Homeಮುಖಪುಟಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ... ಈ ಥರದ ‍‍ಶೀರ್ಷಿಕೆಗಳ ಹಿಂದಿನ ಉದ್ದೇಶವೇನು?

- Advertisement -
- Advertisement -

ಗಣತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧವೂ ಜನ ಹೋರಾಟ ಸಂಘಟಿಸಲು ಅವಕಾಶ ಇದೆ. ಇದೇ ಕಾರಣಕ್ಕೆ ಕಳೆದ 75 ವರ್ಷಗಳಲ್ಲಿ ಭರತ ಭೂಮಿ ನೂರಾರು ಹೋರಾಟಗಳಿಗೆ ಸಾಕ್ಷಿಯಾಗಿದೆ. ಇಂತಹ ಹೋರಾಟಗಳನ್ನು ಜನರ ನಡುವೆ ತೆಗೆದುಕೊಂಡು ಹೋದ ಮತ್ತು ಆ ಹೋರಾಟದ ಗೆಲುವಿಗೆ ತೆರೆಯ ಹಿಂದೆ ನಿಂತು ಶ್ರಮಿಸಿದ ದೊಡ್ಡ ಇತಿಹಾಸ ಭಾರತದ ಪತ್ರಿಕೋದ್ಯಮಕ್ಕಿದೆ. ಭಾರತದ ಸ್ವಾತಂತ್ರ್ಯ ಹೋರಾಟದಿಂದ 2013-14ರ ಸುಮಾರಿಗೆ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನವರಗೆ ದೇಶದ ಪತ್ರಿಕೋದ್ಯಮ ನಿರ್ವಹಿಸಿದ್ದ ಜವಾಬ್ದಾರಿ ನಿರ್ಣಾಯಕ ಮತ್ತು ನಿಸ್ಸಂಶಯವಾಗಿ ಪ್ರಶಂಸನಾರ್ಹ. ಆಡಳಿತರೂಢ ಸರ್ಕಾರವನ್ನೇ ಬೀಳಿಸಿದ ಕೀರ್ತಿಯೂ ಮಾಧ್ಯಮಗಳಿಗೆ ಇದೆ. ಇಂದಿರಾ ಗಾಂಧಿ ಕಾಲದಲ್ಲಿ ಚಿಗುರೊಡೆದ ಸರ್ವಾಧಿಕಾರದ ವಿರುದ್ಧ ಸೆಟೆದುನಿಂತ ಪತ್ರಿಕೋದ್ಯಮದ ಛಾತಿ ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಿಲಬಸ್ ಎಂದರೂ ತಪ್ಪಾಗಲಾರದು. ಇವೆಲ್ಲ ನಿಜಕ್ಕೂ ಮಾಧ್ಯಮದ ಶಕ್ತಿ. ಆದರೆ, ಇಂದು ಇವೇ ಮಾಧ್ಯಮಗಳಿಗೆ ಏನಾಗಿದೆ?

ಸ್ವಾತಂತ್ರ್ಯಾನಂತರ ಭಾರತ ನೂರಾರು ಹೋರಾಟಗಳನ್ನು ಕಂಡಿದೆ ನಿಜ. ಆದರೆ, ಈ ಎಲ್ಲಾ ಹೋರಾಟಗಳ ತೂಕ ಒಂದಾದರೆ, ಕಳೆದ ಒಂದು ವರ್ಷದಿಂದ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟದ ತೂಕವೇ ಮತ್ತೊಂದು. ಏಕೆಂದರೆ ಈ ಮಟ್ಟಿಗೆ ಸುದೀರ್ಘ ಅವಧಿಗೆ ಸಮಾಜದ ಮೇಲೆ ಈ ಪರಿ ಪ್ರಭಾವ ಬೀರಿದ ಮತ್ತೊಂದು ಹೋರಾಟವನ್ನು ಹೆಸರಿಸುವುದು ಕಷ್ಟ.

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 10 ತಿಂಗಳಿಂದ ದೇಶದ ರೈತರು ವಿರಮಿಸದೆ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್-ಹರಿಯಾಣ ರಾಜ್ಯಗಳಲ್ಲಿ ಹೋರಾಟ ತಕ್ಷಣಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ರೈತ ನಾಯಕ ರಾಕೇಶ್ ಟಿಕಾಯತ್, “10 ತಿಂಗಳಲ್ಲ 10 ವರ್ಷವಾದರೂ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಹೋರಾಟವನ್ನು ತೀವ್ರಗೊಳಿಸುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಒಟ್ಟಾಗಿ ಇಂದು ಭಾರತ್ ಬಂದ್ ಘೋಷಿಸಿವೆ. ಭಾರತ್ ಬಂದ್‌ಗೆ ಪಂಜಾಬ್-ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸಂಪೂರ್ಣವಾಗಿ ಸ್ತಬ್ಧವಾಗಿದೆ. ತಮಿಳುನಾಡಿನಲ್ಲಿ ರೈತರು ರೈಲ್ ರೊಖೋ ನಡೆಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಸುದ್ದಿ ಬಿತ್ತರಿಸುವಲ್ಲಿ ರಾಷ್ಟ್ರೀಯ ಮಾಧ್ಯಮ ಮಾತ್ರವಲ್ಲ ಕನ್ನಡ ಮಾಧ್ಯಮಗಳ ಧ್ವನಿಯೂ ಬೇರೆಯೇ ರೀತಿ ಇದೆ.

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ… ಇವು ಇಂದು ದೃಶ್ಯ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಗಳು. ನಾಳಿನ ಕನ್ನಡ ದಿನ ಪತ್ರಿಕೆಗಳಲ್ಲೂ ಇವಕ್ಕಿಂತ ಭಿನ್ನವಾದ ಪದಗುಚ್ಛಗಳನ್ನು ನಿರೀಕ್ಷೆ ಮಾಡುವುದು ಕಷ್ಟ. ಕೊರೊನಾ ಲಾಕ್‌ಡೌನ್ ಕಾರಣಕ್ಕೆ ಈಗಾಗಲೇ ಆರ್ಥಿಕ ವ್ಯವಸ್ಥೆ ಕುಸಿದಿರುವ ಕಾರಣಕ್ಕೆ ಬಲವಂತಕ್ಕೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಬೇಡ ಎಂದು ರೈತರು ತೀರ್ಮಾನಿಸಿದ್ದರು. ಇದೇ ಸಂದರ್ಭದಲ್ಲಿ ವ್ಯಾಪಾರಸ್ಥರು, ಶಾಲೆಗಳು ಸೇರಿ ನೈತಿಕ ಬೆಂಬಲ ಘೋಷಿಸಿವೆ. ಇಂತಹ ಸಂದರ್ಭದಲ್ಲಿ ವಾಹನಗಳು ಓಡಾಡುತ್ತಿವೆ, ಅಂಗಡಿಗಳು ತೆರೆದಿವೆ, ಹಾಗಾಗಿ ಬಂದ್ ವಿಫಲವಾಗಿದೆ ಎಂದರೆ ಏನರ್ಥ. ದೇಶದ ಎಲ್ಲಾ ಜಿಲ್ಲಾ, ತಾಲ್ಲೂಕುಗಳಲ್ಲಿ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆದಿವೆ. ಅದನ್ನು ಮಾಧ್ಯಮಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿವೆ. ಇಲ್ಲಿ ಉದ್ಭವವಾಗುವ ಪ್ರಶ್ನೆ ಒಂದೇ, ಕಳೆದ 75 ವರ್ಷಗಳ ಕಾಲ ರೈತ, ಕಾರ್ಮಿಕ, ಮಹಿಳಾ ಮತ್ತು ದಲಿತ ಚಳುವಳಿಗಳ ಹಿಂದಿನ ಬೆನ್ನೆಲುಬಾಗಿದ್ದ ಮಾಧ್ಯಮಗಳು ಇಂದೇಕೆ ಬದಲಾಗಿವೆ? ಇವರಿಗೆ ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ದರ್ದಾದರೂ ಏನು? 2013-14ರ ಭ್ರಷ್ಟಾಚಾರ ವಿರೋಧಿ ಆಂದೋಲನದ ವಕ್ತಾರಿಕೆ ವಹಿಸಿ ಸರ್ಕಾರವನ್ನೇ ಪತನಗೊಳಿಸಿದ್ದ ಪತ್ರಿಕೋದ್ಯಮ ಇಂದು ನೈತಿಕ ಅಧಃಪಥನದ ಹಾದಿ ಹಿಡಿದಿರುವುದು ಏಕೆ? ಎಂಬುದು.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ


ಕೃಷಿ ಕ್ಷೇತ್ರವು ರಾಜ್ಯಗಳ ಪಟ್ಟಿಯಲ್ಲಿರುವುದರಿಂದ ರಾಜ್ಯಗಳು ಮತ್ತು ರೈತರೊಂದಿಗೆ ಚರ್ಚಿಸದೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಸರಿಯಲ್ಲ ಎಂಬುದು ರೈತರ ಆರೋಪ. ಈಗಾಗಲೇ ದೇಶದ ಬಹುತೇಕ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ದೇಶದ ರೈಲ್ವೆ ಮತ್ತು ರಕ್ಷಣಾ ಇಲಾಖೆಯಲ್ಲೂ ಶೇ.50 ರಷ್ಟು ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಇದೀಗ ನೂತನ ಕೃಷಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರವನ್ನೂ ಖಾಸಗಿಯವರಿಗೆ ಧಾರೆ ಎರೆಯುವ ಹುನ್ನಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದು ರೈತರ ಆರೋಪ. ಈಗಿನ ಒಂದು ವರ್ಷದಲ್ಲಿ ಇದು ಕೇವಲ ಆರೋಪಗಳಾಗಿ ಮಾತ್ರ ಉಳಿಯದೆ ತಜ್ಞರ ಸಂಶೋಧನೆಯಿಂದಾಗಿ ಕೃಷಿ ನೀತಿ ರೈತರಿಗೆ ಮಾರಕ ಮತ್ತು ಕೃಷಿ ಚಟುವಟಿಕೆಯನ್ನೇ ಕತ್ತುಹಿಸುವ ಕೃತ್ಯ ಎಂಬುದನ್ನು ಸಾಬೀತುಪಡಿಸಲಾಗಿದೆ. ಹಾಗಿದ್ದೂ ಮಾಧ್ಯಮಗಳು ಏಕೆ ರೈತರ ಪರ ಇಲ್ಲ?

ಇನ್ನೂ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಹೋರಾಟವನ್ನು ಸುದ್ದಿಯ ಮೂಲಕ ಜನರ ಬಳಿ ತಲುಪಿಸುವುದು ಇರಲಿ, ಮಾಧ್ಯಮಗಳೇ ಆ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವಲ್ಲಿ ನಿರತವಾಗಿದ್ದವು. ಇನ್ನೂ ಕರ್ನಾಟಕದ ಮಾಧ್ಯಮಗಳೂ ಈ ವಿಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಹಲವು ಬಣ್ಣ ಬಣ್ಣದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ರೈತ ಹೋರಾಟವನ್ನು ಮುಗಿಸಲು ಪ್ರಭುತ್ವದ ಪ್ರಯತ್ನಕ್ಕಿಂತ ಪತ್ರಿಕೋದ್ಯಮದ ಪ್ರಯತ್ನ ತುಸು ಹೆಚ್ಚೇ ಆಗಿತ್ತು.

ಇದೇ ಕಾರಣಕ್ಕೆ ದೆಹಲಿ ರೈತ ಹೋರಾಟಗಾರರು ಗೋದಿ ಮಾಧ್ಯಮಗಳನ್ನು ಬದಿಗಿಟ್ಟು ಸಾಮಾಜಕ ಜಾಲತಾಣದ ಮೂಲಕ ತಮ್ಮದೇ ಮಾಧ್ಯಮಗಳನ್ನು ಕಂಡುಕೊಂಡರು. ಆ ಮೂಲಕ ತಮ್ಮ ಹೋರಾಟವನ್ನು ಜನಮಾನಸಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯೂ ಆಗಿದ್ದಾರೆ. ನಿಜಕ್ಕೂ ಇಂದು ರೈತ ಹೋರಾಟಕ್ಕೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಜಾಗ ಇಲ್ಲದೆ ಇರಬಹುದು, ಮಾಧ್ಯಮಗಳು ಸತ್ಯವನ್ನು ಮರೆಮಾಚಿರಬಹುದು. ಆದರೆ, ಜನ ಇಂದಿಗೂ ರೈತರ ಹಿಂದೆಯೇ ಇದ್ದಾರೆ. ಮಾಧ್ಯಮಗಳ ಪಕ್ಷಪಾತೀ ಧೋರಣೆ ಒಂದಲ್ಲ ಒಂದು ತನಗೆ ಮುಳ್ಳಾಗಲಿದೆ ಎಂಬುದಂತೂ ಸತ್ಯ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...