Homeಅಂತರಾಷ್ಟ್ರೀಯಎಲಾನ್ ಮಸ್ಕ್ ವಿರುದ್ಧ ವರದಿ ಪ್ರಕಟ: ಪತ್ರಕರ್ತರ ಟ್ವಿಟರ್ ಖಾತೆ ಅಮಾನತು

ಎಲಾನ್ ಮಸ್ಕ್ ವಿರುದ್ಧ ವರದಿ ಪ್ರಕಟ: ಪತ್ರಕರ್ತರ ಟ್ವಿಟರ್ ಖಾತೆ ಅಮಾನತು

- Advertisement -
- Advertisement -

ಟ್ವಿಟರ್‌ನ ನೂತನ ಮಾಲೀಕ ಎಲಾನ್ ಮಸ್ಕ್ ವಿರುದ್ಧ ವರದಿ ಪ್ರಕಟ ಮಾಡಿದ್ದಕ್ಕಾಗಿ ನ್ಯೂಯಾರ್ಕ್ ಟೈಮ್ಸ್, ವಾಷಿಂಗ್ಟನ್ ಪೋಸ್ಟ್‌ ಪತ್ರಿಕೆಯ ಪತ್ರಕರ್ತರು ಸೇರಿದಂತೆ ಹಲವರ ಖಾತೆಗಳನ್ನು ಟ್ವಿಟರ್ ಅಮಾನತು ಮಾಡಿರುವುದು ಬೆಳಕಿಗೆ ಬಂದಿದೆ.

ಆ ಖಾತೆಗಳನ್ನು ಏಕೆ ಅಮಾನತುಗೊಳಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಎಲ್ಲಾ ಅಮಾನತುಗೊಂಡ ವರದಿಗಾರರು ಇತ್ತೀಚಿನ ತಿಂಗಳುಗಳಲ್ಲಿ ಟ್ವಿಟರ್‌ನ ಮಾಲೀಕ ಎಲಾನ್ ಮಸ್ಕ್ ಮತ್ತು ಟ್ವಿಟರ್‌ನ ಇತ್ತೀಚಿನ ಕಾರ್ಯನಿರ್ವಹಣೆಯ ಬಗ್ಗೆ ಬರೆದಿದ್ದರು ಎಂಬುದು ಖಚಿತವಾಗಿದೆ.

ನ್ಯೂಯಾರ್ಕ್ ಟೈಮ್ಸ್ ವರದಿಗಾರ ರಯಾನ್ ಮ್ಯಾಕ್, ವಾಷಿಂಗ್ಟನ್ ಪೋಸ್ಟ್ ವರದಿಗಾರ ಡ್ರೂ ಹಾರ್ವೆಲ್, ಸಿಎನ್‌ಎನ್ ವರದಿಗಾರ ಡೋನಿ ಒ’ಸುಲ್ಲಿವಾನ್ (@ಡೋನಿ), ಮತ್ತು ಮಾಶಬಲ್ ವರದಿಗಾರ ಮ್ಯಾಟ್ ಬೈಂಡರ್ ಅವರ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಸ್ವತಂತ್ರ ಪತ್ರಕರ್ತ ಆರನ್ ರೂಪರ್ ರವರ ಖಾತೆಯನ್ನು ಸಹ ಅಮಾನತುಗೊಳಿಸಲಾಗಿದೆ.

“ದಿ ನ್ಯೂಯಾರ್ಕ್ ಟೈಮ್ಸ್‌ನ ರಿಯಾನ್ ಮ್ಯಾಕ್ ಸೇರಿದಂತೆ ಹಲವಾರು ಪ್ರಮುಖ ಪತ್ರಕರ್ತರ ಟ್ವಿಟರ್ ಖಾತೆಗಳನ್ನು ಇಂದು ರಾತ್ರಿ ಅಮಾನತುಗೊಳಿಸಿರುವುದು ಪ್ರಶ್ನಾರ್ಹ ಮತ್ತು ದುರದೃಷ್ಟಕರವಾಗಿದೆ. ಏಕೆ ಹೀಗೆ ಮಾಡಲಾಗಿದೆ ಎಂಬುದನ್ನು ಟ್ವಿಟರ್ ನಮಗೆ ತಿಳಿಸಿಲ್ಲ. ಟ್ವಿಟರ್ ಈ ಕೂಡಲೇ ಎಲ್ಲಾ ಪತ್ರಕರ್ತರ ಖಾತೆಗಳನ್ನು ಮರುಸ್ಥಾಪಿಸಿ ಏಕೆ ಹೀಗೆ ಮಾಡಲಾಗಿತ್ತು ಎಂಬುದಕ್ಕೆ ಸೂಕ್ತ ವಿವರಣೆ ನೀಡುತ್ತದೆ ನಾವು ಭಾವಿಸುತ್ತೇವೆ” ಎದು ನ್ಯೂಯಾರ್ಕ್ ಟೈಮ್ಸ್ ವಕ್ತಾರರು ತಿಳಿಸಿದ್ದಾರೆ.

ಟ್ವಿಟರ್ ಅನ್ನು ಮಸ್ಕ್ ಕೊಂಡ ನಂತರ ಅದಕ್ಕೆ ಪರ್ಯಾಯವಾಗಿ ಹುಟ್ಟಿಕೊಂಡಿದ್ದ ಮಾಸ್ಟೋಡಾನ್ ಎಂಬ ಸಾಮಾಜಿಕ ಜಾಲತಾಣದ ಖಾತೆಯನ್ನು ಸಹ ಟ್ವಿಟರ್ ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಲಾನ್ ಮಸ್ಕ್, “ವೈಯಕ್ತಿಕ ಮಾಹಿತಿಯನ್ನು ಹಂಚುವುದನ್ನು ನಿಬಂಧಿಸುವ ಡಾಕ್ಸಿಂಗ್‌ ನಿಯಮಗಳು ಪತ್ರಕರ್ತರಿಗೂ ಸಹ ಅನ್ವಯಿಸುತ್ತವೆ. ದಿನವೀಡಿ ನನ್ನ ವಿರುದ್ಧ ಬರೆದರೆ ತೊಂದರೆಯಿಲ್ಲ, ಆದರೆ ನಾನಿರುವ ಸ್ಥಳದ ಬಗ್ಗೆ ಮಾಹಿತಿ ಹಂಚಿಕೊಳ್ಳುವುದು ಮತ್ತು ನನ್ನ ಕುಟುಂಬವನ್ನು ಅಪಾಯಕ್ಕಿ ಸಿಲುಕಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ’ಟ್ವಿಟರ್ ಬ್ರಾಂಡ್ ಖರೀದಿಸಿದ ಮಸ್ಕ್’ ವಿದ್ಯಮಾನ ಮತ್ತು ಆತಂಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...