Homeಮುಖಪುಟಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ... ಈ ಥರದ ‍‍ಶೀರ್ಷಿಕೆಗಳ ಹಿಂದಿನ ಉದ್ದೇಶವೇನು?

- Advertisement -
- Advertisement -

ಗಣತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧವೂ ಜನ ಹೋರಾಟ ಸಂಘಟಿಸಲು ಅವಕಾಶ ಇದೆ. ಇದೇ ಕಾರಣಕ್ಕೆ ಕಳೆದ 75 ವರ್ಷಗಳಲ್ಲಿ ಭರತ ಭೂಮಿ ನೂರಾರು ಹೋರಾಟಗಳಿಗೆ ಸಾಕ್ಷಿಯಾಗಿದೆ. ಇಂತಹ ಹೋರಾಟಗಳನ್ನು ಜನರ ನಡುವೆ ತೆಗೆದುಕೊಂಡು ಹೋದ ಮತ್ತು ಆ ಹೋರಾಟದ ಗೆಲುವಿಗೆ ತೆರೆಯ ಹಿಂದೆ ನಿಂತು ಶ್ರಮಿಸಿದ ದೊಡ್ಡ ಇತಿಹಾಸ ಭಾರತದ ಪತ್ರಿಕೋದ್ಯಮಕ್ಕಿದೆ. ಭಾರತದ ಸ್ವಾತಂತ್ರ್ಯ ಹೋರಾಟದಿಂದ 2013-14ರ ಸುಮಾರಿಗೆ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನವರಗೆ ದೇಶದ ಪತ್ರಿಕೋದ್ಯಮ ನಿರ್ವಹಿಸಿದ್ದ ಜವಾಬ್ದಾರಿ ನಿರ್ಣಾಯಕ ಮತ್ತು ನಿಸ್ಸಂಶಯವಾಗಿ ಪ್ರಶಂಸನಾರ್ಹ. ಆಡಳಿತರೂಢ ಸರ್ಕಾರವನ್ನೇ ಬೀಳಿಸಿದ ಕೀರ್ತಿಯೂ ಮಾಧ್ಯಮಗಳಿಗೆ ಇದೆ. ಇಂದಿರಾ ಗಾಂಧಿ ಕಾಲದಲ್ಲಿ ಚಿಗುರೊಡೆದ ಸರ್ವಾಧಿಕಾರದ ವಿರುದ್ಧ ಸೆಟೆದುನಿಂತ ಪತ್ರಿಕೋದ್ಯಮದ ಛಾತಿ ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಿಲಬಸ್ ಎಂದರೂ ತಪ್ಪಾಗಲಾರದು. ಇವೆಲ್ಲ ನಿಜಕ್ಕೂ ಮಾಧ್ಯಮದ ಶಕ್ತಿ. ಆದರೆ, ಇಂದು ಇವೇ ಮಾಧ್ಯಮಗಳಿಗೆ ಏನಾಗಿದೆ?

ಸ್ವಾತಂತ್ರ್ಯಾನಂತರ ಭಾರತ ನೂರಾರು ಹೋರಾಟಗಳನ್ನು ಕಂಡಿದೆ ನಿಜ. ಆದರೆ, ಈ ಎಲ್ಲಾ ಹೋರಾಟಗಳ ತೂಕ ಒಂದಾದರೆ, ಕಳೆದ ಒಂದು ವರ್ಷದಿಂದ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟದ ತೂಕವೇ ಮತ್ತೊಂದು. ಏಕೆಂದರೆ ಈ ಮಟ್ಟಿಗೆ ಸುದೀರ್ಘ ಅವಧಿಗೆ ಸಮಾಜದ ಮೇಲೆ ಈ ಪರಿ ಪ್ರಭಾವ ಬೀರಿದ ಮತ್ತೊಂದು ಹೋರಾಟವನ್ನು ಹೆಸರಿಸುವುದು ಕಷ್ಟ.

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 10 ತಿಂಗಳಿಂದ ದೇಶದ ರೈತರು ವಿರಮಿಸದೆ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್-ಹರಿಯಾಣ ರಾಜ್ಯಗಳಲ್ಲಿ ಹೋರಾಟ ತಕ್ಷಣಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ರೈತ ನಾಯಕ ರಾಕೇಶ್ ಟಿಕಾಯತ್, “10 ತಿಂಗಳಲ್ಲ 10 ವರ್ಷವಾದರೂ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಹೋರಾಟವನ್ನು ತೀವ್ರಗೊಳಿಸುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಒಟ್ಟಾಗಿ ಇಂದು ಭಾರತ್ ಬಂದ್ ಘೋಷಿಸಿವೆ. ಭಾರತ್ ಬಂದ್‌ಗೆ ಪಂಜಾಬ್-ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸಂಪೂರ್ಣವಾಗಿ ಸ್ತಬ್ಧವಾಗಿದೆ. ತಮಿಳುನಾಡಿನಲ್ಲಿ ರೈತರು ರೈಲ್ ರೊಖೋ ನಡೆಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಸುದ್ದಿ ಬಿತ್ತರಿಸುವಲ್ಲಿ ರಾಷ್ಟ್ರೀಯ ಮಾಧ್ಯಮ ಮಾತ್ರವಲ್ಲ ಕನ್ನಡ ಮಾಧ್ಯಮಗಳ ಧ್ವನಿಯೂ ಬೇರೆಯೇ ರೀತಿ ಇದೆ.

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ… ಇವು ಇಂದು ದೃಶ್ಯ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಗಳು. ನಾಳಿನ ಕನ್ನಡ ದಿನ ಪತ್ರಿಕೆಗಳಲ್ಲೂ ಇವಕ್ಕಿಂತ ಭಿನ್ನವಾದ ಪದಗುಚ್ಛಗಳನ್ನು ನಿರೀಕ್ಷೆ ಮಾಡುವುದು ಕಷ್ಟ. ಕೊರೊನಾ ಲಾಕ್‌ಡೌನ್ ಕಾರಣಕ್ಕೆ ಈಗಾಗಲೇ ಆರ್ಥಿಕ ವ್ಯವಸ್ಥೆ ಕುಸಿದಿರುವ ಕಾರಣಕ್ಕೆ ಬಲವಂತಕ್ಕೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಬೇಡ ಎಂದು ರೈತರು ತೀರ್ಮಾನಿಸಿದ್ದರು. ಇದೇ ಸಂದರ್ಭದಲ್ಲಿ ವ್ಯಾಪಾರಸ್ಥರು, ಶಾಲೆಗಳು ಸೇರಿ ನೈತಿಕ ಬೆಂಬಲ ಘೋಷಿಸಿವೆ. ಇಂತಹ ಸಂದರ್ಭದಲ್ಲಿ ವಾಹನಗಳು ಓಡಾಡುತ್ತಿವೆ, ಅಂಗಡಿಗಳು ತೆರೆದಿವೆ, ಹಾಗಾಗಿ ಬಂದ್ ವಿಫಲವಾಗಿದೆ ಎಂದರೆ ಏನರ್ಥ. ದೇಶದ ಎಲ್ಲಾ ಜಿಲ್ಲಾ, ತಾಲ್ಲೂಕುಗಳಲ್ಲಿ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆದಿವೆ. ಅದನ್ನು ಮಾಧ್ಯಮಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿವೆ. ಇಲ್ಲಿ ಉದ್ಭವವಾಗುವ ಪ್ರಶ್ನೆ ಒಂದೇ, ಕಳೆದ 75 ವರ್ಷಗಳ ಕಾಲ ರೈತ, ಕಾರ್ಮಿಕ, ಮಹಿಳಾ ಮತ್ತು ದಲಿತ ಚಳುವಳಿಗಳ ಹಿಂದಿನ ಬೆನ್ನೆಲುಬಾಗಿದ್ದ ಮಾಧ್ಯಮಗಳು ಇಂದೇಕೆ ಬದಲಾಗಿವೆ? ಇವರಿಗೆ ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ದರ್ದಾದರೂ ಏನು? 2013-14ರ ಭ್ರಷ್ಟಾಚಾರ ವಿರೋಧಿ ಆಂದೋಲನದ ವಕ್ತಾರಿಕೆ ವಹಿಸಿ ಸರ್ಕಾರವನ್ನೇ ಪತನಗೊಳಿಸಿದ್ದ ಪತ್ರಿಕೋದ್ಯಮ ಇಂದು ನೈತಿಕ ಅಧಃಪಥನದ ಹಾದಿ ಹಿಡಿದಿರುವುದು ಏಕೆ? ಎಂಬುದು.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ


ಕೃಷಿ ಕ್ಷೇತ್ರವು ರಾಜ್ಯಗಳ ಪಟ್ಟಿಯಲ್ಲಿರುವುದರಿಂದ ರಾಜ್ಯಗಳು ಮತ್ತು ರೈತರೊಂದಿಗೆ ಚರ್ಚಿಸದೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಸರಿಯಲ್ಲ ಎಂಬುದು ರೈತರ ಆರೋಪ. ಈಗಾಗಲೇ ದೇಶದ ಬಹುತೇಕ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ದೇಶದ ರೈಲ್ವೆ ಮತ್ತು ರಕ್ಷಣಾ ಇಲಾಖೆಯಲ್ಲೂ ಶೇ.50 ರಷ್ಟು ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಇದೀಗ ನೂತನ ಕೃಷಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರವನ್ನೂ ಖಾಸಗಿಯವರಿಗೆ ಧಾರೆ ಎರೆಯುವ ಹುನ್ನಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದು ರೈತರ ಆರೋಪ. ಈಗಿನ ಒಂದು ವರ್ಷದಲ್ಲಿ ಇದು ಕೇವಲ ಆರೋಪಗಳಾಗಿ ಮಾತ್ರ ಉಳಿಯದೆ ತಜ್ಞರ ಸಂಶೋಧನೆಯಿಂದಾಗಿ ಕೃಷಿ ನೀತಿ ರೈತರಿಗೆ ಮಾರಕ ಮತ್ತು ಕೃಷಿ ಚಟುವಟಿಕೆಯನ್ನೇ ಕತ್ತುಹಿಸುವ ಕೃತ್ಯ ಎಂಬುದನ್ನು ಸಾಬೀತುಪಡಿಸಲಾಗಿದೆ. ಹಾಗಿದ್ದೂ ಮಾಧ್ಯಮಗಳು ಏಕೆ ರೈತರ ಪರ ಇಲ್ಲ?

ಇನ್ನೂ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಹೋರಾಟವನ್ನು ಸುದ್ದಿಯ ಮೂಲಕ ಜನರ ಬಳಿ ತಲುಪಿಸುವುದು ಇರಲಿ, ಮಾಧ್ಯಮಗಳೇ ಆ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವಲ್ಲಿ ನಿರತವಾಗಿದ್ದವು. ಇನ್ನೂ ಕರ್ನಾಟಕದ ಮಾಧ್ಯಮಗಳೂ ಈ ವಿಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಹಲವು ಬಣ್ಣ ಬಣ್ಣದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ರೈತ ಹೋರಾಟವನ್ನು ಮುಗಿಸಲು ಪ್ರಭುತ್ವದ ಪ್ರಯತ್ನಕ್ಕಿಂತ ಪತ್ರಿಕೋದ್ಯಮದ ಪ್ರಯತ್ನ ತುಸು ಹೆಚ್ಚೇ ಆಗಿತ್ತು.

ಇದೇ ಕಾರಣಕ್ಕೆ ದೆಹಲಿ ರೈತ ಹೋರಾಟಗಾರರು ಗೋದಿ ಮಾಧ್ಯಮಗಳನ್ನು ಬದಿಗಿಟ್ಟು ಸಾಮಾಜಕ ಜಾಲತಾಣದ ಮೂಲಕ ತಮ್ಮದೇ ಮಾಧ್ಯಮಗಳನ್ನು ಕಂಡುಕೊಂಡರು. ಆ ಮೂಲಕ ತಮ್ಮ ಹೋರಾಟವನ್ನು ಜನಮಾನಸಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯೂ ಆಗಿದ್ದಾರೆ. ನಿಜಕ್ಕೂ ಇಂದು ರೈತ ಹೋರಾಟಕ್ಕೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಜಾಗ ಇಲ್ಲದೆ ಇರಬಹುದು, ಮಾಧ್ಯಮಗಳು ಸತ್ಯವನ್ನು ಮರೆಮಾಚಿರಬಹುದು. ಆದರೆ, ಜನ ಇಂದಿಗೂ ರೈತರ ಹಿಂದೆಯೇ ಇದ್ದಾರೆ. ಮಾಧ್ಯಮಗಳ ಪಕ್ಷಪಾತೀ ಧೋರಣೆ ಒಂದಲ್ಲ ಒಂದು ತನಗೆ ಮುಳ್ಳಾಗಲಿದೆ ಎಂಬುದಂತೂ ಸತ್ಯ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...