Homeಮುಖಪುಟಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವರದಿ: ಪತ್ರಕರ್ತ ಅಜಿತ್ ಅಂಜುಮ್ ವಿರುದ್ಧ ಎಫ್‌ಐಆರ್

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವರದಿ: ಪತ್ರಕರ್ತ ಅಜಿತ್ ಅಂಜುಮ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹಸ್ತಕ್ಷೇಪ ಮಾಡಿದ ಮತ್ತು ಕೋಮು ಸಂಘರ್ಷವನ್ನು ಪ್ರಚೋದಿಸಿದ ಆರೋಪದ ಮೇಲೆ ಹಿರಿಯ ಪತ್ರಕರ್ತರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸೋಮವಾರ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 12ರಂದು ಬಾಲಿಯಾದ ಮತಗಟ್ಟೆಗೆ ಭೇಟಿ ನೀಡಿದ ನಂತರ ಪ್ರಶಸ್ತಿ ವಿಜೇತ ಪತ್ರಕರ್ತ ಅಜಿತ್ ಅಂಜುಮ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, 2023 ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಅಂಜುಮ್ ಅವರು, ಮತಗಟ್ಟೆಯಲ್ಲಿ ಹಲವು ಗಣತಿ ಫಾರ್ಮ್‌ಗಳು (ನಮೂನೆಗಳು) ಕಂಡು ಬಂದಿವೆ. ಅವುಗಳಲ್ಲಿ ಕೆಲವು ಫಾರ್ಮ್‌ಗಳಲ್ಲಿ ಫೋಟೋ ಇರಲಿಲ್ಲ. ಇನ್ನೂ ಕೆಲವು ಫಾರ್ಮ್‌ಗಳನ್ನು ಭಾಗಶಃ ಭರ್ತಿ ಮಾಡಲಾಗಿತ್ತು, ಸಹಿ ಹಾಕಿರಲಿಲ್ಲ” ಎಂದು ವರದಿ ಮಾಡಿದ್ದರು.

ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮೊಹಮ್ಮದ್ ಅನ್ಸಾರುಲ್ ಹಕ್ ಅವರ ದೂರಿನ ಮೇರೆಗೆ, ಅಂಜುಮ್ ವಿರುದ್ಧ ಬಿಎನ್‌ಎಸ್‌ ಕಾಯ್ದೆಯ ಕ್ರಿಮಿನಲ್ ಅತಿಕ್ರಮಣ, ಕಾನೂನುಬದ್ಧ ಆದೇಶವನ್ನು ಉಲ್ಲಂಘಿಸುವುದು, ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಪ್ರಯತ್ನಿಸುವುದು ಮುಂತಾದ ಸೆಕ್ಷನ್‌ಗಳಡಿ ಹಾಗೂ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ವಿವರಿಸಿದೆ.

“ಸಾಹಿಬ್‌ಪುರ ಕಮಲ್ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 16145 ರ ಬಿಎಲ್ಒ ಆದ ನಾನು, ಜುಲೈ 12, 2025ರಂದು ಬಲ್ಲಿಯಾದಲ್ಲಿರುವ ಬ್ಲಾಕ್ ಆಡಿಟೋರಿಯಂನಲ್ಲಿ ಬಿಎಲ್ಒ ಅಪ್ಲಿಕೇಶನ್‌ನಿಂದ ಎಣಿಕೆ ಫಾರ್ಮ್‌ಗಳನ್ನು ಅಪ್‌ಲೋಡ್ ಮಾಡುತ್ತಿದ್ದೆ. ಬೆಳಿಗ್ಗೆ 9:30ರ ಸುಮಾರಿಗೆ, ಯೂಟ್ಯೂಬರ್ ಅಜಿತ್ ಅಂಜುಮ್ ಅವರ ಸಹಚರರು ಮತ್ತು ಕ್ಯಾಮರಾಮ್ಯಾನ್ ಅನುಮತಿಯಿಲ್ಲದೆ ಆಡಿಟೋರಿಯಂಗೆ ಪ್ರವೇಶಿಸಿ, ನನ್ನ ಬೂತ್‌ನಲ್ಲಿರುವ ಮತದಾರರ ಸಂಖ್ಯೆ, ನಾನು ಎಷ್ಟು ಫಾರ್ಮ್‌ಗಳನ್ನು ವಿತರಿಸಿದ್ದೇನೆ ಮತ್ತು ನನಗೆ ಎಷ್ಟು ಫಾರ್ಮ್‌ಗಳು ವಾಪಸ್ ತೊರೆತಿವೆ ಎಂದು ಪ್ರಶ್ನಿಸಲು ಪ್ರಾರಂಭಿಸಿದರು” ಎಂದು ಮೊಹಮ್ಮದ್ ಅನ್ಸಾರುಲ್ ಹಕ್ ದೂರು ನೀಡಿದ್ದಾರೆ.

ಮುಸ್ಲಿಂ ಮತದಾರರ ಸಂಖ್ಯೆ ಮತ್ತು ಎಷ್ಟು ಮಂದಿ ಫಾರ್ಮ್‌ ಸಲ್ಲಿಸಿದ್ದಾರೆ ಎಂದು ಆರೋಪಿಗಳು ಕೇಳಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.

“ನನ್ನ ಮತಗಟ್ಟೆಯಲ್ಲಿ 1,020 ಮತದಾರರಿದ್ದಾರೆ. ನಾನು ಎಲ್ಲರಿಗೂ ಫಾರ್ಮ್‌ಗಳನ್ನು ವಿತರಿಸಿ ಅವುಗಳನ್ನು ಮರಳಿ ಪಡೆದಿದ್ದೇನೆ ಎಂದು ಅವರಿಗೆ ಹೇಳಿದ್ದೇನೆ. ಆದರೂ, ಮುಸ್ಲಿಂ ಮತದಾರರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಹೇಳಿಕೆಯ ಮೇಲೆ ಯೂಟ್ಯೂಬರ್ ಗಮನ ಹರಿಸಿದ್ದರು, ಅದು ಸಂಪೂರ್ಣವಾಗಿ ಸುಳ್ಳು. ಯೂಟ್ಯೂಬರ್ ಮತ್ತು ಅವರ ತಂಡವು ನನಗೆ ಒಂದು ಗಂಟೆ ಕೆಲಸ ಮಾಡಲು ಅವಕಾಶ ನೀಡಿರಲಿಲ್ಲ. ಇದರಿಂದಾಗಿ ನನ್ನ ಕೆಲಸಕ್ಕೆ ಅಡ್ಡಿ ಉಂಟಾಯಿತು. ಆದ್ದರಿಂದ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಕೋಮು ಸಂಘರ್ಷವನ್ನು ಪ್ರಚೋದಿಸಿದ ಯೂಟ್ಯೂಬರ್ ಅಜಿತ್ ಅಂಜುಮ್ ಮತ್ತು ಅವರ ಸಹಚರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಅನ್ಸಾರುಲ್ ಹಕ್ ದೂರಿನಲ್ಲಿ ಮನವಿ ಮಾಡಿದ್ದಾರೆ.

ಈ ನಡುವೆ ಪತ್ರಕರ್ತ ಅಂಜುಮ್ ಅವರು ತಮ್ಮ ವರದಿಗೆ ಬದ್ಧ ಎಂದಿದ್ದು, “ನಮ್ಮ ವರದಿ ನ್ಯಾಯಯುತ ಮತ್ತು ಪಕ್ಷಪಾತ ರಹಿತವಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

“ನಾನೊಬ್ಬ ಪ್ರಜ್ಞಾಪೂರ್ವಕ ಪತ್ರಕರ್ತನಾಗಿ, ಭಾರತೀಯ ಚುನಾವಣಾ ಆಯೋಗದ ನಿಯಮಗಳನ್ನು ಹೇಗೆ ಪಾಲಿಸುತ್ತಿಲ್ಲ ಎಂಬುದನ್ನು ತೋರಿಸಿದ್ದೇನೆ. ನಾನು ಯಾರ ಗುರುತನ್ನು ಬಹಿರಂಗಪಡಿಸಿಲ್ಲ ಅಥವಾ ಗಣತಿ ನಮೂನೆಗಳ ಹತ್ತಿರದ ಚಿತ್ರಗಳನ್ನು ತೋರಿಸಿಲ್ಲ. ಪೊಲೀಸರು ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ನನ್ನ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ. ನಾನು ಇದಕ್ಕೆಲ್ಲ ಹೆದರುವವನು ಅಲ್ಲ ಅಂಜುಮ್ ಹೇಳಿದ್ದಾರೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...