Homeಅಂಕಣಗಳುಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

ಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

- Advertisement -
- Advertisement -

ಇತ್ತೀಚಿಗೆ ಕೇಂದ್ರ ಸರ್ಕಾರದ ಕೆಲವು ಮಂತ್ರಿಗಳು ಮತ್ತು ಸರ್ಕಾರದ ಸಂಸ್ಥೆಗಳ ಕೆಲವು ಅಧಿಕಾರಿಗಳ ತಂಡವೊಂದು ಹಲವು ಬಾರಿ ಭೇಟಿಯಾಗಿ, ಮಾಧ್ಯಮಗಳಲ್ಲಿ ಸರ್ಕಾರದ ಪರವಾದ ನರೆಟಿವ್ ತಳ್ಳಲು ಮಾಡಬೇಕಾದ ಕೆಲಸ ಮತ್ತು ಅನುಸರಿಸಬೇಕಾದ ತಂತ್ರಗಳನ್ನು ಚರ್ಚಿಸಿ ಅದನ್ನು ದಾಖಲಿಸಿದ ಟೂಲ್‌ಕಿಟ್ ಒಂದು ಸೋರಿಕೆಯಾಗಿ ಕಾರವಾನ್, ದ ವೈರ್ ಸೇರಿದಂತೆ ಹಲವು ಮಾಧ್ಯಮಗಳು ಸುದ್ದಿ ಮಾಡಿದವು. ಸರ್ಕಾರದ ನೀತಿ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ಪ್ರಚಾರ ಮಾಡುವುದಷ್ಟೇ ಅದರ ಉದ್ದೇಶವಾಗಿದ್ದರೆ ಅಥವಾ ಅದೇ ದಾಖಲೆಯಲ್ಲಿ ಒಂದು ಕಡೆ ಕೇಂದ್ರ ಸಚಿವರೊಬ್ಬರು ಹೇಳುವಂತೆ “ದಾಖಲೆಗಳಿಲ್ಲದೆ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿರುವ ಜನರ ವಿರುದ್ಧ ಮತ್ತು ನಕಲಿ ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ನಾವು ತಂತ್ರಗಳನ್ನು ರೂಪಿಸಿಕೊಳ್ಳಬೇಕು” ಎನ್ನುವದಷ್ಟೇ ಆಗಿದ್ದರೆ ಇದು ಸಮಸ್ಯಾತ್ಮಕವಾಗಿರಬೇಕಿರಲಿಲ್ಲ. ಆದರೆ ಈ ದಾಖಲೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸರ್ಕಾರದ ತಪ್ಪುಗಳನ್ನು ಜನಕ್ಕೆ ತಿಳಿಸುವ, ರಚನಾತ್ಮಕವಲ್ಲದ ಸರ್ಕಾರದ ಕಾರ್ಯಕ್ರಮಗಳನ್ನು ಟೀಕಿಸುವ ಮಾಧ್ಯಮಗಳನ್ನು ಹೇಗೆ ಮಟ್ಟ ಹಾಕಬೇಕು ಎನ್ನುವುದೂ ಚರ್ಚೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವುದು ಆತಂಕಕ್ಕೆ ಎಡೆಮಾಡುತ್ತದಷ್ಟೇ ಅಲ್ಲದೆ, ಈ ಸಭೆಗಳಲ್ಲಿ ಕೆಲವು ಪ್ರತಿಷ್ಠಿತ ಪತ್ರಿಕೆಗಳ ಪತ್ರಕರ್ತರೂ ಭಾಗಿಯಾಗಿರುವುದು, ಭಾರತದ ಮಾಧ್ಯಮ ಸ್ವಾತಂತ್ರ್ಯ ಕುಸಿಯುತ್ತಿದೆ ಎಂಬ ಆರೋಪಕ್ಕೆ ಪುಷ್ಠಿ ನೀಡಿದಂತಾಗಿದೆ.

ಈ ಟೂಲ್‌ಕಿಟ್‌ನ ಕೆಲವು ಸಂಗತಿಗಳನ್ನು ಚರ್ಚಿಸುವುದಕ್ಕೂ ಮೊದಲು ಒಂದು ವಿಷಯ. ಫ್ರೀಡಂ ಹೌಸ್ ಎಂಬ ಒಂದು ಸಂಸ್ಥೆ ಪ್ರತಿ ವರ್ಷ ವಿಶ್ವದೆಲ್ಲೆಡೆ ಹಲವು ದೇಶಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಿ, ಆ ದೇಶದ ಪ್ರಜಾಪ್ರಭುತ್ವದ ಸ್ಟೇಟಸ್ ಎತ್ತ ಸಾಗಿದೆ, ಆ ದೇಶದಲ್ಲಿ ಮುಕ್ತತೆಯ-ಸ್ವಾತಂತ್ರ್ಯದ ವಾತಾವರಣ ಎಷ್ಟಿದೆ ಎಂಬುದನ್ನು ಅಂಕಿಅಂಶಗಳ ಮೂಲಕ ವರದಿ ಬಿಡುಗಡೆ ಮಾಡಿ, ಕ್ರಮಾಂಕ ನೀಡುತ್ತದೆ. ಆ ವರದಿಯಲ್ಲಿ ಭಾರತವನ್ನು ಮುಕ್ತ ದರ್ಜೆಯಿಂದ (ಫ್ರೀ ಸ್ಟೇಟಸ್), ಭಾಗಶಃ ಮುಕ್ತ ದರ್ಜೆಗೆ (ಪಾರ್‍ಟ್ಲಿ ಫ್ರೀ ಸ್ಟೇಟಸ್) ಇಳಿಸಿದೆ. ಕೋವಿಡ್ ಸಮಯದ ಲಾಕ್‌ಡೌನ್‌ನಿಂದ ಉಂಟಾದ ವಲಸೆ, ಎಗ್ಗಿಲ್ಲದೆ ಮುಂದುವರೆಯುತ್ತಿರುವ ಹಿಂದೂ ರಾಷ್ಟ್ರೀಯವಾದ, ವೈರಸ್ ಹಬ್ಬಲು ಮುಸ್ಲಿಮರು ಕಾರಣ ಎಂದು ಮಾಡಿದ ಸುಳ್ಳು ಪ್ರಚಾರ ಇಂತಹ ಕಾರಣಗಳನ್ನೆಲ್ಲಾ ಪಟ್ಟಿ ಮಾಡಿ, ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ ಭಾರತ ಜಾರುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಮೇಲಿನ ವರದಿಗೂ, ಮಾಧ್ಯಮಗಳನ್ನು ಪ್ರಭಾವಿಸುವ ಟೂಲ್‌ಕಿಟ್ ಚರ್ಚೆಯಾದ ಸಮಯಕ್ಕೂ ಸಂಬಂಧ ಇದೆ. ಈ ಟೂಲ್‌ಕಿಟ್ ಚರ್ಚೆ ಆಗಿರುವುದು 2020ರ ಮಧ್ಯ ಭಾಗದಲ್ಲಿಯೇ. ಫ್ರೀಡಂ ಹೌಸ್ ಅವಲೋಕಿಸಿರುವುದು ಕೂಡ 2020ರ ಭಾರತದ ಪರಿಸ್ಥಿತಿಯನ್ನೇ. 14.06.20ರಿಂದ 09.07.20ರ ನಡುವೆ ನಡೆಯುವ ಆರು ಸಭೆಗಳಲ್ಲಿ ಭಾಗವಹಿಸಿರುವ ’ಸಚಿವರ ಗುಂಪು’ ಮುಖ್ತಾರ್ ಅಬ್ಬಾಸ್ ನಖ್ವಿ, ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇರ್, ಎಸ್ ಜೈಶಂಕರ್ ಕ್ಯಾಬಿನೆಟ್ ದರ್ಜೆಯ ಸಚಿವರಾದರೆ, ಕಿರೆನ್ ರಿಜೆಜು, ಹರ್ದೀಪ್ ಸಿಂಗ್ ಪೂರಿ, ಅನುರಾಗ್ ಠಾಕೂರ್, ಬಾಬುಲಾಲ್ ಸುಪ್ರಿಯೋ ರಾಜ್ಯ ದರ್ಜೆ ಸಚಿವರು.

ಒಂದು ಕಡೆ ಸ್ಮೃತಿ ಇರಾನಿಯವರು “ನಾವು ಋಣಾತ್ಮಕ ಮತ್ತು ಧನಾತ್ಮಕ ಪ್ರಭಾವಿಗಳನ್ನು ಗುರುತಿಸಬೇಕು” ಅಂದರೆ, ಮತ್ತೊಂದು ಕಡೆ ಅನುರಾಗ್ ಠಾಕೂರ್ ಅವರು ನಾವು ಇತರ ದೇಶದ ಬಲಪಂಥೀಯ ರಾಜಕೀಯ ಪಕ್ಷಗಳೊಂದಿಗೆ ಜೊತೆಗೂಡಿ ಒಂದು ಸಾಮಾನ್ಯ ನೆಲೆ ಕಂಡುಕೊಳ್ಳಬೇಕು ಎನ್ನುತ್ತಾರೆ. ರವಿಶಂಕರ್ ಪ್ರಸಾದ್ ಅವರು, ತಮ್ಮ ಪಕ್ಷದ ಉನ್ನತ ಸಮಿತಿಯ ಮಾಧ್ಯಮ ಹಸ್ತಕ್ಷೇಪ ದೊಡ್ಡದಾಗಿ ಬೆಳೆಯುತ್ತಿಲ್ಲ ಎನ್ನುತ್ತಾರೆ ಮತ್ತು ಸರ್ಕಾರದ ಪರವಾಗಿ ಬರೆಯಬಲ್ಲ ಅಕಾಡೆಮಿಕ್‌ಗಳು, ವಿಶ್ವವಿದ್ಯಾಲಯದ ಕುಲಪತಿಗಳು, ಮಾಜಿ ಐಎಫ್‌ಎಸ್ ಅಧಿಕಾರಿಗಳನ್ನು ಗುರುತಿಸಬೇಕೆಂದು ಕೂಡ ಸಲಹೆ ನೀಡುತ್ತಾರೆ.

ಮುಂದುವರೆದು, ಇದು ಕೇವಲ ಸಚಿವರ ಗುಂಪಿನ ಚರ್ಚೆ ಮಾತ್ರ ಆಗಿರದೆ, ಆರ್‌ಎಸ್‌ಎಸ್‌ನ ಗುರುಮೂರ್ತಿ, ಪ್ರಸಾರ ಭಾರತಿ ಅಧ್ಯಕ್ಷ ಸೂರ್ಯ ಪ್ರಕಾಶ್ ಮುಂತಾದವರು ಸೇರಿದಂತೆ, ದ ಹಿಂದೂ, ಇಂಡಿಯನ್ ಎಕ್ಸಪ್ರೆಸ್ ಪತ್ರಿಕೆಯಂತಹ ಪತ್ರಕರ್ತರೂ ಕೆಲವು ಸಭೆಗಳಲ್ಲಿ ಭಾಗಿಯಾಗಿರುವುದನ್ನು ದಾಖಲಿಸಲಾಗಿದೆ. ಗುರುಮೂರ್ತಿ ಒಂದು ಕಡೆ ಮಾತನಾಡುತ್ತಾ, ರಿಪಬ್ಲಿಕ್ ಟಿವಿ ವಾಹಿನಿ ಸರ್ಕಾರದ ಬಗ್ಗೆ ಪ್ರಚಾರ ಮಾಡುತ್ತಿದ್ದರೂ, ಅದನ್ನು ಹೊಗಳುಭಟ್ಟ ಎಂದು ಜನರು ಗುರುತಿಸಿದ್ದಾರೆ. ನಮ್ಮ ನರೆಟಿವ್‌ಗಾಗಿ ಪೋಖ್ರಾನ್ ಬೇಕಾಗಿದೆ ಎನ್ನುತ್ತಾರೆ.

ಅಂದರೆ ಮೀಡಿಯಾ ನಿಯಂತ್ರಣದ ಈ ಯೋಜನೆಯ ಹೆಸರನ್ನು ’ಪೋಖ್ರಾನ್ ಎಫೆಕ್ಟ್’ ಎಂದು ಕರೆದಿರುವುದು ಇಲ್ಲಿ ಮುಖ್ಯ. ಇಂದಿರಾಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರುಗಳು ಪ್ರಧಾನಮಂತ್ರಿಯಾಗಿದ್ದಾಗ ಪೋಖ್ರಾನ್‌ನಲ್ಲಿ ನಡೆಸಿದ್ದ ಅಣು ಪರೀಕ್ಷೆ ಅಂದಿನ ಸರ್ಕಾರಗಳಿಗೆ ಭಾರಿ ಜನಪ್ರಿಯತೆ ತಂದುಕೊಟ್ಟಿತ್ತು. ಈಗ ಅದೇ ಹೆಸರಿನಲ್ಲಿ ಮಾಧ್ಯಮಗಳ ಮೂಲಕ ಜನಪ್ರಿಯತೆಯನ್ನು ಕಂಡುಕೊಳ್ಳಲು ಈ ಸರ್ಕಾರ ತಂತ್ರ ರಚಿಸುತ್ತಿದೆ.

ಇವೆಲ್ಲ ತಂತ್ರಗಾರಿಕೆಯ ನಡುವೆಯೂ, ರಿಪಬ್ಲಿಕ್ ಟಿವಿ ಢೋಲು ಹೊಡೆಯುತ್ತಿರುವುದು ಅಷ್ಟು ಮುಖ್ಯವಲ್ಲ ಅನ್ನುವ ಅಭಿಪ್ರಾಯವಾಗಲೀ, ಖಾಸಗಿ ಸಂಸ್ಥೆಯೊಂದರ ಪ್ರತಿನಿಧಿ ಕಾಂಚನ ಗುಪ್ತ ಅನ್ನುವವರು ’ಗೂಗಲ್ ಸಂಸ್ಥೆ ವೈರ್, ಸ್ಕ್ರಾಲ್, ಪ್ರಿಂಟ್, ಹಿಂದೂ ಮಾಧ್ಯಮ ಸಂಸ್ಥೆಗಳ ಸುದ್ದಿಗಳನ್ನು ಪ್ರಚಾರ ಮಾಡುತ್ತದೆ, ಇದಕ್ಕೆ ಕಡಿವಾಣ ಹಾಕಬೇಕು’ ಅನ್ನುವ ಮಾತಾಗಲೀ, ಚುನಾವಣಾ ಸಮಯದಲ್ಲಿ ಪಕ್ಷ ಮಾಧ್ಯಮಗಳನ್ನು ಬಹಳ ಚೆನ್ನಾಗಿ ನಿರ್ವಹಿಸುತ್ತದೆ, ಬೇರೆ ಸಮಯದಲ್ಲಿ ಇದು ಏಕೆ ಸಾಧ್ಯವಿಲ್ಲ ಎಂದು ಅಶೋಕ ಟಂಡನ್ ಕೇಳಿಕೊಳ್ಳುವ ಪ್ರಶ್ನೆಯಾಗಲೀ, ಸಚಿವರು ಮತ್ತು ಅಧಿಕಾರಿಗಳು ಬರೆಯುವ ಓಪ್-ಎಡ್‌ಗಳನ್ನು (ಅಭಿಪ್ರಾಯ ಸೂಚಿಸುವ ಸಂಪಾದಕೀಯ ಲೇಖನಗಳು) ನಿಲ್ಲಿಸಿ, ಅವು ಸಾಂಕ್ರಾಮಿಕವಾಗಿವೆ ಮತ್ತು ಅವನ್ನು ಜನ ಪ್ರಪೋಗಾಂಡ ಎನ್ನುತ್ತಿದ್ದಾರೆ, ಅವುಗಳಿಂದ ಹೆಚ್ಚು ಉಪಯೋಗವಿಲ್ಲ ಎನ್ನುವ ಅಶೋಕ್ ಮಲಿಕ್ ಅವರ ಮಾತುಗಳಾಗಲೀ ಬೇರೆಯದೇ ಕಥೆಯನ್ನು ಹೇಳುತ್ತಿವೆ. ತಾವು ಹತ್ತಾರು ವರ್ಷ ನಡೆಸಿಕೊಂಡು ಬಂದಿರುವ ಪ್ರಪೋಗಾಂಡದ ವಿರುದ್ಧ ಬೆರಳೆಣಿಕೆಯ ಮಾಧ್ಯಮಗಳಾದರೂ ಸತ್ಯದ ಕಥೆಗಳನ್ನು ಹೇಳುತ್ತಿರುವುದರ ಬಗ್ಗೆ ಸರ್ಕಾರ ಆಂತಕಿತಗೊಂಡಿರುವುದಂತೂ ಸ್ಪಷ್ಟವಾಗಿ ಗೋಚರಿಸುತ್ತದೆ.

ಅದೇ ಟೂಲ್‌ಕಿಟ್‌ನಲ್ಲಿ, ಪತ್ರಕರ್ತರನ್ನು ಹಸಿರು (ತಂತಿಯ ಮೇಲೆ ಕುಂತವರು), ಕಪ್ಪು (ವಿರುದ್ಧ ಇರುವವರು), ಬಿಳಿ (ಪರವಾಗಿರುವವರು) ಬಣ್ಣಗಳಿಂದ ಗುರುತಿಸಿ, ಸರ್ಕಾರದ ಪರವಾಗಿ ಇರುವವರನ್ನು ಹೆಚ್ಚು ಪ್ರಮೋಟ್ ಮಾಡಬೇಕು ಎಂದು ಸಲಹೆ ನೀಡುವ ಮಾಜಿ ಪತ್ರಕರ್ತ ನಿತಿನ್ ಗೋಖಲೆ ಅವರ ಮಾತುಗಳು ಇಂದಿನ ಪತ್ರಿಕೋದ್ಯಮದ ಸ್ಥಿತಿಯನ್ನು ನೆನಪಿಸಿದರೂ, ಸರ್ಕಾರ ಇಂತಹ ಸಚಿವರ ಗುಂಪೊಂದನ್ನು ರಚಿಸಿ ಇಷ್ಟು ಗಂಭೀರವಾಗಿ ಆರು ಸುತ್ತಿನ ಚರ್ಚೆ ನಡೆಸಿರುವುದು ಮತ್ತು ನಕಲಿ ಸುದ್ದಿಗಳನ್ನು ಪತ್ತೆಹಚ್ಚಿ ಓದುಗರಿಗೆ ನಿಜ ತಿಳಿಸುವ ತಾಣಗಳಾದ ಆಲ್ಟ್ ನ್ಯೂಸ್‌ನಂತಹ ಮಾಧ್ಯಮಗಳ ಬಗ್ಗೆ ಆತಂಕಿತಗೊಂಡಿರುವುದು, ಇವೆಲ್ಲವೂ ಎಲ್ಲೋ ಮೂಲೆಯಲ್ಲಿ ಚಿಗುರುತ್ತಿರುವ ಭರವಸೆಯನ್ನು ನೆನಪಿಸುತ್ತದೆ.

ಕಳೆ ತೆಗೆಯುವ ನೆಪದಲ್ಲಿ ತೆನೆಯನ್ನೆ ಚಿವುಟುಹಾಕಲು ಹೊರಟಿರುವ ಸರ್ಕಾರದ ಹುನ್ನಾರವನ್ನು ತಡೆಯಲು ಇರುವುದು ಒಂದೇ ದಾರಿ: ಉತ್ತಮ ಪತ್ರಿಕೋದ್ಯಮವನ್ನು ಉಳಿಸುವುದು ಮತ್ತು ಬೆಳೆಸುವುದು ಮತ್ತು ಹೆಚ್ಚೆಚ್ಚು ನೆಲದ ಬಾಷೆಗಳಲ್ಲಿ ಪ್ರಭುತ್ವದ ಸುಳ್ಳು ನರೆಟಿವ್‌ಗಳಿಗೆ ಸೋಲುಣಿಸುವುದು.

ಟೂಲ್‍ಕಿಟ್‍ನ ವರದಿಯನ್ನು ಇಲ್ಲಿ ಓದಿ..

..


ಇದನ್ನೂ ಓದಿ: ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...