Homeಮುಖಪುಟಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ... ಈ ಥರದ ‍‍ಶೀರ್ಷಿಕೆಗಳ ಹಿಂದಿನ ಉದ್ದೇಶವೇನು?

- Advertisement -
- Advertisement -

ಗಣತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧವೂ ಜನ ಹೋರಾಟ ಸಂಘಟಿಸಲು ಅವಕಾಶ ಇದೆ. ಇದೇ ಕಾರಣಕ್ಕೆ ಕಳೆದ 75 ವರ್ಷಗಳಲ್ಲಿ ಭರತ ಭೂಮಿ ನೂರಾರು ಹೋರಾಟಗಳಿಗೆ ಸಾಕ್ಷಿಯಾಗಿದೆ. ಇಂತಹ ಹೋರಾಟಗಳನ್ನು ಜನರ ನಡುವೆ ತೆಗೆದುಕೊಂಡು ಹೋದ ಮತ್ತು ಆ ಹೋರಾಟದ ಗೆಲುವಿಗೆ ತೆರೆಯ ಹಿಂದೆ ನಿಂತು ಶ್ರಮಿಸಿದ ದೊಡ್ಡ ಇತಿಹಾಸ ಭಾರತದ ಪತ್ರಿಕೋದ್ಯಮಕ್ಕಿದೆ. ಭಾರತದ ಸ್ವಾತಂತ್ರ್ಯ ಹೋರಾಟದಿಂದ 2013-14ರ ಸುಮಾರಿಗೆ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನವರಗೆ ದೇಶದ ಪತ್ರಿಕೋದ್ಯಮ ನಿರ್ವಹಿಸಿದ್ದ ಜವಾಬ್ದಾರಿ ನಿರ್ಣಾಯಕ ಮತ್ತು ನಿಸ್ಸಂಶಯವಾಗಿ ಪ್ರಶಂಸನಾರ್ಹ. ಆಡಳಿತರೂಢ ಸರ್ಕಾರವನ್ನೇ ಬೀಳಿಸಿದ ಕೀರ್ತಿಯೂ ಮಾಧ್ಯಮಗಳಿಗೆ ಇದೆ. ಇಂದಿರಾ ಗಾಂಧಿ ಕಾಲದಲ್ಲಿ ಚಿಗುರೊಡೆದ ಸರ್ವಾಧಿಕಾರದ ವಿರುದ್ಧ ಸೆಟೆದುನಿಂತ ಪತ್ರಿಕೋದ್ಯಮದ ಛಾತಿ ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಿಲಬಸ್ ಎಂದರೂ ತಪ್ಪಾಗಲಾರದು. ಇವೆಲ್ಲ ನಿಜಕ್ಕೂ ಮಾಧ್ಯಮದ ಶಕ್ತಿ. ಆದರೆ, ಇಂದು ಇವೇ ಮಾಧ್ಯಮಗಳಿಗೆ ಏನಾಗಿದೆ?

ಸ್ವಾತಂತ್ರ್ಯಾನಂತರ ಭಾರತ ನೂರಾರು ಹೋರಾಟಗಳನ್ನು ಕಂಡಿದೆ ನಿಜ. ಆದರೆ, ಈ ಎಲ್ಲಾ ಹೋರಾಟಗಳ ತೂಕ ಒಂದಾದರೆ, ಕಳೆದ ಒಂದು ವರ್ಷದಿಂದ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟದ ತೂಕವೇ ಮತ್ತೊಂದು. ಏಕೆಂದರೆ ಈ ಮಟ್ಟಿಗೆ ಸುದೀರ್ಘ ಅವಧಿಗೆ ಸಮಾಜದ ಮೇಲೆ ಈ ಪರಿ ಪ್ರಭಾವ ಬೀರಿದ ಮತ್ತೊಂದು ಹೋರಾಟವನ್ನು ಹೆಸರಿಸುವುದು ಕಷ್ಟ.

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 10 ತಿಂಗಳಿಂದ ದೇಶದ ರೈತರು ವಿರಮಿಸದೆ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್-ಹರಿಯಾಣ ರಾಜ್ಯಗಳಲ್ಲಿ ಹೋರಾಟ ತಕ್ಷಣಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ರೈತ ನಾಯಕ ರಾಕೇಶ್ ಟಿಕಾಯತ್, “10 ತಿಂಗಳಲ್ಲ 10 ವರ್ಷವಾದರೂ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಹೋರಾಟವನ್ನು ತೀವ್ರಗೊಳಿಸುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಒಟ್ಟಾಗಿ ಇಂದು ಭಾರತ್ ಬಂದ್ ಘೋಷಿಸಿವೆ. ಭಾರತ್ ಬಂದ್‌ಗೆ ಪಂಜಾಬ್-ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸಂಪೂರ್ಣವಾಗಿ ಸ್ತಬ್ಧವಾಗಿದೆ. ತಮಿಳುನಾಡಿನಲ್ಲಿ ರೈತರು ರೈಲ್ ರೊಖೋ ನಡೆಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಸುದ್ದಿ ಬಿತ್ತರಿಸುವಲ್ಲಿ ರಾಷ್ಟ್ರೀಯ ಮಾಧ್ಯಮ ಮಾತ್ರವಲ್ಲ ಕನ್ನಡ ಮಾಧ್ಯಮಗಳ ಧ್ವನಿಯೂ ಬೇರೆಯೇ ರೀತಿ ಇದೆ.

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ… ಇವು ಇಂದು ದೃಶ್ಯ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಗಳು. ನಾಳಿನ ಕನ್ನಡ ದಿನ ಪತ್ರಿಕೆಗಳಲ್ಲೂ ಇವಕ್ಕಿಂತ ಭಿನ್ನವಾದ ಪದಗುಚ್ಛಗಳನ್ನು ನಿರೀಕ್ಷೆ ಮಾಡುವುದು ಕಷ್ಟ. ಕೊರೊನಾ ಲಾಕ್‌ಡೌನ್ ಕಾರಣಕ್ಕೆ ಈಗಾಗಲೇ ಆರ್ಥಿಕ ವ್ಯವಸ್ಥೆ ಕುಸಿದಿರುವ ಕಾರಣಕ್ಕೆ ಬಲವಂತಕ್ಕೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಬೇಡ ಎಂದು ರೈತರು ತೀರ್ಮಾನಿಸಿದ್ದರು. ಇದೇ ಸಂದರ್ಭದಲ್ಲಿ ವ್ಯಾಪಾರಸ್ಥರು, ಶಾಲೆಗಳು ಸೇರಿ ನೈತಿಕ ಬೆಂಬಲ ಘೋಷಿಸಿವೆ. ಇಂತಹ ಸಂದರ್ಭದಲ್ಲಿ ವಾಹನಗಳು ಓಡಾಡುತ್ತಿವೆ, ಅಂಗಡಿಗಳು ತೆರೆದಿವೆ, ಹಾಗಾಗಿ ಬಂದ್ ವಿಫಲವಾಗಿದೆ ಎಂದರೆ ಏನರ್ಥ. ದೇಶದ ಎಲ್ಲಾ ಜಿಲ್ಲಾ, ತಾಲ್ಲೂಕುಗಳಲ್ಲಿ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆದಿವೆ. ಅದನ್ನು ಮಾಧ್ಯಮಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿವೆ. ಇಲ್ಲಿ ಉದ್ಭವವಾಗುವ ಪ್ರಶ್ನೆ ಒಂದೇ, ಕಳೆದ 75 ವರ್ಷಗಳ ಕಾಲ ರೈತ, ಕಾರ್ಮಿಕ, ಮಹಿಳಾ ಮತ್ತು ದಲಿತ ಚಳುವಳಿಗಳ ಹಿಂದಿನ ಬೆನ್ನೆಲುಬಾಗಿದ್ದ ಮಾಧ್ಯಮಗಳು ಇಂದೇಕೆ ಬದಲಾಗಿವೆ? ಇವರಿಗೆ ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ದರ್ದಾದರೂ ಏನು? 2013-14ರ ಭ್ರಷ್ಟಾಚಾರ ವಿರೋಧಿ ಆಂದೋಲನದ ವಕ್ತಾರಿಕೆ ವಹಿಸಿ ಸರ್ಕಾರವನ್ನೇ ಪತನಗೊಳಿಸಿದ್ದ ಪತ್ರಿಕೋದ್ಯಮ ಇಂದು ನೈತಿಕ ಅಧಃಪಥನದ ಹಾದಿ ಹಿಡಿದಿರುವುದು ಏಕೆ? ಎಂಬುದು.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ


ಕೃಷಿ ಕ್ಷೇತ್ರವು ರಾಜ್ಯಗಳ ಪಟ್ಟಿಯಲ್ಲಿರುವುದರಿಂದ ರಾಜ್ಯಗಳು ಮತ್ತು ರೈತರೊಂದಿಗೆ ಚರ್ಚಿಸದೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಸರಿಯಲ್ಲ ಎಂಬುದು ರೈತರ ಆರೋಪ. ಈಗಾಗಲೇ ದೇಶದ ಬಹುತೇಕ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ದೇಶದ ರೈಲ್ವೆ ಮತ್ತು ರಕ್ಷಣಾ ಇಲಾಖೆಯಲ್ಲೂ ಶೇ.50 ರಷ್ಟು ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಇದೀಗ ನೂತನ ಕೃಷಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರವನ್ನೂ ಖಾಸಗಿಯವರಿಗೆ ಧಾರೆ ಎರೆಯುವ ಹುನ್ನಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದು ರೈತರ ಆರೋಪ. ಈಗಿನ ಒಂದು ವರ್ಷದಲ್ಲಿ ಇದು ಕೇವಲ ಆರೋಪಗಳಾಗಿ ಮಾತ್ರ ಉಳಿಯದೆ ತಜ್ಞರ ಸಂಶೋಧನೆಯಿಂದಾಗಿ ಕೃಷಿ ನೀತಿ ರೈತರಿಗೆ ಮಾರಕ ಮತ್ತು ಕೃಷಿ ಚಟುವಟಿಕೆಯನ್ನೇ ಕತ್ತುಹಿಸುವ ಕೃತ್ಯ ಎಂಬುದನ್ನು ಸಾಬೀತುಪಡಿಸಲಾಗಿದೆ. ಹಾಗಿದ್ದೂ ಮಾಧ್ಯಮಗಳು ಏಕೆ ರೈತರ ಪರ ಇಲ್ಲ?

ಇನ್ನೂ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಹೋರಾಟವನ್ನು ಸುದ್ದಿಯ ಮೂಲಕ ಜನರ ಬಳಿ ತಲುಪಿಸುವುದು ಇರಲಿ, ಮಾಧ್ಯಮಗಳೇ ಆ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವಲ್ಲಿ ನಿರತವಾಗಿದ್ದವು. ಇನ್ನೂ ಕರ್ನಾಟಕದ ಮಾಧ್ಯಮಗಳೂ ಈ ವಿಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಹಲವು ಬಣ್ಣ ಬಣ್ಣದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ರೈತ ಹೋರಾಟವನ್ನು ಮುಗಿಸಲು ಪ್ರಭುತ್ವದ ಪ್ರಯತ್ನಕ್ಕಿಂತ ಪತ್ರಿಕೋದ್ಯಮದ ಪ್ರಯತ್ನ ತುಸು ಹೆಚ್ಚೇ ಆಗಿತ್ತು.

ಇದೇ ಕಾರಣಕ್ಕೆ ದೆಹಲಿ ರೈತ ಹೋರಾಟಗಾರರು ಗೋದಿ ಮಾಧ್ಯಮಗಳನ್ನು ಬದಿಗಿಟ್ಟು ಸಾಮಾಜಕ ಜಾಲತಾಣದ ಮೂಲಕ ತಮ್ಮದೇ ಮಾಧ್ಯಮಗಳನ್ನು ಕಂಡುಕೊಂಡರು. ಆ ಮೂಲಕ ತಮ್ಮ ಹೋರಾಟವನ್ನು ಜನಮಾನಸಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯೂ ಆಗಿದ್ದಾರೆ. ನಿಜಕ್ಕೂ ಇಂದು ರೈತ ಹೋರಾಟಕ್ಕೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಜಾಗ ಇಲ್ಲದೆ ಇರಬಹುದು, ಮಾಧ್ಯಮಗಳು ಸತ್ಯವನ್ನು ಮರೆಮಾಚಿರಬಹುದು. ಆದರೆ, ಜನ ಇಂದಿಗೂ ರೈತರ ಹಿಂದೆಯೇ ಇದ್ದಾರೆ. ಮಾಧ್ಯಮಗಳ ಪಕ್ಷಪಾತೀ ಧೋರಣೆ ಒಂದಲ್ಲ ಒಂದು ತನಗೆ ಮುಳ್ಳಾಗಲಿದೆ ಎಂಬುದಂತೂ ಸತ್ಯ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...