Homeಮುಖಪುಟಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವರದಿ: ಪತ್ರಕರ್ತ ಅಜಿತ್ ಅಂಜುಮ್ ವಿರುದ್ಧ ಎಫ್‌ಐಆರ್

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವರದಿ: ಪತ್ರಕರ್ತ ಅಜಿತ್ ಅಂಜುಮ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹಸ್ತಕ್ಷೇಪ ಮಾಡಿದ ಮತ್ತು ಕೋಮು ಸಂಘರ್ಷವನ್ನು ಪ್ರಚೋದಿಸಿದ ಆರೋಪದ ಮೇಲೆ ಹಿರಿಯ ಪತ್ರಕರ್ತರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸೋಮವಾರ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 12ರಂದು ಬಾಲಿಯಾದ ಮತಗಟ್ಟೆಗೆ ಭೇಟಿ ನೀಡಿದ ನಂತರ ಪ್ರಶಸ್ತಿ ವಿಜೇತ ಪತ್ರಕರ್ತ ಅಜಿತ್ ಅಂಜುಮ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, 2023 ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಅಂಜುಮ್ ಅವರು, ಮತಗಟ್ಟೆಯಲ್ಲಿ ಹಲವು ಗಣತಿ ಫಾರ್ಮ್‌ಗಳು (ನಮೂನೆಗಳು) ಕಂಡು ಬಂದಿವೆ. ಅವುಗಳಲ್ಲಿ ಕೆಲವು ಫಾರ್ಮ್‌ಗಳಲ್ಲಿ ಫೋಟೋ ಇರಲಿಲ್ಲ. ಇನ್ನೂ ಕೆಲವು ಫಾರ್ಮ್‌ಗಳನ್ನು ಭಾಗಶಃ ಭರ್ತಿ ಮಾಡಲಾಗಿತ್ತು, ಸಹಿ ಹಾಕಿರಲಿಲ್ಲ” ಎಂದು ವರದಿ ಮಾಡಿದ್ದರು.

ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮೊಹಮ್ಮದ್ ಅನ್ಸಾರುಲ್ ಹಕ್ ಅವರ ದೂರಿನ ಮೇರೆಗೆ, ಅಂಜುಮ್ ವಿರುದ್ಧ ಬಿಎನ್‌ಎಸ್‌ ಕಾಯ್ದೆಯ ಕ್ರಿಮಿನಲ್ ಅತಿಕ್ರಮಣ, ಕಾನೂನುಬದ್ಧ ಆದೇಶವನ್ನು ಉಲ್ಲಂಘಿಸುವುದು, ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಪ್ರಯತ್ನಿಸುವುದು ಮುಂತಾದ ಸೆಕ್ಷನ್‌ಗಳಡಿ ಹಾಗೂ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ವಿವರಿಸಿದೆ.

“ಸಾಹಿಬ್‌ಪುರ ಕಮಲ್ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 16145 ರ ಬಿಎಲ್ಒ ಆದ ನಾನು, ಜುಲೈ 12, 2025ರಂದು ಬಲ್ಲಿಯಾದಲ್ಲಿರುವ ಬ್ಲಾಕ್ ಆಡಿಟೋರಿಯಂನಲ್ಲಿ ಬಿಎಲ್ಒ ಅಪ್ಲಿಕೇಶನ್‌ನಿಂದ ಎಣಿಕೆ ಫಾರ್ಮ್‌ಗಳನ್ನು ಅಪ್‌ಲೋಡ್ ಮಾಡುತ್ತಿದ್ದೆ. ಬೆಳಿಗ್ಗೆ 9:30ರ ಸುಮಾರಿಗೆ, ಯೂಟ್ಯೂಬರ್ ಅಜಿತ್ ಅಂಜುಮ್ ಅವರ ಸಹಚರರು ಮತ್ತು ಕ್ಯಾಮರಾಮ್ಯಾನ್ ಅನುಮತಿಯಿಲ್ಲದೆ ಆಡಿಟೋರಿಯಂಗೆ ಪ್ರವೇಶಿಸಿ, ನನ್ನ ಬೂತ್‌ನಲ್ಲಿರುವ ಮತದಾರರ ಸಂಖ್ಯೆ, ನಾನು ಎಷ್ಟು ಫಾರ್ಮ್‌ಗಳನ್ನು ವಿತರಿಸಿದ್ದೇನೆ ಮತ್ತು ನನಗೆ ಎಷ್ಟು ಫಾರ್ಮ್‌ಗಳು ವಾಪಸ್ ತೊರೆತಿವೆ ಎಂದು ಪ್ರಶ್ನಿಸಲು ಪ್ರಾರಂಭಿಸಿದರು” ಎಂದು ಮೊಹಮ್ಮದ್ ಅನ್ಸಾರುಲ್ ಹಕ್ ದೂರು ನೀಡಿದ್ದಾರೆ.

ಮುಸ್ಲಿಂ ಮತದಾರರ ಸಂಖ್ಯೆ ಮತ್ತು ಎಷ್ಟು ಮಂದಿ ಫಾರ್ಮ್‌ ಸಲ್ಲಿಸಿದ್ದಾರೆ ಎಂದು ಆರೋಪಿಗಳು ಕೇಳಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.

“ನನ್ನ ಮತಗಟ್ಟೆಯಲ್ಲಿ 1,020 ಮತದಾರರಿದ್ದಾರೆ. ನಾನು ಎಲ್ಲರಿಗೂ ಫಾರ್ಮ್‌ಗಳನ್ನು ವಿತರಿಸಿ ಅವುಗಳನ್ನು ಮರಳಿ ಪಡೆದಿದ್ದೇನೆ ಎಂದು ಅವರಿಗೆ ಹೇಳಿದ್ದೇನೆ. ಆದರೂ, ಮುಸ್ಲಿಂ ಮತದಾರರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಹೇಳಿಕೆಯ ಮೇಲೆ ಯೂಟ್ಯೂಬರ್ ಗಮನ ಹರಿಸಿದ್ದರು, ಅದು ಸಂಪೂರ್ಣವಾಗಿ ಸುಳ್ಳು. ಯೂಟ್ಯೂಬರ್ ಮತ್ತು ಅವರ ತಂಡವು ನನಗೆ ಒಂದು ಗಂಟೆ ಕೆಲಸ ಮಾಡಲು ಅವಕಾಶ ನೀಡಿರಲಿಲ್ಲ. ಇದರಿಂದಾಗಿ ನನ್ನ ಕೆಲಸಕ್ಕೆ ಅಡ್ಡಿ ಉಂಟಾಯಿತು. ಆದ್ದರಿಂದ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಕೋಮು ಸಂಘರ್ಷವನ್ನು ಪ್ರಚೋದಿಸಿದ ಯೂಟ್ಯೂಬರ್ ಅಜಿತ್ ಅಂಜುಮ್ ಮತ್ತು ಅವರ ಸಹಚರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಅನ್ಸಾರುಲ್ ಹಕ್ ದೂರಿನಲ್ಲಿ ಮನವಿ ಮಾಡಿದ್ದಾರೆ.

ಈ ನಡುವೆ ಪತ್ರಕರ್ತ ಅಂಜುಮ್ ಅವರು ತಮ್ಮ ವರದಿಗೆ ಬದ್ಧ ಎಂದಿದ್ದು, “ನಮ್ಮ ವರದಿ ನ್ಯಾಯಯುತ ಮತ್ತು ಪಕ್ಷಪಾತ ರಹಿತವಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

“ನಾನೊಬ್ಬ ಪ್ರಜ್ಞಾಪೂರ್ವಕ ಪತ್ರಕರ್ತನಾಗಿ, ಭಾರತೀಯ ಚುನಾವಣಾ ಆಯೋಗದ ನಿಯಮಗಳನ್ನು ಹೇಗೆ ಪಾಲಿಸುತ್ತಿಲ್ಲ ಎಂಬುದನ್ನು ತೋರಿಸಿದ್ದೇನೆ. ನಾನು ಯಾರ ಗುರುತನ್ನು ಬಹಿರಂಗಪಡಿಸಿಲ್ಲ ಅಥವಾ ಗಣತಿ ನಮೂನೆಗಳ ಹತ್ತಿರದ ಚಿತ್ರಗಳನ್ನು ತೋರಿಸಿಲ್ಲ. ಪೊಲೀಸರು ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ನನ್ನ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ. ನಾನು ಇದಕ್ಕೆಲ್ಲ ಹೆದರುವವನು ಅಲ್ಲ ಅಂಜುಮ್ ಹೇಳಿದ್ದಾರೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...