Homeಮುಖಪುಟರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು

ರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು

- Advertisement -
- Advertisement -

ಕೇರಳದ ತ್ರಿಶೂರ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಲಯಾಳಂ ಸುದ್ದಿ ವಾಹಿನಿ ‘ರಿಪೋರ್ಟರ್ ಟಿವಿ’ಯ ಬ್ಯೂರೋ ಕಚೇರಿ ಮೇಲೆ ಶುಕ್ರವಾರ (ಆ.29) ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಯುವ ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಹಾಗೂ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರ ಬಗ್ಗೆ ಚಾನೆಲ್ ವರದಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಚಾನೆಲ್ ಮತ್ತು ಅದರ ವರದಿಗಾರರ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಚಾನೆಲ್‌ ಲೋಗೋ ಹೊಂದಿರುವ ಪೋಸ್ಟರ್‌ಗಳ ಮೇಲೆ ಮಸಿ ಸುರಿದಿದ್ದಾರೆ ಎಂದು ವರದಿ ಹೇಳಿದೆ.

ಘಟನೆಯನ್ನು ಖಂಡಿಸಿರುವ ರಿಪೋರ್ಟರ್ ಟಿವಿ, ‘ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ’ ಎಂದಿದೆ. ಪೊಲೀಸರಿಗೆ ಮತ್ತು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದೆ.

ರಾಹುಲ್ ಮಾಂಕೂಟತ್ತಿಲ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ್ದು ಎನ್ನಲಾದ ಹಲವಾರು ಆಡಿಯೋ ಕ್ಲಿಪ್‌ಗಳನ್ನು ರಿಪೋರ್ಟರ್ ಟಿವಿ ಪ್ರಸಾರ ಮಾಡಿತ್ತು.

ಮಹಿಳೆಯೊಬ್ಬರಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿ ಮಾತನಾಡಿದ್ದ ಆಡಿಯೋ ಕ್ಲಿಪ್ ಒಂದನ್ನು . ಆಗಸ್ಟ್ 21 ರಂದು ಚಾನೆಲ್ ಪ್ರಸಾರ ಮಾಡಿತ್ತು. ಆ ಆಡಿಯೋ ಕ್ಲಿಪ್‌ನಲ್ಲಿದ್ದ ಪುರುಷನ ಧ್ವನಿ ರಾಹುಲ್ ಅವರದ್ದು ಎನ್ನಲಾಗಿದೆ.

ಚಾನೆಲ್ ಪ್ರಸಾರ ಮಾಡಿದ್ದ ಆಡಿಯೋ ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದು, ಸ್ವಪಕ್ಷದವರಿಂದಲೇ ರಾಹುಲ್ ರಾಜೀನಾಮೆಗೆ ಒತ್ತಡ ಹೆಚ್ಚಾಗಿತ್ತು. ಕೊನೆಗೆ ರಾಹುಲ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತೊರೆದರು.

ತನ್ನ ಕಚೇರಿ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಿಪೋರ್ಟರ್ ಟಿವಿ ಪ್ರಸಾರ ಮಾಡಿರುವ ವಿಡಿಯೋದಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲ ವ್ಯಕ್ತಿಗಳು ಸುದ್ದಿ ವಾಹಿನಿಯ ವಾಹನದ ಮೇಲೆ ತಮ್ಮ ಪಕ್ಷದ ಧ್ವಜವನ್ನು ಇರಿಸಿ ಘೋಷಣೆಗಳನ್ನು ಕೂಗಿ, ನಂತರ ಕಚೇರಿಯ ಪ್ರವೇಶದ್ವಾರದಲ್ಲಿ ಪೋಸ್ಟರ್ ಮೇಲೆ ಮಸಿ ಸುರಿದಿರುವುದನ್ನು ನೋಡಬಹುದು. 

“ರಾಹುಲ್ ಅವರನ್ನು ಬೆಂಬಲಿಸುವ ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಎಲ್ಲರೂ ಈ ಕೃತ್ಯವನ್ನು ಬೆಂಬಲಿಸಿಲ್ಲ. ಕೆಲವು ಯುವ ನಾಯಕರನ್ನು ಹೊರತುಪಡಿಸಿ, ಪಕ್ಷದೊಳಗಿನ ಹಿರಿಯ ನಾಯಕರು ಇದನ್ನು ಬೆಂಬಲಿಸುವುದಿಲ್ಲ ಎಂದು ನಮಗೆ ತಿಳಿದು ಬಂದಿದೆ” ಎಂದು ರಿಪೋರ್ಟರ್ ಟಿವಿಯ ಸಂಪಾದಕ ಡಾ. ಅರುಣ್ ಕುಮಾರ್ ಹೇಳಿದ್ದಾರೆ.

ಚಾನೆಲ್ ಪ್ರಕಾರ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಿಥುನ್ ಮೋಹನ್, ತ್ರಿಶೂರ್ ಜಿಲ್ಲಾ ಉಪಾಧ್ಯಕ್ಷ ವಿಷ್ಣು ಚಂದ್ರನ್, ತ್ರಿಶೂರ್ ವಿಧಾನಸಭಾ ಅಧ್ಯಕ್ಷ ಕೆ. ಸುಮೇಶ್ ಮತ್ತು ಸೌರಾಗ್, ನಿಖಿಲ್ ದೇವ್, ಅಮಲ್ ಜೇಮ್ಸ್ ಸೇರಿದಂತೆ ಇತರು ದಾಳಿಯಲ್ಲಿ ಭಾಗಿಯಾಗಿದ್ದಾರೆ.

ಬ್ಯಾಂಕ್ ಕ್ಯಾಂಟೀನ್‌ನಲ್ಲಿ ಬೀಫ್‌ ನಿಷೇಧಿಸಿದ ಬಿಹಾರ ಮೂಲದ ಮ್ಯಾನೇಜರ್; ಸಿಬ್ಬಂದಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...