Homeಮುಖಪುಟಸಿಎಂಗೆ ಸಂಭಾಲ್ ಹಿಂಸಾಚಾರದ ವರದಿ ಸಲ್ಲಿಕೆ: ಹಿಂದೂ ವಲಸೆಯತ್ತ ಆಯೋಗದ ಒತ್ತು, ನಿಜಾಂಶವಿಲ್ಲ ಎಂದ ಜನ

ಸಿಎಂಗೆ ಸಂಭಾಲ್ ಹಿಂಸಾಚಾರದ ವರದಿ ಸಲ್ಲಿಕೆ: ಹಿಂದೂ ವಲಸೆಯತ್ತ ಆಯೋಗದ ಒತ್ತು, ನಿಜಾಂಶವಿಲ್ಲ ಎಂದ ಜನ

- Advertisement -
- Advertisement -

ಸಂಭಾಲ್: 9 ತಿಂಗಳುಗಳ ನಂತರ ಸಂಭಾಲ್ ಹಿಂಸಾಚಾರ ಕುರಿತು ರಚಿಸಿದ್ದ ನ್ಯಾಯಾಂಗ ತನಿಖಾ ಆಯೋಗವು 450 ಪುಟಗಳ ವರದಿಯನ್ನು ಗುರುವಾರ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದೆ.

ಉತ್ತರಪ್ರದೇಶದ ಸಂಭಾಲ್‌ನಲ್ಲಿ ಸಂಭವಿಸಿದ ಹಿಂಸಾಚಾರ ಕುರಿತ ನ್ಯಾಯಾಂಗ ತನಿಖಾ ವರದಿ ಸೋರಿಕೆ ಆದ ನಂತರ ವಿವಾದ ಉಂಟಾಗಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟು ಹಾಕಿದೆ. ಮುಸ್ಲಿಂ ಸಮುದಾಯದವರು ವರದಿಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ, ಸರ್ಕಾರ ಈ ದುರಂತವನ್ನು ಸಮುದಾಯದ ನಡುವಣ ದ್ವೇಷವನ್ನು ಹೆಚ್ಚಿಸಲು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷದ ನವೆಂಬರ್ 24ರಂದು ಸಂಭಾಲ್‌ನ ಐತಿಹಾಸಿಕ ಶಾಹಿ ಜಾಮಾ ಮಸೀದಿ ಬಳಿ ನಡೆದ ಸರಕಾರದ ಸಮೀಕ್ಷೆ ವೇಳೆ ಹಿಂಸಾಚಾರವು ಉದ್ಭವಿಸಿತ್ತು. ಆ ವೇಳೆ ಪೊಲೀಸ್ ಗುಂಡಿನ ದಾಳಿಯಲ್ಲಿ ಐದು ಮುಸ್ಲಿಂ ಯುವಕರು ಮೃತರಾದರು, ಅನೇಕರಿಗೆ ಗಾಯಗಳಾದವು ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈ ಗಲಭೆಯ ನಂತರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿವೃತ್ತ ನ್ಯಾಯಾಧೀಶ ದೇವೇಂದ್ರಕುಮಾರ್ ಅರೋರಾ ನೇತೃತ್ವದ ನ್ಯಾಯಾಂಗ ಆಯೋಗವನ್ನು ರಚಿಸಿದರು. ಅವರೊಂದಿಗೆ ನಿವೃತ್ತ ಐಎಎಸ್ ಅಮಿತ್ ಮೋಹನ್ ಮತ್ತು ನಿವೃತ್ತ ಐಪಿಎಸ್ ಅರ್ವಿಂದ್ ಕುಮಾರ್ ಜೈನ್ ಇದ್ದರು.

ಹಿಂಸಾಚಾರದ ವಿಷಯಕ್ಕೆ ಸಂಬಂಧಿಸಿ ಕಾರಣವೇನು ಎಂಬ ಕುರಿತು ಈ ವರದಿ ಒತ್ತು ನೀಡಬೇಕಿತ್ತು. ಆದರೆ ಅದು ಹಿಂದೂ ಜನಸಂಖ್ಯೆಯ ವಲಸೆ ವಿಚಾರಕ್ಕೆ ಹೆಚ್ಚಿನ ಒತ್ತುಕೊಡುತ್ತದೆ. ವರದಿಯ ಪ್ರಕಾರ, ಸಂಭಾಲ್‌ನ ಹಿಂದೂ ಜನಸಂಖ್ಯೆ ಸ್ವಾತಂತ್ರ್ಯದ ಕಾಲದಲ್ಲಿ 45 ಶೇಕಡದಿಂದ ಇಂದಿಗೆ 15 ಶೇಕಡಕ್ಕೆ ಇಳಿದಿದೆ. ಸುಮಾರು 30 ಶೇಕಡ ಇಳಿಕೆ ನಡೆದಿದೆ, ಅದು ಗಲಭೆಗಳು ಮತ್ತು ಬೆದರಿಕೆಗಳ ಕಾರಣದಿಂದ ಸಂಭವಿಸಿದೆ ಎಂಬ ಆರೋಪವಿದೆ.

ಈ ವರದಿಯು ಸಂಭಾಲ್‌ನ ಮುಸ್ಲಿಂ ಸಮುದಾಯದಲ್ಲಿ ಅಸಹಮತಿಯ ಅಲೆ ಎಬ್ಬಿಸಿದೆ. ಶಾಹಿ ಜಾಮಾ ಮಸೀದಿ ಸಮಿತಿಯ ಪರವಾಗಿ ವಕೀಲ ಶಕೀಲ್ ವಾರ್ಸಿ ಅವರು ಮಾತನಾಡುತ್ತಾ, “ಇಂತಹ ವರದಿಯ ಆಧಾರದ ಮೇಲೆ ಯಾರನ್ನೂ ದಂಡಿಸಲಾಗದು. ನಿಜವಾದ ಸತ್ಯವನ್ನು ನ್ಯಾಯಾಲಯವೇ ನಿರ್ಧರಿಸಬೇಕು. ಹಿಂಸಾಚಾರವನ್ನು ಹಿಂದೂ ವಲಸೆಯೊಂದಿಗೆ ತಳಕುಹಾಕುವುದು ಅಡಳಿತಾತ್ಮಕ ರಾಜಕೀಯಕ್ಕೆ ಸೇರಿದ್ದು, ಅರ್ಥವಿಲ್ಲದದ್ದು,” ಎಂದರು.

ಪ್ರಮುಖ ಪತ್ರಕರ್ತ ಶಮ್ಸ್ ಸಿದ್ಧೀಕಿ ಅವರು ಕೂಡ ವರದಿಯ ಮಾಹಿತಿಯನ್ನು ಪ್ರಶ್ನಿಸಿದರು. “ಈ ವರದಿ ಇತಿಹಾಸದ ದಾಖಲೆಯೊಂದಿಗೆ ಹೊಂದಿಕೆಯಾಗುವುದಿಲ್ಲ. ಅವರು 1947ರಲ್ಲಿ ಹಿಂದೂ ಜನಸಂಖ್ಯೆ 45 ಶೇಕಡವೆಂದು ಹೇಳುವುದು ಸುಳ್ಳು, ಏಕೆಂದರೆ ಜನಗಣತಿಯ ಮಾಹಿತಿ ಇದನ್ನು ಸಮರ್ಥಿಸದು. ಇದು ಹಿಂಸಾಚಾರದ ವಿಚಾರಣೆಯ ವರದಿಯೇನಾ, ಅಥವಾ ಜನಗಣತಿಯ ಸಮೀಕ್ಷೆಯಾ? ವರದಿ ನಂಬಲರ್ಹವಲ್ಲ,” ಎಂದು ಹೇಳಿದರು.

ಇನ್ನೊಬ್ಬ ಮುಸ್ಲಿಂ ಹಿರಿಯರು ಸರ್ಕಾರಿ ನಡವಳಿಕೆಯನ್ನು ಆಕ್ರೋಶದಿಂದ ಟೀಕಿಸಿದರು: “ನಾವು ಮಸೀದಿಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿಯನ್ನು ತೋರಿಸಿದ್ದರೂ, ಇನ್ನೂ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇದು ಅಪಾಯಕರ ಮತ್ತು ಅಸಮಾನತೆಯದ್ದಾಗಿದೆ,” ಎಂದು ಹೇಳಿದರು.

ಈ ವರದಿಯನ್ನು ಮುಸ್ಲಿಂ ಮುಖಂಡರು ತಿರಸ್ಕರಿಸಿದರೆ, ಹಿಂದೂ ಪ್ರತಿನಿಧಿಗಳಿಂದ ವಿಭಿನ್ನ ಪ್ರತಿಕ್ರಿಯೆಗಳು ಬಂದಿವೆ. ಸ್ಥಳೀಯ ಹಿಂದೂ ಪ್ರತಿನಿಧಿ ಗೋಪಾಲ್ ಅವರು, “ಹೌದು, ಕೆಲವರು ವಾಸಸ್ಥಾನ ಬದಲಾಯಿಸುತ್ತಿದ್ದಾರೆ. ಆದರೆ ಅದು ಮುಸ್ಲಿಂ ಭಯದಿಂದಲ್ಲ. ಹೆಚ್ಚಿನ ವ್ಯವಹಾರ ಅವಕಾಶಗಳಿಗಾಗಿ ಇತರ ದೊಡ್ಡ ನಗರಗಳಿಗೆ ಹೋಗುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸುವುದು ತಪ್ಪು,” ಎಂದು ಹೇಳಿದರು.

ಆದರೆ ವಿವಾದಾತ್ಮಕ ಹನುಮಾನ್‌ಗಢಿ ಪೀಠದ ಪುಜಾರಿ ರಾಜು ದಾಸ್ ಅವರು ಈ ವರದಿಯನ್ನು ಆಧಾರವನ್ನಾಗಿ ಮಾಡಿಕೊಂಡು ಕಿಡಿಕಾರಿದರು. “ಇದು ಸ್ಪಷ್ಟವಾಗಿಸುತ್ತದೆ — ಹಿಂದೂಗಳು ಬಲವಂತವಾಗಿ ವಲಸೆ ಹೋಗುತ್ತಿದ್ದಾರೆ. ಇವತ್ತಿಗೆ ಕೇವಲ 15 ಶೇಕಡ ಮಾತ್ರ ಉಳಿದಿದ್ದಾರೆ. ಎಲ್ಲೆಲ್ಲಿ ಮುಸ್ಲಿಂ ಸಂಖ್ಯಾಬಲ ಹೆಚ್ಚಿದೆಯೋ ಅಲ್ಲಿ ಗಲಭೆ ಮತ್ತು ಭಯ ವಾತಾವರಣ ಇರುತ್ತದೆ,” ಎಂದು ಆರೋಪಿಸಿದರು.

ಅವರ ಈ ಹೇಳಿಕೆಗಳು ಮುಸ್ಲಿಂ ಸಮುದಾಯವನ್ನು ಆಕ್ರೋಶಕ್ಕೆ ದೂಡಿವೆ. ಸಂಭಾಲ್‌ನ ಒಬ್ಬ ಮುಸ್ಲಿಂ ಅಂಗಡಿ ಮಾಲೀಕರು ಪ್ರತಿಕ್ರಿಯಿಸಿ, “ಹಿಂದೂಗಳು ಉದ್ಯೋಗಕ್ಕಾಗಿ ಹೋಗುತ್ತಿದ್ದರೆ ಅದಕ್ಕೆ ನಾವು ಹೊಣೆ ಹೇಗೆ? ನಾವು ಎಪ್ಪತ್ತು ವರ್ಷಗಳಿಂದ ಜೊತೆಯಾಗಿ ಬದುಕುತ್ತಿದ್ದೇವೆ. ಇಂತಹ ಹೇಳಿಕೆಗಳು ಕೇವಲ ದ್ವೇಷವನ್ನೇ ಹೆಚ್ಚಿಸುತ್ತವೆ” ಎಂದು ಹೇಳಿದರು.

ಪರಿಶೀಲಕರು ಆಕ್ಷೇಪಿಸಿದ್ದು, ನವೆಂಬರ್ 2024ರ ಹಿಂಸಾಚಾರದಲ್ಲಿ ಸತ್ತವರ ಕುಟುಂಬಗಳು ಇಂದಿಗೂ ನ್ಯಾಯಕ್ಕಾಗಿ ಕಾಯುತ್ತಿರುವಾಗ, ಸರ್ಕಾರ ಈ ವರದಿಯನ್ನು ಮುನ್ನೆಡೆಸಿಕೊಂಡು ಸಂಭಾಲ್‌ ಅನ್ನು ಹಿಂದೂಗಳಿಗೆ ಅಪಾಯಕಾರಿಯಾದ ಪ್ರದೇಶವೆಂಬಂತೆ ಬಿಂಬಿಸಲು ಯತ್ನಿಸುತ್ತಿದೆ ಎಂದಿದ್ದಾರೆ.

ವಿರೋಧಿ ಪತ್ರಕರ್ತ ಶಮ್ಸ್ ಸಿದ್ಧೀಕಿ ಅವರು, “ಈ ಸೋರಿಕೆ ಆದ ವರದಿ ಚುನಾವಣೆಗಳ ಮುನ್ನ ನಿರ್ದಿಷ್ಟ ವಾದವನ್ನು ಬೆಂಬಲಿಸಲು ರೂಪುಗೊಂಡದಂತೆ ತೋರುತ್ತದೆ. ಸಂಪೂರ್ಣ ವರದಿ ಅಧಿಕೃತವಾಗಿ ಬಿಡುಗಡೆಯಾಗದವರೆಗೆ ಇಂತಹ ಲೀಕ್‌ಗಳ ಆಧಾರದ ಮೇಲೆ ನಂಬುವುದು ಅಪಾಯಕರ” ಎಂದು ಹೇಳಿದರು.

ಮುಸ್ಲಿಂ ನಾಯಕರೊಬ್ಬರು, ಸರ್ಕಾರವು ಸಂಪೂರ್ಣ ವರದಿಯನ್ನು ಪ್ರಕಟಿಸಬೇಕು ಹಾಗೂ ನಿಜವಾಗಿಯೂ ಹೊಣೆಗಾರರಾಗಿರುವವರಿಗೆ ಶಿಕ್ಷೆ ನೀಡಬೇಕು. ಸಂಪೂರ್ಣ ಸಮುದಾಯವನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಮರ್ಯಾದೆಗೇಡು ಹತ್ಯೆ: ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪತ್ನಿ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....