Homeಮುಖಪುಟರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು

ರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು

- Advertisement -
- Advertisement -

ಕೇರಳದ ತ್ರಿಶೂರ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಲಯಾಳಂ ಸುದ್ದಿ ವಾಹಿನಿ ‘ರಿಪೋರ್ಟರ್ ಟಿವಿ’ಯ ಬ್ಯೂರೋ ಕಚೇರಿ ಮೇಲೆ ಶುಕ್ರವಾರ (ಆ.29) ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಯುವ ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಹಾಗೂ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರ ಬಗ್ಗೆ ಚಾನೆಲ್ ವರದಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಚಾನೆಲ್ ಮತ್ತು ಅದರ ವರದಿಗಾರರ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಚಾನೆಲ್‌ ಲೋಗೋ ಹೊಂದಿರುವ ಪೋಸ್ಟರ್‌ಗಳ ಮೇಲೆ ಮಸಿ ಸುರಿದಿದ್ದಾರೆ ಎಂದು ವರದಿ ಹೇಳಿದೆ.

ಘಟನೆಯನ್ನು ಖಂಡಿಸಿರುವ ರಿಪೋರ್ಟರ್ ಟಿವಿ, ‘ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ’ ಎಂದಿದೆ. ಪೊಲೀಸರಿಗೆ ಮತ್ತು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದೆ.

ರಾಹುಲ್ ಮಾಂಕೂಟತ್ತಿಲ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ್ದು ಎನ್ನಲಾದ ಹಲವಾರು ಆಡಿಯೋ ಕ್ಲಿಪ್‌ಗಳನ್ನು ರಿಪೋರ್ಟರ್ ಟಿವಿ ಪ್ರಸಾರ ಮಾಡಿತ್ತು.

ಮಹಿಳೆಯೊಬ್ಬರಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿ ಮಾತನಾಡಿದ್ದ ಆಡಿಯೋ ಕ್ಲಿಪ್ ಒಂದನ್ನು . ಆಗಸ್ಟ್ 21 ರಂದು ಚಾನೆಲ್ ಪ್ರಸಾರ ಮಾಡಿತ್ತು. ಆ ಆಡಿಯೋ ಕ್ಲಿಪ್‌ನಲ್ಲಿದ್ದ ಪುರುಷನ ಧ್ವನಿ ರಾಹುಲ್ ಅವರದ್ದು ಎನ್ನಲಾಗಿದೆ.

ಚಾನೆಲ್ ಪ್ರಸಾರ ಮಾಡಿದ್ದ ಆಡಿಯೋ ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದು, ಸ್ವಪಕ್ಷದವರಿಂದಲೇ ರಾಹುಲ್ ರಾಜೀನಾಮೆಗೆ ಒತ್ತಡ ಹೆಚ್ಚಾಗಿತ್ತು. ಕೊನೆಗೆ ರಾಹುಲ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತೊರೆದರು.

ತನ್ನ ಕಚೇರಿ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಿಪೋರ್ಟರ್ ಟಿವಿ ಪ್ರಸಾರ ಮಾಡಿರುವ ವಿಡಿಯೋದಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲ ವ್ಯಕ್ತಿಗಳು ಸುದ್ದಿ ವಾಹಿನಿಯ ವಾಹನದ ಮೇಲೆ ತಮ್ಮ ಪಕ್ಷದ ಧ್ವಜವನ್ನು ಇರಿಸಿ ಘೋಷಣೆಗಳನ್ನು ಕೂಗಿ, ನಂತರ ಕಚೇರಿಯ ಪ್ರವೇಶದ್ವಾರದಲ್ಲಿ ಪೋಸ್ಟರ್ ಮೇಲೆ ಮಸಿ ಸುರಿದಿರುವುದನ್ನು ನೋಡಬಹುದು. 

“ರಾಹುಲ್ ಅವರನ್ನು ಬೆಂಬಲಿಸುವ ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಎಲ್ಲರೂ ಈ ಕೃತ್ಯವನ್ನು ಬೆಂಬಲಿಸಿಲ್ಲ. ಕೆಲವು ಯುವ ನಾಯಕರನ್ನು ಹೊರತುಪಡಿಸಿ, ಪಕ್ಷದೊಳಗಿನ ಹಿರಿಯ ನಾಯಕರು ಇದನ್ನು ಬೆಂಬಲಿಸುವುದಿಲ್ಲ ಎಂದು ನಮಗೆ ತಿಳಿದು ಬಂದಿದೆ” ಎಂದು ರಿಪೋರ್ಟರ್ ಟಿವಿಯ ಸಂಪಾದಕ ಡಾ. ಅರುಣ್ ಕುಮಾರ್ ಹೇಳಿದ್ದಾರೆ.

ಚಾನೆಲ್ ಪ್ರಕಾರ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಿಥುನ್ ಮೋಹನ್, ತ್ರಿಶೂರ್ ಜಿಲ್ಲಾ ಉಪಾಧ್ಯಕ್ಷ ವಿಷ್ಣು ಚಂದ್ರನ್, ತ್ರಿಶೂರ್ ವಿಧಾನಸಭಾ ಅಧ್ಯಕ್ಷ ಕೆ. ಸುಮೇಶ್ ಮತ್ತು ಸೌರಾಗ್, ನಿಖಿಲ್ ದೇವ್, ಅಮಲ್ ಜೇಮ್ಸ್ ಸೇರಿದಂತೆ ಇತರು ದಾಳಿಯಲ್ಲಿ ಭಾಗಿಯಾಗಿದ್ದಾರೆ.

ಬ್ಯಾಂಕ್ ಕ್ಯಾಂಟೀನ್‌ನಲ್ಲಿ ಬೀಫ್‌ ನಿಷೇಧಿಸಿದ ಬಿಹಾರ ಮೂಲದ ಮ್ಯಾನೇಜರ್; ಸಿಬ್ಬಂದಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...