Homeಮುಖಪುಟರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು

ರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು

- Advertisement -
- Advertisement -

ಕೇರಳದ ತ್ರಿಶೂರ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಲಯಾಳಂ ಸುದ್ದಿ ವಾಹಿನಿ ‘ರಿಪೋರ್ಟರ್ ಟಿವಿ’ಯ ಬ್ಯೂರೋ ಕಚೇರಿ ಮೇಲೆ ಶುಕ್ರವಾರ (ಆ.29) ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಯುವ ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಹಾಗೂ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರ ಬಗ್ಗೆ ಚಾನೆಲ್ ವರದಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಚಾನೆಲ್ ಮತ್ತು ಅದರ ವರದಿಗಾರರ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಚಾನೆಲ್‌ ಲೋಗೋ ಹೊಂದಿರುವ ಪೋಸ್ಟರ್‌ಗಳ ಮೇಲೆ ಮಸಿ ಸುರಿದಿದ್ದಾರೆ ಎಂದು ವರದಿ ಹೇಳಿದೆ.

ಘಟನೆಯನ್ನು ಖಂಡಿಸಿರುವ ರಿಪೋರ್ಟರ್ ಟಿವಿ, ‘ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ’ ಎಂದಿದೆ. ಪೊಲೀಸರಿಗೆ ಮತ್ತು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದೆ.

ರಾಹುಲ್ ಮಾಂಕೂಟತ್ತಿಲ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ್ದು ಎನ್ನಲಾದ ಹಲವಾರು ಆಡಿಯೋ ಕ್ಲಿಪ್‌ಗಳನ್ನು ರಿಪೋರ್ಟರ್ ಟಿವಿ ಪ್ರಸಾರ ಮಾಡಿತ್ತು.

ಮಹಿಳೆಯೊಬ್ಬರಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿ ಮಾತನಾಡಿದ್ದ ಆಡಿಯೋ ಕ್ಲಿಪ್ ಒಂದನ್ನು . ಆಗಸ್ಟ್ 21 ರಂದು ಚಾನೆಲ್ ಪ್ರಸಾರ ಮಾಡಿತ್ತು. ಆ ಆಡಿಯೋ ಕ್ಲಿಪ್‌ನಲ್ಲಿದ್ದ ಪುರುಷನ ಧ್ವನಿ ರಾಹುಲ್ ಅವರದ್ದು ಎನ್ನಲಾಗಿದೆ.

ಚಾನೆಲ್ ಪ್ರಸಾರ ಮಾಡಿದ್ದ ಆಡಿಯೋ ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದು, ಸ್ವಪಕ್ಷದವರಿಂದಲೇ ರಾಹುಲ್ ರಾಜೀನಾಮೆಗೆ ಒತ್ತಡ ಹೆಚ್ಚಾಗಿತ್ತು. ಕೊನೆಗೆ ರಾಹುಲ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತೊರೆದರು.

ತನ್ನ ಕಚೇರಿ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಿಪೋರ್ಟರ್ ಟಿವಿ ಪ್ರಸಾರ ಮಾಡಿರುವ ವಿಡಿಯೋದಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲ ವ್ಯಕ್ತಿಗಳು ಸುದ್ದಿ ವಾಹಿನಿಯ ವಾಹನದ ಮೇಲೆ ತಮ್ಮ ಪಕ್ಷದ ಧ್ವಜವನ್ನು ಇರಿಸಿ ಘೋಷಣೆಗಳನ್ನು ಕೂಗಿ, ನಂತರ ಕಚೇರಿಯ ಪ್ರವೇಶದ್ವಾರದಲ್ಲಿ ಪೋಸ್ಟರ್ ಮೇಲೆ ಮಸಿ ಸುರಿದಿರುವುದನ್ನು ನೋಡಬಹುದು. 

“ರಾಹುಲ್ ಅವರನ್ನು ಬೆಂಬಲಿಸುವ ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಎಲ್ಲರೂ ಈ ಕೃತ್ಯವನ್ನು ಬೆಂಬಲಿಸಿಲ್ಲ. ಕೆಲವು ಯುವ ನಾಯಕರನ್ನು ಹೊರತುಪಡಿಸಿ, ಪಕ್ಷದೊಳಗಿನ ಹಿರಿಯ ನಾಯಕರು ಇದನ್ನು ಬೆಂಬಲಿಸುವುದಿಲ್ಲ ಎಂದು ನಮಗೆ ತಿಳಿದು ಬಂದಿದೆ” ಎಂದು ರಿಪೋರ್ಟರ್ ಟಿವಿಯ ಸಂಪಾದಕ ಡಾ. ಅರುಣ್ ಕುಮಾರ್ ಹೇಳಿದ್ದಾರೆ.

ಚಾನೆಲ್ ಪ್ರಕಾರ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಿಥುನ್ ಮೋಹನ್, ತ್ರಿಶೂರ್ ಜಿಲ್ಲಾ ಉಪಾಧ್ಯಕ್ಷ ವಿಷ್ಣು ಚಂದ್ರನ್, ತ್ರಿಶೂರ್ ವಿಧಾನಸಭಾ ಅಧ್ಯಕ್ಷ ಕೆ. ಸುಮೇಶ್ ಮತ್ತು ಸೌರಾಗ್, ನಿಖಿಲ್ ದೇವ್, ಅಮಲ್ ಜೇಮ್ಸ್ ಸೇರಿದಂತೆ ಇತರು ದಾಳಿಯಲ್ಲಿ ಭಾಗಿಯಾಗಿದ್ದಾರೆ.

ಬ್ಯಾಂಕ್ ಕ್ಯಾಂಟೀನ್‌ನಲ್ಲಿ ಬೀಫ್‌ ನಿಷೇಧಿಸಿದ ಬಿಹಾರ ಮೂಲದ ಮ್ಯಾನೇಜರ್; ಸಿಬ್ಬಂದಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...