Homeಮುಖಪುಟಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ... ಈ ಥರದ ‍‍ಶೀರ್ಷಿಕೆಗಳ ಹಿಂದಿನ ಉದ್ದೇಶವೇನು?

- Advertisement -
- Advertisement -

ಗಣತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧವೂ ಜನ ಹೋರಾಟ ಸಂಘಟಿಸಲು ಅವಕಾಶ ಇದೆ. ಇದೇ ಕಾರಣಕ್ಕೆ ಕಳೆದ 75 ವರ್ಷಗಳಲ್ಲಿ ಭರತ ಭೂಮಿ ನೂರಾರು ಹೋರಾಟಗಳಿಗೆ ಸಾಕ್ಷಿಯಾಗಿದೆ. ಇಂತಹ ಹೋರಾಟಗಳನ್ನು ಜನರ ನಡುವೆ ತೆಗೆದುಕೊಂಡು ಹೋದ ಮತ್ತು ಆ ಹೋರಾಟದ ಗೆಲುವಿಗೆ ತೆರೆಯ ಹಿಂದೆ ನಿಂತು ಶ್ರಮಿಸಿದ ದೊಡ್ಡ ಇತಿಹಾಸ ಭಾರತದ ಪತ್ರಿಕೋದ್ಯಮಕ್ಕಿದೆ. ಭಾರತದ ಸ್ವಾತಂತ್ರ್ಯ ಹೋರಾಟದಿಂದ 2013-14ರ ಸುಮಾರಿಗೆ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನವರಗೆ ದೇಶದ ಪತ್ರಿಕೋದ್ಯಮ ನಿರ್ವಹಿಸಿದ್ದ ಜವಾಬ್ದಾರಿ ನಿರ್ಣಾಯಕ ಮತ್ತು ನಿಸ್ಸಂಶಯವಾಗಿ ಪ್ರಶಂಸನಾರ್ಹ. ಆಡಳಿತರೂಢ ಸರ್ಕಾರವನ್ನೇ ಬೀಳಿಸಿದ ಕೀರ್ತಿಯೂ ಮಾಧ್ಯಮಗಳಿಗೆ ಇದೆ. ಇಂದಿರಾ ಗಾಂಧಿ ಕಾಲದಲ್ಲಿ ಚಿಗುರೊಡೆದ ಸರ್ವಾಧಿಕಾರದ ವಿರುದ್ಧ ಸೆಟೆದುನಿಂತ ಪತ್ರಿಕೋದ್ಯಮದ ಛಾತಿ ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಿಲಬಸ್ ಎಂದರೂ ತಪ್ಪಾಗಲಾರದು. ಇವೆಲ್ಲ ನಿಜಕ್ಕೂ ಮಾಧ್ಯಮದ ಶಕ್ತಿ. ಆದರೆ, ಇಂದು ಇವೇ ಮಾಧ್ಯಮಗಳಿಗೆ ಏನಾಗಿದೆ?

ಸ್ವಾತಂತ್ರ್ಯಾನಂತರ ಭಾರತ ನೂರಾರು ಹೋರಾಟಗಳನ್ನು ಕಂಡಿದೆ ನಿಜ. ಆದರೆ, ಈ ಎಲ್ಲಾ ಹೋರಾಟಗಳ ತೂಕ ಒಂದಾದರೆ, ಕಳೆದ ಒಂದು ವರ್ಷದಿಂದ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟದ ತೂಕವೇ ಮತ್ತೊಂದು. ಏಕೆಂದರೆ ಈ ಮಟ್ಟಿಗೆ ಸುದೀರ್ಘ ಅವಧಿಗೆ ಸಮಾಜದ ಮೇಲೆ ಈ ಪರಿ ಪ್ರಭಾವ ಬೀರಿದ ಮತ್ತೊಂದು ಹೋರಾಟವನ್ನು ಹೆಸರಿಸುವುದು ಕಷ್ಟ.

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 10 ತಿಂಗಳಿಂದ ದೇಶದ ರೈತರು ವಿರಮಿಸದೆ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್-ಹರಿಯಾಣ ರಾಜ್ಯಗಳಲ್ಲಿ ಹೋರಾಟ ತಕ್ಷಣಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ರೈತ ನಾಯಕ ರಾಕೇಶ್ ಟಿಕಾಯತ್, “10 ತಿಂಗಳಲ್ಲ 10 ವರ್ಷವಾದರೂ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಹೋರಾಟವನ್ನು ತೀವ್ರಗೊಳಿಸುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಒಟ್ಟಾಗಿ ಇಂದು ಭಾರತ್ ಬಂದ್ ಘೋಷಿಸಿವೆ. ಭಾರತ್ ಬಂದ್‌ಗೆ ಪಂಜಾಬ್-ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸಂಪೂರ್ಣವಾಗಿ ಸ್ತಬ್ಧವಾಗಿದೆ. ತಮಿಳುನಾಡಿನಲ್ಲಿ ರೈತರು ರೈಲ್ ರೊಖೋ ನಡೆಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಸುದ್ದಿ ಬಿತ್ತರಿಸುವಲ್ಲಿ ರಾಷ್ಟ್ರೀಯ ಮಾಧ್ಯಮ ಮಾತ್ರವಲ್ಲ ಕನ್ನಡ ಮಾಧ್ಯಮಗಳ ಧ್ವನಿಯೂ ಬೇರೆಯೇ ರೀತಿ ಇದೆ.

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ… ಇವು ಇಂದು ದೃಶ್ಯ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಗಳು. ನಾಳಿನ ಕನ್ನಡ ದಿನ ಪತ್ರಿಕೆಗಳಲ್ಲೂ ಇವಕ್ಕಿಂತ ಭಿನ್ನವಾದ ಪದಗುಚ್ಛಗಳನ್ನು ನಿರೀಕ್ಷೆ ಮಾಡುವುದು ಕಷ್ಟ. ಕೊರೊನಾ ಲಾಕ್‌ಡೌನ್ ಕಾರಣಕ್ಕೆ ಈಗಾಗಲೇ ಆರ್ಥಿಕ ವ್ಯವಸ್ಥೆ ಕುಸಿದಿರುವ ಕಾರಣಕ್ಕೆ ಬಲವಂತಕ್ಕೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಬೇಡ ಎಂದು ರೈತರು ತೀರ್ಮಾನಿಸಿದ್ದರು. ಇದೇ ಸಂದರ್ಭದಲ್ಲಿ ವ್ಯಾಪಾರಸ್ಥರು, ಶಾಲೆಗಳು ಸೇರಿ ನೈತಿಕ ಬೆಂಬಲ ಘೋಷಿಸಿವೆ. ಇಂತಹ ಸಂದರ್ಭದಲ್ಲಿ ವಾಹನಗಳು ಓಡಾಡುತ್ತಿವೆ, ಅಂಗಡಿಗಳು ತೆರೆದಿವೆ, ಹಾಗಾಗಿ ಬಂದ್ ವಿಫಲವಾಗಿದೆ ಎಂದರೆ ಏನರ್ಥ. ದೇಶದ ಎಲ್ಲಾ ಜಿಲ್ಲಾ, ತಾಲ್ಲೂಕುಗಳಲ್ಲಿ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆದಿವೆ. ಅದನ್ನು ಮಾಧ್ಯಮಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿವೆ. ಇಲ್ಲಿ ಉದ್ಭವವಾಗುವ ಪ್ರಶ್ನೆ ಒಂದೇ, ಕಳೆದ 75 ವರ್ಷಗಳ ಕಾಲ ರೈತ, ಕಾರ್ಮಿಕ, ಮಹಿಳಾ ಮತ್ತು ದಲಿತ ಚಳುವಳಿಗಳ ಹಿಂದಿನ ಬೆನ್ನೆಲುಬಾಗಿದ್ದ ಮಾಧ್ಯಮಗಳು ಇಂದೇಕೆ ಬದಲಾಗಿವೆ? ಇವರಿಗೆ ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ದರ್ದಾದರೂ ಏನು? 2013-14ರ ಭ್ರಷ್ಟಾಚಾರ ವಿರೋಧಿ ಆಂದೋಲನದ ವಕ್ತಾರಿಕೆ ವಹಿಸಿ ಸರ್ಕಾರವನ್ನೇ ಪತನಗೊಳಿಸಿದ್ದ ಪತ್ರಿಕೋದ್ಯಮ ಇಂದು ನೈತಿಕ ಅಧಃಪಥನದ ಹಾದಿ ಹಿಡಿದಿರುವುದು ಏಕೆ? ಎಂಬುದು.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ


ಕೃಷಿ ಕ್ಷೇತ್ರವು ರಾಜ್ಯಗಳ ಪಟ್ಟಿಯಲ್ಲಿರುವುದರಿಂದ ರಾಜ್ಯಗಳು ಮತ್ತು ರೈತರೊಂದಿಗೆ ಚರ್ಚಿಸದೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಸರಿಯಲ್ಲ ಎಂಬುದು ರೈತರ ಆರೋಪ. ಈಗಾಗಲೇ ದೇಶದ ಬಹುತೇಕ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ದೇಶದ ರೈಲ್ವೆ ಮತ್ತು ರಕ್ಷಣಾ ಇಲಾಖೆಯಲ್ಲೂ ಶೇ.50 ರಷ್ಟು ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಇದೀಗ ನೂತನ ಕೃಷಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರವನ್ನೂ ಖಾಸಗಿಯವರಿಗೆ ಧಾರೆ ಎರೆಯುವ ಹುನ್ನಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದು ರೈತರ ಆರೋಪ. ಈಗಿನ ಒಂದು ವರ್ಷದಲ್ಲಿ ಇದು ಕೇವಲ ಆರೋಪಗಳಾಗಿ ಮಾತ್ರ ಉಳಿಯದೆ ತಜ್ಞರ ಸಂಶೋಧನೆಯಿಂದಾಗಿ ಕೃಷಿ ನೀತಿ ರೈತರಿಗೆ ಮಾರಕ ಮತ್ತು ಕೃಷಿ ಚಟುವಟಿಕೆಯನ್ನೇ ಕತ್ತುಹಿಸುವ ಕೃತ್ಯ ಎಂಬುದನ್ನು ಸಾಬೀತುಪಡಿಸಲಾಗಿದೆ. ಹಾಗಿದ್ದೂ ಮಾಧ್ಯಮಗಳು ಏಕೆ ರೈತರ ಪರ ಇಲ್ಲ?

ಇನ್ನೂ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಹೋರಾಟವನ್ನು ಸುದ್ದಿಯ ಮೂಲಕ ಜನರ ಬಳಿ ತಲುಪಿಸುವುದು ಇರಲಿ, ಮಾಧ್ಯಮಗಳೇ ಆ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವಲ್ಲಿ ನಿರತವಾಗಿದ್ದವು. ಇನ್ನೂ ಕರ್ನಾಟಕದ ಮಾಧ್ಯಮಗಳೂ ಈ ವಿಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಹಲವು ಬಣ್ಣ ಬಣ್ಣದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ರೈತ ಹೋರಾಟವನ್ನು ಮುಗಿಸಲು ಪ್ರಭುತ್ವದ ಪ್ರಯತ್ನಕ್ಕಿಂತ ಪತ್ರಿಕೋದ್ಯಮದ ಪ್ರಯತ್ನ ತುಸು ಹೆಚ್ಚೇ ಆಗಿತ್ತು.

ಇದೇ ಕಾರಣಕ್ಕೆ ದೆಹಲಿ ರೈತ ಹೋರಾಟಗಾರರು ಗೋದಿ ಮಾಧ್ಯಮಗಳನ್ನು ಬದಿಗಿಟ್ಟು ಸಾಮಾಜಕ ಜಾಲತಾಣದ ಮೂಲಕ ತಮ್ಮದೇ ಮಾಧ್ಯಮಗಳನ್ನು ಕಂಡುಕೊಂಡರು. ಆ ಮೂಲಕ ತಮ್ಮ ಹೋರಾಟವನ್ನು ಜನಮಾನಸಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯೂ ಆಗಿದ್ದಾರೆ. ನಿಜಕ್ಕೂ ಇಂದು ರೈತ ಹೋರಾಟಕ್ಕೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಜಾಗ ಇಲ್ಲದೆ ಇರಬಹುದು, ಮಾಧ್ಯಮಗಳು ಸತ್ಯವನ್ನು ಮರೆಮಾಚಿರಬಹುದು. ಆದರೆ, ಜನ ಇಂದಿಗೂ ರೈತರ ಹಿಂದೆಯೇ ಇದ್ದಾರೆ. ಮಾಧ್ಯಮಗಳ ಪಕ್ಷಪಾತೀ ಧೋರಣೆ ಒಂದಲ್ಲ ಒಂದು ತನಗೆ ಮುಳ್ಳಾಗಲಿದೆ ಎಂಬುದಂತೂ ಸತ್ಯ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...