Homeಮುಖಪುಟಸಿಎಂಗೆ ಸಂಭಾಲ್ ಹಿಂಸಾಚಾರದ ವರದಿ ಸಲ್ಲಿಕೆ: ಹಿಂದೂ ವಲಸೆಯತ್ತ ಆಯೋಗದ ಒತ್ತು, ನಿಜಾಂಶವಿಲ್ಲ ಎಂದ ಜನ

ಸಿಎಂಗೆ ಸಂಭಾಲ್ ಹಿಂಸಾಚಾರದ ವರದಿ ಸಲ್ಲಿಕೆ: ಹಿಂದೂ ವಲಸೆಯತ್ತ ಆಯೋಗದ ಒತ್ತು, ನಿಜಾಂಶವಿಲ್ಲ ಎಂದ ಜನ

- Advertisement -
- Advertisement -

ಸಂಭಾಲ್: 9 ತಿಂಗಳುಗಳ ನಂತರ ಸಂಭಾಲ್ ಹಿಂಸಾಚಾರ ಕುರಿತು ರಚಿಸಿದ್ದ ನ್ಯಾಯಾಂಗ ತನಿಖಾ ಆಯೋಗವು 450 ಪುಟಗಳ ವರದಿಯನ್ನು ಗುರುವಾರ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದೆ.

ಉತ್ತರಪ್ರದೇಶದ ಸಂಭಾಲ್‌ನಲ್ಲಿ ಸಂಭವಿಸಿದ ಹಿಂಸಾಚಾರ ಕುರಿತ ನ್ಯಾಯಾಂಗ ತನಿಖಾ ವರದಿ ಸೋರಿಕೆ ಆದ ನಂತರ ವಿವಾದ ಉಂಟಾಗಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟು ಹಾಕಿದೆ. ಮುಸ್ಲಿಂ ಸಮುದಾಯದವರು ವರದಿಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ, ಸರ್ಕಾರ ಈ ದುರಂತವನ್ನು ಸಮುದಾಯದ ನಡುವಣ ದ್ವೇಷವನ್ನು ಹೆಚ್ಚಿಸಲು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷದ ನವೆಂಬರ್ 24ರಂದು ಸಂಭಾಲ್‌ನ ಐತಿಹಾಸಿಕ ಶಾಹಿ ಜಾಮಾ ಮಸೀದಿ ಬಳಿ ನಡೆದ ಸರಕಾರದ ಸಮೀಕ್ಷೆ ವೇಳೆ ಹಿಂಸಾಚಾರವು ಉದ್ಭವಿಸಿತ್ತು. ಆ ವೇಳೆ ಪೊಲೀಸ್ ಗುಂಡಿನ ದಾಳಿಯಲ್ಲಿ ಐದು ಮುಸ್ಲಿಂ ಯುವಕರು ಮೃತರಾದರು, ಅನೇಕರಿಗೆ ಗಾಯಗಳಾದವು ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈ ಗಲಭೆಯ ನಂತರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿವೃತ್ತ ನ್ಯಾಯಾಧೀಶ ದೇವೇಂದ್ರಕುಮಾರ್ ಅರೋರಾ ನೇತೃತ್ವದ ನ್ಯಾಯಾಂಗ ಆಯೋಗವನ್ನು ರಚಿಸಿದರು. ಅವರೊಂದಿಗೆ ನಿವೃತ್ತ ಐಎಎಸ್ ಅಮಿತ್ ಮೋಹನ್ ಮತ್ತು ನಿವೃತ್ತ ಐಪಿಎಸ್ ಅರ್ವಿಂದ್ ಕುಮಾರ್ ಜೈನ್ ಇದ್ದರು.

ಹಿಂಸಾಚಾರದ ವಿಷಯಕ್ಕೆ ಸಂಬಂಧಿಸಿ ಕಾರಣವೇನು ಎಂಬ ಕುರಿತು ಈ ವರದಿ ಒತ್ತು ನೀಡಬೇಕಿತ್ತು. ಆದರೆ ಅದು ಹಿಂದೂ ಜನಸಂಖ್ಯೆಯ ವಲಸೆ ವಿಚಾರಕ್ಕೆ ಹೆಚ್ಚಿನ ಒತ್ತುಕೊಡುತ್ತದೆ. ವರದಿಯ ಪ್ರಕಾರ, ಸಂಭಾಲ್‌ನ ಹಿಂದೂ ಜನಸಂಖ್ಯೆ ಸ್ವಾತಂತ್ರ್ಯದ ಕಾಲದಲ್ಲಿ 45 ಶೇಕಡದಿಂದ ಇಂದಿಗೆ 15 ಶೇಕಡಕ್ಕೆ ಇಳಿದಿದೆ. ಸುಮಾರು 30 ಶೇಕಡ ಇಳಿಕೆ ನಡೆದಿದೆ, ಅದು ಗಲಭೆಗಳು ಮತ್ತು ಬೆದರಿಕೆಗಳ ಕಾರಣದಿಂದ ಸಂಭವಿಸಿದೆ ಎಂಬ ಆರೋಪವಿದೆ.

ಈ ವರದಿಯು ಸಂಭಾಲ್‌ನ ಮುಸ್ಲಿಂ ಸಮುದಾಯದಲ್ಲಿ ಅಸಹಮತಿಯ ಅಲೆ ಎಬ್ಬಿಸಿದೆ. ಶಾಹಿ ಜಾಮಾ ಮಸೀದಿ ಸಮಿತಿಯ ಪರವಾಗಿ ವಕೀಲ ಶಕೀಲ್ ವಾರ್ಸಿ ಅವರು ಮಾತನಾಡುತ್ತಾ, “ಇಂತಹ ವರದಿಯ ಆಧಾರದ ಮೇಲೆ ಯಾರನ್ನೂ ದಂಡಿಸಲಾಗದು. ನಿಜವಾದ ಸತ್ಯವನ್ನು ನ್ಯಾಯಾಲಯವೇ ನಿರ್ಧರಿಸಬೇಕು. ಹಿಂಸಾಚಾರವನ್ನು ಹಿಂದೂ ವಲಸೆಯೊಂದಿಗೆ ತಳಕುಹಾಕುವುದು ಅಡಳಿತಾತ್ಮಕ ರಾಜಕೀಯಕ್ಕೆ ಸೇರಿದ್ದು, ಅರ್ಥವಿಲ್ಲದದ್ದು,” ಎಂದರು.

ಪ್ರಮುಖ ಪತ್ರಕರ್ತ ಶಮ್ಸ್ ಸಿದ್ಧೀಕಿ ಅವರು ಕೂಡ ವರದಿಯ ಮಾಹಿತಿಯನ್ನು ಪ್ರಶ್ನಿಸಿದರು. “ಈ ವರದಿ ಇತಿಹಾಸದ ದಾಖಲೆಯೊಂದಿಗೆ ಹೊಂದಿಕೆಯಾಗುವುದಿಲ್ಲ. ಅವರು 1947ರಲ್ಲಿ ಹಿಂದೂ ಜನಸಂಖ್ಯೆ 45 ಶೇಕಡವೆಂದು ಹೇಳುವುದು ಸುಳ್ಳು, ಏಕೆಂದರೆ ಜನಗಣತಿಯ ಮಾಹಿತಿ ಇದನ್ನು ಸಮರ್ಥಿಸದು. ಇದು ಹಿಂಸಾಚಾರದ ವಿಚಾರಣೆಯ ವರದಿಯೇನಾ, ಅಥವಾ ಜನಗಣತಿಯ ಸಮೀಕ್ಷೆಯಾ? ವರದಿ ನಂಬಲರ್ಹವಲ್ಲ,” ಎಂದು ಹೇಳಿದರು.

ಇನ್ನೊಬ್ಬ ಮುಸ್ಲಿಂ ಹಿರಿಯರು ಸರ್ಕಾರಿ ನಡವಳಿಕೆಯನ್ನು ಆಕ್ರೋಶದಿಂದ ಟೀಕಿಸಿದರು: “ನಾವು ಮಸೀದಿಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿಯನ್ನು ತೋರಿಸಿದ್ದರೂ, ಇನ್ನೂ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇದು ಅಪಾಯಕರ ಮತ್ತು ಅಸಮಾನತೆಯದ್ದಾಗಿದೆ,” ಎಂದು ಹೇಳಿದರು.

ಈ ವರದಿಯನ್ನು ಮುಸ್ಲಿಂ ಮುಖಂಡರು ತಿರಸ್ಕರಿಸಿದರೆ, ಹಿಂದೂ ಪ್ರತಿನಿಧಿಗಳಿಂದ ವಿಭಿನ್ನ ಪ್ರತಿಕ್ರಿಯೆಗಳು ಬಂದಿವೆ. ಸ್ಥಳೀಯ ಹಿಂದೂ ಪ್ರತಿನಿಧಿ ಗೋಪಾಲ್ ಅವರು, “ಹೌದು, ಕೆಲವರು ವಾಸಸ್ಥಾನ ಬದಲಾಯಿಸುತ್ತಿದ್ದಾರೆ. ಆದರೆ ಅದು ಮುಸ್ಲಿಂ ಭಯದಿಂದಲ್ಲ. ಹೆಚ್ಚಿನ ವ್ಯವಹಾರ ಅವಕಾಶಗಳಿಗಾಗಿ ಇತರ ದೊಡ್ಡ ನಗರಗಳಿಗೆ ಹೋಗುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸುವುದು ತಪ್ಪು,” ಎಂದು ಹೇಳಿದರು.

ಆದರೆ ವಿವಾದಾತ್ಮಕ ಹನುಮಾನ್‌ಗಢಿ ಪೀಠದ ಪುಜಾರಿ ರಾಜು ದಾಸ್ ಅವರು ಈ ವರದಿಯನ್ನು ಆಧಾರವನ್ನಾಗಿ ಮಾಡಿಕೊಂಡು ಕಿಡಿಕಾರಿದರು. “ಇದು ಸ್ಪಷ್ಟವಾಗಿಸುತ್ತದೆ — ಹಿಂದೂಗಳು ಬಲವಂತವಾಗಿ ವಲಸೆ ಹೋಗುತ್ತಿದ್ದಾರೆ. ಇವತ್ತಿಗೆ ಕೇವಲ 15 ಶೇಕಡ ಮಾತ್ರ ಉಳಿದಿದ್ದಾರೆ. ಎಲ್ಲೆಲ್ಲಿ ಮುಸ್ಲಿಂ ಸಂಖ್ಯಾಬಲ ಹೆಚ್ಚಿದೆಯೋ ಅಲ್ಲಿ ಗಲಭೆ ಮತ್ತು ಭಯ ವಾತಾವರಣ ಇರುತ್ತದೆ,” ಎಂದು ಆರೋಪಿಸಿದರು.

ಅವರ ಈ ಹೇಳಿಕೆಗಳು ಮುಸ್ಲಿಂ ಸಮುದಾಯವನ್ನು ಆಕ್ರೋಶಕ್ಕೆ ದೂಡಿವೆ. ಸಂಭಾಲ್‌ನ ಒಬ್ಬ ಮುಸ್ಲಿಂ ಅಂಗಡಿ ಮಾಲೀಕರು ಪ್ರತಿಕ್ರಿಯಿಸಿ, “ಹಿಂದೂಗಳು ಉದ್ಯೋಗಕ್ಕಾಗಿ ಹೋಗುತ್ತಿದ್ದರೆ ಅದಕ್ಕೆ ನಾವು ಹೊಣೆ ಹೇಗೆ? ನಾವು ಎಪ್ಪತ್ತು ವರ್ಷಗಳಿಂದ ಜೊತೆಯಾಗಿ ಬದುಕುತ್ತಿದ್ದೇವೆ. ಇಂತಹ ಹೇಳಿಕೆಗಳು ಕೇವಲ ದ್ವೇಷವನ್ನೇ ಹೆಚ್ಚಿಸುತ್ತವೆ” ಎಂದು ಹೇಳಿದರು.

ಪರಿಶೀಲಕರು ಆಕ್ಷೇಪಿಸಿದ್ದು, ನವೆಂಬರ್ 2024ರ ಹಿಂಸಾಚಾರದಲ್ಲಿ ಸತ್ತವರ ಕುಟುಂಬಗಳು ಇಂದಿಗೂ ನ್ಯಾಯಕ್ಕಾಗಿ ಕಾಯುತ್ತಿರುವಾಗ, ಸರ್ಕಾರ ಈ ವರದಿಯನ್ನು ಮುನ್ನೆಡೆಸಿಕೊಂಡು ಸಂಭಾಲ್‌ ಅನ್ನು ಹಿಂದೂಗಳಿಗೆ ಅಪಾಯಕಾರಿಯಾದ ಪ್ರದೇಶವೆಂಬಂತೆ ಬಿಂಬಿಸಲು ಯತ್ನಿಸುತ್ತಿದೆ ಎಂದಿದ್ದಾರೆ.

ವಿರೋಧಿ ಪತ್ರಕರ್ತ ಶಮ್ಸ್ ಸಿದ್ಧೀಕಿ ಅವರು, “ಈ ಸೋರಿಕೆ ಆದ ವರದಿ ಚುನಾವಣೆಗಳ ಮುನ್ನ ನಿರ್ದಿಷ್ಟ ವಾದವನ್ನು ಬೆಂಬಲಿಸಲು ರೂಪುಗೊಂಡದಂತೆ ತೋರುತ್ತದೆ. ಸಂಪೂರ್ಣ ವರದಿ ಅಧಿಕೃತವಾಗಿ ಬಿಡುಗಡೆಯಾಗದವರೆಗೆ ಇಂತಹ ಲೀಕ್‌ಗಳ ಆಧಾರದ ಮೇಲೆ ನಂಬುವುದು ಅಪಾಯಕರ” ಎಂದು ಹೇಳಿದರು.

ಮುಸ್ಲಿಂ ನಾಯಕರೊಬ್ಬರು, ಸರ್ಕಾರವು ಸಂಪೂರ್ಣ ವರದಿಯನ್ನು ಪ್ರಕಟಿಸಬೇಕು ಹಾಗೂ ನಿಜವಾಗಿಯೂ ಹೊಣೆಗಾರರಾಗಿರುವವರಿಗೆ ಶಿಕ್ಷೆ ನೀಡಬೇಕು. ಸಂಪೂರ್ಣ ಸಮುದಾಯವನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಮರ್ಯಾದೆಗೇಡು ಹತ್ಯೆ: ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪತ್ನಿ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...