Homeಮುಖಪುಟಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ... ಈ ಥರದ ‍‍ಶೀರ್ಷಿಕೆಗಳ ಹಿಂದಿನ ಉದ್ದೇಶವೇನು?

- Advertisement -
- Advertisement -

ಗಣತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧವೂ ಜನ ಹೋರಾಟ ಸಂಘಟಿಸಲು ಅವಕಾಶ ಇದೆ. ಇದೇ ಕಾರಣಕ್ಕೆ ಕಳೆದ 75 ವರ್ಷಗಳಲ್ಲಿ ಭರತ ಭೂಮಿ ನೂರಾರು ಹೋರಾಟಗಳಿಗೆ ಸಾಕ್ಷಿಯಾಗಿದೆ. ಇಂತಹ ಹೋರಾಟಗಳನ್ನು ಜನರ ನಡುವೆ ತೆಗೆದುಕೊಂಡು ಹೋದ ಮತ್ತು ಆ ಹೋರಾಟದ ಗೆಲುವಿಗೆ ತೆರೆಯ ಹಿಂದೆ ನಿಂತು ಶ್ರಮಿಸಿದ ದೊಡ್ಡ ಇತಿಹಾಸ ಭಾರತದ ಪತ್ರಿಕೋದ್ಯಮಕ್ಕಿದೆ. ಭಾರತದ ಸ್ವಾತಂತ್ರ್ಯ ಹೋರಾಟದಿಂದ 2013-14ರ ಸುಮಾರಿಗೆ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನವರಗೆ ದೇಶದ ಪತ್ರಿಕೋದ್ಯಮ ನಿರ್ವಹಿಸಿದ್ದ ಜವಾಬ್ದಾರಿ ನಿರ್ಣಾಯಕ ಮತ್ತು ನಿಸ್ಸಂಶಯವಾಗಿ ಪ್ರಶಂಸನಾರ್ಹ. ಆಡಳಿತರೂಢ ಸರ್ಕಾರವನ್ನೇ ಬೀಳಿಸಿದ ಕೀರ್ತಿಯೂ ಮಾಧ್ಯಮಗಳಿಗೆ ಇದೆ. ಇಂದಿರಾ ಗಾಂಧಿ ಕಾಲದಲ್ಲಿ ಚಿಗುರೊಡೆದ ಸರ್ವಾಧಿಕಾರದ ವಿರುದ್ಧ ಸೆಟೆದುನಿಂತ ಪತ್ರಿಕೋದ್ಯಮದ ಛಾತಿ ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಿಲಬಸ್ ಎಂದರೂ ತಪ್ಪಾಗಲಾರದು. ಇವೆಲ್ಲ ನಿಜಕ್ಕೂ ಮಾಧ್ಯಮದ ಶಕ್ತಿ. ಆದರೆ, ಇಂದು ಇವೇ ಮಾಧ್ಯಮಗಳಿಗೆ ಏನಾಗಿದೆ?

ಸ್ವಾತಂತ್ರ್ಯಾನಂತರ ಭಾರತ ನೂರಾರು ಹೋರಾಟಗಳನ್ನು ಕಂಡಿದೆ ನಿಜ. ಆದರೆ, ಈ ಎಲ್ಲಾ ಹೋರಾಟಗಳ ತೂಕ ಒಂದಾದರೆ, ಕಳೆದ ಒಂದು ವರ್ಷದಿಂದ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟದ ತೂಕವೇ ಮತ್ತೊಂದು. ಏಕೆಂದರೆ ಈ ಮಟ್ಟಿಗೆ ಸುದೀರ್ಘ ಅವಧಿಗೆ ಸಮಾಜದ ಮೇಲೆ ಈ ಪರಿ ಪ್ರಭಾವ ಬೀರಿದ ಮತ್ತೊಂದು ಹೋರಾಟವನ್ನು ಹೆಸರಿಸುವುದು ಕಷ್ಟ.

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 10 ತಿಂಗಳಿಂದ ದೇಶದ ರೈತರು ವಿರಮಿಸದೆ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್-ಹರಿಯಾಣ ರಾಜ್ಯಗಳಲ್ಲಿ ಹೋರಾಟ ತಕ್ಷಣಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ರೈತ ನಾಯಕ ರಾಕೇಶ್ ಟಿಕಾಯತ್, “10 ತಿಂಗಳಲ್ಲ 10 ವರ್ಷವಾದರೂ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಹೋರಾಟವನ್ನು ತೀವ್ರಗೊಳಿಸುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಒಟ್ಟಾಗಿ ಇಂದು ಭಾರತ್ ಬಂದ್ ಘೋಷಿಸಿವೆ. ಭಾರತ್ ಬಂದ್‌ಗೆ ಪಂಜಾಬ್-ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸಂಪೂರ್ಣವಾಗಿ ಸ್ತಬ್ಧವಾಗಿದೆ. ತಮಿಳುನಾಡಿನಲ್ಲಿ ರೈತರು ರೈಲ್ ರೊಖೋ ನಡೆಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಸುದ್ದಿ ಬಿತ್ತರಿಸುವಲ್ಲಿ ರಾಷ್ಟ್ರೀಯ ಮಾಧ್ಯಮ ಮಾತ್ರವಲ್ಲ ಕನ್ನಡ ಮಾಧ್ಯಮಗಳ ಧ್ವನಿಯೂ ಬೇರೆಯೇ ರೀತಿ ಇದೆ.

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ… ಇವು ಇಂದು ದೃಶ್ಯ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಗಳು. ನಾಳಿನ ಕನ್ನಡ ದಿನ ಪತ್ರಿಕೆಗಳಲ್ಲೂ ಇವಕ್ಕಿಂತ ಭಿನ್ನವಾದ ಪದಗುಚ್ಛಗಳನ್ನು ನಿರೀಕ್ಷೆ ಮಾಡುವುದು ಕಷ್ಟ. ಕೊರೊನಾ ಲಾಕ್‌ಡೌನ್ ಕಾರಣಕ್ಕೆ ಈಗಾಗಲೇ ಆರ್ಥಿಕ ವ್ಯವಸ್ಥೆ ಕುಸಿದಿರುವ ಕಾರಣಕ್ಕೆ ಬಲವಂತಕ್ಕೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಬೇಡ ಎಂದು ರೈತರು ತೀರ್ಮಾನಿಸಿದ್ದರು. ಇದೇ ಸಂದರ್ಭದಲ್ಲಿ ವ್ಯಾಪಾರಸ್ಥರು, ಶಾಲೆಗಳು ಸೇರಿ ನೈತಿಕ ಬೆಂಬಲ ಘೋಷಿಸಿವೆ. ಇಂತಹ ಸಂದರ್ಭದಲ್ಲಿ ವಾಹನಗಳು ಓಡಾಡುತ್ತಿವೆ, ಅಂಗಡಿಗಳು ತೆರೆದಿವೆ, ಹಾಗಾಗಿ ಬಂದ್ ವಿಫಲವಾಗಿದೆ ಎಂದರೆ ಏನರ್ಥ. ದೇಶದ ಎಲ್ಲಾ ಜಿಲ್ಲಾ, ತಾಲ್ಲೂಕುಗಳಲ್ಲಿ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆದಿವೆ. ಅದನ್ನು ಮಾಧ್ಯಮಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿವೆ. ಇಲ್ಲಿ ಉದ್ಭವವಾಗುವ ಪ್ರಶ್ನೆ ಒಂದೇ, ಕಳೆದ 75 ವರ್ಷಗಳ ಕಾಲ ರೈತ, ಕಾರ್ಮಿಕ, ಮಹಿಳಾ ಮತ್ತು ದಲಿತ ಚಳುವಳಿಗಳ ಹಿಂದಿನ ಬೆನ್ನೆಲುಬಾಗಿದ್ದ ಮಾಧ್ಯಮಗಳು ಇಂದೇಕೆ ಬದಲಾಗಿವೆ? ಇವರಿಗೆ ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ದರ್ದಾದರೂ ಏನು? 2013-14ರ ಭ್ರಷ್ಟಾಚಾರ ವಿರೋಧಿ ಆಂದೋಲನದ ವಕ್ತಾರಿಕೆ ವಹಿಸಿ ಸರ್ಕಾರವನ್ನೇ ಪತನಗೊಳಿಸಿದ್ದ ಪತ್ರಿಕೋದ್ಯಮ ಇಂದು ನೈತಿಕ ಅಧಃಪಥನದ ಹಾದಿ ಹಿಡಿದಿರುವುದು ಏಕೆ? ಎಂಬುದು.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ


ಕೃಷಿ ಕ್ಷೇತ್ರವು ರಾಜ್ಯಗಳ ಪಟ್ಟಿಯಲ್ಲಿರುವುದರಿಂದ ರಾಜ್ಯಗಳು ಮತ್ತು ರೈತರೊಂದಿಗೆ ಚರ್ಚಿಸದೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಸರಿಯಲ್ಲ ಎಂಬುದು ರೈತರ ಆರೋಪ. ಈಗಾಗಲೇ ದೇಶದ ಬಹುತೇಕ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ದೇಶದ ರೈಲ್ವೆ ಮತ್ತು ರಕ್ಷಣಾ ಇಲಾಖೆಯಲ್ಲೂ ಶೇ.50 ರಷ್ಟು ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಇದೀಗ ನೂತನ ಕೃಷಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರವನ್ನೂ ಖಾಸಗಿಯವರಿಗೆ ಧಾರೆ ಎರೆಯುವ ಹುನ್ನಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದು ರೈತರ ಆರೋಪ. ಈಗಿನ ಒಂದು ವರ್ಷದಲ್ಲಿ ಇದು ಕೇವಲ ಆರೋಪಗಳಾಗಿ ಮಾತ್ರ ಉಳಿಯದೆ ತಜ್ಞರ ಸಂಶೋಧನೆಯಿಂದಾಗಿ ಕೃಷಿ ನೀತಿ ರೈತರಿಗೆ ಮಾರಕ ಮತ್ತು ಕೃಷಿ ಚಟುವಟಿಕೆಯನ್ನೇ ಕತ್ತುಹಿಸುವ ಕೃತ್ಯ ಎಂಬುದನ್ನು ಸಾಬೀತುಪಡಿಸಲಾಗಿದೆ. ಹಾಗಿದ್ದೂ ಮಾಧ್ಯಮಗಳು ಏಕೆ ರೈತರ ಪರ ಇಲ್ಲ?

ಇನ್ನೂ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಹೋರಾಟವನ್ನು ಸುದ್ದಿಯ ಮೂಲಕ ಜನರ ಬಳಿ ತಲುಪಿಸುವುದು ಇರಲಿ, ಮಾಧ್ಯಮಗಳೇ ಆ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವಲ್ಲಿ ನಿರತವಾಗಿದ್ದವು. ಇನ್ನೂ ಕರ್ನಾಟಕದ ಮಾಧ್ಯಮಗಳೂ ಈ ವಿಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಹಲವು ಬಣ್ಣ ಬಣ್ಣದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ರೈತ ಹೋರಾಟವನ್ನು ಮುಗಿಸಲು ಪ್ರಭುತ್ವದ ಪ್ರಯತ್ನಕ್ಕಿಂತ ಪತ್ರಿಕೋದ್ಯಮದ ಪ್ರಯತ್ನ ತುಸು ಹೆಚ್ಚೇ ಆಗಿತ್ತು.

ಇದೇ ಕಾರಣಕ್ಕೆ ದೆಹಲಿ ರೈತ ಹೋರಾಟಗಾರರು ಗೋದಿ ಮಾಧ್ಯಮಗಳನ್ನು ಬದಿಗಿಟ್ಟು ಸಾಮಾಜಕ ಜಾಲತಾಣದ ಮೂಲಕ ತಮ್ಮದೇ ಮಾಧ್ಯಮಗಳನ್ನು ಕಂಡುಕೊಂಡರು. ಆ ಮೂಲಕ ತಮ್ಮ ಹೋರಾಟವನ್ನು ಜನಮಾನಸಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯೂ ಆಗಿದ್ದಾರೆ. ನಿಜಕ್ಕೂ ಇಂದು ರೈತ ಹೋರಾಟಕ್ಕೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಜಾಗ ಇಲ್ಲದೆ ಇರಬಹುದು, ಮಾಧ್ಯಮಗಳು ಸತ್ಯವನ್ನು ಮರೆಮಾಚಿರಬಹುದು. ಆದರೆ, ಜನ ಇಂದಿಗೂ ರೈತರ ಹಿಂದೆಯೇ ಇದ್ದಾರೆ. ಮಾಧ್ಯಮಗಳ ಪಕ್ಷಪಾತೀ ಧೋರಣೆ ಒಂದಲ್ಲ ಒಂದು ತನಗೆ ಮುಳ್ಳಾಗಲಿದೆ ಎಂಬುದಂತೂ ಸತ್ಯ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...