Homeಮುಖಪುಟಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ... ಈ ಥರದ ‍‍ಶೀರ್ಷಿಕೆಗಳ ಹಿಂದಿನ ಉದ್ದೇಶವೇನು?

- Advertisement -
- Advertisement -

ಗಣತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧವೂ ಜನ ಹೋರಾಟ ಸಂಘಟಿಸಲು ಅವಕಾಶ ಇದೆ. ಇದೇ ಕಾರಣಕ್ಕೆ ಕಳೆದ 75 ವರ್ಷಗಳಲ್ಲಿ ಭರತ ಭೂಮಿ ನೂರಾರು ಹೋರಾಟಗಳಿಗೆ ಸಾಕ್ಷಿಯಾಗಿದೆ. ಇಂತಹ ಹೋರಾಟಗಳನ್ನು ಜನರ ನಡುವೆ ತೆಗೆದುಕೊಂಡು ಹೋದ ಮತ್ತು ಆ ಹೋರಾಟದ ಗೆಲುವಿಗೆ ತೆರೆಯ ಹಿಂದೆ ನಿಂತು ಶ್ರಮಿಸಿದ ದೊಡ್ಡ ಇತಿಹಾಸ ಭಾರತದ ಪತ್ರಿಕೋದ್ಯಮಕ್ಕಿದೆ. ಭಾರತದ ಸ್ವಾತಂತ್ರ್ಯ ಹೋರಾಟದಿಂದ 2013-14ರ ಸುಮಾರಿಗೆ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನವರಗೆ ದೇಶದ ಪತ್ರಿಕೋದ್ಯಮ ನಿರ್ವಹಿಸಿದ್ದ ಜವಾಬ್ದಾರಿ ನಿರ್ಣಾಯಕ ಮತ್ತು ನಿಸ್ಸಂಶಯವಾಗಿ ಪ್ರಶಂಸನಾರ್ಹ. ಆಡಳಿತರೂಢ ಸರ್ಕಾರವನ್ನೇ ಬೀಳಿಸಿದ ಕೀರ್ತಿಯೂ ಮಾಧ್ಯಮಗಳಿಗೆ ಇದೆ. ಇಂದಿರಾ ಗಾಂಧಿ ಕಾಲದಲ್ಲಿ ಚಿಗುರೊಡೆದ ಸರ್ವಾಧಿಕಾರದ ವಿರುದ್ಧ ಸೆಟೆದುನಿಂತ ಪತ್ರಿಕೋದ್ಯಮದ ಛಾತಿ ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಿಲಬಸ್ ಎಂದರೂ ತಪ್ಪಾಗಲಾರದು. ಇವೆಲ್ಲ ನಿಜಕ್ಕೂ ಮಾಧ್ಯಮದ ಶಕ್ತಿ. ಆದರೆ, ಇಂದು ಇವೇ ಮಾಧ್ಯಮಗಳಿಗೆ ಏನಾಗಿದೆ?

ಸ್ವಾತಂತ್ರ್ಯಾನಂತರ ಭಾರತ ನೂರಾರು ಹೋರಾಟಗಳನ್ನು ಕಂಡಿದೆ ನಿಜ. ಆದರೆ, ಈ ಎಲ್ಲಾ ಹೋರಾಟಗಳ ತೂಕ ಒಂದಾದರೆ, ಕಳೆದ ಒಂದು ವರ್ಷದಿಂದ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟದ ತೂಕವೇ ಮತ್ತೊಂದು. ಏಕೆಂದರೆ ಈ ಮಟ್ಟಿಗೆ ಸುದೀರ್ಘ ಅವಧಿಗೆ ಸಮಾಜದ ಮೇಲೆ ಈ ಪರಿ ಪ್ರಭಾವ ಬೀರಿದ ಮತ್ತೊಂದು ಹೋರಾಟವನ್ನು ಹೆಸರಿಸುವುದು ಕಷ್ಟ.

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 10 ತಿಂಗಳಿಂದ ದೇಶದ ರೈತರು ವಿರಮಿಸದೆ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್-ಹರಿಯಾಣ ರಾಜ್ಯಗಳಲ್ಲಿ ಹೋರಾಟ ತಕ್ಷಣಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ರೈತ ನಾಯಕ ರಾಕೇಶ್ ಟಿಕಾಯತ್, “10 ತಿಂಗಳಲ್ಲ 10 ವರ್ಷವಾದರೂ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಹೋರಾಟವನ್ನು ತೀವ್ರಗೊಳಿಸುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಒಟ್ಟಾಗಿ ಇಂದು ಭಾರತ್ ಬಂದ್ ಘೋಷಿಸಿವೆ. ಭಾರತ್ ಬಂದ್‌ಗೆ ಪಂಜಾಬ್-ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸಂಪೂರ್ಣವಾಗಿ ಸ್ತಬ್ಧವಾಗಿದೆ. ತಮಿಳುನಾಡಿನಲ್ಲಿ ರೈತರು ರೈಲ್ ರೊಖೋ ನಡೆಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಸುದ್ದಿ ಬಿತ್ತರಿಸುವಲ್ಲಿ ರಾಷ್ಟ್ರೀಯ ಮಾಧ್ಯಮ ಮಾತ್ರವಲ್ಲ ಕನ್ನಡ ಮಾಧ್ಯಮಗಳ ಧ್ವನಿಯೂ ಬೇರೆಯೇ ರೀತಿ ಇದೆ.

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ… ಇವು ಇಂದು ದೃಶ್ಯ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಗಳು. ನಾಳಿನ ಕನ್ನಡ ದಿನ ಪತ್ರಿಕೆಗಳಲ್ಲೂ ಇವಕ್ಕಿಂತ ಭಿನ್ನವಾದ ಪದಗುಚ್ಛಗಳನ್ನು ನಿರೀಕ್ಷೆ ಮಾಡುವುದು ಕಷ್ಟ. ಕೊರೊನಾ ಲಾಕ್‌ಡೌನ್ ಕಾರಣಕ್ಕೆ ಈಗಾಗಲೇ ಆರ್ಥಿಕ ವ್ಯವಸ್ಥೆ ಕುಸಿದಿರುವ ಕಾರಣಕ್ಕೆ ಬಲವಂತಕ್ಕೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಬೇಡ ಎಂದು ರೈತರು ತೀರ್ಮಾನಿಸಿದ್ದರು. ಇದೇ ಸಂದರ್ಭದಲ್ಲಿ ವ್ಯಾಪಾರಸ್ಥರು, ಶಾಲೆಗಳು ಸೇರಿ ನೈತಿಕ ಬೆಂಬಲ ಘೋಷಿಸಿವೆ. ಇಂತಹ ಸಂದರ್ಭದಲ್ಲಿ ವಾಹನಗಳು ಓಡಾಡುತ್ತಿವೆ, ಅಂಗಡಿಗಳು ತೆರೆದಿವೆ, ಹಾಗಾಗಿ ಬಂದ್ ವಿಫಲವಾಗಿದೆ ಎಂದರೆ ಏನರ್ಥ. ದೇಶದ ಎಲ್ಲಾ ಜಿಲ್ಲಾ, ತಾಲ್ಲೂಕುಗಳಲ್ಲಿ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆದಿವೆ. ಅದನ್ನು ಮಾಧ್ಯಮಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿವೆ. ಇಲ್ಲಿ ಉದ್ಭವವಾಗುವ ಪ್ರಶ್ನೆ ಒಂದೇ, ಕಳೆದ 75 ವರ್ಷಗಳ ಕಾಲ ರೈತ, ಕಾರ್ಮಿಕ, ಮಹಿಳಾ ಮತ್ತು ದಲಿತ ಚಳುವಳಿಗಳ ಹಿಂದಿನ ಬೆನ್ನೆಲುಬಾಗಿದ್ದ ಮಾಧ್ಯಮಗಳು ಇಂದೇಕೆ ಬದಲಾಗಿವೆ? ಇವರಿಗೆ ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ದರ್ದಾದರೂ ಏನು? 2013-14ರ ಭ್ರಷ್ಟಾಚಾರ ವಿರೋಧಿ ಆಂದೋಲನದ ವಕ್ತಾರಿಕೆ ವಹಿಸಿ ಸರ್ಕಾರವನ್ನೇ ಪತನಗೊಳಿಸಿದ್ದ ಪತ್ರಿಕೋದ್ಯಮ ಇಂದು ನೈತಿಕ ಅಧಃಪಥನದ ಹಾದಿ ಹಿಡಿದಿರುವುದು ಏಕೆ? ಎಂಬುದು.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ


ಕೃಷಿ ಕ್ಷೇತ್ರವು ರಾಜ್ಯಗಳ ಪಟ್ಟಿಯಲ್ಲಿರುವುದರಿಂದ ರಾಜ್ಯಗಳು ಮತ್ತು ರೈತರೊಂದಿಗೆ ಚರ್ಚಿಸದೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಸರಿಯಲ್ಲ ಎಂಬುದು ರೈತರ ಆರೋಪ. ಈಗಾಗಲೇ ದೇಶದ ಬಹುತೇಕ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ದೇಶದ ರೈಲ್ವೆ ಮತ್ತು ರಕ್ಷಣಾ ಇಲಾಖೆಯಲ್ಲೂ ಶೇ.50 ರಷ್ಟು ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಇದೀಗ ನೂತನ ಕೃಷಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರವನ್ನೂ ಖಾಸಗಿಯವರಿಗೆ ಧಾರೆ ಎರೆಯುವ ಹುನ್ನಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದು ರೈತರ ಆರೋಪ. ಈಗಿನ ಒಂದು ವರ್ಷದಲ್ಲಿ ಇದು ಕೇವಲ ಆರೋಪಗಳಾಗಿ ಮಾತ್ರ ಉಳಿಯದೆ ತಜ್ಞರ ಸಂಶೋಧನೆಯಿಂದಾಗಿ ಕೃಷಿ ನೀತಿ ರೈತರಿಗೆ ಮಾರಕ ಮತ್ತು ಕೃಷಿ ಚಟುವಟಿಕೆಯನ್ನೇ ಕತ್ತುಹಿಸುವ ಕೃತ್ಯ ಎಂಬುದನ್ನು ಸಾಬೀತುಪಡಿಸಲಾಗಿದೆ. ಹಾಗಿದ್ದೂ ಮಾಧ್ಯಮಗಳು ಏಕೆ ರೈತರ ಪರ ಇಲ್ಲ?

ಇನ್ನೂ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಹೋರಾಟವನ್ನು ಸುದ್ದಿಯ ಮೂಲಕ ಜನರ ಬಳಿ ತಲುಪಿಸುವುದು ಇರಲಿ, ಮಾಧ್ಯಮಗಳೇ ಆ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವಲ್ಲಿ ನಿರತವಾಗಿದ್ದವು. ಇನ್ನೂ ಕರ್ನಾಟಕದ ಮಾಧ್ಯಮಗಳೂ ಈ ವಿಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಹಲವು ಬಣ್ಣ ಬಣ್ಣದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ರೈತ ಹೋರಾಟವನ್ನು ಮುಗಿಸಲು ಪ್ರಭುತ್ವದ ಪ್ರಯತ್ನಕ್ಕಿಂತ ಪತ್ರಿಕೋದ್ಯಮದ ಪ್ರಯತ್ನ ತುಸು ಹೆಚ್ಚೇ ಆಗಿತ್ತು.

ಇದೇ ಕಾರಣಕ್ಕೆ ದೆಹಲಿ ರೈತ ಹೋರಾಟಗಾರರು ಗೋದಿ ಮಾಧ್ಯಮಗಳನ್ನು ಬದಿಗಿಟ್ಟು ಸಾಮಾಜಕ ಜಾಲತಾಣದ ಮೂಲಕ ತಮ್ಮದೇ ಮಾಧ್ಯಮಗಳನ್ನು ಕಂಡುಕೊಂಡರು. ಆ ಮೂಲಕ ತಮ್ಮ ಹೋರಾಟವನ್ನು ಜನಮಾನಸಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯೂ ಆಗಿದ್ದಾರೆ. ನಿಜಕ್ಕೂ ಇಂದು ರೈತ ಹೋರಾಟಕ್ಕೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಜಾಗ ಇಲ್ಲದೆ ಇರಬಹುದು, ಮಾಧ್ಯಮಗಳು ಸತ್ಯವನ್ನು ಮರೆಮಾಚಿರಬಹುದು. ಆದರೆ, ಜನ ಇಂದಿಗೂ ರೈತರ ಹಿಂದೆಯೇ ಇದ್ದಾರೆ. ಮಾಧ್ಯಮಗಳ ಪಕ್ಷಪಾತೀ ಧೋರಣೆ ಒಂದಲ್ಲ ಒಂದು ತನಗೆ ಮುಳ್ಳಾಗಲಿದೆ ಎಂಬುದಂತೂ ಸತ್ಯ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...