Homeಮುಖಪುಟಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ... ಈ ಥರದ ‍‍ಶೀರ್ಷಿಕೆಗಳ ಹಿಂದಿನ ಉದ್ದೇಶವೇನು?

- Advertisement -
- Advertisement -

ಗಣತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧವೂ ಜನ ಹೋರಾಟ ಸಂಘಟಿಸಲು ಅವಕಾಶ ಇದೆ. ಇದೇ ಕಾರಣಕ್ಕೆ ಕಳೆದ 75 ವರ್ಷಗಳಲ್ಲಿ ಭರತ ಭೂಮಿ ನೂರಾರು ಹೋರಾಟಗಳಿಗೆ ಸಾಕ್ಷಿಯಾಗಿದೆ. ಇಂತಹ ಹೋರಾಟಗಳನ್ನು ಜನರ ನಡುವೆ ತೆಗೆದುಕೊಂಡು ಹೋದ ಮತ್ತು ಆ ಹೋರಾಟದ ಗೆಲುವಿಗೆ ತೆರೆಯ ಹಿಂದೆ ನಿಂತು ಶ್ರಮಿಸಿದ ದೊಡ್ಡ ಇತಿಹಾಸ ಭಾರತದ ಪತ್ರಿಕೋದ್ಯಮಕ್ಕಿದೆ. ಭಾರತದ ಸ್ವಾತಂತ್ರ್ಯ ಹೋರಾಟದಿಂದ 2013-14ರ ಸುಮಾರಿಗೆ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನವರಗೆ ದೇಶದ ಪತ್ರಿಕೋದ್ಯಮ ನಿರ್ವಹಿಸಿದ್ದ ಜವಾಬ್ದಾರಿ ನಿರ್ಣಾಯಕ ಮತ್ತು ನಿಸ್ಸಂಶಯವಾಗಿ ಪ್ರಶಂಸನಾರ್ಹ. ಆಡಳಿತರೂಢ ಸರ್ಕಾರವನ್ನೇ ಬೀಳಿಸಿದ ಕೀರ್ತಿಯೂ ಮಾಧ್ಯಮಗಳಿಗೆ ಇದೆ. ಇಂದಿರಾ ಗಾಂಧಿ ಕಾಲದಲ್ಲಿ ಚಿಗುರೊಡೆದ ಸರ್ವಾಧಿಕಾರದ ವಿರುದ್ಧ ಸೆಟೆದುನಿಂತ ಪತ್ರಿಕೋದ್ಯಮದ ಛಾತಿ ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಿಲಬಸ್ ಎಂದರೂ ತಪ್ಪಾಗಲಾರದು. ಇವೆಲ್ಲ ನಿಜಕ್ಕೂ ಮಾಧ್ಯಮದ ಶಕ್ತಿ. ಆದರೆ, ಇಂದು ಇವೇ ಮಾಧ್ಯಮಗಳಿಗೆ ಏನಾಗಿದೆ?

ಸ್ವಾತಂತ್ರ್ಯಾನಂತರ ಭಾರತ ನೂರಾರು ಹೋರಾಟಗಳನ್ನು ಕಂಡಿದೆ ನಿಜ. ಆದರೆ, ಈ ಎಲ್ಲಾ ಹೋರಾಟಗಳ ತೂಕ ಒಂದಾದರೆ, ಕಳೆದ ಒಂದು ವರ್ಷದಿಂದ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟದ ತೂಕವೇ ಮತ್ತೊಂದು. ಏಕೆಂದರೆ ಈ ಮಟ್ಟಿಗೆ ಸುದೀರ್ಘ ಅವಧಿಗೆ ಸಮಾಜದ ಮೇಲೆ ಈ ಪರಿ ಪ್ರಭಾವ ಬೀರಿದ ಮತ್ತೊಂದು ಹೋರಾಟವನ್ನು ಹೆಸರಿಸುವುದು ಕಷ್ಟ.

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 10 ತಿಂಗಳಿಂದ ದೇಶದ ರೈತರು ವಿರಮಿಸದೆ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್-ಹರಿಯಾಣ ರಾಜ್ಯಗಳಲ್ಲಿ ಹೋರಾಟ ತಕ್ಷಣಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ರೈತ ನಾಯಕ ರಾಕೇಶ್ ಟಿಕಾಯತ್, “10 ತಿಂಗಳಲ್ಲ 10 ವರ್ಷವಾದರೂ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಹೋರಾಟವನ್ನು ತೀವ್ರಗೊಳಿಸುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಒಟ್ಟಾಗಿ ಇಂದು ಭಾರತ್ ಬಂದ್ ಘೋಷಿಸಿವೆ. ಭಾರತ್ ಬಂದ್‌ಗೆ ಪಂಜಾಬ್-ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸಂಪೂರ್ಣವಾಗಿ ಸ್ತಬ್ಧವಾಗಿದೆ. ತಮಿಳುನಾಡಿನಲ್ಲಿ ರೈತರು ರೈಲ್ ರೊಖೋ ನಡೆಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಸುದ್ದಿ ಬಿತ್ತರಿಸುವಲ್ಲಿ ರಾಷ್ಟ್ರೀಯ ಮಾಧ್ಯಮ ಮಾತ್ರವಲ್ಲ ಕನ್ನಡ ಮಾಧ್ಯಮಗಳ ಧ್ವನಿಯೂ ಬೇರೆಯೇ ರೀತಿ ಇದೆ.

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ… ಇವು ಇಂದು ದೃಶ್ಯ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಗಳು. ನಾಳಿನ ಕನ್ನಡ ದಿನ ಪತ್ರಿಕೆಗಳಲ್ಲೂ ಇವಕ್ಕಿಂತ ಭಿನ್ನವಾದ ಪದಗುಚ್ಛಗಳನ್ನು ನಿರೀಕ್ಷೆ ಮಾಡುವುದು ಕಷ್ಟ. ಕೊರೊನಾ ಲಾಕ್‌ಡೌನ್ ಕಾರಣಕ್ಕೆ ಈಗಾಗಲೇ ಆರ್ಥಿಕ ವ್ಯವಸ್ಥೆ ಕುಸಿದಿರುವ ಕಾರಣಕ್ಕೆ ಬಲವಂತಕ್ಕೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಬೇಡ ಎಂದು ರೈತರು ತೀರ್ಮಾನಿಸಿದ್ದರು. ಇದೇ ಸಂದರ್ಭದಲ್ಲಿ ವ್ಯಾಪಾರಸ್ಥರು, ಶಾಲೆಗಳು ಸೇರಿ ನೈತಿಕ ಬೆಂಬಲ ಘೋಷಿಸಿವೆ. ಇಂತಹ ಸಂದರ್ಭದಲ್ಲಿ ವಾಹನಗಳು ಓಡಾಡುತ್ತಿವೆ, ಅಂಗಡಿಗಳು ತೆರೆದಿವೆ, ಹಾಗಾಗಿ ಬಂದ್ ವಿಫಲವಾಗಿದೆ ಎಂದರೆ ಏನರ್ಥ. ದೇಶದ ಎಲ್ಲಾ ಜಿಲ್ಲಾ, ತಾಲ್ಲೂಕುಗಳಲ್ಲಿ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆದಿವೆ. ಅದನ್ನು ಮಾಧ್ಯಮಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿವೆ. ಇಲ್ಲಿ ಉದ್ಭವವಾಗುವ ಪ್ರಶ್ನೆ ಒಂದೇ, ಕಳೆದ 75 ವರ್ಷಗಳ ಕಾಲ ರೈತ, ಕಾರ್ಮಿಕ, ಮಹಿಳಾ ಮತ್ತು ದಲಿತ ಚಳುವಳಿಗಳ ಹಿಂದಿನ ಬೆನ್ನೆಲುಬಾಗಿದ್ದ ಮಾಧ್ಯಮಗಳು ಇಂದೇಕೆ ಬದಲಾಗಿವೆ? ಇವರಿಗೆ ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ದರ್ದಾದರೂ ಏನು? 2013-14ರ ಭ್ರಷ್ಟಾಚಾರ ವಿರೋಧಿ ಆಂದೋಲನದ ವಕ್ತಾರಿಕೆ ವಹಿಸಿ ಸರ್ಕಾರವನ್ನೇ ಪತನಗೊಳಿಸಿದ್ದ ಪತ್ರಿಕೋದ್ಯಮ ಇಂದು ನೈತಿಕ ಅಧಃಪಥನದ ಹಾದಿ ಹಿಡಿದಿರುವುದು ಏಕೆ? ಎಂಬುದು.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ


ಕೃಷಿ ಕ್ಷೇತ್ರವು ರಾಜ್ಯಗಳ ಪಟ್ಟಿಯಲ್ಲಿರುವುದರಿಂದ ರಾಜ್ಯಗಳು ಮತ್ತು ರೈತರೊಂದಿಗೆ ಚರ್ಚಿಸದೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಸರಿಯಲ್ಲ ಎಂಬುದು ರೈತರ ಆರೋಪ. ಈಗಾಗಲೇ ದೇಶದ ಬಹುತೇಕ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ದೇಶದ ರೈಲ್ವೆ ಮತ್ತು ರಕ್ಷಣಾ ಇಲಾಖೆಯಲ್ಲೂ ಶೇ.50 ರಷ್ಟು ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಇದೀಗ ನೂತನ ಕೃಷಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರವನ್ನೂ ಖಾಸಗಿಯವರಿಗೆ ಧಾರೆ ಎರೆಯುವ ಹುನ್ನಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದು ರೈತರ ಆರೋಪ. ಈಗಿನ ಒಂದು ವರ್ಷದಲ್ಲಿ ಇದು ಕೇವಲ ಆರೋಪಗಳಾಗಿ ಮಾತ್ರ ಉಳಿಯದೆ ತಜ್ಞರ ಸಂಶೋಧನೆಯಿಂದಾಗಿ ಕೃಷಿ ನೀತಿ ರೈತರಿಗೆ ಮಾರಕ ಮತ್ತು ಕೃಷಿ ಚಟುವಟಿಕೆಯನ್ನೇ ಕತ್ತುಹಿಸುವ ಕೃತ್ಯ ಎಂಬುದನ್ನು ಸಾಬೀತುಪಡಿಸಲಾಗಿದೆ. ಹಾಗಿದ್ದೂ ಮಾಧ್ಯಮಗಳು ಏಕೆ ರೈತರ ಪರ ಇಲ್ಲ?

ಇನ್ನೂ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಹೋರಾಟವನ್ನು ಸುದ್ದಿಯ ಮೂಲಕ ಜನರ ಬಳಿ ತಲುಪಿಸುವುದು ಇರಲಿ, ಮಾಧ್ಯಮಗಳೇ ಆ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವಲ್ಲಿ ನಿರತವಾಗಿದ್ದವು. ಇನ್ನೂ ಕರ್ನಾಟಕದ ಮಾಧ್ಯಮಗಳೂ ಈ ವಿಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಹಲವು ಬಣ್ಣ ಬಣ್ಣದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ರೈತ ಹೋರಾಟವನ್ನು ಮುಗಿಸಲು ಪ್ರಭುತ್ವದ ಪ್ರಯತ್ನಕ್ಕಿಂತ ಪತ್ರಿಕೋದ್ಯಮದ ಪ್ರಯತ್ನ ತುಸು ಹೆಚ್ಚೇ ಆಗಿತ್ತು.

ಇದೇ ಕಾರಣಕ್ಕೆ ದೆಹಲಿ ರೈತ ಹೋರಾಟಗಾರರು ಗೋದಿ ಮಾಧ್ಯಮಗಳನ್ನು ಬದಿಗಿಟ್ಟು ಸಾಮಾಜಕ ಜಾಲತಾಣದ ಮೂಲಕ ತಮ್ಮದೇ ಮಾಧ್ಯಮಗಳನ್ನು ಕಂಡುಕೊಂಡರು. ಆ ಮೂಲಕ ತಮ್ಮ ಹೋರಾಟವನ್ನು ಜನಮಾನಸಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯೂ ಆಗಿದ್ದಾರೆ. ನಿಜಕ್ಕೂ ಇಂದು ರೈತ ಹೋರಾಟಕ್ಕೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಜಾಗ ಇಲ್ಲದೆ ಇರಬಹುದು, ಮಾಧ್ಯಮಗಳು ಸತ್ಯವನ್ನು ಮರೆಮಾಚಿರಬಹುದು. ಆದರೆ, ಜನ ಇಂದಿಗೂ ರೈತರ ಹಿಂದೆಯೇ ಇದ್ದಾರೆ. ಮಾಧ್ಯಮಗಳ ಪಕ್ಷಪಾತೀ ಧೋರಣೆ ಒಂದಲ್ಲ ಒಂದು ತನಗೆ ಮುಳ್ಳಾಗಲಿದೆ ಎಂಬುದಂತೂ ಸತ್ಯ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...