರುವುದು, ಇವೆಲ್ಲವೂ ಎಲ್ಲೋ ಮೂಲೆಯಲ್ಲಿ ಚಿಗುರುತ್ತಿರುವ ಭರವಸೆಯನ್ನು ನೆನಪಿಸುತ್ತದೆ.

ಕಳೆ ತೆಗೆಯುವ ನೆಪದಲ್ಲಿ ತೆನೆಯನ್ನೆ ಚಿವುಟುಹಾಕಲು ಹೊರಟಿರುವ ಸರ್ಕಾರದ ಹುನ್ನಾರವನ್ನು ತಡೆಯಲು ಇರುವುದು ಒಂದೇ ದಾರಿ: ಉತ್ತಮ ಪತ್ರಿಕೋದ್ಯಮವನ್ನು ಉಳಿಸುವುದು ಮತ್ತು ಬೆಳೆಸುವುದು ಮತ್ತು ಹೆಚ್ಚೆಚ್ಚು ನೆಲದ ಬಾಷೆಗಳಲ್ಲಿ ಪ್ರಭುತ್ವದ ಸುಳ್ಳು ನರೆಟಿವ್‌ಗಳಿಗೆ ಸೋಲುಣಿಸುವುದು.

ಟೂಲ್‍ಕಿಟ್‍ನ ವರದಿಯನ್ನು ಇಲ್ಲಿ ಓದಿ..

..


ಇದನ್ನೂ ಓದಿ: ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...